Homeಮುಖಪುಟ‘ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ನಾಗರಿಕರನ್ನು ಉಕ್ರೇನ್‌‌‌ನಿಂದ ಸ್ಥಳಾಂತರಿಸಲು ಸಾಧ್ಯವಾಯಿತು’: ಉತ್ತರ ಪ್ರದೇಶ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ...

‘ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ನಾಗರಿಕರನ್ನು ಉಕ್ರೇನ್‌‌‌ನಿಂದ ಸ್ಥಳಾಂತರಿಸಲು ಸಾಧ್ಯವಾಯಿತು’: ಉತ್ತರ ಪ್ರದೇಶ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ

ಭಾರತೀಯ ವಿದ್ಯಾರ್ಥಿಗಳು ಅಲ್ಲಿ ಕಷ್ಟಪಡುತ್ತಿರುವಾಗ, ಪ್ರಧಾನಿ ಮೋದಿ ಒಂದಿಷ್ಟು ಕೂಡಾ ನಾಚಿಕೆ ಇಲ್ಲದೆ, ಒಂದಿಷ್ಟು ಜನರನ್ನು ಸ್ಥಳಾಂತರಿಸಿದ್ದನ್ನು ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ಒಕ್ಕೂಟ ಸರ್ಕಾರವು ಉಕ್ರೇನ್‌ನಿಂದ ನಾಗರಿಕರನ್ನು ಸ್ಥಳಾಂತರಿಸಲು ಸಾಧ್ಯವಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಚುನಾವಣಾ ಪ್ರಚಾರದಲ್ಲಿ ಬುಧವಾರ ಹೇಳಿದ್ದಾರೆ. ಉಕ್ರೇನ್‌ನಿಂದ ಭಾತೀಯರನ್ನು ವಾಪಾಸು ಕರೆತರಲು ಸರ್ಕಾರವು ಯಾವುದೇ ಪ್ರಯತ್ನವನ್ನು ಕೈಚೆಲ್ಲುವುದಿಲ್ಲ ಎಂದು ಅವರು ಹೇಳಿದ್ದಾರೆ.

“ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದಾಗಿ ನಾವು ಉಕ್ರೇನ್‌ನಿಂದ ನಾಗರಿಕರನ್ನು ಸ್ಥಳಾಂತರಿಸಲು ಸಾಧ್ಯವಾಯಿತು” ಎಂದು ಯುಪಿಯ ಸೋನ್‌ಭದ್ರಾದಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳ ಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ 

“ಸಶಸ್ತ್ರ ಪಡೆಗಳ ಶೌರ್ಯ ಮತ್ತು ‘ಮೇಕ್ ಇನ್ ಇಂಡಿಯಾ’ವನ್ನು ಪ್ರಶ್ನಿಸುವವರು ದೇಶವನ್ನು ಬಲಿಷ್ಠಗೊಳಿಸಲಾರರು” ಎಂದು ಅವರು ಪ್ರತಿಪಕ್ಷಗಳ ವಿರುದ್ಧ, ವಿಶೇಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶದ ಚುನಾವಣೆಗಳ ಬಿರುಸಿನ ಪ್ರಚಾರದ ಮಧ್ಯದಲ್ಲಿ, ಉಕ್ರೇನ್ ಬಿಕ್ಕಟ್ಟು ಮತ್ತು ಅಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟವು ದೇಶದಾದ್ಯಂತ ಕೇಂದ್ರ ಸರ್ಕಾರದ ವಿರುದ್ದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಉಕ್ರೇನ್‌ನಲ್ಲಿರುವ ಹಲವಾರು ಭಾರತೀಯ ವಿದ್ಯಾರ್ಥಿಗಳು ಭಾರತೀಯ ರಾಯಭಾರ ಕಚೇರಿಯು ಯಾವುದೆ ಕೆಲಸವನ್ನು ಮಾಡುತ್ತಿಲ್ಲ ಎಂದು ಆರೋಪಿಸಿ ವಿಡಿಯೊವನ್ನು ಸಾಮಾಜಿಕ ಜಾಲತಾಣದಗಳಲ್ಲಿ ಹರಿಯಬಿಡುತ್ತಿದ್ದಾರೆ.

ಪ್ರಧಾನಿಯ ಈ ಹೇಳಿಕೆಯ ವಿರುದ್ಧ ಭಾರತದ ಅನಿವಾಸಿ ಕಾಂಗ್ರೆಸ್ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ರೊಮಾನಿಯಾ ಗಡಿಯ ಪರಿಸ್ಥಿತಿ ಹೀಗಿದೆ ಎಂದು ಹೇಳಿ ಟ್ವಿಟರ್‌ನಲ್ಲಿ ವಿಡಿಯೊವನ್ನು ಅಪ್‌ಲೋಡ್‌ ಮಾಡಿದೆ. ವಿಡಿಯೊದಲ್ಲಿ ವಿದ್ಯಾರ್ಥಿಗಳ ಗುಂಪು ತಮ್ಮ ಸಂಕಷ್ಟ ಹೇಳಿಕೊಳ್ಳುತ್ತಾರೆ.

ಪ್ರಧಾನಿಯ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿ ಸಂಘಟನೆ ಕೆವಿಎಸ್‌ ಸಂಚಾಲಕ ಸರೋವರ್‌ ಬೆಂಕಿಕೆರೆ, “ಈ ಪ್ರಧಾನಿಗೆ ಒಂದಿಷ್ಟು ಕೂಡಾ ನಾಚಿಕೆ ಇಲ್ಲ. ಭಾರತ ಸರ್ಕಾರವು ಗಲ್ಫ್‌ ಯುದ್ಧದ ಸಮಯದಲ್ಲಿ ಒಂದು ಲಕ್ಷಕ್ಕಿಂತಲೂ ಹೆಚ್ಚು ಭಾರತೀಯರನ್ನು ಸ್ಥಳಾಂತರಿಸಿತ್ತು. ಆದರೆ ಅವತ್ತಿನ ಸರ್ಕಾರವು ಇದನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿಲ್ಲ. ಅಲ್ಲಿ ಯುದ್ಧ ನಡೆಯುತ್ತದೆ ಎಂದು ತಿಳಿದಿದ್ದರೂ, ಭಾರತೀಯ ಪ್ರಜೆಗಳ ಬಗ್ಗೆ ಯಾವುದೇ ಯೋಚನೆ ಇಲ್ಲದೆ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದರು. ಇದೀಗ ಒಬ್ಬ ವಿದ್ಯಾರ್ಥಿಯ ಹತ್ಯೆಯಾದ ನಂತರ, ವಿದ್ಯಾರ್ಥಿಗಳನ್ನೇ ತಪ್ಪಿತಸ್ಥರನ್ನಾಗಿ ಮಾಡಲಾಗುತ್ತಿದೆ. ಜನರಿಗೆ ನೆರವಾಗುವುದನ್ನು ಬಿಟ್ಟು ಬೇರೆಲ್ಲವನ್ನೂ ಈ ಸರ್ಕಾರ ಮಾಡುತ್ತಿದೆ” ಎಂದು ಹೇಳಿದ್ದಾರೆ

ಇದನ್ನೂ ಓದಿ: ಕೇಂದ್ರ ಸರ್ಕಾರ ಮತ್ತು ಗೋದಿ ಮಿಡಿಯಾಗಳಿಗೆ ಛೀಮಾರಿ ಹಾಕುತ್ತಿರುವ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...