Homeಮುಖಪುಟ‘ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ನಾಗರಿಕರನ್ನು ಉಕ್ರೇನ್‌‌‌ನಿಂದ ಸ್ಥಳಾಂತರಿಸಲು ಸಾಧ್ಯವಾಯಿತು’: ಉತ್ತರ ಪ್ರದೇಶ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ...

‘ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ನಾಗರಿಕರನ್ನು ಉಕ್ರೇನ್‌‌‌ನಿಂದ ಸ್ಥಳಾಂತರಿಸಲು ಸಾಧ್ಯವಾಯಿತು’: ಉತ್ತರ ಪ್ರದೇಶ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ

ಭಾರತೀಯ ವಿದ್ಯಾರ್ಥಿಗಳು ಅಲ್ಲಿ ಕಷ್ಟಪಡುತ್ತಿರುವಾಗ, ಪ್ರಧಾನಿ ಮೋದಿ ಒಂದಿಷ್ಟು ಕೂಡಾ ನಾಚಿಕೆ ಇಲ್ಲದೆ, ಒಂದಿಷ್ಟು ಜನರನ್ನು ಸ್ಥಳಾಂತರಿಸಿದ್ದನ್ನು ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ಒಕ್ಕೂಟ ಸರ್ಕಾರವು ಉಕ್ರೇನ್‌ನಿಂದ ನಾಗರಿಕರನ್ನು ಸ್ಥಳಾಂತರಿಸಲು ಸಾಧ್ಯವಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಚುನಾವಣಾ ಪ್ರಚಾರದಲ್ಲಿ ಬುಧವಾರ ಹೇಳಿದ್ದಾರೆ. ಉಕ್ರೇನ್‌ನಿಂದ ಭಾತೀಯರನ್ನು ವಾಪಾಸು ಕರೆತರಲು ಸರ್ಕಾರವು ಯಾವುದೇ ಪ್ರಯತ್ನವನ್ನು ಕೈಚೆಲ್ಲುವುದಿಲ್ಲ ಎಂದು ಅವರು ಹೇಳಿದ್ದಾರೆ.

“ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದಾಗಿ ನಾವು ಉಕ್ರೇನ್‌ನಿಂದ ನಾಗರಿಕರನ್ನು ಸ್ಥಳಾಂತರಿಸಲು ಸಾಧ್ಯವಾಯಿತು” ಎಂದು ಯುಪಿಯ ಸೋನ್‌ಭದ್ರಾದಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳ ಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ 

“ಸಶಸ್ತ್ರ ಪಡೆಗಳ ಶೌರ್ಯ ಮತ್ತು ‘ಮೇಕ್ ಇನ್ ಇಂಡಿಯಾ’ವನ್ನು ಪ್ರಶ್ನಿಸುವವರು ದೇಶವನ್ನು ಬಲಿಷ್ಠಗೊಳಿಸಲಾರರು” ಎಂದು ಅವರು ಪ್ರತಿಪಕ್ಷಗಳ ವಿರುದ್ಧ, ವಿಶೇಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶದ ಚುನಾವಣೆಗಳ ಬಿರುಸಿನ ಪ್ರಚಾರದ ಮಧ್ಯದಲ್ಲಿ, ಉಕ್ರೇನ್ ಬಿಕ್ಕಟ್ಟು ಮತ್ತು ಅಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟವು ದೇಶದಾದ್ಯಂತ ಕೇಂದ್ರ ಸರ್ಕಾರದ ವಿರುದ್ದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಉಕ್ರೇನ್‌ನಲ್ಲಿರುವ ಹಲವಾರು ಭಾರತೀಯ ವಿದ್ಯಾರ್ಥಿಗಳು ಭಾರತೀಯ ರಾಯಭಾರ ಕಚೇರಿಯು ಯಾವುದೆ ಕೆಲಸವನ್ನು ಮಾಡುತ್ತಿಲ್ಲ ಎಂದು ಆರೋಪಿಸಿ ವಿಡಿಯೊವನ್ನು ಸಾಮಾಜಿಕ ಜಾಲತಾಣದಗಳಲ್ಲಿ ಹರಿಯಬಿಡುತ್ತಿದ್ದಾರೆ.

ಪ್ರಧಾನಿಯ ಈ ಹೇಳಿಕೆಯ ವಿರುದ್ಧ ಭಾರತದ ಅನಿವಾಸಿ ಕಾಂಗ್ರೆಸ್ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ರೊಮಾನಿಯಾ ಗಡಿಯ ಪರಿಸ್ಥಿತಿ ಹೀಗಿದೆ ಎಂದು ಹೇಳಿ ಟ್ವಿಟರ್‌ನಲ್ಲಿ ವಿಡಿಯೊವನ್ನು ಅಪ್‌ಲೋಡ್‌ ಮಾಡಿದೆ. ವಿಡಿಯೊದಲ್ಲಿ ವಿದ್ಯಾರ್ಥಿಗಳ ಗುಂಪು ತಮ್ಮ ಸಂಕಷ್ಟ ಹೇಳಿಕೊಳ್ಳುತ್ತಾರೆ.

ಪ್ರಧಾನಿಯ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿ ಸಂಘಟನೆ ಕೆವಿಎಸ್‌ ಸಂಚಾಲಕ ಸರೋವರ್‌ ಬೆಂಕಿಕೆರೆ, “ಈ ಪ್ರಧಾನಿಗೆ ಒಂದಿಷ್ಟು ಕೂಡಾ ನಾಚಿಕೆ ಇಲ್ಲ. ಭಾರತ ಸರ್ಕಾರವು ಗಲ್ಫ್‌ ಯುದ್ಧದ ಸಮಯದಲ್ಲಿ ಒಂದು ಲಕ್ಷಕ್ಕಿಂತಲೂ ಹೆಚ್ಚು ಭಾರತೀಯರನ್ನು ಸ್ಥಳಾಂತರಿಸಿತ್ತು. ಆದರೆ ಅವತ್ತಿನ ಸರ್ಕಾರವು ಇದನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿಲ್ಲ. ಅಲ್ಲಿ ಯುದ್ಧ ನಡೆಯುತ್ತದೆ ಎಂದು ತಿಳಿದಿದ್ದರೂ, ಭಾರತೀಯ ಪ್ರಜೆಗಳ ಬಗ್ಗೆ ಯಾವುದೇ ಯೋಚನೆ ಇಲ್ಲದೆ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದರು. ಇದೀಗ ಒಬ್ಬ ವಿದ್ಯಾರ್ಥಿಯ ಹತ್ಯೆಯಾದ ನಂತರ, ವಿದ್ಯಾರ್ಥಿಗಳನ್ನೇ ತಪ್ಪಿತಸ್ಥರನ್ನಾಗಿ ಮಾಡಲಾಗುತ್ತಿದೆ. ಜನರಿಗೆ ನೆರವಾಗುವುದನ್ನು ಬಿಟ್ಟು ಬೇರೆಲ್ಲವನ್ನೂ ಈ ಸರ್ಕಾರ ಮಾಡುತ್ತಿದೆ” ಎಂದು ಹೇಳಿದ್ದಾರೆ

ಇದನ್ನೂ ಓದಿ: ಕೇಂದ್ರ ಸರ್ಕಾರ ಮತ್ತು ಗೋದಿ ಮಿಡಿಯಾಗಳಿಗೆ ಛೀಮಾರಿ ಹಾಕುತ್ತಿರುವ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...