Homeಕರೋನಾ ತಲ್ಲಣಜಿಲ್ಲಾ/ತಾಲ್ಲೂಕು ಕೇಂದ್ರಗಳಲ್ಲಿ ಬೆಡ್‌ ಸಮಸ್ಯೆ: ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿರುವ ಸೋಂಕಿತರು

ಜಿಲ್ಲಾ/ತಾಲ್ಲೂಕು ಕೇಂದ್ರಗಳಲ್ಲಿ ಬೆಡ್‌ ಸಮಸ್ಯೆ: ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿರುವ ಸೋಂಕಿತರು

- Advertisement -
- Advertisement -

ಕೋವಿಡ್ ಎರಡನೆ ಅಲೆ ಉಲ್ಬಣಕ್ಕೆ ರಾಜ್ಯದ ಆರೋಗ್ಯ ಮೂಲಸೌಕರ್ಯಗಳು ತತ್ತರಿಸಿ ಹೋಗುತ್ತಿವೆ. ಬೀದರ್‌ನಲ್ಲಿ ಪಾದಚಾರಿ ಮಾರ್ಗಗಳ ಮೇಲೆ ಹತ್ತಾರು ರೋಗಿಗಳು ಮಲಗಿದ್ದರೆ, ಯಾದಗರಿಯಲ್ಲಿ ವ್ಯಕ್ತಿಯೊಬ್ಬರು ಏಪ್ರಿಲ್ 23 ರಂದು ಆಸ್ಪತ್ರೆಯ ಹಾಸಿಗೆಗಾಗಿ ಅಳುವುದು ಕಂಡುಬಂದಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ. ಇದು ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿನ ಕಳಪೆ ವೈದ್ಯಕೀಯ ಸೌಲಭ್ಯವನ್ನ ಸೂಚಿಸುತ್ತದೆ.

ಡಿ ಭೀಮೇಶ್ ಎಂಬ ವ್ಯಕ್ತಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅಲ್ಲಿ ಬೆಡ್ ಇಲ್ಲ ಎಂದು ಪ್ರವೇಶವನ್ನು ನಿರಾಕರಿಸಿದರು ಎಂದು ಮಾಧ್ಯಮ ವರದಿಗಳು ತಿಳಿಸಿವೆ. ನಿಲ್ಲಲು ಸಾಧ್ಯವಾಗದ ಮತ್ತು ಉಸಿರಾಟಕ್ಕಾಗಿ ಹೆಣಗಾಡುತ್ತಿದ್ದ ಭೀಮೇಶ್ ಅಡ್ಮಿಟ್ ಮಾಡಿಕೊಳ್ಳಿ ಪ್ಲೀಸ್ ಎಂದು ಪರಿಪರಿಯಾಗಿ ಕೇಳಿದರೂ ಹಾಸಿಗೆ ಸಿಗಲಿಲ್ಲ ಎನ್ನಲಾಗಿದೆ.

ಏಪ್ರಿಲ್ 20ರಂದು ಅನಾರೋಗ್ಯದಿಂದ ಬಳಲುತ್ತಿದ್ದ ಭೀಮೇಶ್ ಏಪ್ರಿಲ್ 21 ರಂದು ಕೋವಿಡ್ ಪಾಸಿಟಿವ್ ಕೇಸ್ ಎಂದು ವರದಿ ಪಡೆದರು. ಅವರು ಕೋವಿಡ್ ವಾರ್ಡ್‌ನ ಹೊರಗಡೆ ಉಸಿರಾಟಕ್ಕಾಗಿ ಹೆಣಗಾಡುತ್ತಿದ್ದರು ಮತ್ತು ನೆಲದ ಮೇಲೆ ನೋವಿನಿಂದ ಬಳಲುತ್ತ ಒದ್ದಾಡುತ್ತಿದ್ದರು ಎಂದು ವರದಿಯಾಗಿದೆ.

ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರು ಅವರಿಗೆ ಸಹಾಯ ಮಾಡಲು ಮುಂದಾಗಲಿಲ್ಲ ಎಂದು ಭೀಮೇಶ್ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ. ಭೀಮೇಶರ ಜೊತೆಯಲ್ಲಿರುವ ಮಹಿಳೆ, “ನಾವು ಇಲ್ಲಿಯೇ (ಕಾರಿಡಾರ್‌ನಲ್ಲಿ) ಇರಲು ಸಿದ್ಧರಿದ್ದೇವೆ. ಆದರೆ ವೈದ್ಯರು ನಮ್ಮನ್ನು ಮನೆಗೆ ಹೋಗುವಂತೆ ಒತ್ತಾಯಿಸಿದರು ಮತ್ತು ಹಾಸಿಗೆಗಳು ಲಭ್ಯವಿಲ್ಲ ಎಂದು ಹೇಳಿದರು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೂ ಆಸ್ಪತ್ರೆಯ ಅಧಿಕಾರಿಗಳು ಭೀಮೇಶ್ ಸಂಬಂಧಿಕರ ಆರೋಪಗಳನ್ನು ನಿರಾಕರಿಸಿದ್ದಾರೆ. ತನಗೆ ಹಾಸಿಗೆ ಅಗತ್ಯವಿಲ್ಲ ಎಂದು ತಿಳಿಸಿ ಅವರು ಫಾರ್ಮ್‌ಗೆ ಸಹಿ ಹಾಕಿದ್ದರು ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ರೋಗಿ ಆತಂಕದ ಕ್ಷಣಗಳಲ್ಲಿ ಯಾವ ಫಾರ್ಮ್ ಕೊಟ್ಟರೂ ಸಹಿ ಹಾಕುತ್ತಾನೆ/ಳೆ. ಹಾಸಿಗೆ ನೀಡಬೇಕೋ ಬೇಡವೋ ಎಂಬುದನ್ನು ವೈದ್ಯರು ಪರೀಕ್ಷಿಸಿ ತೀರ್ಮಾನಿಸಬೇಕು ಅಲ್ಲವೇ? ಉಸಿರಾಟದ ತೊಂದರೆಯಲ್ಲಿ ನರಳುತ್ತಿರುವ ಒಬ್ಬ ರೋಗಿಗೆ ಕನಿಷ್ಠ ಪ್ರಾಥಮಿಕ ಚಿಕಿತ್ಸೆಯನ್ನೂ ಕೊಡಲಾಗದ ಪರಿಸ್ಥಿತಿಗೆ ನಮ್ಮ ಜಿಲ್ಲಾ ಆಸ್ಪತ್ರೆಗಳು ತಲುಪಿವೆ. ಇಂತಹ ಸಂದರ್ಭದಲ್ಲೂ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರನ್ನು ಹಂತ ಹಂತವಾಗಿ ತೆಗೆಯುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಏಪ್ರಿಲ್ ಅಂತ್ಯದ ಹೊತ್ತಿಗೆ, ಮೇ ತಿಂಗಳಿನಲ್ಲಿ ಕೋವಿಡ್ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು ಈ ಕುರಿತು ರಾಜ್ಯದಲ್ಲಿ ಆಸ್ಪತ್ರೆ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಿ. ಪ್ರತಿದಿನ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸಿ ಎಂದು ಜನಾರೋಗ್ಯ ಚಳುವಳಿ ಒತ್ತಾಯಿಸಿದೆ.


ಇದನ್ನೂ ಓದಿ: 1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್ ಎಚ್ಚರವನ್ನು ಸಿಎಂ, ಸುಧಾಕರ್ ಪರಿಗಣಿಸಲೇ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...