Homeಕರೋನಾ ತಲ್ಲಣಜಿಲ್ಲಾ/ತಾಲ್ಲೂಕು ಕೇಂದ್ರಗಳಲ್ಲಿ ಬೆಡ್‌ ಸಮಸ್ಯೆ: ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿರುವ ಸೋಂಕಿತರು

ಜಿಲ್ಲಾ/ತಾಲ್ಲೂಕು ಕೇಂದ್ರಗಳಲ್ಲಿ ಬೆಡ್‌ ಸಮಸ್ಯೆ: ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿರುವ ಸೋಂಕಿತರು

- Advertisement -
- Advertisement -

ಕೋವಿಡ್ ಎರಡನೆ ಅಲೆ ಉಲ್ಬಣಕ್ಕೆ ರಾಜ್ಯದ ಆರೋಗ್ಯ ಮೂಲಸೌಕರ್ಯಗಳು ತತ್ತರಿಸಿ ಹೋಗುತ್ತಿವೆ. ಬೀದರ್‌ನಲ್ಲಿ ಪಾದಚಾರಿ ಮಾರ್ಗಗಳ ಮೇಲೆ ಹತ್ತಾರು ರೋಗಿಗಳು ಮಲಗಿದ್ದರೆ, ಯಾದಗರಿಯಲ್ಲಿ ವ್ಯಕ್ತಿಯೊಬ್ಬರು ಏಪ್ರಿಲ್ 23 ರಂದು ಆಸ್ಪತ್ರೆಯ ಹಾಸಿಗೆಗಾಗಿ ಅಳುವುದು ಕಂಡುಬಂದಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ. ಇದು ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿನ ಕಳಪೆ ವೈದ್ಯಕೀಯ ಸೌಲಭ್ಯವನ್ನ ಸೂಚಿಸುತ್ತದೆ.

ಡಿ ಭೀಮೇಶ್ ಎಂಬ ವ್ಯಕ್ತಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅಲ್ಲಿ ಬೆಡ್ ಇಲ್ಲ ಎಂದು ಪ್ರವೇಶವನ್ನು ನಿರಾಕರಿಸಿದರು ಎಂದು ಮಾಧ್ಯಮ ವರದಿಗಳು ತಿಳಿಸಿವೆ. ನಿಲ್ಲಲು ಸಾಧ್ಯವಾಗದ ಮತ್ತು ಉಸಿರಾಟಕ್ಕಾಗಿ ಹೆಣಗಾಡುತ್ತಿದ್ದ ಭೀಮೇಶ್ ಅಡ್ಮಿಟ್ ಮಾಡಿಕೊಳ್ಳಿ ಪ್ಲೀಸ್ ಎಂದು ಪರಿಪರಿಯಾಗಿ ಕೇಳಿದರೂ ಹಾಸಿಗೆ ಸಿಗಲಿಲ್ಲ ಎನ್ನಲಾಗಿದೆ.

ಏಪ್ರಿಲ್ 20ರಂದು ಅನಾರೋಗ್ಯದಿಂದ ಬಳಲುತ್ತಿದ್ದ ಭೀಮೇಶ್ ಏಪ್ರಿಲ್ 21 ರಂದು ಕೋವಿಡ್ ಪಾಸಿಟಿವ್ ಕೇಸ್ ಎಂದು ವರದಿ ಪಡೆದರು. ಅವರು ಕೋವಿಡ್ ವಾರ್ಡ್‌ನ ಹೊರಗಡೆ ಉಸಿರಾಟಕ್ಕಾಗಿ ಹೆಣಗಾಡುತ್ತಿದ್ದರು ಮತ್ತು ನೆಲದ ಮೇಲೆ ನೋವಿನಿಂದ ಬಳಲುತ್ತ ಒದ್ದಾಡುತ್ತಿದ್ದರು ಎಂದು ವರದಿಯಾಗಿದೆ.

ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರು ಅವರಿಗೆ ಸಹಾಯ ಮಾಡಲು ಮುಂದಾಗಲಿಲ್ಲ ಎಂದು ಭೀಮೇಶ್ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ. ಭೀಮೇಶರ ಜೊತೆಯಲ್ಲಿರುವ ಮಹಿಳೆ, “ನಾವು ಇಲ್ಲಿಯೇ (ಕಾರಿಡಾರ್‌ನಲ್ಲಿ) ಇರಲು ಸಿದ್ಧರಿದ್ದೇವೆ. ಆದರೆ ವೈದ್ಯರು ನಮ್ಮನ್ನು ಮನೆಗೆ ಹೋಗುವಂತೆ ಒತ್ತಾಯಿಸಿದರು ಮತ್ತು ಹಾಸಿಗೆಗಳು ಲಭ್ಯವಿಲ್ಲ ಎಂದು ಹೇಳಿದರು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೂ ಆಸ್ಪತ್ರೆಯ ಅಧಿಕಾರಿಗಳು ಭೀಮೇಶ್ ಸಂಬಂಧಿಕರ ಆರೋಪಗಳನ್ನು ನಿರಾಕರಿಸಿದ್ದಾರೆ. ತನಗೆ ಹಾಸಿಗೆ ಅಗತ್ಯವಿಲ್ಲ ಎಂದು ತಿಳಿಸಿ ಅವರು ಫಾರ್ಮ್‌ಗೆ ಸಹಿ ಹಾಕಿದ್ದರು ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ರೋಗಿ ಆತಂಕದ ಕ್ಷಣಗಳಲ್ಲಿ ಯಾವ ಫಾರ್ಮ್ ಕೊಟ್ಟರೂ ಸಹಿ ಹಾಕುತ್ತಾನೆ/ಳೆ. ಹಾಸಿಗೆ ನೀಡಬೇಕೋ ಬೇಡವೋ ಎಂಬುದನ್ನು ವೈದ್ಯರು ಪರೀಕ್ಷಿಸಿ ತೀರ್ಮಾನಿಸಬೇಕು ಅಲ್ಲವೇ? ಉಸಿರಾಟದ ತೊಂದರೆಯಲ್ಲಿ ನರಳುತ್ತಿರುವ ಒಬ್ಬ ರೋಗಿಗೆ ಕನಿಷ್ಠ ಪ್ರಾಥಮಿಕ ಚಿಕಿತ್ಸೆಯನ್ನೂ ಕೊಡಲಾಗದ ಪರಿಸ್ಥಿತಿಗೆ ನಮ್ಮ ಜಿಲ್ಲಾ ಆಸ್ಪತ್ರೆಗಳು ತಲುಪಿವೆ. ಇಂತಹ ಸಂದರ್ಭದಲ್ಲೂ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರನ್ನು ಹಂತ ಹಂತವಾಗಿ ತೆಗೆಯುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಏಪ್ರಿಲ್ ಅಂತ್ಯದ ಹೊತ್ತಿಗೆ, ಮೇ ತಿಂಗಳಿನಲ್ಲಿ ಕೋವಿಡ್ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು ಈ ಕುರಿತು ರಾಜ್ಯದಲ್ಲಿ ಆಸ್ಪತ್ರೆ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಿ. ಪ್ರತಿದಿನ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸಿ ಎಂದು ಜನಾರೋಗ್ಯ ಚಳುವಳಿ ಒತ್ತಾಯಿಸಿದೆ.


ಇದನ್ನೂ ಓದಿ: 1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್ ಎಚ್ಚರವನ್ನು ಸಿಎಂ, ಸುಧಾಕರ್ ಪರಿಗಣಿಸಲೇ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...