Homeಕರೋನಾ ತಲ್ಲಣಜಿಲ್ಲಾ/ತಾಲ್ಲೂಕು ಕೇಂದ್ರಗಳಲ್ಲಿ ಬೆಡ್‌ ಸಮಸ್ಯೆ: ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿರುವ ಸೋಂಕಿತರು

ಜಿಲ್ಲಾ/ತಾಲ್ಲೂಕು ಕೇಂದ್ರಗಳಲ್ಲಿ ಬೆಡ್‌ ಸಮಸ್ಯೆ: ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿರುವ ಸೋಂಕಿತರು

- Advertisement -
- Advertisement -

ಕೋವಿಡ್ ಎರಡನೆ ಅಲೆ ಉಲ್ಬಣಕ್ಕೆ ರಾಜ್ಯದ ಆರೋಗ್ಯ ಮೂಲಸೌಕರ್ಯಗಳು ತತ್ತರಿಸಿ ಹೋಗುತ್ತಿವೆ. ಬೀದರ್‌ನಲ್ಲಿ ಪಾದಚಾರಿ ಮಾರ್ಗಗಳ ಮೇಲೆ ಹತ್ತಾರು ರೋಗಿಗಳು ಮಲಗಿದ್ದರೆ, ಯಾದಗರಿಯಲ್ಲಿ ವ್ಯಕ್ತಿಯೊಬ್ಬರು ಏಪ್ರಿಲ್ 23 ರಂದು ಆಸ್ಪತ್ರೆಯ ಹಾಸಿಗೆಗಾಗಿ ಅಳುವುದು ಕಂಡುಬಂದಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ. ಇದು ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿನ ಕಳಪೆ ವೈದ್ಯಕೀಯ ಸೌಲಭ್ಯವನ್ನ ಸೂಚಿಸುತ್ತದೆ.

ಡಿ ಭೀಮೇಶ್ ಎಂಬ ವ್ಯಕ್ತಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅಲ್ಲಿ ಬೆಡ್ ಇಲ್ಲ ಎಂದು ಪ್ರವೇಶವನ್ನು ನಿರಾಕರಿಸಿದರು ಎಂದು ಮಾಧ್ಯಮ ವರದಿಗಳು ತಿಳಿಸಿವೆ. ನಿಲ್ಲಲು ಸಾಧ್ಯವಾಗದ ಮತ್ತು ಉಸಿರಾಟಕ್ಕಾಗಿ ಹೆಣಗಾಡುತ್ತಿದ್ದ ಭೀಮೇಶ್ ಅಡ್ಮಿಟ್ ಮಾಡಿಕೊಳ್ಳಿ ಪ್ಲೀಸ್ ಎಂದು ಪರಿಪರಿಯಾಗಿ ಕೇಳಿದರೂ ಹಾಸಿಗೆ ಸಿಗಲಿಲ್ಲ ಎನ್ನಲಾಗಿದೆ.

ಏಪ್ರಿಲ್ 20ರಂದು ಅನಾರೋಗ್ಯದಿಂದ ಬಳಲುತ್ತಿದ್ದ ಭೀಮೇಶ್ ಏಪ್ರಿಲ್ 21 ರಂದು ಕೋವಿಡ್ ಪಾಸಿಟಿವ್ ಕೇಸ್ ಎಂದು ವರದಿ ಪಡೆದರು. ಅವರು ಕೋವಿಡ್ ವಾರ್ಡ್‌ನ ಹೊರಗಡೆ ಉಸಿರಾಟಕ್ಕಾಗಿ ಹೆಣಗಾಡುತ್ತಿದ್ದರು ಮತ್ತು ನೆಲದ ಮೇಲೆ ನೋವಿನಿಂದ ಬಳಲುತ್ತ ಒದ್ದಾಡುತ್ತಿದ್ದರು ಎಂದು ವರದಿಯಾಗಿದೆ.

ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರು ಅವರಿಗೆ ಸಹಾಯ ಮಾಡಲು ಮುಂದಾಗಲಿಲ್ಲ ಎಂದು ಭೀಮೇಶ್ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ. ಭೀಮೇಶರ ಜೊತೆಯಲ್ಲಿರುವ ಮಹಿಳೆ, “ನಾವು ಇಲ್ಲಿಯೇ (ಕಾರಿಡಾರ್‌ನಲ್ಲಿ) ಇರಲು ಸಿದ್ಧರಿದ್ದೇವೆ. ಆದರೆ ವೈದ್ಯರು ನಮ್ಮನ್ನು ಮನೆಗೆ ಹೋಗುವಂತೆ ಒತ್ತಾಯಿಸಿದರು ಮತ್ತು ಹಾಸಿಗೆಗಳು ಲಭ್ಯವಿಲ್ಲ ಎಂದು ಹೇಳಿದರು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೂ ಆಸ್ಪತ್ರೆಯ ಅಧಿಕಾರಿಗಳು ಭೀಮೇಶ್ ಸಂಬಂಧಿಕರ ಆರೋಪಗಳನ್ನು ನಿರಾಕರಿಸಿದ್ದಾರೆ. ತನಗೆ ಹಾಸಿಗೆ ಅಗತ್ಯವಿಲ್ಲ ಎಂದು ತಿಳಿಸಿ ಅವರು ಫಾರ್ಮ್‌ಗೆ ಸಹಿ ಹಾಕಿದ್ದರು ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ರೋಗಿ ಆತಂಕದ ಕ್ಷಣಗಳಲ್ಲಿ ಯಾವ ಫಾರ್ಮ್ ಕೊಟ್ಟರೂ ಸಹಿ ಹಾಕುತ್ತಾನೆ/ಳೆ. ಹಾಸಿಗೆ ನೀಡಬೇಕೋ ಬೇಡವೋ ಎಂಬುದನ್ನು ವೈದ್ಯರು ಪರೀಕ್ಷಿಸಿ ತೀರ್ಮಾನಿಸಬೇಕು ಅಲ್ಲವೇ? ಉಸಿರಾಟದ ತೊಂದರೆಯಲ್ಲಿ ನರಳುತ್ತಿರುವ ಒಬ್ಬ ರೋಗಿಗೆ ಕನಿಷ್ಠ ಪ್ರಾಥಮಿಕ ಚಿಕಿತ್ಸೆಯನ್ನೂ ಕೊಡಲಾಗದ ಪರಿಸ್ಥಿತಿಗೆ ನಮ್ಮ ಜಿಲ್ಲಾ ಆಸ್ಪತ್ರೆಗಳು ತಲುಪಿವೆ. ಇಂತಹ ಸಂದರ್ಭದಲ್ಲೂ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರನ್ನು ಹಂತ ಹಂತವಾಗಿ ತೆಗೆಯುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಏಪ್ರಿಲ್ ಅಂತ್ಯದ ಹೊತ್ತಿಗೆ, ಮೇ ತಿಂಗಳಿನಲ್ಲಿ ಕೋವಿಡ್ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು ಈ ಕುರಿತು ರಾಜ್ಯದಲ್ಲಿ ಆಸ್ಪತ್ರೆ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಿ. ಪ್ರತಿದಿನ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸಿ ಎಂದು ಜನಾರೋಗ್ಯ ಚಳುವಳಿ ಒತ್ತಾಯಿಸಿದೆ.


ಇದನ್ನೂ ಓದಿ: 1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್ ಎಚ್ಚರವನ್ನು ಸಿಎಂ, ಸುಧಾಕರ್ ಪರಿಗಣಿಸಲೇ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....