Homeಕರೋನಾ ತಲ್ಲಣಜಿಲ್ಲಾ/ತಾಲ್ಲೂಕು ಕೇಂದ್ರಗಳಲ್ಲಿ ಬೆಡ್‌ ಸಮಸ್ಯೆ: ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿರುವ ಸೋಂಕಿತರು

ಜಿಲ್ಲಾ/ತಾಲ್ಲೂಕು ಕೇಂದ್ರಗಳಲ್ಲಿ ಬೆಡ್‌ ಸಮಸ್ಯೆ: ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿರುವ ಸೋಂಕಿತರು

- Advertisement -
- Advertisement -

ಕೋವಿಡ್ ಎರಡನೆ ಅಲೆ ಉಲ್ಬಣಕ್ಕೆ ರಾಜ್ಯದ ಆರೋಗ್ಯ ಮೂಲಸೌಕರ್ಯಗಳು ತತ್ತರಿಸಿ ಹೋಗುತ್ತಿವೆ. ಬೀದರ್‌ನಲ್ಲಿ ಪಾದಚಾರಿ ಮಾರ್ಗಗಳ ಮೇಲೆ ಹತ್ತಾರು ರೋಗಿಗಳು ಮಲಗಿದ್ದರೆ, ಯಾದಗರಿಯಲ್ಲಿ ವ್ಯಕ್ತಿಯೊಬ್ಬರು ಏಪ್ರಿಲ್ 23 ರಂದು ಆಸ್ಪತ್ರೆಯ ಹಾಸಿಗೆಗಾಗಿ ಅಳುವುದು ಕಂಡುಬಂದಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ. ಇದು ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿನ ಕಳಪೆ ವೈದ್ಯಕೀಯ ಸೌಲಭ್ಯವನ್ನ ಸೂಚಿಸುತ್ತದೆ.

ಡಿ ಭೀಮೇಶ್ ಎಂಬ ವ್ಯಕ್ತಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅಲ್ಲಿ ಬೆಡ್ ಇಲ್ಲ ಎಂದು ಪ್ರವೇಶವನ್ನು ನಿರಾಕರಿಸಿದರು ಎಂದು ಮಾಧ್ಯಮ ವರದಿಗಳು ತಿಳಿಸಿವೆ. ನಿಲ್ಲಲು ಸಾಧ್ಯವಾಗದ ಮತ್ತು ಉಸಿರಾಟಕ್ಕಾಗಿ ಹೆಣಗಾಡುತ್ತಿದ್ದ ಭೀಮೇಶ್ ಅಡ್ಮಿಟ್ ಮಾಡಿಕೊಳ್ಳಿ ಪ್ಲೀಸ್ ಎಂದು ಪರಿಪರಿಯಾಗಿ ಕೇಳಿದರೂ ಹಾಸಿಗೆ ಸಿಗಲಿಲ್ಲ ಎನ್ನಲಾಗಿದೆ.

ಏಪ್ರಿಲ್ 20ರಂದು ಅನಾರೋಗ್ಯದಿಂದ ಬಳಲುತ್ತಿದ್ದ ಭೀಮೇಶ್ ಏಪ್ರಿಲ್ 21 ರಂದು ಕೋವಿಡ್ ಪಾಸಿಟಿವ್ ಕೇಸ್ ಎಂದು ವರದಿ ಪಡೆದರು. ಅವರು ಕೋವಿಡ್ ವಾರ್ಡ್‌ನ ಹೊರಗಡೆ ಉಸಿರಾಟಕ್ಕಾಗಿ ಹೆಣಗಾಡುತ್ತಿದ್ದರು ಮತ್ತು ನೆಲದ ಮೇಲೆ ನೋವಿನಿಂದ ಬಳಲುತ್ತ ಒದ್ದಾಡುತ್ತಿದ್ದರು ಎಂದು ವರದಿಯಾಗಿದೆ.

ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರು ಅವರಿಗೆ ಸಹಾಯ ಮಾಡಲು ಮುಂದಾಗಲಿಲ್ಲ ಎಂದು ಭೀಮೇಶ್ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ. ಭೀಮೇಶರ ಜೊತೆಯಲ್ಲಿರುವ ಮಹಿಳೆ, “ನಾವು ಇಲ್ಲಿಯೇ (ಕಾರಿಡಾರ್‌ನಲ್ಲಿ) ಇರಲು ಸಿದ್ಧರಿದ್ದೇವೆ. ಆದರೆ ವೈದ್ಯರು ನಮ್ಮನ್ನು ಮನೆಗೆ ಹೋಗುವಂತೆ ಒತ್ತಾಯಿಸಿದರು ಮತ್ತು ಹಾಸಿಗೆಗಳು ಲಭ್ಯವಿಲ್ಲ ಎಂದು ಹೇಳಿದರು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೂ ಆಸ್ಪತ್ರೆಯ ಅಧಿಕಾರಿಗಳು ಭೀಮೇಶ್ ಸಂಬಂಧಿಕರ ಆರೋಪಗಳನ್ನು ನಿರಾಕರಿಸಿದ್ದಾರೆ. ತನಗೆ ಹಾಸಿಗೆ ಅಗತ್ಯವಿಲ್ಲ ಎಂದು ತಿಳಿಸಿ ಅವರು ಫಾರ್ಮ್‌ಗೆ ಸಹಿ ಹಾಕಿದ್ದರು ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ರೋಗಿ ಆತಂಕದ ಕ್ಷಣಗಳಲ್ಲಿ ಯಾವ ಫಾರ್ಮ್ ಕೊಟ್ಟರೂ ಸಹಿ ಹಾಕುತ್ತಾನೆ/ಳೆ. ಹಾಸಿಗೆ ನೀಡಬೇಕೋ ಬೇಡವೋ ಎಂಬುದನ್ನು ವೈದ್ಯರು ಪರೀಕ್ಷಿಸಿ ತೀರ್ಮಾನಿಸಬೇಕು ಅಲ್ಲವೇ? ಉಸಿರಾಟದ ತೊಂದರೆಯಲ್ಲಿ ನರಳುತ್ತಿರುವ ಒಬ್ಬ ರೋಗಿಗೆ ಕನಿಷ್ಠ ಪ್ರಾಥಮಿಕ ಚಿಕಿತ್ಸೆಯನ್ನೂ ಕೊಡಲಾಗದ ಪರಿಸ್ಥಿತಿಗೆ ನಮ್ಮ ಜಿಲ್ಲಾ ಆಸ್ಪತ್ರೆಗಳು ತಲುಪಿವೆ. ಇಂತಹ ಸಂದರ್ಭದಲ್ಲೂ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರನ್ನು ಹಂತ ಹಂತವಾಗಿ ತೆಗೆಯುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಏಪ್ರಿಲ್ ಅಂತ್ಯದ ಹೊತ್ತಿಗೆ, ಮೇ ತಿಂಗಳಿನಲ್ಲಿ ಕೋವಿಡ್ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು ಈ ಕುರಿತು ರಾಜ್ಯದಲ್ಲಿ ಆಸ್ಪತ್ರೆ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಿ. ಪ್ರತಿದಿನ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸಿ ಎಂದು ಜನಾರೋಗ್ಯ ಚಳುವಳಿ ಒತ್ತಾಯಿಸಿದೆ.


ಇದನ್ನೂ ಓದಿ: 1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್ ಎಚ್ಚರವನ್ನು ಸಿಎಂ, ಸುಧಾಕರ್ ಪರಿಗಣಿಸಲೇ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...