Homeಕರ್ನಾಟಕಮತ್ತೆ ಕಾಡುತ್ತಿದೆ ಬೇಡ್ತಿ-ವರದಾ-ಅಘನಾಶಿನಿ ನದಿ ಜೋಡಣೆ ಗುಮ್ಮ!

ಮತ್ತೆ ಕಾಡುತ್ತಿದೆ ಬೇಡ್ತಿ-ವರದಾ-ಅಘನಾಶಿನಿ ನದಿ ಜೋಡಣೆ ಗುಮ್ಮ!

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ (ಎನ್‌ಡಬ್ಲ್ಯುಡಿಎ) ಬೇಡ್ತಿ-ಅಘನಾಶಿನಿ ಮತ್ತು ವರದಾ ನದಿಗಳನ್ನು ಸೇರಿಸುವ ವಿಸ್ತೃತ ಯೋಜನಾ ವರದಿ ತಯಾರು ಮಾಡಿತ್ತು. ಈ ವರದಿ ಪ್ರಕಾರ ಬೇಡ್ತಿಯ ಉಪನದಿಗಳಿಗೆ ಅಣೆಕಟ್ಟು ಕಟ್ಟಿ ವರದೆಯ ಪಾತ್ರದಲ್ಲಿ ಆ ನೀರು ತುಂಬಬೇಕು. ವರದೆ ಹರಿದು ತುಂಗಭದ್ರಾ ನದಿ ಸೇರುತ್ತದೆ. ಈ ನೀರಿಂದ ತುಂಗಭದ್ರ್ರಾ ಎಡದಂಡೆ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು ಯೋಜನೆಯ ಮೂಲ ಉದ್ದೇಶವಾಗಿತ್ತು. ಆದರದು ಶಿರಸಿ ಭಾಗದ ಜನರ ಪ್ರಬಲ ವಿರೋಧದಿಂದ ವಿಫಲವಾಗಿತ್ತು. ಈಗ ಅದೇ ಯೋಜನೆ ’ಕುಡಿಯುವ ನೀರಿನ’ ಹೆಸರಲ್ಲಿ ಮತ್ತೆ ಮುನ್ನಲೆಗೆ ಬಂದಿದೆ

- Advertisement -
- Advertisement -

ಉತ್ತರ ಕನ್ನಡದ ಪಶ್ಚಿಮ ಘಟ್ಟದ ತಪ್ಪಲಲ್ಲಿ ಇದ್ದಕ್ಕಿದ್ದಂತೆ ನದಿ ಜೋಡಣೆ ಗುಮ್ಮ ಮತ್ತೊಮ್ಮೆ ಎದ್ದು ಕುಳಿತು ಬೆಚ್ಚಿ ಬೀಳಿಸಿದೆ! ಜಿಲ್ಲೆಯ ಜೀವ ನದಿಗಳಾದ ಬೇಡ್ತಿ, ಅಘನಾಶಿನಿ ಮತ್ತು ವರದೆಯನ್ನು ಒಂದು ಮಾಡಿ ಬಯಲು ಸೀಮೆಯ ಗದಗ-ರಾಯಚೂರು-ಕೊಪ್ಪಳದ ಕಡೆಗೆ ತಿರುಗಿಸುವುದು ಕಾರ್ಯಸಾಧುವಲ್ಲ. ಪಕ್ಕಾ ಅವೈಜ್ಞಾನಿಕ ಯೋಜನೆಯೊಂದನ್ನು ಸರ್ಕಾರಿ ಅಧಿಕಾರಿಗಳು ಸಿದ್ಧಪಡಿಸಿದ್ದಾರೆ. ಮಳೆಗಾಲದಲ್ಲಷ್ಟೇ ಮೈದುಂಬಿ ಹರಿಯುವ ಈ ಮೂರೂ ನದಿಗಳು ಬೇಸಿಗೆ ಬಂತೆಂದರೆ ಬಸವಳಿಯುವ ಸತ್ಯ ಗೊತ್ತಿದ್ದು ಬಯಲುಸೀಮೆಗೆ ಕುಡಿಯುವ ನೀರನ್ನು ಶಿರಸಿ-ಯಲ್ಲಾಪುರ ಸೀಮೆಯಿಂದ ಪೂರೈಸುತ್ತೇವೆಂದು ಹಠಕ್ಕೆ ಬಿದ್ದಿರುವುದು ಉತ್ತರ ಕನ್ನಡಿಗರನ್ನು ಕಂಗಾಲಾಗಿಸಿದೆ.

ಏನಿದು ’ದಾಹ’ದ ಯೋಜನೆ?

ಈಚೆಗೆ ಸಿಎಂ ಯಡ್ಡಿ ಸಾಹೇಬರು ಬಜೆಟ್‌ನಲ್ಲಿ ನದಿ ಜೋಡಣೆ ಯೋಜನೆ ಘೋಷಣೆ ಮಾಡುತ್ತಿದ್ದಂತೆಯೇ ಇದು ತಮ್ಮ ಬದುಕು ಬರಿದಾಗಿಸುವ ಹುಚ್ಚು ಯೋಜನೆ ಎನ್ನುತ್ತ ಉತ್ತರ ಕನ್ನಡ ಮಂದಿ ಪ್ರತಿಭಟನೆ ಶುರು ಮಾಡಿದ್ದಾರೆ. ಹಾಗೆ ನೋಡಿದರೆ ಇದೇನೂ ಹೊಸ ಪ್ರಾಜೆಕ್ಟ್ ಅಲ್ಲ; ಎರಡು ದಶಕದ ಹಿಂದೆ ಪ್ರಸ್ತಾಪವಾಗಿದ್ದ ಈ ಯೋಜನೆ ಸ್ಥಳೀಯರ ವಿರೋಧದಿಂದ ನಿಂತು ಹೋಗಿತ್ತು. ಅಂದಿನ ಪ್ರಧಾನಿ ವಾಜಪೇಯಿ ಸರ್ಕಾರ ರೂಪಿಸಿದ್ದ ರಾಷ್ಟ್ರದ ಪ್ರಮುಖ ನದಿಗಳ ಜೋಡಣೆ ಯೋಜನೆಯಲ್ಲಿ ಬೇಡ್ತಿ-ಅಘನಾಶಿನಿ-ವರದಾ ಸಂಗಮ ಸಂದಿಗ್ಧವೂ ಸೇರಿತ್ತು. ಕೇಂದ್ರ ಸರ್ಕಾರ 2002ರಲ್ಲಿ ಕಾರ್ಯಪಡೆ ರಚಿಸಿ ನದಿ ಪಾತ್ರಗಳ ಜೋಡಣೆಯ ಕ್ರಿಯಾ ಯೋಜನೆಗಳನ್ನು ಸಿದ್ಧಗೊಳಿಸಿತ್ತು. ಪ್ರಾಜೆಕ್ಟ್ ವೆಚ್ಚ, ಬಂಡವಾಳದ ಮೂಲ ಗುರುತಿಸಿ 2016ರ ಹೊತ್ತಿಗೆ ಕೈಗೆತ್ತಿಕೊಳ್ಳಲು ಸೂಚಿಸಿತ್ತು.

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ (ಎನ್‌ಡಬ್ಲ್ಯುಡಿಎ) ಬೇಡ್ತಿ-ಅಘನಾಶಿನಿ ಮತ್ತು ವರದಾ ನದಿಗಳನ್ನು ಸೇರಿಸುವ ವಿಸ್ತೃತ ಯೋಜನಾ ವರದಿ ತಯಾರು ಮಾಡಿತ್ತು. ಈ ವರದಿ ಪ್ರಕಾರ ಬೇಡ್ತಿಯ ಉಪನದಿಗಳಿಗೆ ಅಣೆಕಟ್ಟು ಕಟ್ಟಿ ವರದೆಯ ಪಾತ್ರದಲ್ಲಿ ಆ ನೀರು ತುಂಬಬೇಕು. ವರದೆ ಹರಿದು ತುಂಗಭದ್ರಾ ನದಿ ಸೇರುತ್ತದೆ. ಈ ನೀರಿಂದ ತುಂಗಭದ್ರ ಎಡದಂಡೆ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು ಯೋಜನೆಯ ಮೂಲ ಉದ್ದೇಶವಾಗಿತ್ತು. ಆದರದು ಶಿರಸಿ ಭಾಗದ ಜನರ ಪ್ರಬಲ ವಿರೋಧದಿಂದ ವಿಫಲವಾಗಿತ್ತು. ಈಗ ಅದೇ ಯೋಜನೆ ’ಕುಡಿಯುವ ನೀರಿನ’ ಹೆಸರಲ್ಲಿ ಮತ್ತೆ ಮುನ್ನಲೆಗೆ ಬಂದಿದೆ.

ರೂಪಾಂತರಗೊಂಡಿರುವ ಯೋಜನೆಯಂತೆ ಗದಗಿನ ಹಿರೆವಡ್ಡತ್ತಿಗೆ ಎಂಬಲ್ಲಿ ದೊಡ್ಡ ಡ್ಯಾಮ್ ಸ್ಥಾಪಿಸಿ ಬೇಡ್ತಿ-ವರದಾ-ಅಘನಾಶಿನಿ ನೀರನ್ನು ಸಂಗ್ರಹಿಸಲಾಗುತ್ತದೆ. ಶಿರಸಿಯ ವನಳ್ಳಿಯಲ್ಲಿ ಹರಿಯುವ ಪಟ್ಟಣದ ಹೊಳೆಗೆ ಮೆಣಸಗೋಡ ಎಂಬಲ್ಲಿ ಅಣೆಕಟ್ಟು ಕಟ್ಟುವುದು; ಶಾಲ್ಮಲಾ ನದಿಗೆ ಸೋಂದಾದಲ್ಲಿ ತಡೆಹಾಕುವುದು ಎರಡೂ ಜಲಾಶಯದ ನೀರನ್ನು 6.3 ಕಿಮೀ ಕಾಲುವೆ 2.2 ಕಿಮೀ ಸುರಂಗದ ಮೂಲಕ ವರದಾಕ್ಕೆ ಹರಿಸುವುದು. ಶಾಲ್ಮಲಾ ಮತ್ತು ಪಟ್ಟಣದ ಹೊಳೆಗಳು ಜಲಾಶಯದ ಹಿನ್ನೀರಿನ ಕೆಂಗ್ರೆ ಎಂಬಲ್ಲಿಂದ 8.03 ಕಿಮೀ ನೀರನ್ನು ಪಂಪ್ ಮಾಡಿ ನಂತರ 6.88 ಕಿಮೀ ಸುರಂಗದ ಮೂಲಕ ಶಿರಸಿಯ ಹಕ್ಕಲುಮನೆ ತನಕ ನೀರು ತರುವುದು. ಇಲ್ಲಿಂದ ಮುಂದೆ ಶಾಲ್ಮಲಾ ಮತ್ತು ಪಟ್ಟಣದ ಹೊಳೆ ನೀರು ಇಳಿಜಾರು ಕಾಲುವೆಯಲ್ಲಿ ಸರಾಗವಾಗಿ ಹರಿದು ಬನವಾಸಿ ಸಮೀಪದ ವರದಾ ನದಿ ಪಾತ್ರಕ್ಕೆ ಸೇರುತ್ತದೆ. ಈ ನೀರನ್ನು ಗದುಗಿನ ಹಿರೇವಡ್ಡತ್ತಿ ಜಲಾಗಾರದಲ್ಲಿ ಸಂಗ್ರಹಿಸಿ ಗದಗ-ರಾಯಚೂರು-ಕೊಪ್ಪಳದ ಜನರಿಗೆ ಒದಗಿಸಲಾಗುತ್ತದೆ ಎಂಬುದು ಎನ್‌ಡಬ್ಲ್ಯುಡಿಎ ನೀಲನಕ್ಷೆಯಲ್ಲಿ ಹೇಳಲಾಗಿದೆ.

ಎಡವಟ್ಟು ಪ್ರಾಜೆಕ್ಟ್

ಎನ್‌ಡಬ್ಲ್ಯುಡಿಎ ಹೇಳುವಷ್ಟು ಸರಳವಾಗಿಲ್ಲ ಯೋಜನೆ. ನೀರನ್ನು ಗದುಗಿನವರೆಗೆ ಎತ್ತಲು ಬರೋಬ್ಬರಿ 61 ಮೆಗಾವ್ಯಾಟ್ ದುಬಾರಿ ವಿದ್ಯುತ್ ಶಕ್ತಿ ಬೇಕಾಗುತ್ತದೆ. ಇಷ್ಟಾದರು ನೀರು ಗದಗ ಸೇರುತ್ತದೆಂಬ ಖಾತ್ರಿಯಿಲ್ಲ. ಪಶ್ಚಿಮಾಭಿಮುಖವಾಗಿ ಹರಿಯುವ ನದಿಯನ್ನು ಪೂರ್ವಾಭಿಮುಖವಾಗಿ ತಿರುಗಿಸುವುದು ಅಷ್ಟು ಸುಲಭವಲ್ಲ. ಬೇಸಿಗೆ ಆರಂಭದ ಫೆಬ್ರವರಿಯಲ್ಲೇ ಬೇಡ್ತಿ-ವರದಾ-ಅಘನಾಶಿನಿ ನದಿಗಳ ಪಾತ್ರ ಬತ್ತತೊಡಗುತ್ತದೆ. ಈ ನದಿಗಳು ಸರ್ವಋತು ಹರಿಯುವುದಿಲ್ಲ ಎಂಬುದು ಗೊತ್ತಿದ್ದೂ ಸರ್ಕಾರಿ ಪಂಡಿತರು ಬಯಲು ಸೀಮೆ ದಾಹ ತೀರಿಸುವ ನೆಪದಲ್ಲಿ ನದಿ ಜೋಡಿಸುತ್ತೇವೆಂದು ಹಲಬುವುದು ಕ್ರೂರ ವ್ಯಂಗ್ಯವೇ ಸರಿ! ನದಿ ಜೋಡಣೆ ಎಂತ ಕೆಟ್ಟ ಯೋಜನೆ ಎಂಬುದನ್ನು ಬೇಡ್ತಿ ನದಿ ಹತ್ತಿರವೇ ಇರುವ ಯಲ್ಲಾಪುರ ಪಟ್ಟಣಕ್ಕೆ ಕುಡಿಯುವ ನೀರೊದಗಿಸುವ 20ಕೋಟಿ ರೂ ಪ್ರಾಜೆಕ್ಟ್ ವಿಫಲವಾಗಿರುವುದು ಸಾರಿ ಸಾರಿ ಹೇಳುತ್ತಿದೆ!

2011ರಲ್ಲಿ ಈ ಯೋಜನೆ ಶುರುವಾಗುವಾಗ ವ್ಯರ್ಥ ಸಾಹಸವೆಂಬ ಆಕ್ಷೇಪ ವ್ಯಕ್ತವಾಗಿತ್ತು. ಆದರೂ ಹುಂಬ ಆಳುವವರು ಯೋಜನೆ ಕೈಗೆತ್ತಿಕೊಂಡಿದ್ದರು. ಬೇಡ್ತಿ ನೀರೆಂದರೆ ಹುಬ್ಬಳ್ಳಿ-ಧಾರವಾಡದ ತ್ಯಾಜ್ಯವೇ ಹೊರತು ಶುದ್ಧ ನೀರಲ್ಲವೆಂದು ಜನ ಬೊಬ್ಬೆ ಹಾಕಿದ್ದರು. ದೊಡ್ಡ ಮೊತ್ತದ ಹಣ ವ್ಯಯಿಸಿದರೂ ನದಿಯಲ್ಲೇ ನೀರಿಲ್ಲದ್ದರಿಂದ ಬೇಸಿಗೆಯಲ್ಲಿ ಯೋಜನೆ ಕೈಕೊಟ್ಟಿತ್ತು. ಕೆಲವೇ ಕೆಲವು ವಾರ್ಡ್‌ಗಳಿಗಷ್ಟೆ ನೀರು ಬಂದರೂ ಇದು ಕೊಳಕು ನೀರೆಂದು ಜನ ಬಳಸಲಿಲ್ಲ. ಐದು ವರ್ಷದಿಂದ ಯೋಜನೆ ಸ್ಥಗಿತಗೊಂಡಿದೆ. ಇದಕ್ಕಾಗಿ ನಿರ್ಮಿಸಿದ ಪ್ರತ್ಯೇಕ ವಿದ್ಯುತ್ ಲೈನ್ ಕಾಡಿನಲ್ಲಿ ಅವಶೇಷವಾಗಿದೆ. ಶುದ್ಧೀಕರಣ ಘಟಕ, ಜಾಕ್‌ವೆಟ್, ಯಂತ್ರಗಳೆಲ್ಲ ಕೆಲಸಕ್ಕೆ ಬಾರದೆ ಸರ್ಕಾರಿ ಪಂಡಿತರ ’ಮೇಧಾವಿತನ’ವನ್ನು ಹೇಳುತ್ತಿವೆ!

ಜೀವಜಾಲಕ್ಕೆ ಗಂಡಾಂತರ

ಧಾರವಾಡ ವಿವಿ ಬಳಿ ಹುಟ್ಟುವ ಬೇಡ್ತಿ ನದಿ ಯಲ್ಲಾಪುರ-ಅಂಕೋಲ ತಾಲ್ಲೂಕಲ್ಲಿ ಹರಿದು ಗಂಗಾವಳಿ ಎಂಬಲ್ಲಿ ಸಮುದ್ರ ಸೇರುತ್ತದೆ. ಘಟ್ಟದ ಮೇಲೆ ಬೇಡ್ತಿ ಎಂದು ಕರಾವಳಿಯಲ್ಲಿ ಗಂಗಾವಳಿ ಎಂದು ಕರೆಯಲ್ಪಡುವ ಈ ನದಿಯ ಹರಿವು ಕೇವಲ 152 ಕಿಮೀ. ಮಲೆನಾಡಿನ ರೈತ ತೋಟಿಗರಿಗೆ ಮತ್ತು ಕರಾವಳಿಯ ಮೀನುಗಾರ ರೈತರಿಗೆಲ್ಲ ಬೇಡ್ತಿ/ಗಂಗಾವಳಿ-ಅಘನಾಶಿನಿ-ವರದಾ ಜೀವ-ಜೀವದ ನದಿಗಳು ಸಾವಿರಾರು ಎಕರೆ ಭೂಮಿಗೆ ನೀರೊದಗಿಸುವ ಈ ನದಿಗಳು ಕರಾವಳಿಯಲ್ಲಿ ಸಾವಿರಾರು ಬೆಸ್ತ ಕುಟುಂಬಗಳ ಕುಲಕಸುಬಿಗೆ ಆಧಾರ. ಅಂತಾರಾಷ್ಟ್ರೀಯ ನಿಸರ್ಗ ಸಂರಕ್ಷಣಾ ಒಕ್ಕೂಟ ಬೇಡ್ತಿ ಕೊಳ್ಳವನ್ನು ಜೀವ ವೈವಿಧ್ಯದ ಸಕ್ರಿಯ ಪ್ರದೇಶವೆಂದು ಘೋಷಿಸಿದೆ. ಈ ಭಾಗವನ್ನು 1741 ರೀತಿಯ ಹೂಬಿಡುವ ಸಸ್ಯಗಳು ಮತ್ತು 420 ಪ್ರಭೇದದ ಪಕ್ಷಿಗಳು ಇನ್ನಿತರ ವನ್ಯಜೀವಿಗಳ ನೆಲೆಯೆಂದು ಗುರುತಿಸಲ್ಪಟ್ಟಿದೆ. ಕರಾವಳಿಯ ನದಿ-ಸಮುದ್ರ ಸಂಗಮದಲ್ಲಿ ಮೀನಿನ ಸಂತತಿ ಬೆಳೆಯುವುದೇ ನದಿ ತರುವ ಪೌಷ್ಠಿಕಾಂಶಗಳಿಂದ. 35ಕ್ಕೂ ಹೆಚ್ಚು ಪ್ರಾಣಿ ತಳಿ ಕಾರಿಡಾರ್ ಇದು.

ಬೇಡ್ತಿ-ವರದಾ ಜೋಡಣೆ ಅವೈಜ್ಞಾನಿಕವಷ್ಟೇ ಅಲ್ಲ ಹಣ ಪೋಲು ಮಾಡುವ ಯೋಜನೆ. ಇದರಿಂದ ಗದಗ ಭಾಗಕ್ಕೂ ನೀರು ಸಿಗುವುದು ಕೂಡ ನಿಜವಲ್ಲ. ಒಂದಿಷ್ಟು ಕಂಟ್ರಾಕ್ಟರ್, ಸಿಮೆಂಟ್, ಕಬ್ಬಿಣ, ಗ್ರಾನೈಟ್, ರಾಜಕಾರಣಿ ಲಾಬಿಗೆ ಕೊಪ್ಪರಿಗೆ ಕಾಸು ತಂದು ಕೊಡಬಹುದಷ್ಟೇ. ನದಿಯನ್ನೇ ನಂಬಿ ಕಟ್ಟಿಕೊಂಡಿರುವ ಊರು, ಮನೆ, ಮಠ, ತೋಟ-ಗದ್ದೆಯನ್ನಷ್ಟೇ ಅಲ್ಲ ವಿಶಿಷ್ಟ-ವೈವಿಧ್ಯಮಯ ಜೀವಜಾಲವನ್ನೇ ಈ ಯೋಜನೆ ಧ್ವಂಸ ಮಾಡುತ್ತದೆ! ನದಿಯ ಹೆಚ್ಚುವರಿ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತದೆಂದು ಸರ್ಕಾರಿ ಪಂಡಿತರು ಮಂಡಿಸುವ ವಾದವೇ ಅನರ್ಥಕಾರಿ. ಹೆಚ್ಚುವರಿ ನೀರೆಂಬುದು ನದಿ ಪಾತ್ರದಲ್ಲಿರಲಾರದು. ಅದೆಲ್ಲಾ ನದಿ ಪಾತ್ರದುದ್ದಕ್ಕೂ ಬಳಕೆಯಾಗಿ ನಂತರ ಸಮುದ್ರ ಸೇರುವಾಗಲೂ ಜಲಚರಗಳಿಗೆ ಅನಿವಾರ್ಯ ಜೀವ ಜಲವಾಗಿರುತ್ತದೆ. ನದಿಯನ್ನು ಅನೈಸರ್ಗಿಕ ಬಲಪ್ರಯೋಗದಿಂದ ತಿರುಗಿಸಿದರೆ ಆಗುವ ಅನಾಹುತ ಒಂದೆರಡಲ್ಲ. ಕರಾವಳಿ ಕೃಷಿ ಭೂಮಿಗೆ ಸಮುದ್ರದ ಉಪ್ಪು ನೀರು ನುಗ್ಗುತ್ತದೆ; ಬಾವಿಯ ನೀರು ಕುಡಿಯಲು ಬಾರದಂತಾಗುತ್ತದೆ. ಅಂತರ್ಜಲ ಬತ್ತುತ್ತದೆ. ಯೋಜನೆಯಿಂದ ಉಪಯೋಗಕ್ಕಿಂತ ಹಾನಿಯೇ ಹೆಚ್ಚು!

ಬೇಡ್ತಿ ನದಿಯಿಂದ ಮುಂಡಗೋಡ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಗಂಗಾವಳಿ ನದಿಯಿಂದ ಅಂಕೋಲಾ-ಕಾರವಾರ ತಾಲ್ಲೂಕುಗಳಿಗೆ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ. ಸೀಬರ್ಡ್ ನೌಕಾನೆಲೆಗೆ ನೀರು ಸರಬರಾಜು ಮಾಡುವ ಚೆಕ್‌ಡ್ಯಾಮ್ ನಿರ್ಮಾಣವಾಗಲಿದೆ. ವರದೆಯ ಪಾತ್ರದಲ್ಲಿರುವ ತಿಗಣಿ ಸಮೀಪ ಡ್ಯಾಮ್ ಕಟ್ಟಿ ಕೃಷಿಗೆ ನೀರು ಪೂರೈಸಲಾಗುತ್ತಿದೆ. ಬನವಾಸಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಿಗೆ ವರದೆಯ ನೀರು ಕುಡಿಯಲು ಸರಬರಾಜಾಗುತ್ತಿದೆ. ಮೂರು ನದಿ ಜೋಡಣೆಯಿಂದ ಇದೆಲ್ಲ ನಿಷ್ಪ್ರಯೋಜಕವಾಗಲಿದೆ! ಬಲಾತ್ಕಾರವಾಗಿ ನದಿಯ ದಿಕ್ಕು ಬದಲಿಸುವುದಿದೆಯಲ್ಲ ಅದು, ಅವೈಜ್ಞಾನಿಕ, ಅನೈಸರ್ಗಿಕವಷ್ಟೇ ಅಲ್ಲ, ಅನಾಹುತಕಾರಿ ಮತ್ತು ಅಕ್ಷಮ್ಯವೂ ಹೌದು.

ಹೋರಾಟಕ್ಕೆ ಸಿದ್ಧತೆ

ಹಿಂದೆ ಈ ನದಿ ಸಂಗಮ ಯೋಜನೆ ವಿರೋಧಿಸಿ ರಾಜಕೀಯ ಮೈಲೇಜು ಪಡೆದಿದ್ದ ಬಿಜೆಪಿ ಈಗ ಅಧಿಕಾರದಲ್ಲಿದೆ. ಅಂದು ಪರಿಸರ ಗುತ್ತಿಗೆ ಪಡೆದಂತೆ ಹಾರಾಡುತ್ತಿದ್ದವರು ಇವತ್ತು ಆಯಕಟ್ಟಿನ ಅಧಿಕಾರದಲ್ಲಿದ್ದಾರೆ. ಹಾಗಾಗಿ ಅವರ ವಿರೋಧದ ಧ್ವನಿ ಅಡಗಿದೆ; ಬೂಟಾಟಿಕೆ ಸಾಬೀತಾಗಿದೆ. ದೇಶದ ಎಲ್ಲಿಯೂ ನದಿ ಜೋಡಣೆ ಯೋಜನೆಗಳು ನಿಯಮಿತ ಸಮಯದಲ್ಲಿ ನಿರೀಕ್ಷಿತ ರೀತಿಯಲ್ಲಿ ಅನುಷ್ಠಾನವಾದದ್ದೇ ಇಲ್ಲ! ಕಳೆದ 20 ವರ್ಷದಲ್ಲಿ ಆದ್ಯತೆಯಲ್ಲಿ ಕೈಗೆತ್ತಿಕೊಂಡ 30 ನದಿ ಜೋಡಣೆ ಪ್ರಾಜೆಕ್ಟ್‌ಗಳು ಒಂದೇ ಒಂದು ಕಾರ್ಯಗತವಾಗಿಲ್ಲ. ಎತ್ತಿನಹೊಳೆಯಿಂದ ಕೋಲಾರಕ್ಕೆ 1 ಟಿಎಂಸಿ ನೀರು ಕೊಂಡೊಯ್ಯುವ 24 ಸಾವಿರ ಕೋಟಿ ಯೋಜನೆ ಆಧ್ವಾನವಾಗಿದೆ!

ಇದೆಲ್ಲ ಗೊತ್ತಿದ್ದೂ ಬೇಡ್ತಿ-ವರದಾ-ಅಘನಾಶಿನಿ ನದಿ ಜೋಡಿಸುವ ಹುಚ್ಚು ಪ್ರಾಜೆಕ್ಟ್‌ಗೆ ಸರ್ಕಾರಿ ಮಂದಿ ತರಾತುರಿಯ ಸಿದ್ಧತೆಯಲ್ಲಿದ್ದಾರೆ. ಪ್ರಕೃತಿ ನಿಯಮ ವೈಜ್ಞಾನಿಕ ನಿಯಮದ ವಿರುದ್ಧ ನದಿ ಜೋಡಣೆ ವ್ಯರ್ಥ ಸಾಹಸವೆಂದು ಆಳುವವರಿಗೆ ಅರ್ಥ ಮಾಡಿಸುವರ್‍ಯಾರು?


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....