Homeಸಾಹಿತ್ಯ-ಸಂಸ್ಕೃತಿಕಥೆಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ - ಯೋಗೇಶ್ ಮಾಸ್ಟರ್

ಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ – ಯೋಗೇಶ್ ಮಾಸ್ಟರ್

- Advertisement -
- Advertisement -

“ತಿಂಮ, ನಾಟಕ ನೋಡಿದೆಯೇನೋ?” ಬುದ್ಧನ ನಾಟಕ ನೋಡಲು ರಾತ್ರಿ ಮಗನ ಕಳುಹಿಸಿದ್ದ ತಂದೆ ಬೆಳಗ್ಗೆ ಕೇಳಿದ.
“ನೋಡಿದೆ ಅಪ್ಪಾ.”
“ಎಲ್ಲಾ ಅರ್ಥ ಆಯ್ತೇನೋ?”
“ಆಯ್ತಪ್ಪಾ” ಎನ್ನುವ ತಿಂಮ ಮತ್ತೆ ನೆನಪಿಸಿಕೊಂಡು ಹೇಳುತ್ತಾನೆ, “ಆದರೆ, ಒಂದರ್ಥ ಆಗಲಿಲ್ಲ. ಬುದ್ಧ ರಾಜ್ಯ, ಹೆಂಡತಿ, ಮಗ; ಎಲ್ಲವನ್ನೂ ಬಿಟ್ಟು ಹೋದವನು, ತಗಡಿನ ಬಿಲ್ಲೆ ಕೊಡ್ತೀವಿ ಅಂದ ತಕ್ಷಣ ಓಡಿ ಬಂದುಬಿಟ್ಟನಲ್ಲಪ್ಪಾ?”ಬೀಚಿಯ ಬೆಳ್ಳಿ ತಿಂಮ ಒಬ್ಬ ಬಾಲಕ. ಅವನು ತಾನು ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ನೋಡುವುದನ್ನೆಲ್ಲಾ ಪ್ರಶ್ನಿಸುತ್ತಾನೆ. ಅವನ ಪ್ರಶ್ನೆಗಳು ಸಮಾಜವು ಯಾವುದನ್ನು ಗಂಭೀರ ಅಂತ ಪರಿಗಣಿಸುತ್ತದೋ ಅದನ್ನು ಲೇವಡಿ ಮಾಡುತ್ತದೆ. ಹೀಗೆ ವ್ಯಂಗ್ಯವಾಡುವುದು ವ್ಯವಸ್ಥೆಯನ್ನು ಪ್ರತಿಭಟಿಸುವ, ಚಿಂತನೆಗೆ ಹಚ್ಚುವ ಬೀಚಿಯವರ ರೀತಿ.

ಬುದ್ಧ ತಗಡಿನ ಬಿಲ್ಲೆಗೆ ಓಡಿ ಬರುವುದು, ತಿಂಮನಿಗೆ ನಾಟಕ ಮತ್ತು ವಾಸ್ತವದ ಅರಿವಿಲ್ಲ ಅಂತಲ್ಲ. ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿ, ಅದಕ್ಕೆ ಪ್ರಶಸ್ತಿ ಬರಲೆಂದು ಅರ್ಜಿ ಹಾಕುವುದನ್ನು, ಲಾಬಿ ಮಾಡುವ ವಾಸ್ತವವನ್ನು ಅದು ಅಣಕಿಸುತ್ತದೆ.

ರಸ್ತೆಯಲ್ಲಿ ಯಾರಿಗೋ ಕೈಕೋಳ, ಕಾಲ್ಗಳಿಗೆ ಸರಪಳಿ ಹಾಕಿ ಎಳೆದೊಯ್ಯುತ್ತಿದ್ದ ಗಲಾಟೆ. ತಿಂಮ ಕೇಳಿದ ಅದೇನೆಂದು. ಜೈಲಿಗೆಂದರು ಯಾರೋ. ‘ಜೈಲಿಗೋ ಇಷ್ಟು ರಂಪು! ನಾನೆಲ್ಲೋ ಸ್ಕೂಲಿಗೆ ಎಂದುಕೊಂಡೆ’ ಎನ್ನುತ್ತಾ ಶಿಕ್ಷಣ ವ್ಯವಸ್ಥೆಗೆ ಕನ್ನಡಿ ಹಿಡಿಯುತ್ತಾನೆ ತಿಂಮ.

“ಇವತ್ತು ಬರುವ ಅತಿಥಿಯ ಮೂಗಿನ ಬಗ್ಗೆ ಏನೂ ಮಾತಾಡಬೇಡ” ಎಂದು ತಂದೆ ಎಚ್ಚರಿಸಿರುತ್ತಾನೆ. ಅತಿಥಿ ಬಂದಾಗ ಅವರನ್ನೇ ನೋಡಿಕೊಂಡು ತಿಂಮ ಕುಳಿತಿರುತ್ತಾನೆ. ಅತಿಥಿಗೂ ಅದು ಗಮನಕ್ಕೆ ಬಂದು, ಯಾಕಪ್ಪಾ ಎಂದು ಕೇಳುತ್ತಾರೆ. ಅವನು ಏನಿಲ್ಲ ಎಂದು ತಂದೆಗೆ ಕೇಳುತ್ತಾನೆ. “ಅಪ್ಪಾ, ಇವರ ಮೂಗಿನ ಬಗ್ಗೆ ಏನೂ ಮಾತಾಡಬೇಡಾಂದೆ. ಆದರೆ, ಇವರಿಗೆ ಮೂಗೇ ಇಲ್ಲ!” ಎಂದು ಮಕ್ಕಳ ಮುಖವಾಡವಿಲ್ಲದ ಮನಸ್ಸನ್ನು ತೋರಿಸುವ ಮಗುವಿನ ಮನೋವಿಜ್ಞಾನ ಬೀಚಿಯದು.

“ಹಸುವಿಗೆ ನಾಲ್ಕಿರುತ್ತವೆ. ನನಗೆ ಎರಡಿವೆ. ಏನದು ಹೇಳು?” ಶಾಲೆಗೆ ಸೇರಿಸಿಕೊಳ್ಳುವ ಉಪಾಧ್ಯಾಯಿನಿ ತಿಂಮನ ಪರೀಕ್ಷಿಸಿದಳು. ಅವನಿಗೆ ಕಂಡದ್ದು ಹೇಳಿದ. ಶಿಕ್ಷಕಿ ಮುಜುಗರಗೊಂಡು ಇವನು ದೊಡ್ಡ ತರಗತಿಗೆ ಹೋಗಬೇಕೆನ್ನುವಳು. ಪಾಪ, ಕಾಲುಗಳೆಂಬ ಉತ್ತರ ಅವಳು ಬಯಸಿದ್ದಳು. ಕಿರಿಯ ಪೀಳಿಗೆ ದಡ್ಡರಿರುತ್ತಾರೆಂದು ಕಡೆಗಣಿಸದಿರಲು ಬೀಚಿ ಹಿರಿಯರಿಗೆ ಎಚ್ಚರಿಸುತ್ತಾರೆ.

ಪಶುವೈದ್ಯರು ಹಸುವಿಗೆ ಹೇಗೆ ಗುಳಿಗೆ ನುಂಗಿಸಬೇಕೆಂದು ಹೇಳಿ ತಿಂಮನ ಕಳುಹಿಸಿದ್ದರು. ಸ್ವಲ್ಪ ಹೊತ್ತಿಗೆ ತಿಂಮ ಗಾಬರಿಯಿಂದ ಮರಳಿ ಹಸುವಿಗೆ ಗುಳಿಗೆ ನುಂಗಿಸಲಾಗಲಿಲ್ಲವೆಂದು ಹೇಳಿದ.
“ಯಾಕೋ, ಗೊಟ್ಟದಲ್ಲಿ (ಬಿದಿರಿನ ಕೊಳವೆ) ಗುಳಿಗೆ ಇಟ್ಟೆಯೇನೋ?”
“ಇಟ್ಟೆ.”
“ಗೊಟ್ಟವನ್ನು ಹಸುವಿನ ಗಂಟಲಿಗಿಟ್ಟೆಯೇನೋ?”
“ಇಟ್ಟೆ.”
“ಜೋರಾಗಿ ಊದಿದೆಯೇನೋ?”
“ನಾನು ಊದುವಷ್ಟರಲ್ಲಿ ಅದೇ ಊದಿಬಿಟ್ಟಿತು!” ತಿಂಮನ ಗಾಬರಿಯ ಕಾರಣ ಅದು.
ವ್ಯವಸ್ಥೆಯನ್ನು ಬದಲಿಸುತ್ತೇನೆಂದು ಹೋದವರನ್ನು ವ್ಯವಸ್ಥೆಯೇ ಬದಲಿಸುವ ಕತೆ ಈ ತಿಂಮನಲ್ಲಿ.
ಈ ಪುಸ್ತಕದ ಪ್ರತಿ ಈಗ ನನ್ನಲ್ಲಿಲ್ಲ. ಆದರೆ ಸಂದರ್ಭಾನುಸಾರವಾಗಿ ಬೇಕಾದ ಪುಟಗಳು ನನ್ನೊಳಗೆ ತೆರೆದುಕೊಂಡಿರುತ್ತವೆ.
“ತಿಂಮ, ಚೌಡಯ್ಯನವರ ಪಿಟೀಲು ಕೇಳಿದ್ಯೇನೋ?”
“ಕೇಳಿದೆ. ಕೊಡಲಿಲ್ಲಪ್ಪಾ.”…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...