Homeಸಾಹಿತ್ಯ-ಸಂಸ್ಕೃತಿಕಥೆಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ - ಯೋಗೇಶ್ ಮಾಸ್ಟರ್

ಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ – ಯೋಗೇಶ್ ಮಾಸ್ಟರ್

- Advertisement -
- Advertisement -

“ತಿಂಮ, ನಾಟಕ ನೋಡಿದೆಯೇನೋ?” ಬುದ್ಧನ ನಾಟಕ ನೋಡಲು ರಾತ್ರಿ ಮಗನ ಕಳುಹಿಸಿದ್ದ ತಂದೆ ಬೆಳಗ್ಗೆ ಕೇಳಿದ.
“ನೋಡಿದೆ ಅಪ್ಪಾ.”
“ಎಲ್ಲಾ ಅರ್ಥ ಆಯ್ತೇನೋ?”
“ಆಯ್ತಪ್ಪಾ” ಎನ್ನುವ ತಿಂಮ ಮತ್ತೆ ನೆನಪಿಸಿಕೊಂಡು ಹೇಳುತ್ತಾನೆ, “ಆದರೆ, ಒಂದರ್ಥ ಆಗಲಿಲ್ಲ. ಬುದ್ಧ ರಾಜ್ಯ, ಹೆಂಡತಿ, ಮಗ; ಎಲ್ಲವನ್ನೂ ಬಿಟ್ಟು ಹೋದವನು, ತಗಡಿನ ಬಿಲ್ಲೆ ಕೊಡ್ತೀವಿ ಅಂದ ತಕ್ಷಣ ಓಡಿ ಬಂದುಬಿಟ್ಟನಲ್ಲಪ್ಪಾ?”ಬೀಚಿಯ ಬೆಳ್ಳಿ ತಿಂಮ ಒಬ್ಬ ಬಾಲಕ. ಅವನು ತಾನು ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ನೋಡುವುದನ್ನೆಲ್ಲಾ ಪ್ರಶ್ನಿಸುತ್ತಾನೆ. ಅವನ ಪ್ರಶ್ನೆಗಳು ಸಮಾಜವು ಯಾವುದನ್ನು ಗಂಭೀರ ಅಂತ ಪರಿಗಣಿಸುತ್ತದೋ ಅದನ್ನು ಲೇವಡಿ ಮಾಡುತ್ತದೆ. ಹೀಗೆ ವ್ಯಂಗ್ಯವಾಡುವುದು ವ್ಯವಸ್ಥೆಯನ್ನು ಪ್ರತಿಭಟಿಸುವ, ಚಿಂತನೆಗೆ ಹಚ್ಚುವ ಬೀಚಿಯವರ ರೀತಿ.

ಬುದ್ಧ ತಗಡಿನ ಬಿಲ್ಲೆಗೆ ಓಡಿ ಬರುವುದು, ತಿಂಮನಿಗೆ ನಾಟಕ ಮತ್ತು ವಾಸ್ತವದ ಅರಿವಿಲ್ಲ ಅಂತಲ್ಲ. ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿ, ಅದಕ್ಕೆ ಪ್ರಶಸ್ತಿ ಬರಲೆಂದು ಅರ್ಜಿ ಹಾಕುವುದನ್ನು, ಲಾಬಿ ಮಾಡುವ ವಾಸ್ತವವನ್ನು ಅದು ಅಣಕಿಸುತ್ತದೆ.

ರಸ್ತೆಯಲ್ಲಿ ಯಾರಿಗೋ ಕೈಕೋಳ, ಕಾಲ್ಗಳಿಗೆ ಸರಪಳಿ ಹಾಕಿ ಎಳೆದೊಯ್ಯುತ್ತಿದ್ದ ಗಲಾಟೆ. ತಿಂಮ ಕೇಳಿದ ಅದೇನೆಂದು. ಜೈಲಿಗೆಂದರು ಯಾರೋ. ‘ಜೈಲಿಗೋ ಇಷ್ಟು ರಂಪು! ನಾನೆಲ್ಲೋ ಸ್ಕೂಲಿಗೆ ಎಂದುಕೊಂಡೆ’ ಎನ್ನುತ್ತಾ ಶಿಕ್ಷಣ ವ್ಯವಸ್ಥೆಗೆ ಕನ್ನಡಿ ಹಿಡಿಯುತ್ತಾನೆ ತಿಂಮ.

“ಇವತ್ತು ಬರುವ ಅತಿಥಿಯ ಮೂಗಿನ ಬಗ್ಗೆ ಏನೂ ಮಾತಾಡಬೇಡ” ಎಂದು ತಂದೆ ಎಚ್ಚರಿಸಿರುತ್ತಾನೆ. ಅತಿಥಿ ಬಂದಾಗ ಅವರನ್ನೇ ನೋಡಿಕೊಂಡು ತಿಂಮ ಕುಳಿತಿರುತ್ತಾನೆ. ಅತಿಥಿಗೂ ಅದು ಗಮನಕ್ಕೆ ಬಂದು, ಯಾಕಪ್ಪಾ ಎಂದು ಕೇಳುತ್ತಾರೆ. ಅವನು ಏನಿಲ್ಲ ಎಂದು ತಂದೆಗೆ ಕೇಳುತ್ತಾನೆ. “ಅಪ್ಪಾ, ಇವರ ಮೂಗಿನ ಬಗ್ಗೆ ಏನೂ ಮಾತಾಡಬೇಡಾಂದೆ. ಆದರೆ, ಇವರಿಗೆ ಮೂಗೇ ಇಲ್ಲ!” ಎಂದು ಮಕ್ಕಳ ಮುಖವಾಡವಿಲ್ಲದ ಮನಸ್ಸನ್ನು ತೋರಿಸುವ ಮಗುವಿನ ಮನೋವಿಜ್ಞಾನ ಬೀಚಿಯದು.

“ಹಸುವಿಗೆ ನಾಲ್ಕಿರುತ್ತವೆ. ನನಗೆ ಎರಡಿವೆ. ಏನದು ಹೇಳು?” ಶಾಲೆಗೆ ಸೇರಿಸಿಕೊಳ್ಳುವ ಉಪಾಧ್ಯಾಯಿನಿ ತಿಂಮನ ಪರೀಕ್ಷಿಸಿದಳು. ಅವನಿಗೆ ಕಂಡದ್ದು ಹೇಳಿದ. ಶಿಕ್ಷಕಿ ಮುಜುಗರಗೊಂಡು ಇವನು ದೊಡ್ಡ ತರಗತಿಗೆ ಹೋಗಬೇಕೆನ್ನುವಳು. ಪಾಪ, ಕಾಲುಗಳೆಂಬ ಉತ್ತರ ಅವಳು ಬಯಸಿದ್ದಳು. ಕಿರಿಯ ಪೀಳಿಗೆ ದಡ್ಡರಿರುತ್ತಾರೆಂದು ಕಡೆಗಣಿಸದಿರಲು ಬೀಚಿ ಹಿರಿಯರಿಗೆ ಎಚ್ಚರಿಸುತ್ತಾರೆ.

ಪಶುವೈದ್ಯರು ಹಸುವಿಗೆ ಹೇಗೆ ಗುಳಿಗೆ ನುಂಗಿಸಬೇಕೆಂದು ಹೇಳಿ ತಿಂಮನ ಕಳುಹಿಸಿದ್ದರು. ಸ್ವಲ್ಪ ಹೊತ್ತಿಗೆ ತಿಂಮ ಗಾಬರಿಯಿಂದ ಮರಳಿ ಹಸುವಿಗೆ ಗುಳಿಗೆ ನುಂಗಿಸಲಾಗಲಿಲ್ಲವೆಂದು ಹೇಳಿದ.
“ಯಾಕೋ, ಗೊಟ್ಟದಲ್ಲಿ (ಬಿದಿರಿನ ಕೊಳವೆ) ಗುಳಿಗೆ ಇಟ್ಟೆಯೇನೋ?”
“ಇಟ್ಟೆ.”
“ಗೊಟ್ಟವನ್ನು ಹಸುವಿನ ಗಂಟಲಿಗಿಟ್ಟೆಯೇನೋ?”
“ಇಟ್ಟೆ.”
“ಜೋರಾಗಿ ಊದಿದೆಯೇನೋ?”
“ನಾನು ಊದುವಷ್ಟರಲ್ಲಿ ಅದೇ ಊದಿಬಿಟ್ಟಿತು!” ತಿಂಮನ ಗಾಬರಿಯ ಕಾರಣ ಅದು.
ವ್ಯವಸ್ಥೆಯನ್ನು ಬದಲಿಸುತ್ತೇನೆಂದು ಹೋದವರನ್ನು ವ್ಯವಸ್ಥೆಯೇ ಬದಲಿಸುವ ಕತೆ ಈ ತಿಂಮನಲ್ಲಿ.
ಈ ಪುಸ್ತಕದ ಪ್ರತಿ ಈಗ ನನ್ನಲ್ಲಿಲ್ಲ. ಆದರೆ ಸಂದರ್ಭಾನುಸಾರವಾಗಿ ಬೇಕಾದ ಪುಟಗಳು ನನ್ನೊಳಗೆ ತೆರೆದುಕೊಂಡಿರುತ್ತವೆ.
“ತಿಂಮ, ಚೌಡಯ್ಯನವರ ಪಿಟೀಲು ಕೇಳಿದ್ಯೇನೋ?”
“ಕೇಳಿದೆ. ಕೊಡಲಿಲ್ಲಪ್ಪಾ.”…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ರದ್ದು: ಹೈಕೋರ್ಟ್‌ನಿಂದ ಮರುನೇಮಕಕ್ಕೆ ಆದೇಶ

ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಅಮಾನತು ಆದೇಶವನ್ನು ಪ್ರಶ್ನಿಸಿ ಶಿವಶಂಕರಪ್ಪ...

ಗೋಡ್ಸೆ ಹೊಗಳಿಕೆ, ದಲಿತದ್ವೇಷ, ಸ್ತ್ರೀದ್ವೇಷ ಮತ್ತು ಮುಸ್ಲಿಂ ದ್ವೇಷ: ತೀವ್ರ ಪರಿಶೀಲನೆಯಲ್ಲಿರುವ ಬಿಜೆಪಿಯ ಹೊಸ ಸಾಮಾಜಿಕ ಮಾಧ್ಯಮ ತಂಡದ ವಿರುದ್ಧ ಜನಾಕ್ರೋಶ

ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ ಹಳೆಯ ಪೋಸ್ಟ್‌ಗಳು, ಇಸ್ಲಾಮೋಫೋಬಿಕ್ ಹಾಗೂ ಜನಾಂಗೀಯ ಹತ್ಯೆಯ ಹೇಳಿಕೆಗಳು, ದಲಿತ ಹಾಗೂ ಮೀಸಲಾತಿ ವಿರೋಧಿ ಮಾತುಗಳು ಮತ್ತು ಮಹಿಳೆಯರ ವಿರುದ್ಧ ಬಳಸಿರುವ ಸ್ತ್ರೀದ್ವೇಷದ ಭಾಷೆಯ ಕಾರಣಕ್ಕಾಗಿ...

‘ಮಹಾತ್ಮ ಗಾಂಧಿ – ವಾಜಪೇಯಿ ಹಾಡಿದ್ದನ್ನೇ ನಾವು ಹಾಡಿದ್ದೇವೆ..’; ವಂದೇ ಮಾತರಂ ವಿವಾದದ ಕುರಿತು ಖರ್ಗೆ ಸ್ಪಷ್ಟನೆ

ಪಕ್ಷದ ಪ್ರಧಾನ ಕಚೇರಿಯಲ್ಲಿ ವಂದೇ ಮಾತರಂ ಹಾಡಿದ ಬಗ್ಗೆ ನಡೆಯುತ್ತಿರುವ ವಿವಾದದ ನಡುವೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್...

ದೆಹಲಿ ಪೊಲೀಸರಿಂದ AAP ಶಾಸಕನ ಅಪಹರಣ?: ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ತುರ್ತು ವಿಚಾರಣೆಗೆ ಅಸ್ತು!

AAP ಶಾಸಕ ಕುಲ್ದೀಪ್ ಕುಮಾರ್ ಅವರನ್ನು ಅವರ ಮನೆಯಿಂದ ಅಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ (Habeas Corpus) ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ಒಪ್ಪಿಗೆ...

ಅದಾನಿ-ಎಲ್‌ಐಸಿ ತನಿಖಾ ವರದಿ: ಪತ್ರಕರ್ತ ರವಿ ನಾಯರ್ ಮನೆಗಳ ಮೇಲೆ ಗುಜರಾತ್ ಪೊಲೀಸರ ದಾಳಿ, ಡಿಜಿಟಲ್ ಉಪಕರಣಗಳ ವಶ

ಅದಾನಿ ಸಮೂಹ ಹಾಗೂ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ (ಎಲ್‌ಐಸಿ) ನಡುವಿನ ಹೂಡಿಕೆ ವ್ಯವಹಾರಕ್ಕೆ ಸಂಬಂಧಿಸಿದಂತೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ತನಿಖಾ ವರದಿ ಪ್ರಕಟಿಸಿದ್ದ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರ ದೆಹಲಿ ಮತ್ತು ಕೇರಳದಲ್ಲಿರುವ...

ಗುಜರಾತ್ | ನಕಲಿ ಸರ್ಕಾರಿ ಕಚೇರಿಗಳನ್ನು ಸ್ಥಾಪಿಸಿ ಸರ್ಕಾರದ ಅನುದಾನ ಲೂಟಿ; ಬೃಹತ್ ಹಗರಣ ಬಯಲು

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನೀರಾವರಿ ಮತ್ತು ಜಲಸಂಪನ್ಮೂಲ ಇಲಾಖೆಯ ಹೆಸರಿನಲ್ಲಿ 6 ನಕಲಿ ಸರ್ಕಾರಿ ಕಚೇರಿಗಳನ್ನು ಸೃಷ್ಟಿಸಿ, ಕೋಟ್ಯಂತರ ರೂಪಾಯಿ ಸರ್ಕಾರಿ ಅನುದಾನವನ್ನು ಲೂಟಿ ಮಾಡಿರುವುದು ಪತ್ತೆಯಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ...

ಎನ್‌ಎಎಲ್‌ಎಸ್‌ಎಆರ್‌ ಘಟಿಕೋತ್ಸವದ ಆಹ್ವಾನವನ್ನು ನಾನು ಸ್ವೀಕರಿಸಿರಲೇ ಇಲ್ಲ: ಸಿಜೆಐ ಸೂರ್ಯ ಕಾಂತ್

ಎನ್‌ಎಎಲ್‌ಎಸ್‌ಎಆರ್‌ ಕಾನೂನು ವಿಶ್ವವಿದ್ಯಾಲಯದ ಮುಂಬರುವ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಾನು ಎಂದಿಗೂ ಒಪ್ಪಿಗೆ ನೀಡಿರಲಿಲ್ಲ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ವಿರೋಧದ ನಡುವೆಯೂ...

ಎರಡು ವರ್ಷಗಳ ವಿಳಂಬದ ನಂತರ ಹಣಕಾಸು ವರದಿ ಬಿಡುಗಡೆ ಮಾಡಿದ ಪಿಎಂ ಕೇರ್ಸ್

ಎರಡು ವರ್ಷಗಳ ವಿಳಂಬದ ನಂತರ ಪಿಎಂ ಕೇರ್ಸ್ ನಿಧಿಯು ತನ್ನ 2023-24 ಮತ್ತು 2024-25ರ ಹಣಕಾಸು ವರ್ಷಗಳ ಆಡಿಟ್ ವರದಿಗಳನ್ನು (ಲೆಕ್ಕಪರಿಶೋಧನಾ ವರದಿ) ಆಗಸ್ಟ್ 17ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ಪಿಎಂ...

ಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೋಗಿ ಎಂದು ಕಾಲೆಳೆದ ಕಾಂಗ್ರೆಸ್

ಭಾರತದ ಚುನಾವಣಾ ವ್ಯವಸ್ಥೆ ಹಾಗೂ ಮತದಾರರ ಫೋಟೋ ಗುರುತಿನ ಚೀಟಿ (Voter ID) ಕಡ್ಡಾಯ ನಿಯಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯನ್ನು ಇಟ್ಟುಕೊಂಡು...

ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ ದಾಖಲು: ಬಿಜೆಪಿಯ ಕೀಳು ಮಟ್ಟದ ರಾಜಕೀಯ ಎಂದ ಸಿಪಿಐ(ಎಂ)

ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್‌ಬ್ಯೂರೋ ಹಿರಿಯ ಸದಸ್ಯ ಮಾಣಿಕ್ ಸರ್ಕಾರ್ ಅವರು ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯೊಂದರಲ್ಲಿ ನೀಡಿದ್ದ ಹೇಳಿಕೆಯನ್ನು ಆಧರಿಸಿ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ...