Homeಸಾಹಿತ್ಯ-ಸಂಸ್ಕೃತಿಕಥೆಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ - ಯೋಗೇಶ್ ಮಾಸ್ಟರ್

ಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ – ಯೋಗೇಶ್ ಮಾಸ್ಟರ್

- Advertisement -
- Advertisement -

“ತಿಂಮ, ನಾಟಕ ನೋಡಿದೆಯೇನೋ?” ಬುದ್ಧನ ನಾಟಕ ನೋಡಲು ರಾತ್ರಿ ಮಗನ ಕಳುಹಿಸಿದ್ದ ತಂದೆ ಬೆಳಗ್ಗೆ ಕೇಳಿದ.
“ನೋಡಿದೆ ಅಪ್ಪಾ.”
“ಎಲ್ಲಾ ಅರ್ಥ ಆಯ್ತೇನೋ?”
“ಆಯ್ತಪ್ಪಾ” ಎನ್ನುವ ತಿಂಮ ಮತ್ತೆ ನೆನಪಿಸಿಕೊಂಡು ಹೇಳುತ್ತಾನೆ, “ಆದರೆ, ಒಂದರ್ಥ ಆಗಲಿಲ್ಲ. ಬುದ್ಧ ರಾಜ್ಯ, ಹೆಂಡತಿ, ಮಗ; ಎಲ್ಲವನ್ನೂ ಬಿಟ್ಟು ಹೋದವನು, ತಗಡಿನ ಬಿಲ್ಲೆ ಕೊಡ್ತೀವಿ ಅಂದ ತಕ್ಷಣ ಓಡಿ ಬಂದುಬಿಟ್ಟನಲ್ಲಪ್ಪಾ?”ಬೀಚಿಯ ಬೆಳ್ಳಿ ತಿಂಮ ಒಬ್ಬ ಬಾಲಕ. ಅವನು ತಾನು ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ನೋಡುವುದನ್ನೆಲ್ಲಾ ಪ್ರಶ್ನಿಸುತ್ತಾನೆ. ಅವನ ಪ್ರಶ್ನೆಗಳು ಸಮಾಜವು ಯಾವುದನ್ನು ಗಂಭೀರ ಅಂತ ಪರಿಗಣಿಸುತ್ತದೋ ಅದನ್ನು ಲೇವಡಿ ಮಾಡುತ್ತದೆ. ಹೀಗೆ ವ್ಯಂಗ್ಯವಾಡುವುದು ವ್ಯವಸ್ಥೆಯನ್ನು ಪ್ರತಿಭಟಿಸುವ, ಚಿಂತನೆಗೆ ಹಚ್ಚುವ ಬೀಚಿಯವರ ರೀತಿ.

ಬುದ್ಧ ತಗಡಿನ ಬಿಲ್ಲೆಗೆ ಓಡಿ ಬರುವುದು, ತಿಂಮನಿಗೆ ನಾಟಕ ಮತ್ತು ವಾಸ್ತವದ ಅರಿವಿಲ್ಲ ಅಂತಲ್ಲ. ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿ, ಅದಕ್ಕೆ ಪ್ರಶಸ್ತಿ ಬರಲೆಂದು ಅರ್ಜಿ ಹಾಕುವುದನ್ನು, ಲಾಬಿ ಮಾಡುವ ವಾಸ್ತವವನ್ನು ಅದು ಅಣಕಿಸುತ್ತದೆ.

ರಸ್ತೆಯಲ್ಲಿ ಯಾರಿಗೋ ಕೈಕೋಳ, ಕಾಲ್ಗಳಿಗೆ ಸರಪಳಿ ಹಾಕಿ ಎಳೆದೊಯ್ಯುತ್ತಿದ್ದ ಗಲಾಟೆ. ತಿಂಮ ಕೇಳಿದ ಅದೇನೆಂದು. ಜೈಲಿಗೆಂದರು ಯಾರೋ. ‘ಜೈಲಿಗೋ ಇಷ್ಟು ರಂಪು! ನಾನೆಲ್ಲೋ ಸ್ಕೂಲಿಗೆ ಎಂದುಕೊಂಡೆ’ ಎನ್ನುತ್ತಾ ಶಿಕ್ಷಣ ವ್ಯವಸ್ಥೆಗೆ ಕನ್ನಡಿ ಹಿಡಿಯುತ್ತಾನೆ ತಿಂಮ.

“ಇವತ್ತು ಬರುವ ಅತಿಥಿಯ ಮೂಗಿನ ಬಗ್ಗೆ ಏನೂ ಮಾತಾಡಬೇಡ” ಎಂದು ತಂದೆ ಎಚ್ಚರಿಸಿರುತ್ತಾನೆ. ಅತಿಥಿ ಬಂದಾಗ ಅವರನ್ನೇ ನೋಡಿಕೊಂಡು ತಿಂಮ ಕುಳಿತಿರುತ್ತಾನೆ. ಅತಿಥಿಗೂ ಅದು ಗಮನಕ್ಕೆ ಬಂದು, ಯಾಕಪ್ಪಾ ಎಂದು ಕೇಳುತ್ತಾರೆ. ಅವನು ಏನಿಲ್ಲ ಎಂದು ತಂದೆಗೆ ಕೇಳುತ್ತಾನೆ. “ಅಪ್ಪಾ, ಇವರ ಮೂಗಿನ ಬಗ್ಗೆ ಏನೂ ಮಾತಾಡಬೇಡಾಂದೆ. ಆದರೆ, ಇವರಿಗೆ ಮೂಗೇ ಇಲ್ಲ!” ಎಂದು ಮಕ್ಕಳ ಮುಖವಾಡವಿಲ್ಲದ ಮನಸ್ಸನ್ನು ತೋರಿಸುವ ಮಗುವಿನ ಮನೋವಿಜ್ಞಾನ ಬೀಚಿಯದು.

“ಹಸುವಿಗೆ ನಾಲ್ಕಿರುತ್ತವೆ. ನನಗೆ ಎರಡಿವೆ. ಏನದು ಹೇಳು?” ಶಾಲೆಗೆ ಸೇರಿಸಿಕೊಳ್ಳುವ ಉಪಾಧ್ಯಾಯಿನಿ ತಿಂಮನ ಪರೀಕ್ಷಿಸಿದಳು. ಅವನಿಗೆ ಕಂಡದ್ದು ಹೇಳಿದ. ಶಿಕ್ಷಕಿ ಮುಜುಗರಗೊಂಡು ಇವನು ದೊಡ್ಡ ತರಗತಿಗೆ ಹೋಗಬೇಕೆನ್ನುವಳು. ಪಾಪ, ಕಾಲುಗಳೆಂಬ ಉತ್ತರ ಅವಳು ಬಯಸಿದ್ದಳು. ಕಿರಿಯ ಪೀಳಿಗೆ ದಡ್ಡರಿರುತ್ತಾರೆಂದು ಕಡೆಗಣಿಸದಿರಲು ಬೀಚಿ ಹಿರಿಯರಿಗೆ ಎಚ್ಚರಿಸುತ್ತಾರೆ.

ಪಶುವೈದ್ಯರು ಹಸುವಿಗೆ ಹೇಗೆ ಗುಳಿಗೆ ನುಂಗಿಸಬೇಕೆಂದು ಹೇಳಿ ತಿಂಮನ ಕಳುಹಿಸಿದ್ದರು. ಸ್ವಲ್ಪ ಹೊತ್ತಿಗೆ ತಿಂಮ ಗಾಬರಿಯಿಂದ ಮರಳಿ ಹಸುವಿಗೆ ಗುಳಿಗೆ ನುಂಗಿಸಲಾಗಲಿಲ್ಲವೆಂದು ಹೇಳಿದ.
“ಯಾಕೋ, ಗೊಟ್ಟದಲ್ಲಿ (ಬಿದಿರಿನ ಕೊಳವೆ) ಗುಳಿಗೆ ಇಟ್ಟೆಯೇನೋ?”
“ಇಟ್ಟೆ.”
“ಗೊಟ್ಟವನ್ನು ಹಸುವಿನ ಗಂಟಲಿಗಿಟ್ಟೆಯೇನೋ?”
“ಇಟ್ಟೆ.”
“ಜೋರಾಗಿ ಊದಿದೆಯೇನೋ?”
“ನಾನು ಊದುವಷ್ಟರಲ್ಲಿ ಅದೇ ಊದಿಬಿಟ್ಟಿತು!” ತಿಂಮನ ಗಾಬರಿಯ ಕಾರಣ ಅದು.
ವ್ಯವಸ್ಥೆಯನ್ನು ಬದಲಿಸುತ್ತೇನೆಂದು ಹೋದವರನ್ನು ವ್ಯವಸ್ಥೆಯೇ ಬದಲಿಸುವ ಕತೆ ಈ ತಿಂಮನಲ್ಲಿ.
ಈ ಪುಸ್ತಕದ ಪ್ರತಿ ಈಗ ನನ್ನಲ್ಲಿಲ್ಲ. ಆದರೆ ಸಂದರ್ಭಾನುಸಾರವಾಗಿ ಬೇಕಾದ ಪುಟಗಳು ನನ್ನೊಳಗೆ ತೆರೆದುಕೊಂಡಿರುತ್ತವೆ.
“ತಿಂಮ, ಚೌಡಯ್ಯನವರ ಪಿಟೀಲು ಕೇಳಿದ್ಯೇನೋ?”
“ಕೇಳಿದೆ. ಕೊಡಲಿಲ್ಲಪ್ಪಾ.”…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR

ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ (...

ಮಹಾರಾಷ್ಟ್ರ: 8 ವರ್ಷದ ಬಾಲಕಿ ಶಾರ್ಟ್ಸ್ ಧರಿಸಿದ್ದಕ್ಕೆ ಕುಟುಂಬದ ಮೇಲೆ ಭೀಕರ ಹಲ್ಲೆ: ನೈತಿಕ ಪೊಲೀಸ್‌ಗಿರಿಗೆ ಸಾಕ್ಷಿಯಾದ ಸಿಂಹಗಢ ಕೋಟೆ

ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಸಿಂಹಗಢ ಕೋಟೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರವಾಸಿಗರ ಮೇಲೆ ನೈತಿಕ ಪೊಲೀಸ್‌ಗಿರಿ (ಮೊರಾಲ್ ಪೋಲಿಸಿಂಗ್) ನಡೆಸಿ ಭೀಕರ ಹಲ್ಲೆ ನಡೆಸಲಾಗಿದೆ. ಎಂಟು ವರ್ಷದ ಚಿಕ್ಕ ಬಾಲಕಿಯೊಬ್ಬಳು...

ಜೈಪುರದಲ್ಲಿ ಸರ್ಕಾರಿ ಶಾಲೆ ತಪಾಸಣೆ ವೇಳೆ ಭೀಕರ ಹಿಂಸಾಚಾರ: ‘ಸಿಜೆಪಿ’ನಾಯಕ ಅಶುತೋಷ್ ರಂಕಾ ತಂಡದ ಮೇಲೆ ದಾಳಿ, ಕಲ್ಲು ತೂರಾಟ, ಕಾರು ಧ್ವಂಸ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರ ಸಮೀಪದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ತೆರಳಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಕಾರ್ಯಕರ್ತರ ಮೇಲೆ ಉಗ್ರ...

BJP 40 ಕ್ಷೇತ್ರಗಳಲ್ಲಿ ಸೋಲಲು ಕಾಂಗ್ರೆಸ್ ಜಾಹೀರಾತೇ ಕಾರಣ: ಹೈಕೋರ್ಟ್‌ಗೆ ಬಿಜೆಪಿ ದೂರು

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ (Corruption Rate Card) ಜಾಹೀರಾತಿನಿಂದಾಗಿ ತಾನು 40 ಕ್ಷೇತ್ರಗಳಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಭಾರತೀಯ...

“ಎಫ್‌ಐಆರ್ ದಾಖಲಾಗದೆ ಇಲ್ಲಿಂದ ಕದಲಲ್ಲ” : ಡಿಸಿಪಿ ಕಚೇರಿ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ

ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ ಬಳಕೆ, ಲಾಠಿ ಚಾರ್ಜ್ ಸೇರಿದಂತೆ ಪೊಲೀಸರಿಂದ ವಿವಿಧ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ...

ಪೆಲೆಟ್ ಗನ್ ಫೈರಿಂಗ್ ವಿರುದ್ಧ FIR ದಾಖಲಿಸಲು ದೆಹಲಿ ಪೊಲೀಸರ ನಿರಾಕರಣೆ, ರಾಹುಲ್ ಗಾಂಧಿ ಧರಣಿ

ಜುಲೈ 20ರ ಸಂಸತ್ ಚಲೋ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ (ಅಗಸ್ಟ್ 20)...

ಎಸ್ಐಆರ್ ಹಗರಣದಂತೆ ಕಾಣುತ್ತಿದೆ: ಚುನಾವಣಾ ಆಯೋಗದ ಪಾರದರ್ಶಕತೆಯನ್ನು ಪ್ರಶ್ನಿಸಿದ ನಟ ಕಿಶೋರ್ ಕುಮಾರ್: ಸಾರ್ವಜನಿಕ ಪ್ರತಿರೋಧಕ್ಕೆ ಕರೆ

ಬೆಂಗಳೂರು: ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪವಿತ್ರವೆನಿಸಿದ ಮತದಾನದ ಹಕ್ಕನ್ನು ಕಸಿಯುವ ಹುನ್ನಾರಗಳು ತೀವ್ರಗೊಳ್ಳುತ್ತಿದ್ದು, ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯಾಗಬೇಕಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಇಂದು ಬಹುದೊಡ್ಡ ಹಗರಣದಂತೆ ಕಾಣಿಸುತ್ತಿದೆ ಎಂದು...

ಕರ್ನಾಟಕ SIR : 43.80 ಲಕ್ಷ ಜನರಿಗೆ ಬರಲಿದೆ ಚುನಾವಣಾ ಆಯೋಗದ ನೋಟಿಸ್!

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಮತದಾರರು ತುಂಬಿ ಕೊಟ್ಟಿರುವ 4,46,35,899 ಎನ್ಯುಮರೇಷನ್ ಫಾರಂಗಳು (ಗಣತಿ ನಮೂನೆ) ಡಿಜಿಟಲೀಕರಣಗೊಂಡಿವೆ. ಈ ಪೈಕಿ 43,80,740 ಮತದಾರರಿಗೆ ದಾಖಲೆ ಕೇಳಿ...

ರಾಜಸ್ಥಾನ: ವರದಿಗಾರಿಕೆಯಲ್ಲಿ ನಿರತರಾಗಿದ್ದ ದಲಿತ ಪತ್ರಕರ್ತನ ಮೇಲೆ ಜಾತಿ ಆಧಾರಿತ ದಾಳಿ, ಭೀಕರ ಹಲ್ಲೆ, ಜಾತಿ ನಿಂದನೆ 

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಗೋಗುಂಡದಲ್ಲಿ ಕರ್ತವ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಜಾತ್ಯಾತೀತ ಸಮಾಜ ತಲೆತಗ್ಗಿಸುವಂತೆ ಜಾತಿ ಆಧಾರಿತವಾಗಿ ನಿಂದಿಸಿರುವ ಘಟನೆ ವರದಿಯಾಗಿದೆ. ಸಾರ್ವಜನಿಕ ಕುಂದುಕೊರತೆ ಆಲಿಕೆ ಕಾರ್ಯಕ್ರಮದ...