Homeಸಾಹಿತ್ಯ-ಸಂಸ್ಕೃತಿಕಥೆಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ - ಯೋಗೇಶ್ ಮಾಸ್ಟರ್

ಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ – ಯೋಗೇಶ್ ಮಾಸ್ಟರ್

- Advertisement -
- Advertisement -

“ತಿಂಮ, ನಾಟಕ ನೋಡಿದೆಯೇನೋ?” ಬುದ್ಧನ ನಾಟಕ ನೋಡಲು ರಾತ್ರಿ ಮಗನ ಕಳುಹಿಸಿದ್ದ ತಂದೆ ಬೆಳಗ್ಗೆ ಕೇಳಿದ.
“ನೋಡಿದೆ ಅಪ್ಪಾ.”
“ಎಲ್ಲಾ ಅರ್ಥ ಆಯ್ತೇನೋ?”
“ಆಯ್ತಪ್ಪಾ” ಎನ್ನುವ ತಿಂಮ ಮತ್ತೆ ನೆನಪಿಸಿಕೊಂಡು ಹೇಳುತ್ತಾನೆ, “ಆದರೆ, ಒಂದರ್ಥ ಆಗಲಿಲ್ಲ. ಬುದ್ಧ ರಾಜ್ಯ, ಹೆಂಡತಿ, ಮಗ; ಎಲ್ಲವನ್ನೂ ಬಿಟ್ಟು ಹೋದವನು, ತಗಡಿನ ಬಿಲ್ಲೆ ಕೊಡ್ತೀವಿ ಅಂದ ತಕ್ಷಣ ಓಡಿ ಬಂದುಬಿಟ್ಟನಲ್ಲಪ್ಪಾ?”ಬೀಚಿಯ ಬೆಳ್ಳಿ ತಿಂಮ ಒಬ್ಬ ಬಾಲಕ. ಅವನು ತಾನು ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ನೋಡುವುದನ್ನೆಲ್ಲಾ ಪ್ರಶ್ನಿಸುತ್ತಾನೆ. ಅವನ ಪ್ರಶ್ನೆಗಳು ಸಮಾಜವು ಯಾವುದನ್ನು ಗಂಭೀರ ಅಂತ ಪರಿಗಣಿಸುತ್ತದೋ ಅದನ್ನು ಲೇವಡಿ ಮಾಡುತ್ತದೆ. ಹೀಗೆ ವ್ಯಂಗ್ಯವಾಡುವುದು ವ್ಯವಸ್ಥೆಯನ್ನು ಪ್ರತಿಭಟಿಸುವ, ಚಿಂತನೆಗೆ ಹಚ್ಚುವ ಬೀಚಿಯವರ ರೀತಿ.

ಬುದ್ಧ ತಗಡಿನ ಬಿಲ್ಲೆಗೆ ಓಡಿ ಬರುವುದು, ತಿಂಮನಿಗೆ ನಾಟಕ ಮತ್ತು ವಾಸ್ತವದ ಅರಿವಿಲ್ಲ ಅಂತಲ್ಲ. ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿ, ಅದಕ್ಕೆ ಪ್ರಶಸ್ತಿ ಬರಲೆಂದು ಅರ್ಜಿ ಹಾಕುವುದನ್ನು, ಲಾಬಿ ಮಾಡುವ ವಾಸ್ತವವನ್ನು ಅದು ಅಣಕಿಸುತ್ತದೆ.

ರಸ್ತೆಯಲ್ಲಿ ಯಾರಿಗೋ ಕೈಕೋಳ, ಕಾಲ್ಗಳಿಗೆ ಸರಪಳಿ ಹಾಕಿ ಎಳೆದೊಯ್ಯುತ್ತಿದ್ದ ಗಲಾಟೆ. ತಿಂಮ ಕೇಳಿದ ಅದೇನೆಂದು. ಜೈಲಿಗೆಂದರು ಯಾರೋ. ‘ಜೈಲಿಗೋ ಇಷ್ಟು ರಂಪು! ನಾನೆಲ್ಲೋ ಸ್ಕೂಲಿಗೆ ಎಂದುಕೊಂಡೆ’ ಎನ್ನುತ್ತಾ ಶಿಕ್ಷಣ ವ್ಯವಸ್ಥೆಗೆ ಕನ್ನಡಿ ಹಿಡಿಯುತ್ತಾನೆ ತಿಂಮ.

“ಇವತ್ತು ಬರುವ ಅತಿಥಿಯ ಮೂಗಿನ ಬಗ್ಗೆ ಏನೂ ಮಾತಾಡಬೇಡ” ಎಂದು ತಂದೆ ಎಚ್ಚರಿಸಿರುತ್ತಾನೆ. ಅತಿಥಿ ಬಂದಾಗ ಅವರನ್ನೇ ನೋಡಿಕೊಂಡು ತಿಂಮ ಕುಳಿತಿರುತ್ತಾನೆ. ಅತಿಥಿಗೂ ಅದು ಗಮನಕ್ಕೆ ಬಂದು, ಯಾಕಪ್ಪಾ ಎಂದು ಕೇಳುತ್ತಾರೆ. ಅವನು ಏನಿಲ್ಲ ಎಂದು ತಂದೆಗೆ ಕೇಳುತ್ತಾನೆ. “ಅಪ್ಪಾ, ಇವರ ಮೂಗಿನ ಬಗ್ಗೆ ಏನೂ ಮಾತಾಡಬೇಡಾಂದೆ. ಆದರೆ, ಇವರಿಗೆ ಮೂಗೇ ಇಲ್ಲ!” ಎಂದು ಮಕ್ಕಳ ಮುಖವಾಡವಿಲ್ಲದ ಮನಸ್ಸನ್ನು ತೋರಿಸುವ ಮಗುವಿನ ಮನೋವಿಜ್ಞಾನ ಬೀಚಿಯದು.

“ಹಸುವಿಗೆ ನಾಲ್ಕಿರುತ್ತವೆ. ನನಗೆ ಎರಡಿವೆ. ಏನದು ಹೇಳು?” ಶಾಲೆಗೆ ಸೇರಿಸಿಕೊಳ್ಳುವ ಉಪಾಧ್ಯಾಯಿನಿ ತಿಂಮನ ಪರೀಕ್ಷಿಸಿದಳು. ಅವನಿಗೆ ಕಂಡದ್ದು ಹೇಳಿದ. ಶಿಕ್ಷಕಿ ಮುಜುಗರಗೊಂಡು ಇವನು ದೊಡ್ಡ ತರಗತಿಗೆ ಹೋಗಬೇಕೆನ್ನುವಳು. ಪಾಪ, ಕಾಲುಗಳೆಂಬ ಉತ್ತರ ಅವಳು ಬಯಸಿದ್ದಳು. ಕಿರಿಯ ಪೀಳಿಗೆ ದಡ್ಡರಿರುತ್ತಾರೆಂದು ಕಡೆಗಣಿಸದಿರಲು ಬೀಚಿ ಹಿರಿಯರಿಗೆ ಎಚ್ಚರಿಸುತ್ತಾರೆ.

ಪಶುವೈದ್ಯರು ಹಸುವಿಗೆ ಹೇಗೆ ಗುಳಿಗೆ ನುಂಗಿಸಬೇಕೆಂದು ಹೇಳಿ ತಿಂಮನ ಕಳುಹಿಸಿದ್ದರು. ಸ್ವಲ್ಪ ಹೊತ್ತಿಗೆ ತಿಂಮ ಗಾಬರಿಯಿಂದ ಮರಳಿ ಹಸುವಿಗೆ ಗುಳಿಗೆ ನುಂಗಿಸಲಾಗಲಿಲ್ಲವೆಂದು ಹೇಳಿದ.
“ಯಾಕೋ, ಗೊಟ್ಟದಲ್ಲಿ (ಬಿದಿರಿನ ಕೊಳವೆ) ಗುಳಿಗೆ ಇಟ್ಟೆಯೇನೋ?”
“ಇಟ್ಟೆ.”
“ಗೊಟ್ಟವನ್ನು ಹಸುವಿನ ಗಂಟಲಿಗಿಟ್ಟೆಯೇನೋ?”
“ಇಟ್ಟೆ.”
“ಜೋರಾಗಿ ಊದಿದೆಯೇನೋ?”
“ನಾನು ಊದುವಷ್ಟರಲ್ಲಿ ಅದೇ ಊದಿಬಿಟ್ಟಿತು!” ತಿಂಮನ ಗಾಬರಿಯ ಕಾರಣ ಅದು.
ವ್ಯವಸ್ಥೆಯನ್ನು ಬದಲಿಸುತ್ತೇನೆಂದು ಹೋದವರನ್ನು ವ್ಯವಸ್ಥೆಯೇ ಬದಲಿಸುವ ಕತೆ ಈ ತಿಂಮನಲ್ಲಿ.
ಈ ಪುಸ್ತಕದ ಪ್ರತಿ ಈಗ ನನ್ನಲ್ಲಿಲ್ಲ. ಆದರೆ ಸಂದರ್ಭಾನುಸಾರವಾಗಿ ಬೇಕಾದ ಪುಟಗಳು ನನ್ನೊಳಗೆ ತೆರೆದುಕೊಂಡಿರುತ್ತವೆ.
“ತಿಂಮ, ಚೌಡಯ್ಯನವರ ಪಿಟೀಲು ಕೇಳಿದ್ಯೇನೋ?”
“ಕೇಳಿದೆ. ಕೊಡಲಿಲ್ಲಪ್ಪಾ.”…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...