Homeಸಾಹಿತ್ಯ-ಸಂಸ್ಕೃತಿಕಥೆಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ - ಯೋಗೇಶ್ ಮಾಸ್ಟರ್

ಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ – ಯೋಗೇಶ್ ಮಾಸ್ಟರ್

- Advertisement -
- Advertisement -

“ತಿಂಮ, ನಾಟಕ ನೋಡಿದೆಯೇನೋ?” ಬುದ್ಧನ ನಾಟಕ ನೋಡಲು ರಾತ್ರಿ ಮಗನ ಕಳುಹಿಸಿದ್ದ ತಂದೆ ಬೆಳಗ್ಗೆ ಕೇಳಿದ.
“ನೋಡಿದೆ ಅಪ್ಪಾ.”
“ಎಲ್ಲಾ ಅರ್ಥ ಆಯ್ತೇನೋ?”
“ಆಯ್ತಪ್ಪಾ” ಎನ್ನುವ ತಿಂಮ ಮತ್ತೆ ನೆನಪಿಸಿಕೊಂಡು ಹೇಳುತ್ತಾನೆ, “ಆದರೆ, ಒಂದರ್ಥ ಆಗಲಿಲ್ಲ. ಬುದ್ಧ ರಾಜ್ಯ, ಹೆಂಡತಿ, ಮಗ; ಎಲ್ಲವನ್ನೂ ಬಿಟ್ಟು ಹೋದವನು, ತಗಡಿನ ಬಿಲ್ಲೆ ಕೊಡ್ತೀವಿ ಅಂದ ತಕ್ಷಣ ಓಡಿ ಬಂದುಬಿಟ್ಟನಲ್ಲಪ್ಪಾ?”ಬೀಚಿಯ ಬೆಳ್ಳಿ ತಿಂಮ ಒಬ್ಬ ಬಾಲಕ. ಅವನು ತಾನು ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ನೋಡುವುದನ್ನೆಲ್ಲಾ ಪ್ರಶ್ನಿಸುತ್ತಾನೆ. ಅವನ ಪ್ರಶ್ನೆಗಳು ಸಮಾಜವು ಯಾವುದನ್ನು ಗಂಭೀರ ಅಂತ ಪರಿಗಣಿಸುತ್ತದೋ ಅದನ್ನು ಲೇವಡಿ ಮಾಡುತ್ತದೆ. ಹೀಗೆ ವ್ಯಂಗ್ಯವಾಡುವುದು ವ್ಯವಸ್ಥೆಯನ್ನು ಪ್ರತಿಭಟಿಸುವ, ಚಿಂತನೆಗೆ ಹಚ್ಚುವ ಬೀಚಿಯವರ ರೀತಿ.

ಬುದ್ಧ ತಗಡಿನ ಬಿಲ್ಲೆಗೆ ಓಡಿ ಬರುವುದು, ತಿಂಮನಿಗೆ ನಾಟಕ ಮತ್ತು ವಾಸ್ತವದ ಅರಿವಿಲ್ಲ ಅಂತಲ್ಲ. ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿ, ಅದಕ್ಕೆ ಪ್ರಶಸ್ತಿ ಬರಲೆಂದು ಅರ್ಜಿ ಹಾಕುವುದನ್ನು, ಲಾಬಿ ಮಾಡುವ ವಾಸ್ತವವನ್ನು ಅದು ಅಣಕಿಸುತ್ತದೆ.

ರಸ್ತೆಯಲ್ಲಿ ಯಾರಿಗೋ ಕೈಕೋಳ, ಕಾಲ್ಗಳಿಗೆ ಸರಪಳಿ ಹಾಕಿ ಎಳೆದೊಯ್ಯುತ್ತಿದ್ದ ಗಲಾಟೆ. ತಿಂಮ ಕೇಳಿದ ಅದೇನೆಂದು. ಜೈಲಿಗೆಂದರು ಯಾರೋ. ‘ಜೈಲಿಗೋ ಇಷ್ಟು ರಂಪು! ನಾನೆಲ್ಲೋ ಸ್ಕೂಲಿಗೆ ಎಂದುಕೊಂಡೆ’ ಎನ್ನುತ್ತಾ ಶಿಕ್ಷಣ ವ್ಯವಸ್ಥೆಗೆ ಕನ್ನಡಿ ಹಿಡಿಯುತ್ತಾನೆ ತಿಂಮ.

“ಇವತ್ತು ಬರುವ ಅತಿಥಿಯ ಮೂಗಿನ ಬಗ್ಗೆ ಏನೂ ಮಾತಾಡಬೇಡ” ಎಂದು ತಂದೆ ಎಚ್ಚರಿಸಿರುತ್ತಾನೆ. ಅತಿಥಿ ಬಂದಾಗ ಅವರನ್ನೇ ನೋಡಿಕೊಂಡು ತಿಂಮ ಕುಳಿತಿರುತ್ತಾನೆ. ಅತಿಥಿಗೂ ಅದು ಗಮನಕ್ಕೆ ಬಂದು, ಯಾಕಪ್ಪಾ ಎಂದು ಕೇಳುತ್ತಾರೆ. ಅವನು ಏನಿಲ್ಲ ಎಂದು ತಂದೆಗೆ ಕೇಳುತ್ತಾನೆ. “ಅಪ್ಪಾ, ಇವರ ಮೂಗಿನ ಬಗ್ಗೆ ಏನೂ ಮಾತಾಡಬೇಡಾಂದೆ. ಆದರೆ, ಇವರಿಗೆ ಮೂಗೇ ಇಲ್ಲ!” ಎಂದು ಮಕ್ಕಳ ಮುಖವಾಡವಿಲ್ಲದ ಮನಸ್ಸನ್ನು ತೋರಿಸುವ ಮಗುವಿನ ಮನೋವಿಜ್ಞಾನ ಬೀಚಿಯದು.

“ಹಸುವಿಗೆ ನಾಲ್ಕಿರುತ್ತವೆ. ನನಗೆ ಎರಡಿವೆ. ಏನದು ಹೇಳು?” ಶಾಲೆಗೆ ಸೇರಿಸಿಕೊಳ್ಳುವ ಉಪಾಧ್ಯಾಯಿನಿ ತಿಂಮನ ಪರೀಕ್ಷಿಸಿದಳು. ಅವನಿಗೆ ಕಂಡದ್ದು ಹೇಳಿದ. ಶಿಕ್ಷಕಿ ಮುಜುಗರಗೊಂಡು ಇವನು ದೊಡ್ಡ ತರಗತಿಗೆ ಹೋಗಬೇಕೆನ್ನುವಳು. ಪಾಪ, ಕಾಲುಗಳೆಂಬ ಉತ್ತರ ಅವಳು ಬಯಸಿದ್ದಳು. ಕಿರಿಯ ಪೀಳಿಗೆ ದಡ್ಡರಿರುತ್ತಾರೆಂದು ಕಡೆಗಣಿಸದಿರಲು ಬೀಚಿ ಹಿರಿಯರಿಗೆ ಎಚ್ಚರಿಸುತ್ತಾರೆ.

ಪಶುವೈದ್ಯರು ಹಸುವಿಗೆ ಹೇಗೆ ಗುಳಿಗೆ ನುಂಗಿಸಬೇಕೆಂದು ಹೇಳಿ ತಿಂಮನ ಕಳುಹಿಸಿದ್ದರು. ಸ್ವಲ್ಪ ಹೊತ್ತಿಗೆ ತಿಂಮ ಗಾಬರಿಯಿಂದ ಮರಳಿ ಹಸುವಿಗೆ ಗುಳಿಗೆ ನುಂಗಿಸಲಾಗಲಿಲ್ಲವೆಂದು ಹೇಳಿದ.
“ಯಾಕೋ, ಗೊಟ್ಟದಲ್ಲಿ (ಬಿದಿರಿನ ಕೊಳವೆ) ಗುಳಿಗೆ ಇಟ್ಟೆಯೇನೋ?”
“ಇಟ್ಟೆ.”
“ಗೊಟ್ಟವನ್ನು ಹಸುವಿನ ಗಂಟಲಿಗಿಟ್ಟೆಯೇನೋ?”
“ಇಟ್ಟೆ.”
“ಜೋರಾಗಿ ಊದಿದೆಯೇನೋ?”
“ನಾನು ಊದುವಷ್ಟರಲ್ಲಿ ಅದೇ ಊದಿಬಿಟ್ಟಿತು!” ತಿಂಮನ ಗಾಬರಿಯ ಕಾರಣ ಅದು.
ವ್ಯವಸ್ಥೆಯನ್ನು ಬದಲಿಸುತ್ತೇನೆಂದು ಹೋದವರನ್ನು ವ್ಯವಸ್ಥೆಯೇ ಬದಲಿಸುವ ಕತೆ ಈ ತಿಂಮನಲ್ಲಿ.
ಈ ಪುಸ್ತಕದ ಪ್ರತಿ ಈಗ ನನ್ನಲ್ಲಿಲ್ಲ. ಆದರೆ ಸಂದರ್ಭಾನುಸಾರವಾಗಿ ಬೇಕಾದ ಪುಟಗಳು ನನ್ನೊಳಗೆ ತೆರೆದುಕೊಂಡಿರುತ್ತವೆ.
“ತಿಂಮ, ಚೌಡಯ್ಯನವರ ಪಿಟೀಲು ಕೇಳಿದ್ಯೇನೋ?”
“ಕೇಳಿದೆ. ಕೊಡಲಿಲ್ಲಪ್ಪಾ.”…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...