Homeಸಾಹಿತ್ಯ-ಸಂಸ್ಕೃತಿಕಥೆಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ - ಯೋಗೇಶ್ ಮಾಸ್ಟರ್

ಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ – ಯೋಗೇಶ್ ಮಾಸ್ಟರ್

- Advertisement -
- Advertisement -

“ತಿಂಮ, ನಾಟಕ ನೋಡಿದೆಯೇನೋ?” ಬುದ್ಧನ ನಾಟಕ ನೋಡಲು ರಾತ್ರಿ ಮಗನ ಕಳುಹಿಸಿದ್ದ ತಂದೆ ಬೆಳಗ್ಗೆ ಕೇಳಿದ.
“ನೋಡಿದೆ ಅಪ್ಪಾ.”
“ಎಲ್ಲಾ ಅರ್ಥ ಆಯ್ತೇನೋ?”
“ಆಯ್ತಪ್ಪಾ” ಎನ್ನುವ ತಿಂಮ ಮತ್ತೆ ನೆನಪಿಸಿಕೊಂಡು ಹೇಳುತ್ತಾನೆ, “ಆದರೆ, ಒಂದರ್ಥ ಆಗಲಿಲ್ಲ. ಬುದ್ಧ ರಾಜ್ಯ, ಹೆಂಡತಿ, ಮಗ; ಎಲ್ಲವನ್ನೂ ಬಿಟ್ಟು ಹೋದವನು, ತಗಡಿನ ಬಿಲ್ಲೆ ಕೊಡ್ತೀವಿ ಅಂದ ತಕ್ಷಣ ಓಡಿ ಬಂದುಬಿಟ್ಟನಲ್ಲಪ್ಪಾ?”ಬೀಚಿಯ ಬೆಳ್ಳಿ ತಿಂಮ ಒಬ್ಬ ಬಾಲಕ. ಅವನು ತಾನು ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ನೋಡುವುದನ್ನೆಲ್ಲಾ ಪ್ರಶ್ನಿಸುತ್ತಾನೆ. ಅವನ ಪ್ರಶ್ನೆಗಳು ಸಮಾಜವು ಯಾವುದನ್ನು ಗಂಭೀರ ಅಂತ ಪರಿಗಣಿಸುತ್ತದೋ ಅದನ್ನು ಲೇವಡಿ ಮಾಡುತ್ತದೆ. ಹೀಗೆ ವ್ಯಂಗ್ಯವಾಡುವುದು ವ್ಯವಸ್ಥೆಯನ್ನು ಪ್ರತಿಭಟಿಸುವ, ಚಿಂತನೆಗೆ ಹಚ್ಚುವ ಬೀಚಿಯವರ ರೀತಿ.

ಬುದ್ಧ ತಗಡಿನ ಬಿಲ್ಲೆಗೆ ಓಡಿ ಬರುವುದು, ತಿಂಮನಿಗೆ ನಾಟಕ ಮತ್ತು ವಾಸ್ತವದ ಅರಿವಿಲ್ಲ ಅಂತಲ್ಲ. ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿ, ಅದಕ್ಕೆ ಪ್ರಶಸ್ತಿ ಬರಲೆಂದು ಅರ್ಜಿ ಹಾಕುವುದನ್ನು, ಲಾಬಿ ಮಾಡುವ ವಾಸ್ತವವನ್ನು ಅದು ಅಣಕಿಸುತ್ತದೆ.

ರಸ್ತೆಯಲ್ಲಿ ಯಾರಿಗೋ ಕೈಕೋಳ, ಕಾಲ್ಗಳಿಗೆ ಸರಪಳಿ ಹಾಕಿ ಎಳೆದೊಯ್ಯುತ್ತಿದ್ದ ಗಲಾಟೆ. ತಿಂಮ ಕೇಳಿದ ಅದೇನೆಂದು. ಜೈಲಿಗೆಂದರು ಯಾರೋ. ‘ಜೈಲಿಗೋ ಇಷ್ಟು ರಂಪು! ನಾನೆಲ್ಲೋ ಸ್ಕೂಲಿಗೆ ಎಂದುಕೊಂಡೆ’ ಎನ್ನುತ್ತಾ ಶಿಕ್ಷಣ ವ್ಯವಸ್ಥೆಗೆ ಕನ್ನಡಿ ಹಿಡಿಯುತ್ತಾನೆ ತಿಂಮ.

“ಇವತ್ತು ಬರುವ ಅತಿಥಿಯ ಮೂಗಿನ ಬಗ್ಗೆ ಏನೂ ಮಾತಾಡಬೇಡ” ಎಂದು ತಂದೆ ಎಚ್ಚರಿಸಿರುತ್ತಾನೆ. ಅತಿಥಿ ಬಂದಾಗ ಅವರನ್ನೇ ನೋಡಿಕೊಂಡು ತಿಂಮ ಕುಳಿತಿರುತ್ತಾನೆ. ಅತಿಥಿಗೂ ಅದು ಗಮನಕ್ಕೆ ಬಂದು, ಯಾಕಪ್ಪಾ ಎಂದು ಕೇಳುತ್ತಾರೆ. ಅವನು ಏನಿಲ್ಲ ಎಂದು ತಂದೆಗೆ ಕೇಳುತ್ತಾನೆ. “ಅಪ್ಪಾ, ಇವರ ಮೂಗಿನ ಬಗ್ಗೆ ಏನೂ ಮಾತಾಡಬೇಡಾಂದೆ. ಆದರೆ, ಇವರಿಗೆ ಮೂಗೇ ಇಲ್ಲ!” ಎಂದು ಮಕ್ಕಳ ಮುಖವಾಡವಿಲ್ಲದ ಮನಸ್ಸನ್ನು ತೋರಿಸುವ ಮಗುವಿನ ಮನೋವಿಜ್ಞಾನ ಬೀಚಿಯದು.

“ಹಸುವಿಗೆ ನಾಲ್ಕಿರುತ್ತವೆ. ನನಗೆ ಎರಡಿವೆ. ಏನದು ಹೇಳು?” ಶಾಲೆಗೆ ಸೇರಿಸಿಕೊಳ್ಳುವ ಉಪಾಧ್ಯಾಯಿನಿ ತಿಂಮನ ಪರೀಕ್ಷಿಸಿದಳು. ಅವನಿಗೆ ಕಂಡದ್ದು ಹೇಳಿದ. ಶಿಕ್ಷಕಿ ಮುಜುಗರಗೊಂಡು ಇವನು ದೊಡ್ಡ ತರಗತಿಗೆ ಹೋಗಬೇಕೆನ್ನುವಳು. ಪಾಪ, ಕಾಲುಗಳೆಂಬ ಉತ್ತರ ಅವಳು ಬಯಸಿದ್ದಳು. ಕಿರಿಯ ಪೀಳಿಗೆ ದಡ್ಡರಿರುತ್ತಾರೆಂದು ಕಡೆಗಣಿಸದಿರಲು ಬೀಚಿ ಹಿರಿಯರಿಗೆ ಎಚ್ಚರಿಸುತ್ತಾರೆ.

ಪಶುವೈದ್ಯರು ಹಸುವಿಗೆ ಹೇಗೆ ಗುಳಿಗೆ ನುಂಗಿಸಬೇಕೆಂದು ಹೇಳಿ ತಿಂಮನ ಕಳುಹಿಸಿದ್ದರು. ಸ್ವಲ್ಪ ಹೊತ್ತಿಗೆ ತಿಂಮ ಗಾಬರಿಯಿಂದ ಮರಳಿ ಹಸುವಿಗೆ ಗುಳಿಗೆ ನುಂಗಿಸಲಾಗಲಿಲ್ಲವೆಂದು ಹೇಳಿದ.
“ಯಾಕೋ, ಗೊಟ್ಟದಲ್ಲಿ (ಬಿದಿರಿನ ಕೊಳವೆ) ಗುಳಿಗೆ ಇಟ್ಟೆಯೇನೋ?”
“ಇಟ್ಟೆ.”
“ಗೊಟ್ಟವನ್ನು ಹಸುವಿನ ಗಂಟಲಿಗಿಟ್ಟೆಯೇನೋ?”
“ಇಟ್ಟೆ.”
“ಜೋರಾಗಿ ಊದಿದೆಯೇನೋ?”
“ನಾನು ಊದುವಷ್ಟರಲ್ಲಿ ಅದೇ ಊದಿಬಿಟ್ಟಿತು!” ತಿಂಮನ ಗಾಬರಿಯ ಕಾರಣ ಅದು.
ವ್ಯವಸ್ಥೆಯನ್ನು ಬದಲಿಸುತ್ತೇನೆಂದು ಹೋದವರನ್ನು ವ್ಯವಸ್ಥೆಯೇ ಬದಲಿಸುವ ಕತೆ ಈ ತಿಂಮನಲ್ಲಿ.
ಈ ಪುಸ್ತಕದ ಪ್ರತಿ ಈಗ ನನ್ನಲ್ಲಿಲ್ಲ. ಆದರೆ ಸಂದರ್ಭಾನುಸಾರವಾಗಿ ಬೇಕಾದ ಪುಟಗಳು ನನ್ನೊಳಗೆ ತೆರೆದುಕೊಂಡಿರುತ್ತವೆ.
“ತಿಂಮ, ಚೌಡಯ್ಯನವರ ಪಿಟೀಲು ಕೇಳಿದ್ಯೇನೋ?”
“ಕೇಳಿದೆ. ಕೊಡಲಿಲ್ಲಪ್ಪಾ.”…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...