Homeಸಾಹಿತ್ಯ-ಸಂಸ್ಕೃತಿಕಥೆಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ - ಯೋಗೇಶ್ ಮಾಸ್ಟರ್

ಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ – ಯೋಗೇಶ್ ಮಾಸ್ಟರ್

- Advertisement -
- Advertisement -

“ತಿಂಮ, ನಾಟಕ ನೋಡಿದೆಯೇನೋ?” ಬುದ್ಧನ ನಾಟಕ ನೋಡಲು ರಾತ್ರಿ ಮಗನ ಕಳುಹಿಸಿದ್ದ ತಂದೆ ಬೆಳಗ್ಗೆ ಕೇಳಿದ.
“ನೋಡಿದೆ ಅಪ್ಪಾ.”
“ಎಲ್ಲಾ ಅರ್ಥ ಆಯ್ತೇನೋ?”
“ಆಯ್ತಪ್ಪಾ” ಎನ್ನುವ ತಿಂಮ ಮತ್ತೆ ನೆನಪಿಸಿಕೊಂಡು ಹೇಳುತ್ತಾನೆ, “ಆದರೆ, ಒಂದರ್ಥ ಆಗಲಿಲ್ಲ. ಬುದ್ಧ ರಾಜ್ಯ, ಹೆಂಡತಿ, ಮಗ; ಎಲ್ಲವನ್ನೂ ಬಿಟ್ಟು ಹೋದವನು, ತಗಡಿನ ಬಿಲ್ಲೆ ಕೊಡ್ತೀವಿ ಅಂದ ತಕ್ಷಣ ಓಡಿ ಬಂದುಬಿಟ್ಟನಲ್ಲಪ್ಪಾ?”ಬೀಚಿಯ ಬೆಳ್ಳಿ ತಿಂಮ ಒಬ್ಬ ಬಾಲಕ. ಅವನು ತಾನು ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ನೋಡುವುದನ್ನೆಲ್ಲಾ ಪ್ರಶ್ನಿಸುತ್ತಾನೆ. ಅವನ ಪ್ರಶ್ನೆಗಳು ಸಮಾಜವು ಯಾವುದನ್ನು ಗಂಭೀರ ಅಂತ ಪರಿಗಣಿಸುತ್ತದೋ ಅದನ್ನು ಲೇವಡಿ ಮಾಡುತ್ತದೆ. ಹೀಗೆ ವ್ಯಂಗ್ಯವಾಡುವುದು ವ್ಯವಸ್ಥೆಯನ್ನು ಪ್ರತಿಭಟಿಸುವ, ಚಿಂತನೆಗೆ ಹಚ್ಚುವ ಬೀಚಿಯವರ ರೀತಿ.

ಬುದ್ಧ ತಗಡಿನ ಬಿಲ್ಲೆಗೆ ಓಡಿ ಬರುವುದು, ತಿಂಮನಿಗೆ ನಾಟಕ ಮತ್ತು ವಾಸ್ತವದ ಅರಿವಿಲ್ಲ ಅಂತಲ್ಲ. ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿ, ಅದಕ್ಕೆ ಪ್ರಶಸ್ತಿ ಬರಲೆಂದು ಅರ್ಜಿ ಹಾಕುವುದನ್ನು, ಲಾಬಿ ಮಾಡುವ ವಾಸ್ತವವನ್ನು ಅದು ಅಣಕಿಸುತ್ತದೆ.

ರಸ್ತೆಯಲ್ಲಿ ಯಾರಿಗೋ ಕೈಕೋಳ, ಕಾಲ್ಗಳಿಗೆ ಸರಪಳಿ ಹಾಕಿ ಎಳೆದೊಯ್ಯುತ್ತಿದ್ದ ಗಲಾಟೆ. ತಿಂಮ ಕೇಳಿದ ಅದೇನೆಂದು. ಜೈಲಿಗೆಂದರು ಯಾರೋ. ‘ಜೈಲಿಗೋ ಇಷ್ಟು ರಂಪು! ನಾನೆಲ್ಲೋ ಸ್ಕೂಲಿಗೆ ಎಂದುಕೊಂಡೆ’ ಎನ್ನುತ್ತಾ ಶಿಕ್ಷಣ ವ್ಯವಸ್ಥೆಗೆ ಕನ್ನಡಿ ಹಿಡಿಯುತ್ತಾನೆ ತಿಂಮ.

“ಇವತ್ತು ಬರುವ ಅತಿಥಿಯ ಮೂಗಿನ ಬಗ್ಗೆ ಏನೂ ಮಾತಾಡಬೇಡ” ಎಂದು ತಂದೆ ಎಚ್ಚರಿಸಿರುತ್ತಾನೆ. ಅತಿಥಿ ಬಂದಾಗ ಅವರನ್ನೇ ನೋಡಿಕೊಂಡು ತಿಂಮ ಕುಳಿತಿರುತ್ತಾನೆ. ಅತಿಥಿಗೂ ಅದು ಗಮನಕ್ಕೆ ಬಂದು, ಯಾಕಪ್ಪಾ ಎಂದು ಕೇಳುತ್ತಾರೆ. ಅವನು ಏನಿಲ್ಲ ಎಂದು ತಂದೆಗೆ ಕೇಳುತ್ತಾನೆ. “ಅಪ್ಪಾ, ಇವರ ಮೂಗಿನ ಬಗ್ಗೆ ಏನೂ ಮಾತಾಡಬೇಡಾಂದೆ. ಆದರೆ, ಇವರಿಗೆ ಮೂಗೇ ಇಲ್ಲ!” ಎಂದು ಮಕ್ಕಳ ಮುಖವಾಡವಿಲ್ಲದ ಮನಸ್ಸನ್ನು ತೋರಿಸುವ ಮಗುವಿನ ಮನೋವಿಜ್ಞಾನ ಬೀಚಿಯದು.

“ಹಸುವಿಗೆ ನಾಲ್ಕಿರುತ್ತವೆ. ನನಗೆ ಎರಡಿವೆ. ಏನದು ಹೇಳು?” ಶಾಲೆಗೆ ಸೇರಿಸಿಕೊಳ್ಳುವ ಉಪಾಧ್ಯಾಯಿನಿ ತಿಂಮನ ಪರೀಕ್ಷಿಸಿದಳು. ಅವನಿಗೆ ಕಂಡದ್ದು ಹೇಳಿದ. ಶಿಕ್ಷಕಿ ಮುಜುಗರಗೊಂಡು ಇವನು ದೊಡ್ಡ ತರಗತಿಗೆ ಹೋಗಬೇಕೆನ್ನುವಳು. ಪಾಪ, ಕಾಲುಗಳೆಂಬ ಉತ್ತರ ಅವಳು ಬಯಸಿದ್ದಳು. ಕಿರಿಯ ಪೀಳಿಗೆ ದಡ್ಡರಿರುತ್ತಾರೆಂದು ಕಡೆಗಣಿಸದಿರಲು ಬೀಚಿ ಹಿರಿಯರಿಗೆ ಎಚ್ಚರಿಸುತ್ತಾರೆ.

ಪಶುವೈದ್ಯರು ಹಸುವಿಗೆ ಹೇಗೆ ಗುಳಿಗೆ ನುಂಗಿಸಬೇಕೆಂದು ಹೇಳಿ ತಿಂಮನ ಕಳುಹಿಸಿದ್ದರು. ಸ್ವಲ್ಪ ಹೊತ್ತಿಗೆ ತಿಂಮ ಗಾಬರಿಯಿಂದ ಮರಳಿ ಹಸುವಿಗೆ ಗುಳಿಗೆ ನುಂಗಿಸಲಾಗಲಿಲ್ಲವೆಂದು ಹೇಳಿದ.
“ಯಾಕೋ, ಗೊಟ್ಟದಲ್ಲಿ (ಬಿದಿರಿನ ಕೊಳವೆ) ಗುಳಿಗೆ ಇಟ್ಟೆಯೇನೋ?”
“ಇಟ್ಟೆ.”
“ಗೊಟ್ಟವನ್ನು ಹಸುವಿನ ಗಂಟಲಿಗಿಟ್ಟೆಯೇನೋ?”
“ಇಟ್ಟೆ.”
“ಜೋರಾಗಿ ಊದಿದೆಯೇನೋ?”
“ನಾನು ಊದುವಷ್ಟರಲ್ಲಿ ಅದೇ ಊದಿಬಿಟ್ಟಿತು!” ತಿಂಮನ ಗಾಬರಿಯ ಕಾರಣ ಅದು.
ವ್ಯವಸ್ಥೆಯನ್ನು ಬದಲಿಸುತ್ತೇನೆಂದು ಹೋದವರನ್ನು ವ್ಯವಸ್ಥೆಯೇ ಬದಲಿಸುವ ಕತೆ ಈ ತಿಂಮನಲ್ಲಿ.
ಈ ಪುಸ್ತಕದ ಪ್ರತಿ ಈಗ ನನ್ನಲ್ಲಿಲ್ಲ. ಆದರೆ ಸಂದರ್ಭಾನುಸಾರವಾಗಿ ಬೇಕಾದ ಪುಟಗಳು ನನ್ನೊಳಗೆ ತೆರೆದುಕೊಂಡಿರುತ್ತವೆ.
“ತಿಂಮ, ಚೌಡಯ್ಯನವರ ಪಿಟೀಲು ಕೇಳಿದ್ಯೇನೋ?”
“ಕೇಳಿದೆ. ಕೊಡಲಿಲ್ಲಪ್ಪಾ.”…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...