Homeಸಾಹಿತ್ಯ-ಸಂಸ್ಕೃತಿಕಥೆಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ - ಯೋಗೇಶ್ ಮಾಸ್ಟರ್

ಬೆಳ್ಳಿ ತಿಂಮ ನೂರೆಂಟು ಹೇಳಿದ :ಬೀಚಿ – ಯೋಗೇಶ್ ಮಾಸ್ಟರ್

- Advertisement -
- Advertisement -

“ತಿಂಮ, ನಾಟಕ ನೋಡಿದೆಯೇನೋ?” ಬುದ್ಧನ ನಾಟಕ ನೋಡಲು ರಾತ್ರಿ ಮಗನ ಕಳುಹಿಸಿದ್ದ ತಂದೆ ಬೆಳಗ್ಗೆ ಕೇಳಿದ.
“ನೋಡಿದೆ ಅಪ್ಪಾ.”
“ಎಲ್ಲಾ ಅರ್ಥ ಆಯ್ತೇನೋ?”
“ಆಯ್ತಪ್ಪಾ” ಎನ್ನುವ ತಿಂಮ ಮತ್ತೆ ನೆನಪಿಸಿಕೊಂಡು ಹೇಳುತ್ತಾನೆ, “ಆದರೆ, ಒಂದರ್ಥ ಆಗಲಿಲ್ಲ. ಬುದ್ಧ ರಾಜ್ಯ, ಹೆಂಡತಿ, ಮಗ; ಎಲ್ಲವನ್ನೂ ಬಿಟ್ಟು ಹೋದವನು, ತಗಡಿನ ಬಿಲ್ಲೆ ಕೊಡ್ತೀವಿ ಅಂದ ತಕ್ಷಣ ಓಡಿ ಬಂದುಬಿಟ್ಟನಲ್ಲಪ್ಪಾ?”ಬೀಚಿಯ ಬೆಳ್ಳಿ ತಿಂಮ ಒಬ್ಬ ಬಾಲಕ. ಅವನು ತಾನು ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ನೋಡುವುದನ್ನೆಲ್ಲಾ ಪ್ರಶ್ನಿಸುತ್ತಾನೆ. ಅವನ ಪ್ರಶ್ನೆಗಳು ಸಮಾಜವು ಯಾವುದನ್ನು ಗಂಭೀರ ಅಂತ ಪರಿಗಣಿಸುತ್ತದೋ ಅದನ್ನು ಲೇವಡಿ ಮಾಡುತ್ತದೆ. ಹೀಗೆ ವ್ಯಂಗ್ಯವಾಡುವುದು ವ್ಯವಸ್ಥೆಯನ್ನು ಪ್ರತಿಭಟಿಸುವ, ಚಿಂತನೆಗೆ ಹಚ್ಚುವ ಬೀಚಿಯವರ ರೀತಿ.

ಬುದ್ಧ ತಗಡಿನ ಬಿಲ್ಲೆಗೆ ಓಡಿ ಬರುವುದು, ತಿಂಮನಿಗೆ ನಾಟಕ ಮತ್ತು ವಾಸ್ತವದ ಅರಿವಿಲ್ಲ ಅಂತಲ್ಲ. ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿ, ಅದಕ್ಕೆ ಪ್ರಶಸ್ತಿ ಬರಲೆಂದು ಅರ್ಜಿ ಹಾಕುವುದನ್ನು, ಲಾಬಿ ಮಾಡುವ ವಾಸ್ತವವನ್ನು ಅದು ಅಣಕಿಸುತ್ತದೆ.

ರಸ್ತೆಯಲ್ಲಿ ಯಾರಿಗೋ ಕೈಕೋಳ, ಕಾಲ್ಗಳಿಗೆ ಸರಪಳಿ ಹಾಕಿ ಎಳೆದೊಯ್ಯುತ್ತಿದ್ದ ಗಲಾಟೆ. ತಿಂಮ ಕೇಳಿದ ಅದೇನೆಂದು. ಜೈಲಿಗೆಂದರು ಯಾರೋ. ‘ಜೈಲಿಗೋ ಇಷ್ಟು ರಂಪು! ನಾನೆಲ್ಲೋ ಸ್ಕೂಲಿಗೆ ಎಂದುಕೊಂಡೆ’ ಎನ್ನುತ್ತಾ ಶಿಕ್ಷಣ ವ್ಯವಸ್ಥೆಗೆ ಕನ್ನಡಿ ಹಿಡಿಯುತ್ತಾನೆ ತಿಂಮ.

“ಇವತ್ತು ಬರುವ ಅತಿಥಿಯ ಮೂಗಿನ ಬಗ್ಗೆ ಏನೂ ಮಾತಾಡಬೇಡ” ಎಂದು ತಂದೆ ಎಚ್ಚರಿಸಿರುತ್ತಾನೆ. ಅತಿಥಿ ಬಂದಾಗ ಅವರನ್ನೇ ನೋಡಿಕೊಂಡು ತಿಂಮ ಕುಳಿತಿರುತ್ತಾನೆ. ಅತಿಥಿಗೂ ಅದು ಗಮನಕ್ಕೆ ಬಂದು, ಯಾಕಪ್ಪಾ ಎಂದು ಕೇಳುತ್ತಾರೆ. ಅವನು ಏನಿಲ್ಲ ಎಂದು ತಂದೆಗೆ ಕೇಳುತ್ತಾನೆ. “ಅಪ್ಪಾ, ಇವರ ಮೂಗಿನ ಬಗ್ಗೆ ಏನೂ ಮಾತಾಡಬೇಡಾಂದೆ. ಆದರೆ, ಇವರಿಗೆ ಮೂಗೇ ಇಲ್ಲ!” ಎಂದು ಮಕ್ಕಳ ಮುಖವಾಡವಿಲ್ಲದ ಮನಸ್ಸನ್ನು ತೋರಿಸುವ ಮಗುವಿನ ಮನೋವಿಜ್ಞಾನ ಬೀಚಿಯದು.

“ಹಸುವಿಗೆ ನಾಲ್ಕಿರುತ್ತವೆ. ನನಗೆ ಎರಡಿವೆ. ಏನದು ಹೇಳು?” ಶಾಲೆಗೆ ಸೇರಿಸಿಕೊಳ್ಳುವ ಉಪಾಧ್ಯಾಯಿನಿ ತಿಂಮನ ಪರೀಕ್ಷಿಸಿದಳು. ಅವನಿಗೆ ಕಂಡದ್ದು ಹೇಳಿದ. ಶಿಕ್ಷಕಿ ಮುಜುಗರಗೊಂಡು ಇವನು ದೊಡ್ಡ ತರಗತಿಗೆ ಹೋಗಬೇಕೆನ್ನುವಳು. ಪಾಪ, ಕಾಲುಗಳೆಂಬ ಉತ್ತರ ಅವಳು ಬಯಸಿದ್ದಳು. ಕಿರಿಯ ಪೀಳಿಗೆ ದಡ್ಡರಿರುತ್ತಾರೆಂದು ಕಡೆಗಣಿಸದಿರಲು ಬೀಚಿ ಹಿರಿಯರಿಗೆ ಎಚ್ಚರಿಸುತ್ತಾರೆ.

ಪಶುವೈದ್ಯರು ಹಸುವಿಗೆ ಹೇಗೆ ಗುಳಿಗೆ ನುಂಗಿಸಬೇಕೆಂದು ಹೇಳಿ ತಿಂಮನ ಕಳುಹಿಸಿದ್ದರು. ಸ್ವಲ್ಪ ಹೊತ್ತಿಗೆ ತಿಂಮ ಗಾಬರಿಯಿಂದ ಮರಳಿ ಹಸುವಿಗೆ ಗುಳಿಗೆ ನುಂಗಿಸಲಾಗಲಿಲ್ಲವೆಂದು ಹೇಳಿದ.
“ಯಾಕೋ, ಗೊಟ್ಟದಲ್ಲಿ (ಬಿದಿರಿನ ಕೊಳವೆ) ಗುಳಿಗೆ ಇಟ್ಟೆಯೇನೋ?”
“ಇಟ್ಟೆ.”
“ಗೊಟ್ಟವನ್ನು ಹಸುವಿನ ಗಂಟಲಿಗಿಟ್ಟೆಯೇನೋ?”
“ಇಟ್ಟೆ.”
“ಜೋರಾಗಿ ಊದಿದೆಯೇನೋ?”
“ನಾನು ಊದುವಷ್ಟರಲ್ಲಿ ಅದೇ ಊದಿಬಿಟ್ಟಿತು!” ತಿಂಮನ ಗಾಬರಿಯ ಕಾರಣ ಅದು.
ವ್ಯವಸ್ಥೆಯನ್ನು ಬದಲಿಸುತ್ತೇನೆಂದು ಹೋದವರನ್ನು ವ್ಯವಸ್ಥೆಯೇ ಬದಲಿಸುವ ಕತೆ ಈ ತಿಂಮನಲ್ಲಿ.
ಈ ಪುಸ್ತಕದ ಪ್ರತಿ ಈಗ ನನ್ನಲ್ಲಿಲ್ಲ. ಆದರೆ ಸಂದರ್ಭಾನುಸಾರವಾಗಿ ಬೇಕಾದ ಪುಟಗಳು ನನ್ನೊಳಗೆ ತೆರೆದುಕೊಂಡಿರುತ್ತವೆ.
“ತಿಂಮ, ಚೌಡಯ್ಯನವರ ಪಿಟೀಲು ಕೇಳಿದ್ಯೇನೋ?”
“ಕೇಳಿದೆ. ಕೊಡಲಿಲ್ಲಪ್ಪಾ.”…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...