Homeಮುಖಪುಟ'ಗೋಮಾಂಸ ಸೇವನೆ ನಿಷೇಧ ಸ್ವಾತಂತ್ರ್ಯದ ಹಕ್ಕಿಗೆ ವಿರುದ್ಧ' | ಅಸ್ಸಾಂ ನಿರ್ಧಾರದ ವಿರುದ್ಧ ಎಸ್‌ಪಿ ಸಂಸದೆ...

‘ಗೋಮಾಂಸ ಸೇವನೆ ನಿಷೇಧ ಸ್ವಾತಂತ್ರ್ಯದ ಹಕ್ಕಿಗೆ ವಿರುದ್ಧ’ | ಅಸ್ಸಾಂ ನಿರ್ಧಾರದ ವಿರುದ್ಧ ಎಸ್‌ಪಿ ಸಂಸದೆ ಇಕ್ರಾ ಹಸನ್

- Advertisement -
- Advertisement -

ಅಸ್ಸಾಂನ ಹೊಟೇಲ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆಯ ಮೇಲೆ ಸಂಪೂರ್ಣ ನಿಷೇಧ ಹೇರಿದ ಬಿಜೆಪಿ ಸರ್ಕಾರದ ನಿರ್ಧಾರವನ್ನು ಸಮಾಜವಾದಿ ಪಕ್ಷದ ಸಂಸದೆ ಇಕ್ರಾ ಹಸನ್ ಗುರುವಾರ ವಿರೊಧಿಸಿದ್ದು, ಇದು ಸ್ವಾತಂತ್ರ್ಯದ ಹಕ್ಕಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಆಹಾರ ಸೇವನೆಯ ವಿರುದ್ಧ ನಿಷೇಧ ಹೇರಿದ್ದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ. ಗೋಮಾಂಸ ಸೇವನೆ

“ಬಿಜೆಪಿ ಸರ್ಕಾರ ನಿರ್ಧಾರವು ಸ್ವಾತಂತ್ರ್ಯದ ಹಕ್ಕಿಗೆ ವಿರುದ್ಧವಾಗಿದೆ. ಸರ್ಕಾರವು ವೈಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುವುದನ್ನು ಮುಂದುವರೆಸಿದರೆ ರಾಷ್ಟ್ರವು ಸರ್ವಾಧಿಕಾರದತ್ತ ಸಾಗುತ್ತದೆ. ವಿಭಿನ್ನ ಸಂಸ್ಕೃತಿ ಮತ್ತು ಧರ್ಮಗಳನ್ನು ಅನುಸರಿಸುವ ಜನರು ನಮ್ಮಲ್ಲಿರುವುದು ದೇಶದ ಸೌಂದರ್ಯ. ಈ ರೀತಿಯ ನಿರ್ಧಾರಗಳು ಸಂವಿಧಾನಕ್ಕೆ ವಿರುದ್ಧವಾಗಿವೆ” ಎಂದು ಸಂಸದೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯಾದ್ಯಂತ ಯಾವುದೇ ರೆಸ್ಟೋರೆಂಟ್, ಹೋಟೆಲ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವಿಸುವುದನ್ನು ನಿಷೇಧಿಸಲು ಸರ್ಕಾರ ನಿರ್ಧರಿಸಿದೆ ಎಂದು ಘೋಷಿಸಿದ್ದಾರೆ. 2021 ರಲ್ಲಿ ಅಂಗೀಕರಿಸಿದ ಅಸ್ಸಾಂ ಗೋವು ಸಂರಕ್ಷಣಾ ಕಾಯ್ದೆಯು ಜಾನುವಾರುಗಳ ಹತ್ಯೆಯನ್ನು ಖಾತ್ರಿಪಡಿಸುವಲ್ಲಿ ಸರ್ಕಾರ ಸಾಕಷ್ಟು ಯಶಸ್ವಿಯಾಗಿದೆ. ಈಗ ನಾವು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆಯನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ ಎಂದು ಸಿಎಂ ಹೇಳಿದ್ದರು.

“ನಾವು ಮೂರು ವರ್ಷಗಳ ಹಿಂದೆ ಗೋಹತ್ಯೆ ನಿಷೇಧದ ಕಾನೂನನ್ನು ಜಾರಿಗೆ ತಂದಿದ್ದೇವೆ ಮತ್ತು ಅದು ಸಾಕಷ್ಟು ಯಶಸ್ವಿಯಾಗಿದೆ. ಆದ್ದರಿಂದ ಈಗ, ಅಸ್ಸಾಂನಲ್ಲಿ, ನಾವು ಯಾವುದೇ ರೆಸ್ಟೋರೆಂಟ್ ಅಥವಾ ಹೋಟೆಲ್‌ನಲ್ಲಿ ಹಾಗೂ ಸಾರ್ವಜನಿಕ ಸಮಾರಂಭ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆಯನ್ನು ನಿಷೇಧಿಸಲು ನಿರ್ಧರಿಸಿದ್ದೇವೆ” ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ. ಗೋಮಾಂಸ ಸೇವನೆ

ದೇವಸ್ಥಾನಗಳ ಬಳಿ ಗೋಮಾಂಸ ಸೇವನೆಯನ್ನು ಮಾತ್ರ ನಿರ್ಬಂಧಿಸುವುದು ಹಿಂದಿನ ನಿರ್ಧಾರವಾಗಿತ್ತು, ಆದರೆ ಈಗ ಸರ್ಕಾರ ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸಿದೆ ಎಂದು ಸಿಎಂ ಹೇಳಿದ್ದಾರೆ.

“ಈ ಹಿಂದೆ ದೇವಸ್ಥಾನಗಳ ಬಳಿ ಗೋಮಾಂಸ ತಿನ್ನುವುದನ್ನು ನಿಲ್ಲಿಸುವುದು ನಮ್ಮ ನಿರ್ಧಾರವಾಗಿತ್ತು. ಆದರೆ ಈಗ ನಾವು ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸಿದ್ದೇವೆ. ಆದ್ದರಿಂದ, ಯಾವುದೇ ಸಮುದಾಯಿಕ ಸ್ಥಳ, ಸಾರ್ವಜನಿಕ ಸ್ಥಳ, ಹೋಟೆಲ್ ಅಥವಾ ರೆಸ್ಟೋರೆಂಟ್‌ನಲ್ಲಿ ತಿನ್ನಲು ನಿಷೇಧ ಮಾಡಲಿದ್ದೇವೆ” ಎಂದು ಸಿಎಂ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ‘ಜನಕಲ್ಯಾಣ ಸಮಾವೇಶ’ಕ್ಕೆ ಹರಿದುಬಂದ ಜನಸಾಗರ; ದೇವೇಗೌಡರ ತವರಿನಲ್ಲಿ ‘ಕೈ’ ನಾಯಕರ ಶಕ್ತಿ ಪ್ರದರ್ಶನ

ಕಾಂಗ್ರೆಸ್ ‘ಜನಕಲ್ಯಾಣ ಸಮಾವೇಶ’ಕ್ಕೆ ಹರಿದುಬಂದ ಜನಸಾಗರ; ದೇವೇಗೌಡರ ತವರಿನಲ್ಲಿ ‘ಕೈ’ ನಾಯಕರ ಶಕ್ತಿ ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...