Homeಮುಖಪುಟ'ಗೋಮಾಂಸ ಸೇವನೆ ನಿಷೇಧ ಸ್ವಾತಂತ್ರ್ಯದ ಹಕ್ಕಿಗೆ ವಿರುದ್ಧ' | ಅಸ್ಸಾಂ ನಿರ್ಧಾರದ ವಿರುದ್ಧ ಎಸ್‌ಪಿ ಸಂಸದೆ...

‘ಗೋಮಾಂಸ ಸೇವನೆ ನಿಷೇಧ ಸ್ವಾತಂತ್ರ್ಯದ ಹಕ್ಕಿಗೆ ವಿರುದ್ಧ’ | ಅಸ್ಸಾಂ ನಿರ್ಧಾರದ ವಿರುದ್ಧ ಎಸ್‌ಪಿ ಸಂಸದೆ ಇಕ್ರಾ ಹಸನ್

- Advertisement -
- Advertisement -

ಅಸ್ಸಾಂನ ಹೊಟೇಲ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆಯ ಮೇಲೆ ಸಂಪೂರ್ಣ ನಿಷೇಧ ಹೇರಿದ ಬಿಜೆಪಿ ಸರ್ಕಾರದ ನಿರ್ಧಾರವನ್ನು ಸಮಾಜವಾದಿ ಪಕ್ಷದ ಸಂಸದೆ ಇಕ್ರಾ ಹಸನ್ ಗುರುವಾರ ವಿರೊಧಿಸಿದ್ದು, ಇದು ಸ್ವಾತಂತ್ರ್ಯದ ಹಕ್ಕಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಆಹಾರ ಸೇವನೆಯ ವಿರುದ್ಧ ನಿಷೇಧ ಹೇರಿದ್ದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ. ಗೋಮಾಂಸ ಸೇವನೆ

“ಬಿಜೆಪಿ ಸರ್ಕಾರ ನಿರ್ಧಾರವು ಸ್ವಾತಂತ್ರ್ಯದ ಹಕ್ಕಿಗೆ ವಿರುದ್ಧವಾಗಿದೆ. ಸರ್ಕಾರವು ವೈಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುವುದನ್ನು ಮುಂದುವರೆಸಿದರೆ ರಾಷ್ಟ್ರವು ಸರ್ವಾಧಿಕಾರದತ್ತ ಸಾಗುತ್ತದೆ. ವಿಭಿನ್ನ ಸಂಸ್ಕೃತಿ ಮತ್ತು ಧರ್ಮಗಳನ್ನು ಅನುಸರಿಸುವ ಜನರು ನಮ್ಮಲ್ಲಿರುವುದು ದೇಶದ ಸೌಂದರ್ಯ. ಈ ರೀತಿಯ ನಿರ್ಧಾರಗಳು ಸಂವಿಧಾನಕ್ಕೆ ವಿರುದ್ಧವಾಗಿವೆ” ಎಂದು ಸಂಸದೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯಾದ್ಯಂತ ಯಾವುದೇ ರೆಸ್ಟೋರೆಂಟ್, ಹೋಟೆಲ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವಿಸುವುದನ್ನು ನಿಷೇಧಿಸಲು ಸರ್ಕಾರ ನಿರ್ಧರಿಸಿದೆ ಎಂದು ಘೋಷಿಸಿದ್ದಾರೆ. 2021 ರಲ್ಲಿ ಅಂಗೀಕರಿಸಿದ ಅಸ್ಸಾಂ ಗೋವು ಸಂರಕ್ಷಣಾ ಕಾಯ್ದೆಯು ಜಾನುವಾರುಗಳ ಹತ್ಯೆಯನ್ನು ಖಾತ್ರಿಪಡಿಸುವಲ್ಲಿ ಸರ್ಕಾರ ಸಾಕಷ್ಟು ಯಶಸ್ವಿಯಾಗಿದೆ. ಈಗ ನಾವು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆಯನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ ಎಂದು ಸಿಎಂ ಹೇಳಿದ್ದರು.

“ನಾವು ಮೂರು ವರ್ಷಗಳ ಹಿಂದೆ ಗೋಹತ್ಯೆ ನಿಷೇಧದ ಕಾನೂನನ್ನು ಜಾರಿಗೆ ತಂದಿದ್ದೇವೆ ಮತ್ತು ಅದು ಸಾಕಷ್ಟು ಯಶಸ್ವಿಯಾಗಿದೆ. ಆದ್ದರಿಂದ ಈಗ, ಅಸ್ಸಾಂನಲ್ಲಿ, ನಾವು ಯಾವುದೇ ರೆಸ್ಟೋರೆಂಟ್ ಅಥವಾ ಹೋಟೆಲ್‌ನಲ್ಲಿ ಹಾಗೂ ಸಾರ್ವಜನಿಕ ಸಮಾರಂಭ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆಯನ್ನು ನಿಷೇಧಿಸಲು ನಿರ್ಧರಿಸಿದ್ದೇವೆ” ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ. ಗೋಮಾಂಸ ಸೇವನೆ

ದೇವಸ್ಥಾನಗಳ ಬಳಿ ಗೋಮಾಂಸ ಸೇವನೆಯನ್ನು ಮಾತ್ರ ನಿರ್ಬಂಧಿಸುವುದು ಹಿಂದಿನ ನಿರ್ಧಾರವಾಗಿತ್ತು, ಆದರೆ ಈಗ ಸರ್ಕಾರ ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸಿದೆ ಎಂದು ಸಿಎಂ ಹೇಳಿದ್ದಾರೆ.

“ಈ ಹಿಂದೆ ದೇವಸ್ಥಾನಗಳ ಬಳಿ ಗೋಮಾಂಸ ತಿನ್ನುವುದನ್ನು ನಿಲ್ಲಿಸುವುದು ನಮ್ಮ ನಿರ್ಧಾರವಾಗಿತ್ತು. ಆದರೆ ಈಗ ನಾವು ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸಿದ್ದೇವೆ. ಆದ್ದರಿಂದ, ಯಾವುದೇ ಸಮುದಾಯಿಕ ಸ್ಥಳ, ಸಾರ್ವಜನಿಕ ಸ್ಥಳ, ಹೋಟೆಲ್ ಅಥವಾ ರೆಸ್ಟೋರೆಂಟ್‌ನಲ್ಲಿ ತಿನ್ನಲು ನಿಷೇಧ ಮಾಡಲಿದ್ದೇವೆ” ಎಂದು ಸಿಎಂ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ‘ಜನಕಲ್ಯಾಣ ಸಮಾವೇಶ’ಕ್ಕೆ ಹರಿದುಬಂದ ಜನಸಾಗರ; ದೇವೇಗೌಡರ ತವರಿನಲ್ಲಿ ‘ಕೈ’ ನಾಯಕರ ಶಕ್ತಿ ಪ್ರದರ್ಶನ

ಕಾಂಗ್ರೆಸ್ ‘ಜನಕಲ್ಯಾಣ ಸಮಾವೇಶ’ಕ್ಕೆ ಹರಿದುಬಂದ ಜನಸಾಗರ; ದೇವೇಗೌಡರ ತವರಿನಲ್ಲಿ ‘ಕೈ’ ನಾಯಕರ ಶಕ್ತಿ ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...