Homeಕರ್ನಾಟಕಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ, ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ ಎಂದು ಹೇಳಿದ್ದಾರೆ

- Advertisement -
- Advertisement -

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವ ನಿಲುವಾಗಿದ್ದು, ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, “ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ. ಅವರಿಗೆ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಮದುವೆಗೆ ಜಾತಿ-ಧರ್ಮಗಳ ನಿರ್ಬಂಧ ಕಾನೂನಿನಲ್ಲಿ ಇಲ್ಲ. ದೇಶದ ಯಾವ ಕಾನೂನು ಕೂಡಾ ಲವ್ ಜಿಹಾದ್ ಎಂದರೆ ಏನು ಎಂದು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹಸಚಿವರೇ ಸಂಸತ್ ನಲ್ಲಿ ಹೇಳಿದ್ದಾರೆ. ಸಿಟಿ ರವಿ ಗೃಹಸಚಿವರನ್ನು ಕೇಳಿಕೊಂಡು ಬಂದು ಮಾತನಾಡಲಿ ಎಂದು ಹೇಳಿದ್ದಾರೆ.

ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಂತರಧರ್ಮೀಯ ಮದುವೆ ಅಕ್ರಮ ಎಂದು ಹೇಳಿಲ್ಲ. ಆ ತೀರ್ಪನ್ನು ಉಲ್ಲೇಖಿಸುವವರು ಮೊದಲು ಅದನ್ನು ಓದಿಕೊಳ್ಳಲಿ. ಇಷ್ಟಪಟ್ಟವರನ್ನು ವಿವಾಹವಾಗುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಗೂಂಡಾ ರಾಜ್ಯವಾದ ಉತ್ತರಪ್ರದೇಶ ನಮಗೆ ಮಾದರಿ ಅಲ್ಲ.

ಆರ್‌ಎಸ್‌ಎಸ್ ಶಾಖೆಗೆ ಹೋಗಿ ನಾನು ಕಲಿಯುವಂತಹದ್ದು ಏನೂ ಇಲ್ಲ. ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸುತ್ತಿದ್ದೇನೆ. ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು, ಆರ್‌ಎಸ್‌ಎಸ್ ಅಲ್ಲ. ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ. ಬೇಕಾದರೆ ನಾನೇ ಸಂವಿಧಾನದ ಪಾಠ ಮಾಡುತ್ತೇನೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

ಬಿಜೆಪಿ ಮತ್ತು ಆರ್‌ಎಸ್‌ಎಸ್ ಮೂಲಭೂತವಾಗಿ ಸಂವಿಧಾನ ವಿರೋಧಿ. ಅದು ಮೀಸಲಾತಿ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎಲ್ಲವನ್ನೂ ವಿರೋಧಿಸುತ್ತದೆ. ಅವರು ಮಿಲ್ಲರ್ ವರದಿಯಿಂದ ಮಂಡಲ್ ವರದಿವರಗೆ ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರು, ಮನುಸ್ಮೃತಿಗೆ ಬದ್ಧರಾಗಿರುವವರು.

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವನಿಲುವು. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು.

ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ನಮ್ಮ ನಿಲುವಿನಲ್ಲಿ ಬದಲಾವಣೆಯಿಲ್ಲ. ಹಿಂದಿನ ಬಿಜೆಪಿ ಸರ್ಕಾರ 1964 ರ ಗೋಹತ್ಯೆ ನಿಷೇಧ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ನಮ್ಮ ಸರ್ಕಾರ ರದ್ದುಗೊಳಿಸಿ ಮೂಲ ಕಾಯ್ದೆಯನ್ನು ಉಳಿಸಿಕೊಂಡಿದೆ. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ.

 

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಮರಾಠ ಅಭಿವೃದ್ದಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಡಿಸೆಂಬರ್ ಐದರಂದು ನಡೆಸಲಿರುವ ಕರ್ನಾಟಕ ಬಂದ್ ನಲ್ಲಿ ಪಾಲ್ಗೊಳ್ಳುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ. ಬಿಜೆಪಿಯು ಉಪಚುನಾವಣೆಯಲ್ಲಿ ಮರಾಠರನ್ನು ಓಲೈಸಲು ಇಂತಹ ಕ್ಷುಲಕ ರಾಜಕೀಯ ನಡೆಸುತ್ತಿದೆ.

ಬೆಳಗಾವಿ ಕರ್ನಾಟಕದ ಅಖಂಡ ಭಾಗ, ಇದನ್ನು ಮಹಾಜನ ವರದಿಯೇ ಸ್ಪಷ್ಟಪಡಿಸಿದೆ. ಇದರಲ್ಲಿ ರಾಜಿಯೇ ಇಲ್ಲ. ನೆಲ-ಜಲ-ಭಾಷೆಯ ರಕ್ಷಣೆ ಬಗ್ಗೆ ರಾಜ್ಯ ಕಾಂಗ್ರೆಸ್ ಬದ್ಧವಾಗಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ.

ಇದನ್ನೂ ಓದಿ: ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...