Homeಕರ್ನಾಟಕಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ, ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ ಎಂದು ಹೇಳಿದ್ದಾರೆ

- Advertisement -
- Advertisement -

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವ ನಿಲುವಾಗಿದ್ದು, ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, “ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ. ಅವರಿಗೆ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಮದುವೆಗೆ ಜಾತಿ-ಧರ್ಮಗಳ ನಿರ್ಬಂಧ ಕಾನೂನಿನಲ್ಲಿ ಇಲ್ಲ. ದೇಶದ ಯಾವ ಕಾನೂನು ಕೂಡಾ ಲವ್ ಜಿಹಾದ್ ಎಂದರೆ ಏನು ಎಂದು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹಸಚಿವರೇ ಸಂಸತ್ ನಲ್ಲಿ ಹೇಳಿದ್ದಾರೆ. ಸಿಟಿ ರವಿ ಗೃಹಸಚಿವರನ್ನು ಕೇಳಿಕೊಂಡು ಬಂದು ಮಾತನಾಡಲಿ ಎಂದು ಹೇಳಿದ್ದಾರೆ.

ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಂತರಧರ್ಮೀಯ ಮದುವೆ ಅಕ್ರಮ ಎಂದು ಹೇಳಿಲ್ಲ. ಆ ತೀರ್ಪನ್ನು ಉಲ್ಲೇಖಿಸುವವರು ಮೊದಲು ಅದನ್ನು ಓದಿಕೊಳ್ಳಲಿ. ಇಷ್ಟಪಟ್ಟವರನ್ನು ವಿವಾಹವಾಗುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಗೂಂಡಾ ರಾಜ್ಯವಾದ ಉತ್ತರಪ್ರದೇಶ ನಮಗೆ ಮಾದರಿ ಅಲ್ಲ.

ಆರ್‌ಎಸ್‌ಎಸ್ ಶಾಖೆಗೆ ಹೋಗಿ ನಾನು ಕಲಿಯುವಂತಹದ್ದು ಏನೂ ಇಲ್ಲ. ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸುತ್ತಿದ್ದೇನೆ. ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು, ಆರ್‌ಎಸ್‌ಎಸ್ ಅಲ್ಲ. ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ. ಬೇಕಾದರೆ ನಾನೇ ಸಂವಿಧಾನದ ಪಾಠ ಮಾಡುತ್ತೇನೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

ಬಿಜೆಪಿ ಮತ್ತು ಆರ್‌ಎಸ್‌ಎಸ್ ಮೂಲಭೂತವಾಗಿ ಸಂವಿಧಾನ ವಿರೋಧಿ. ಅದು ಮೀಸಲಾತಿ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎಲ್ಲವನ್ನೂ ವಿರೋಧಿಸುತ್ತದೆ. ಅವರು ಮಿಲ್ಲರ್ ವರದಿಯಿಂದ ಮಂಡಲ್ ವರದಿವರಗೆ ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರು, ಮನುಸ್ಮೃತಿಗೆ ಬದ್ಧರಾಗಿರುವವರು.

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವನಿಲುವು. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು.

ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ನಮ್ಮ ನಿಲುವಿನಲ್ಲಿ ಬದಲಾವಣೆಯಿಲ್ಲ. ಹಿಂದಿನ ಬಿಜೆಪಿ ಸರ್ಕಾರ 1964 ರ ಗೋಹತ್ಯೆ ನಿಷೇಧ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ನಮ್ಮ ಸರ್ಕಾರ ರದ್ದುಗೊಳಿಸಿ ಮೂಲ ಕಾಯ್ದೆಯನ್ನು ಉಳಿಸಿಕೊಂಡಿದೆ. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ.

 

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಮರಾಠ ಅಭಿವೃದ್ದಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಡಿಸೆಂಬರ್ ಐದರಂದು ನಡೆಸಲಿರುವ ಕರ್ನಾಟಕ ಬಂದ್ ನಲ್ಲಿ ಪಾಲ್ಗೊಳ್ಳುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ. ಬಿಜೆಪಿಯು ಉಪಚುನಾವಣೆಯಲ್ಲಿ ಮರಾಠರನ್ನು ಓಲೈಸಲು ಇಂತಹ ಕ್ಷುಲಕ ರಾಜಕೀಯ ನಡೆಸುತ್ತಿದೆ.

ಬೆಳಗಾವಿ ಕರ್ನಾಟಕದ ಅಖಂಡ ಭಾಗ, ಇದನ್ನು ಮಹಾಜನ ವರದಿಯೇ ಸ್ಪಷ್ಟಪಡಿಸಿದೆ. ಇದರಲ್ಲಿ ರಾಜಿಯೇ ಇಲ್ಲ. ನೆಲ-ಜಲ-ಭಾಷೆಯ ರಕ್ಷಣೆ ಬಗ್ಗೆ ರಾಜ್ಯ ಕಾಂಗ್ರೆಸ್ ಬದ್ಧವಾಗಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ.

ಇದನ್ನೂ ಓದಿ: ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೇಹಾ ಹಿರೇಮಠ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

0
ನೇಹಾ ಹಿರೇಮಠ್ ಕೊಲೆ ಅತ್ಯಂತ ದುರದೃಷ್ಟಕರ. ತ್ವರಿತ ವಿಚಾರಣೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಜೊತೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ, ಪ್ರತ್ಯೇಕ ವಿಚಾರಣೆ ಮಾಡಿ ಅಪರಾಧಿಗೆ ಕಠಿಣ ಶಿಕ್ಷೆ ಕೊಡಿಸಲು ಸರ್ಕಾರ ಬದ್ದವಾಗಿದೆ ಎಂದು...