Homeಕರ್ನಾಟಕಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ, ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ ಎಂದು ಹೇಳಿದ್ದಾರೆ

- Advertisement -
- Advertisement -

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವ ನಿಲುವಾಗಿದ್ದು, ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, “ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ. ಅವರಿಗೆ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಮದುವೆಗೆ ಜಾತಿ-ಧರ್ಮಗಳ ನಿರ್ಬಂಧ ಕಾನೂನಿನಲ್ಲಿ ಇಲ್ಲ. ದೇಶದ ಯಾವ ಕಾನೂನು ಕೂಡಾ ಲವ್ ಜಿಹಾದ್ ಎಂದರೆ ಏನು ಎಂದು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹಸಚಿವರೇ ಸಂಸತ್ ನಲ್ಲಿ ಹೇಳಿದ್ದಾರೆ. ಸಿಟಿ ರವಿ ಗೃಹಸಚಿವರನ್ನು ಕೇಳಿಕೊಂಡು ಬಂದು ಮಾತನಾಡಲಿ ಎಂದು ಹೇಳಿದ್ದಾರೆ.

ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಂತರಧರ್ಮೀಯ ಮದುವೆ ಅಕ್ರಮ ಎಂದು ಹೇಳಿಲ್ಲ. ಆ ತೀರ್ಪನ್ನು ಉಲ್ಲೇಖಿಸುವವರು ಮೊದಲು ಅದನ್ನು ಓದಿಕೊಳ್ಳಲಿ. ಇಷ್ಟಪಟ್ಟವರನ್ನು ವಿವಾಹವಾಗುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಗೂಂಡಾ ರಾಜ್ಯವಾದ ಉತ್ತರಪ್ರದೇಶ ನಮಗೆ ಮಾದರಿ ಅಲ್ಲ.

ಆರ್‌ಎಸ್‌ಎಸ್ ಶಾಖೆಗೆ ಹೋಗಿ ನಾನು ಕಲಿಯುವಂತಹದ್ದು ಏನೂ ಇಲ್ಲ. ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸುತ್ತಿದ್ದೇನೆ. ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು, ಆರ್‌ಎಸ್‌ಎಸ್ ಅಲ್ಲ. ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ. ಬೇಕಾದರೆ ನಾನೇ ಸಂವಿಧಾನದ ಪಾಠ ಮಾಡುತ್ತೇನೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

ಬಿಜೆಪಿ ಮತ್ತು ಆರ್‌ಎಸ್‌ಎಸ್ ಮೂಲಭೂತವಾಗಿ ಸಂವಿಧಾನ ವಿರೋಧಿ. ಅದು ಮೀಸಲಾತಿ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎಲ್ಲವನ್ನೂ ವಿರೋಧಿಸುತ್ತದೆ. ಅವರು ಮಿಲ್ಲರ್ ವರದಿಯಿಂದ ಮಂಡಲ್ ವರದಿವರಗೆ ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರು, ಮನುಸ್ಮೃತಿಗೆ ಬದ್ಧರಾಗಿರುವವರು.

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವನಿಲುವು. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು.

ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ನಮ್ಮ ನಿಲುವಿನಲ್ಲಿ ಬದಲಾವಣೆಯಿಲ್ಲ. ಹಿಂದಿನ ಬಿಜೆಪಿ ಸರ್ಕಾರ 1964 ರ ಗೋಹತ್ಯೆ ನಿಷೇಧ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ನಮ್ಮ ಸರ್ಕಾರ ರದ್ದುಗೊಳಿಸಿ ಮೂಲ ಕಾಯ್ದೆಯನ್ನು ಉಳಿಸಿಕೊಂಡಿದೆ. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ.

 

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಮರಾಠ ಅಭಿವೃದ್ದಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಡಿಸೆಂಬರ್ ಐದರಂದು ನಡೆಸಲಿರುವ ಕರ್ನಾಟಕ ಬಂದ್ ನಲ್ಲಿ ಪಾಲ್ಗೊಳ್ಳುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ. ಬಿಜೆಪಿಯು ಉಪಚುನಾವಣೆಯಲ್ಲಿ ಮರಾಠರನ್ನು ಓಲೈಸಲು ಇಂತಹ ಕ್ಷುಲಕ ರಾಜಕೀಯ ನಡೆಸುತ್ತಿದೆ.

ಬೆಳಗಾವಿ ಕರ್ನಾಟಕದ ಅಖಂಡ ಭಾಗ, ಇದನ್ನು ಮಹಾಜನ ವರದಿಯೇ ಸ್ಪಷ್ಟಪಡಿಸಿದೆ. ಇದರಲ್ಲಿ ರಾಜಿಯೇ ಇಲ್ಲ. ನೆಲ-ಜಲ-ಭಾಷೆಯ ರಕ್ಷಣೆ ಬಗ್ಗೆ ರಾಜ್ಯ ಕಾಂಗ್ರೆಸ್ ಬದ್ಧವಾಗಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ.

ಇದನ್ನೂ ಓದಿ: ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...