Homeಕರ್ನಾಟಕಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ, ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ ಎಂದು ಹೇಳಿದ್ದಾರೆ

- Advertisement -
- Advertisement -

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವ ನಿಲುವಾಗಿದ್ದು, ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, “ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ. ಅವರಿಗೆ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಮದುವೆಗೆ ಜಾತಿ-ಧರ್ಮಗಳ ನಿರ್ಬಂಧ ಕಾನೂನಿನಲ್ಲಿ ಇಲ್ಲ. ದೇಶದ ಯಾವ ಕಾನೂನು ಕೂಡಾ ಲವ್ ಜಿಹಾದ್ ಎಂದರೆ ಏನು ಎಂದು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹಸಚಿವರೇ ಸಂಸತ್ ನಲ್ಲಿ ಹೇಳಿದ್ದಾರೆ. ಸಿಟಿ ರವಿ ಗೃಹಸಚಿವರನ್ನು ಕೇಳಿಕೊಂಡು ಬಂದು ಮಾತನಾಡಲಿ ಎಂದು ಹೇಳಿದ್ದಾರೆ.

ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಂತರಧರ್ಮೀಯ ಮದುವೆ ಅಕ್ರಮ ಎಂದು ಹೇಳಿಲ್ಲ. ಆ ತೀರ್ಪನ್ನು ಉಲ್ಲೇಖಿಸುವವರು ಮೊದಲು ಅದನ್ನು ಓದಿಕೊಳ್ಳಲಿ. ಇಷ್ಟಪಟ್ಟವರನ್ನು ವಿವಾಹವಾಗುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಗೂಂಡಾ ರಾಜ್ಯವಾದ ಉತ್ತರಪ್ರದೇಶ ನಮಗೆ ಮಾದರಿ ಅಲ್ಲ.

ಆರ್‌ಎಸ್‌ಎಸ್ ಶಾಖೆಗೆ ಹೋಗಿ ನಾನು ಕಲಿಯುವಂತಹದ್ದು ಏನೂ ಇಲ್ಲ. ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸುತ್ತಿದ್ದೇನೆ. ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು, ಆರ್‌ಎಸ್‌ಎಸ್ ಅಲ್ಲ. ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ. ಬೇಕಾದರೆ ನಾನೇ ಸಂವಿಧಾನದ ಪಾಠ ಮಾಡುತ್ತೇನೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

ಬಿಜೆಪಿ ಮತ್ತು ಆರ್‌ಎಸ್‌ಎಸ್ ಮೂಲಭೂತವಾಗಿ ಸಂವಿಧಾನ ವಿರೋಧಿ. ಅದು ಮೀಸಲಾತಿ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎಲ್ಲವನ್ನೂ ವಿರೋಧಿಸುತ್ತದೆ. ಅವರು ಮಿಲ್ಲರ್ ವರದಿಯಿಂದ ಮಂಡಲ್ ವರದಿವರಗೆ ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರು, ಮನುಸ್ಮೃತಿಗೆ ಬದ್ಧರಾಗಿರುವವರು.

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವನಿಲುವು. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು.

ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ನಮ್ಮ ನಿಲುವಿನಲ್ಲಿ ಬದಲಾವಣೆಯಿಲ್ಲ. ಹಿಂದಿನ ಬಿಜೆಪಿ ಸರ್ಕಾರ 1964 ರ ಗೋಹತ್ಯೆ ನಿಷೇಧ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ನಮ್ಮ ಸರ್ಕಾರ ರದ್ದುಗೊಳಿಸಿ ಮೂಲ ಕಾಯ್ದೆಯನ್ನು ಉಳಿಸಿಕೊಂಡಿದೆ. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ.

 

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಮರಾಠ ಅಭಿವೃದ್ದಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಡಿಸೆಂಬರ್ ಐದರಂದು ನಡೆಸಲಿರುವ ಕರ್ನಾಟಕ ಬಂದ್ ನಲ್ಲಿ ಪಾಲ್ಗೊಳ್ಳುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ. ಬಿಜೆಪಿಯು ಉಪಚುನಾವಣೆಯಲ್ಲಿ ಮರಾಠರನ್ನು ಓಲೈಸಲು ಇಂತಹ ಕ್ಷುಲಕ ರಾಜಕೀಯ ನಡೆಸುತ್ತಿದೆ.

ಬೆಳಗಾವಿ ಕರ್ನಾಟಕದ ಅಖಂಡ ಭಾಗ, ಇದನ್ನು ಮಹಾಜನ ವರದಿಯೇ ಸ್ಪಷ್ಟಪಡಿಸಿದೆ. ಇದರಲ್ಲಿ ರಾಜಿಯೇ ಇಲ್ಲ. ನೆಲ-ಜಲ-ಭಾಷೆಯ ರಕ್ಷಣೆ ಬಗ್ಗೆ ರಾಜ್ಯ ಕಾಂಗ್ರೆಸ್ ಬದ್ಧವಾಗಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ.

ಇದನ್ನೂ ಓದಿ: ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...