Homeಮುಖಪುಟಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ! ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

- Advertisement -
- Advertisement -

ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಆಚರಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಬಿಜೆಪಿ ಆಡಳಿತವಿರುವ ಗೋವಾ ರಾಜ್ಯವು ಭಾರೀ ಪ್ರಮಾಣದಲ್ಲಿ ಗೋಮಾಂಸದ ಕೊರತೆ ಅನುಭವಿಸುತ್ತಿದೆ. ಹಾಗಾಗಿ ಕೂಡಲೇ ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಇದಕ್ಕೆ ಕರ್ನಾಟಕ ಕಾಂಗ್ರೆಸ್ ತೀಕ್ಷ್ಣ ರೀತಿಯಲ್ಲಿ ಪ್ರತಿಕ್ರಿಯಿಸಿದೆ.

ಕರ್ನಾಟಕದ ಬಿಜೆಪಿ ಸರ್ಕಾರವು ಗೋಹತ್ಯೆ ನಿಷೇಧ ಮಸೂದೆ- 2020 ಅನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದೆ. ಹಾಗಾಗಿ ಕೆಲವೆಡೆ ಗೋಮಾಂಸದ ಮಾರಾಟ ಮತ್ತು ರಫ್ತು ನಿಲ್ಲಿಸಲಾಗಿದೆ. ಇದು ಗೋವಾ ರಾಜ್ಯದ ಮೇಲೆ ಪರಿಣಾಮ ಬೀರಿದೆ. ಗೋವಾದಲ್ಲಿ ಹಬ್ಬಗಳು ಆರಂಭವಾಗಿದ್ದು ಗೋಮಾಂಸ ಅವರ ಪ್ರಮುಖ ಖಾದ್ಯವಾಗಿದೆ. ಗೋಮಾಂಸ ಮಾರಾಟಗಾರರು ಬುಧವಾರ ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಹಾಗಾಗಿ ಕೂಡಲೇ ಕರ್ನಾಟಕದಿಂದ ಆಮದು ಮಾಡಿಕೊಳ್ಳಲು ವ್ಯವಸ್ಥೆ ಮಾಡುವುದಾಗಿ ಸಿಎಂ ಪ್ರಮೋದ್ ಸಾವಂತ್ ಗೋಮಾಂಸ ಮಾರಾಟಗಾರರಿಗೆ ಭರವಸೆ ನೀಡಿದ್ದಾರೆ.

ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ! ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ. ಗೋವಾದ ಬಿಜೆಪಿ ಸರ್ಕಾರ ಗೋಮಾಂಸದ ಕೊರತೆ ನೀಗಿಸಲು ರಾಜ್ಯದಿಂದಾಗುವ ಪೂರೈಕೆಯ ಕಡೆ ಆಸೆಯಿಂದ ನೋಡುತ್ತಿದೆ! ಇದಕ್ಕೆ ಬಿಜೆಪಿ ಕರ್ನಾಟಕದ
ಅಭಿಪ್ರಾಯ ಮತ್ತು ಉತ್ತರ ಏನು? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ.

ಬಿಜೆಪಿ ಆಳ್ವಿಕೆಯಿರುವ ಗೋವಾ ರಾಜ್ಯವು ಪ್ರತಿದಿನ ಸುಮಾರು 15-20 ಟನ್ ಗೋಮಾಂಸವನ್ನು ಬಳಸುತ್ತದೆ. ಅಲ್ಲಿ ಗೋಹತ್ಯೆ, ಗೋಮಾಂಸ ನಿಷೇಧವಿಲ್ಲ. ಆದರೆ ಕಳೆದ ನಾಲ್ಕು ವರ್ಷಗಳಿಂದ ರಾಜ್ಯ ಸರ್ಕಾರದ ಮಾಂಸ ಸಂಕೀರ್ಣವನ್ನು ಸ್ಥಗಿತಗೊಳಿಸಿದ್ದರಿಂದ, ರಾಜ್ಯದ ಗೋಮಾಂಸ ವ್ಯಾಪಾರಿಗಳು ಮುಖ್ಯವಾಗಿ ಕರ್ನಾಟಕದಿಂದ ಮಾಂಸವನ್ನು ಆಮದು ಮಾಡಿಕೊಳ್ಳುತ್ತಾರೆ.

“ಅಂಗಡಿಗಳನ್ನು ಮುಚ್ಚಲಾಗಿದೆ. ಆದಾಯವಿಲ್ಲ. ಸಾವಿರಾರು ಕಾರ್ಮಿಕರು ಮತ್ತು ಕುಟುಂಬಗಳು ಈ ವ್ಯಾಪಾರವನ್ನು ಅವಲಂಬಿಸಿವೆ. ಇದಲ್ಲದೆ, ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಬೇಕರಿಗಳಿವೆ. ಈ ಋತುವಿನಲ್ಲಿ ಮತ್ತು ಹೊಸ ವರ್ಷದಲ್ಲಿ ಪ್ರವಾಸಿಗರಿಂದ ಗೋಮಾಂಸಕ್ಕೆ ಸಾಕಷ್ಟು ಬೇಡಿಕೆಯಿದೆ” ಎಂದು ಸ್ಥಳೀಯರೊಬ್ಬರ ಹೇಳಿಕೆ ಉಲ್ಲೇಖಿಸಿ ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಕರ್ನಾಟಕದ ಮಾಂಸ ವ್ಯಾಪಾರಿಗಳ ಸಂಘವು ಯಾವ ಕ್ರಮ ತೆಗೆದುಕೊಳ್ಳುತ್ತದೆ ಎಂಬುದನ್ನು ನೋಡಲು ನಾವು ಕಾಯುತ್ತಿದ್ದೇವೆ. ಗೋವಾ ಸರ್ಕಾರ ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಪರಿಹರಿಸಬೇಕು. ಗೋವಾ ಗೋಮಾಂಸ ಪೂರೈಕೆಗಾಗಿ ಕರ್ನಾಟಕದ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ. ಆದರೆ ಒಂದು ವಾರದಿಂದ ನಾವು ಕರ್ನಾಟಕದಿಂದ ಮಾಂಸ ಅಥವಾ ಜಾನುವಾರುಗಳನ್ನು ಸ್ವೀಕರಿಸಿಲ್ಲ” ಎಂದು ಸ್ಥಳೀಯರು ತಿಳಿಸಿದ್ದಾರೆ.


ಇದನ್ನೂ ಓದಿ: ಕೃಷಿ ಕಾನೂನುಗಳು ಅದಾನಿ ಪರವಾಗಿವೆಯೆಂದು ದಾಖಲೆ ಬಿಡುಗಡೆ ಮಾಡಿದ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...