Homeಮುಖಪುಟಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ! ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

- Advertisement -
- Advertisement -

ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಆಚರಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಬಿಜೆಪಿ ಆಡಳಿತವಿರುವ ಗೋವಾ ರಾಜ್ಯವು ಭಾರೀ ಪ್ರಮಾಣದಲ್ಲಿ ಗೋಮಾಂಸದ ಕೊರತೆ ಅನುಭವಿಸುತ್ತಿದೆ. ಹಾಗಾಗಿ ಕೂಡಲೇ ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಇದಕ್ಕೆ ಕರ್ನಾಟಕ ಕಾಂಗ್ರೆಸ್ ತೀಕ್ಷ್ಣ ರೀತಿಯಲ್ಲಿ ಪ್ರತಿಕ್ರಿಯಿಸಿದೆ.

ಕರ್ನಾಟಕದ ಬಿಜೆಪಿ ಸರ್ಕಾರವು ಗೋಹತ್ಯೆ ನಿಷೇಧ ಮಸೂದೆ- 2020 ಅನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದೆ. ಹಾಗಾಗಿ ಕೆಲವೆಡೆ ಗೋಮಾಂಸದ ಮಾರಾಟ ಮತ್ತು ರಫ್ತು ನಿಲ್ಲಿಸಲಾಗಿದೆ. ಇದು ಗೋವಾ ರಾಜ್ಯದ ಮೇಲೆ ಪರಿಣಾಮ ಬೀರಿದೆ. ಗೋವಾದಲ್ಲಿ ಹಬ್ಬಗಳು ಆರಂಭವಾಗಿದ್ದು ಗೋಮಾಂಸ ಅವರ ಪ್ರಮುಖ ಖಾದ್ಯವಾಗಿದೆ. ಗೋಮಾಂಸ ಮಾರಾಟಗಾರರು ಬುಧವಾರ ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಹಾಗಾಗಿ ಕೂಡಲೇ ಕರ್ನಾಟಕದಿಂದ ಆಮದು ಮಾಡಿಕೊಳ್ಳಲು ವ್ಯವಸ್ಥೆ ಮಾಡುವುದಾಗಿ ಸಿಎಂ ಪ್ರಮೋದ್ ಸಾವಂತ್ ಗೋಮಾಂಸ ಮಾರಾಟಗಾರರಿಗೆ ಭರವಸೆ ನೀಡಿದ್ದಾರೆ.

ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ! ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ. ಗೋವಾದ ಬಿಜೆಪಿ ಸರ್ಕಾರ ಗೋಮಾಂಸದ ಕೊರತೆ ನೀಗಿಸಲು ರಾಜ್ಯದಿಂದಾಗುವ ಪೂರೈಕೆಯ ಕಡೆ ಆಸೆಯಿಂದ ನೋಡುತ್ತಿದೆ! ಇದಕ್ಕೆ ಬಿಜೆಪಿ ಕರ್ನಾಟಕದ
ಅಭಿಪ್ರಾಯ ಮತ್ತು ಉತ್ತರ ಏನು? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ.

ಬಿಜೆಪಿ ಆಳ್ವಿಕೆಯಿರುವ ಗೋವಾ ರಾಜ್ಯವು ಪ್ರತಿದಿನ ಸುಮಾರು 15-20 ಟನ್ ಗೋಮಾಂಸವನ್ನು ಬಳಸುತ್ತದೆ. ಅಲ್ಲಿ ಗೋಹತ್ಯೆ, ಗೋಮಾಂಸ ನಿಷೇಧವಿಲ್ಲ. ಆದರೆ ಕಳೆದ ನಾಲ್ಕು ವರ್ಷಗಳಿಂದ ರಾಜ್ಯ ಸರ್ಕಾರದ ಮಾಂಸ ಸಂಕೀರ್ಣವನ್ನು ಸ್ಥಗಿತಗೊಳಿಸಿದ್ದರಿಂದ, ರಾಜ್ಯದ ಗೋಮಾಂಸ ವ್ಯಾಪಾರಿಗಳು ಮುಖ್ಯವಾಗಿ ಕರ್ನಾಟಕದಿಂದ ಮಾಂಸವನ್ನು ಆಮದು ಮಾಡಿಕೊಳ್ಳುತ್ತಾರೆ.

“ಅಂಗಡಿಗಳನ್ನು ಮುಚ್ಚಲಾಗಿದೆ. ಆದಾಯವಿಲ್ಲ. ಸಾವಿರಾರು ಕಾರ್ಮಿಕರು ಮತ್ತು ಕುಟುಂಬಗಳು ಈ ವ್ಯಾಪಾರವನ್ನು ಅವಲಂಬಿಸಿವೆ. ಇದಲ್ಲದೆ, ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಬೇಕರಿಗಳಿವೆ. ಈ ಋತುವಿನಲ್ಲಿ ಮತ್ತು ಹೊಸ ವರ್ಷದಲ್ಲಿ ಪ್ರವಾಸಿಗರಿಂದ ಗೋಮಾಂಸಕ್ಕೆ ಸಾಕಷ್ಟು ಬೇಡಿಕೆಯಿದೆ” ಎಂದು ಸ್ಥಳೀಯರೊಬ್ಬರ ಹೇಳಿಕೆ ಉಲ್ಲೇಖಿಸಿ ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಕರ್ನಾಟಕದ ಮಾಂಸ ವ್ಯಾಪಾರಿಗಳ ಸಂಘವು ಯಾವ ಕ್ರಮ ತೆಗೆದುಕೊಳ್ಳುತ್ತದೆ ಎಂಬುದನ್ನು ನೋಡಲು ನಾವು ಕಾಯುತ್ತಿದ್ದೇವೆ. ಗೋವಾ ಸರ್ಕಾರ ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಪರಿಹರಿಸಬೇಕು. ಗೋವಾ ಗೋಮಾಂಸ ಪೂರೈಕೆಗಾಗಿ ಕರ್ನಾಟಕದ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ. ಆದರೆ ಒಂದು ವಾರದಿಂದ ನಾವು ಕರ್ನಾಟಕದಿಂದ ಮಾಂಸ ಅಥವಾ ಜಾನುವಾರುಗಳನ್ನು ಸ್ವೀಕರಿಸಿಲ್ಲ” ಎಂದು ಸ್ಥಳೀಯರು ತಿಳಿಸಿದ್ದಾರೆ.


ಇದನ್ನೂ ಓದಿ: ಕೃಷಿ ಕಾನೂನುಗಳು ಅದಾನಿ ಪರವಾಗಿವೆಯೆಂದು ದಾಖಲೆ ಬಿಡುಗಡೆ ಮಾಡಿದ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...