Homeಮುಖಪುಟಕಾಂಗ್ರೆಸ್‌ ಪತ್ರ ಬರೆದರೆ ಅಸ್ಸಾಂನಲ್ಲಿ ಗೋಮಾಂಸ ನಿಷೇಧ: ಮುಖ್ಯಮಂತ್ರಿ ಶರ್ಮಾ

ಕಾಂಗ್ರೆಸ್‌ ಪತ್ರ ಬರೆದರೆ ಅಸ್ಸಾಂನಲ್ಲಿ ಗೋಮಾಂಸ ನಿಷೇಧ: ಮುಖ್ಯಮಂತ್ರಿ ಶರ್ಮಾ

- Advertisement -
- Advertisement -

ಇತ್ತೀಚಿನ ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಮತದಾರರಿಗೆ ಗೋಮಾಂಸ ಹಂಚುತ್ತಿದೆ ಎಂಬ ಕಾಂಗ್ರೆಸ್‌ನ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಈ ಬಗ್ಗೆ ಕಾಂಗ್ರೆಸ್‌ ಪತ್ರ ಬರೆದರೆ ಅಸ್ಸಾಂನಲ್ಲಿ ಗೋಮಾಂಸ ನಿಷೇಧಿಸಲು ಸಿದ್ಧ ಎಂದು ಹೇಳಿದ್ದಾರೆ.

ಮುಸ್ಲಿಂ ಪ್ರಾಬಲ್ಯವಿರುವ ಸಮಗುರಿ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತದಾರರಿಗೆ ಗೋಮಾಂಸ ಹಂಚಿದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಕ್ಕೆ ಪ್ರತಿಕ್ರಿಯೆಯಾಗಿ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಈ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ಸಂಸದ ರಕಿಬುಲ್ ಹುಸೇನ್ ಕೂಡ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಲ್ಪಸಂಖ್ಯಾತ ಮತದಾರರನ್ನು ಬಿಜೆಪಿ ಪರವಾಗಿ ಸೆಳೆಯಲು ಗೋಮಾಂಸ ಕೂಟವನ್ನು ಆಯೋಜಿಸಿದ್ದರು ಎಂದು ಆರೋಪಿಸಿದ್ದಾರೆ.

“ಮತದಾರರಿಗೆ ದನದ ಮಾಂಸ ಕೊಡುವ ಮೂಲಕ ಸಮಗೂರಿಯನ್ನು ಕಾಂಗ್ರೆಸ್ ಗೆಲ್ಲಿಸುತ್ತಿದೆಯೇ ಎಂದು ನನಗೆ ತಿಳಿಯಬೇಕು. ಅವರಿಗೆ ಸಮಗೂರಿ ಚೆನ್ನಾಗಿ ತಿಳಿದಿದೆ. ಅಂದರೆ, ದನದ ಮಾಂಸವನ್ನು ನೀಡುವುದರ ಮೂಲಕ ಸಮಗೂರಿಯನ್ನು ಗೆಲ್ಲಬಹುದೇ” ಎಂದು ಶರ್ಮಾ ಪ್ರಶ್ನಿಸಿದ್ದಾರೆ.

ಅವರು ಅಧಿಕಾರದಲ್ಲಿದ್ದಾಗ ಅಸ್ಸಾಂನಲ್ಲಿ ಏಕೆ ಗೋಮಾಂಸವನ್ನು ನಿಷೇಧಿಸಲಿಲ್ಲ ಎಂದು ಶರ್ಮಾ ಕಾಂಗ್ರೆಸ್‌ಗೆ ಕೇಳಿದರು. ”ಗೋಮಾಂಸ ತಿನ್ನುವುದು ತಪ್ಪು ಎಂದು ರಾಕಿಬುಲ್ ಹುಸೇನ್ ಒಂದು ಒಳ್ಳೆಯ ಮಾತನ್ನು ಹೇಳಿದ್ದಾರೆ, ಅಲ್ಲವೇ?” ಎಂದು ಸಿಎಂ ಪ್ರಶ್ನಿಸಿದರು.

“ನಾನು ರಕಿಬುಲ್ ಹುಸೇನ್ ಅವರಿಗೆ ಗೋಮಾಂಸವನ್ನು ನಿಷೇಧಿಸಬೇಕು ಎಂದು ಹೇಳಲು ಬಯಸುತ್ತೇನೆ, ಅದು ತಪ್ಪು ಎಂದು ಅವರು ಹೇಳಿದರು. ಅವರು ನನಗೆ ಲಿಖಿತವಾಗಿ ನೀಡಬೇಕಾಗಿದೆ, ಬಿಜೆಪಿ ಅಥವಾ ಕಾಂಗ್ರೆಸ್ ಗೋಮಾಂಸದ ಬಗ್ಗೆ ಮಾತನಾಡಬಾರದು; ಅಸ್ಸಾಂನಲ್ಲಿ ಅದನ್ನು ನಿಷೇಧಿಸಬೇಕು. ನಾವು ಹಾಗೆ ಮಾಡಿದರೆ, ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು” ಎಂದು ಶರ್ಮಾ ಹೇಳಿದರು.

ಕಾಂಗ್ರೆಸ್ ಮುಖ್ಯಸ್ಥ ಬುಪೆನ್ ಕುಮಾರ್ ಬೋರಾ ಅವರಿಗೆ ಲಿಖಿತ ಮನವಿಯನ್ನು ಕಳುಹಿಸಿದರೆ ಇಡೀ ಈಶಾನ್ಯ ರಾಜ್ಯದಲ್ಲಿ ಗೋಮಾಂಸವನ್ನು ನಿಷೇಧಿಸಲು ಸಿದ್ಧ ಎಂದು ಶರ್ಮಾ ಹೇಳಿದರು. ವಿರೋಧ ಪಕ್ಷವು ವಿಷಯವನ್ನು ಎತ್ತಿದ್ದಕ್ಕೆ ನನಗೆ ಸಂತೋಷವಾಗಿದೆ ಎಂದರು.

“ನಾನು ಭೂಪೇನ್ ಬೋರಾ ಅವರಿಗೆ ಪತ್ರ ಬರೆದು, ರಕಿಬುಲ್ ಹುಸೇನ್ ಅವರಂತೆ ಗೋಮಾಂಸ ನಿಷೇಧವನ್ನು ಪ್ರತಿಪಾದಿಸುತ್ತೀರಾ ಎಂದು ಕೇಳುತ್ತೇನೆ. ನಾನು ಮುಂದಿನ ವಿಧಾನಸಭೆಯಲ್ಲಿ (ಅದರ ಪ್ರಕಾರ) ಗೋಮಾಂಸವನ್ನು ಸಂಪೂರ್ಣವಾಗಿ ನಿಷೇಧಿಸುತ್ತೇನೆ. ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಎಲ್ಲರೂ ಗೋಮಾಂಸ ತಿನ್ನುವುದನ್ನು ನಿಲ್ಲಿಸಬೇಕು. ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗುವುದು” ಎಂದು ಅವರು ಹೇಳಿದರು.

ಗಮನಾರ್ಹವಾಗಿ, ಗೋಮಾಂಸ ಸೇವನೆಯು ಅಸ್ಸಾಂನಲ್ಲಿ ಕಾನೂನುಬಾಹಿರವಲ್ಲ. ಆದರೆ 2021 ರ ಅಸ್ಸಾಂ ಗೋಸಂರಕ್ಷಣಾ ಕಾಯಿದೆಯು ಹಿಂದೂಗಳು, ಜೈನರು ಮತ್ತು ಸಿಖ್ಖರು ಬಹುಸಂಖ್ಯಾತರಾಗಿರುವ ಪ್ರದೇಶಗಳಲ್ಲಿ ಮತ್ತು ದೇವಾಲಯ ಅಥವಾ ಸತ್ರದ ಐದು ಕಿಮೀ ವ್ಯಾಪ್ತಿಯೊಳಗೆ ಗೋಹತ್ಯೆ ಮತ್ತು ಗೋಮಾಂಸ ಮಾರಾಟವನ್ನು ನಿಷೇಧಿಸುತ್ತದೆ.

ಇದನ್ನೂ ಓದಿ; ಫೆಂಗಲ್ ಚಂಡಮಾರುತ ಪರಿಣಾಮ: ಭಾರೀ ಮಳೆಯಿಂದ ಪುದುಚೇರಿಯಲ್ಲಿ ಜನಜೀವನ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...