Homeಕರ್ನಾಟಕಬಿಯರ್ ಮೇಲೆ ಮತ್ತೆ 10% ಅಬಕಾರಿ ಸುಂಕ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ; 4 ತಿಂಗಳಲ್ಲಿ...

ಬಿಯರ್ ಮೇಲೆ ಮತ್ತೆ 10% ಅಬಕಾರಿ ಸುಂಕ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ; 4 ತಿಂಗಳಲ್ಲಿ ಎರಡನೇ ಬಾರಿ ಏರಿಕೆ!

- Advertisement -
- Advertisement -

ಕಳೆದ ನಾಲ್ಕು ತಿಂಗಳಲ್ಲಿ ಎರಡನೇ ಬಾರಿಗೆ ರಾಜ್ಯ ಸರ್ಕಾರ ಬಿಯರ್ ಬೆಲೆಯನ್ನು ಹೆಚ್ಚಿಸುವುದಾಗಿ ಪ್ರಸ್ತಾಪಿಸಿದೆ. ಸರ್ಕಾರವು ತನ್ನ ಕರಡು ಅಧಿಸೂಚನೆಯಲ್ಲಿ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (AED) ಶೇಕಡಾ 10 ರಷ್ಟು ಹೆಚ್ಚಿಸಲು ಪ್ರಸ್ತಾಪಿಸಿದ್ದು, ಇದರಿಂದಾಗಿ ಬಿಯರ್ ಬೆಲೆಯಲ್ಲಿ ಪ್ರತಿ ಬಾಟಲಿಗೆ 50 ರೂ.ಗಳವರೆಗೆ ಹೆಚ್ಚಳವಾಗಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಬಿಯರ್ ಮೇಲೆ ಮತ್ತೆ

ಕರ್ನಾಟಕದಲ್ಲಿ ತಯಾರಿಸಲಾದ ಅಥವಾ ರಾಜ್ಯಕ್ಕೆ ಆಮದು ಮಾಡಿಕೊಳ್ಳುವ ಬಾಟಲ್ ಬಿಯರ್ ಮೇಲಿನ ಎಇಡಿಯನ್ನು 195%ದಿಂದ 205%ಕ್ಕೆ ಅಂದರೆ 10%ದಷ್ಟು ಹೆಚ್ಚಿಸಲಾಗುವುದು ಎಂದು ಕರಡು ಅಧಿಸೂಚನೆ ಹೇಳಿದೆ ಎಂದು ಅವರು ಹೇಳಿದ್ದಾರೆ.

ಕಡಿಮೆ ಬೆಲೆಯ ಬಿಯರ್‌ಗಳಿಗೆ ನಿಗದಿತ 130 ರೂ.ಗಳ ಅಬಕಾರಿ ಸುಂಕವನ್ನು ತೆಗೆದುಹಾಕಲು ಸರ್ಕಾರ ನಿರ್ಧರಿಸಿದೆ ಮತ್ತು ಮುಂದುವರಿಯುತ್ತಾ, ಎಲ್ಲಾ ಬಿಯರ್ ಬ್ರಾಂಡ್‌ಗಳಿಗೆ 205 ಪ್ರತಿಶತ ಎಇಡಿ ಅನ್ವಯಿಸುತ್ತದೆ ಎಂದು ಅದು ಹೇಳಿದೆ.

ನೆರೆಯ ರಾಜ್ಯಗಳಲ್ಲಿನ ಬಿಯರ್ ಬೆಲೆಗಳನ್ನು ಆಧರಿಸಿ ಹೆಚ್ಚಳವನ್ನು ನಿರ್ಧರಿಸಲಾಗಿದೆ ಎಂದು ಹಣಕಾಸು ಇಲಾಖೆಯ ಮೂಲಗಳು ಹೇಳಿದೆ ಎಂದು ಡೆಕ್ಕನ್ ಹೆರಾಲ್ಡ್ ತಿಳಿಸಿವೆ.

“ನಮ್ಮ ನೆರೆಯ ರಾಜ್ಯಗಳಲ್ಲಿ ಹೆಚ್ಚಿನ ಬಿಯರ್ ಬೆಲೆಗಳು ನಮ್ಮದಕ್ಕಿಂತ ಹೆಚ್ಚಾಗಿದೆ. ಆದ್ದರಿಂದ, ಬೆಲೆಗಳನ್ನು ಹೆಚ್ಚಿಸುವ ಮೂಲಕ ಆದಾಯವನ್ನು ಹೆಚ್ಚಿಸುವ ಸಾಧ್ಯತೆಯಿದೆ” ಎಂದು ಅಧಿಕಾರಿಗಳಲ್ಲಿ ಒಬ್ಬರು ಹೇಳಿದ್ದಾರೆ. ಆದಾಗ್ಯೂ, ಬೆಲೆಗಳಲ್ಲಿ ಸತತ ಏರಿಕೆ ಕಂಡುಬಂದಿರುವುದರಿಂದ ಸರ್ಕಾರವು ಬಿಯರ್ ಬೆಲೆಗಳನ್ನು ಶೀಘ್ರದಲ್ಲೇ ಮತ್ತೆ ಹೆಚ್ಚಿಸದಿರಲು ಕೂಡಾ ಸಾಧ್ಯತೆಯಿದೆ ಅಧಿಕಾರಿ ಹೇಳಿದ್ದಾರೆ.

ಬೆಲೆಯಲ್ಲಿನ ನಿಖರವಾದ ಹೆಚ್ಚಳವು ಬ್ರ್ಯಾಂಡ್ ಅನ್ನು ಅವಲಂಬಿಸಿರುತ್ತದೆ, ಆದರೆ ಈ ಏರಿಕೆಯು ಮಾರಾಟದಲ್ಲಿ ಇಳಿಕೆಗೆ ಕಾರಣವಾಗಬಹುದು ಎಂದು ಮಾರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

“ಈಗಾಗಲೇ, ಹಿಂದಿನ ದರಗಳ ಹೆಚ್ಚಳದೊಂದಿಗೆ, ಮಾರಾಟವು ಗಮನಾರ್ಹವಾಗಿ ಕಡಿಮೆಯಾಗಿದೆ. ಬೇಸಿಗೆಯಲ್ಲಿ, ಬಿಯರ್ ಮಾರಾಟವು ಸಾಮಾನ್ಯವಾಗಿ ಹೆಚ್ಚಾಗಿರುತ್ತದೆ. ಆದರೆ ಈ ವರ್ಷ, ಹಾಗಲ್ಲ. ಮಾರಾಟದಲ್ಲಿ ಗಮನಾರ್ಹ ಇಳಿಕೆಯಾಗಿದೆ” ಎಂದು ಉತ್ತರ ಬೆಂಗಳೂರಿನ ವೈನ್ ಸ್ಟೋರ್‌ ಮಾಲೀಕರು ಹೇಳಿದ್ದಾರೆ.

ಮಂಗಳವಾರ ಕರಡು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ಏಳು ದಿನಗಳಲ್ಲಿ ಅಧಿಸೂಚನೆಯ ವಿರುದ್ಧ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ವರದಿ ಸೂಚಿಸಿದೆ. ಜನವರಿಯಲ್ಲಿ, ಸರ್ಕಾರವು ಬಿಯರ್ ಮೇಲಿನ ಎಇಡಿಯನ್ನು ಶೇಕಡಾ 185 ರಿಂದ ಶೇಕಡಾ 195 ಕ್ಕೆ ಹೆಚ್ಚಿಸಿತ್ತು. ಬಿಯರ್ ಮೇಲೆ ಮತ್ತೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ | ಬಿಸಿಯೂಟ ಸೇವಿಸಿ 100 ಮಕ್ಕಳು ಅಸ್ವಸ್ಥ; ಸತ್ತ ಹಾವನ್ನು ಹೊರತೆಗೆದು ಊಟ ಬಡಿಸಿರುವ ಆರೋಪ

ಬಿಹಾರ | ಬಿಸಿಯೂಟ ಸೇವಿಸಿ 100 ಮಕ್ಕಳು ಅಸ್ವಸ್ಥ; ಸತ್ತ ಹಾವನ್ನು ಹೊರತೆಗೆದು ಊಟ ಬಡಿಸಿರುವ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...