Homeಕರ್ನಾಟಕಮುರುಘಾ ಶರಣರಿಗೆ ತಕ್ಕ ಶಿಕ್ಷೆಯಾಗಲಿ: ಬಿ.ಎಸ್‌.ಯಡಿಯೂರಪ್ಪ ಆಗ್ರಹ

ಮುರುಘಾ ಶರಣರಿಗೆ ತಕ್ಕ ಶಿಕ್ಷೆಯಾಗಲಿ: ಬಿ.ಎಸ್‌.ಯಡಿಯೂರಪ್ಪ ಆಗ್ರಹ

- Advertisement -
- Advertisement -

“ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ತಕ್ಕ ಶಿಕ್ಷೆಯಾಗಬೇಕು. ಅವರು ಕ್ಷಮಿಸಲಾರದ ತಪ್ಪು ಮಾಡಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ, ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಶರಣರ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗ, “ಕ್ಷಮಿಸಲಾರದ ಅಕ್ಷಮ್ಯ ಅಪರಾಧವನ್ನು ಮುರುಘಾ ಶರಣರು ಮಾಡಿರುವುದು ಜಗತ್ತಿಗೆ ಗೊತ್ತಿರುವ ವಿಷಯ. ಈ ಕೆಳಮಟ್ಟಕ್ಕೆ ಅವರು ಇಳಿಯುತ್ತಾರೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು, ಅವರಿಗೆ ತಕ್ಕ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಪೋಕ್ಸೋ ಪ್ರಕರಣ ಮರುಘಾ ಶರಣರ ವಿರುದ್ಧ ದಾಖಲಾದಾಗ ಬಿಜೆಪಿಯ ಕೆಲ ನಾಯಕರು, “ಶರಣರು ತಪ್ಪು ಮಾಡಿಲ್ಲ, ತನಿಖೆಯಾಗಲಿ” ಎಂದು ಹೇಳಿಕೆಗಳನ್ನು ನೀಡಿದ್ದರು. ಕಾಂಗ್ರೆಸ್ ನಾಯಕರು ಕೂಡ ಮೌನ ವಹಿಸಿದ್ದರು.

ಮುರುಘಾ ಶರಣರ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಒಟ್ಟು 694 ಪುಟಗಳ ಚಾರ್ಜ್ ಶೀಟ್‌ನಲ್ಲಿ ಮಠದಲ್ಲಿ ನಡೆಯುತ್ತಿದೆ ಎನ್ನಲಾದ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ.

ಪ್ರಕರಣದ ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆ ಅಡಿಯಲ್ಲೂ ಕೇಸ್ ದಾಖಲಾಗಿದ್ದು, 342 ಪುಟಗಳ 2 ಸೆಟ್‌ನಂತೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಶಿವಮೂರ್ತಿ ಮುರುಘಾ ಶರಣರು, ಮಹಿಳಾ ವಾರ್ಡನ್ (ರಶ್ಮಿ), ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಮಠದ ಉತ್ತರಾಧಿಕಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದರೆ ವಕೀಲ ಗಂಗಾಧರಯ್ಯ ಅವರು ಪ್ರಕರಣದಲ್ಲಿ ಭಾಗಿಯಾಗಿರುವ ಮಾಹಿತಿ ಇಲ್ಲ, ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಲೇಡಿ ವಾರ್ಡನ್ ಮೂಲಕ ಮಕ್ಕಳನ್ನು ಕರೆಸಿಕೊಳ್ಳುತ್ತಿದ್ದ ಮರುಘಾ ಶರಣರು, ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮತ್ತು ಬರುವ ಔಷಧಿ ಬೆರೆಸಿದ ಸೇಬು, ಚಾಕಲೇಟ್ ನೀಡಿ ಮಕ್ಕಳನ್ನು ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಂಡಿದ್ದರು. ಕಚೇರಿ, ಬೆಡ್ ರೂಂ, ಬಾತ್ ರೂಂಗೆ ಕರೆದೊಯ್ದು ಬಲಾತ್ಕಾರ ಮಾಡುತ್ತಿದ್ದರು. ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿದ್ದರು. ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ ಎಂದು ಚಾರ್ಜ್ ಶೀಟ್ ನಲ್ಲಿ ಆರೋಪಿಸಲಾಗಿದೆ.

ಶರಣರ ಆಣತಿಯಂತೆ ಮಠದ ವಾರ್ಡನ್ ರಶ್ಮಿ, ಮಕ್ಕಳನ್ನು ಸ್ವಾಮೀಜಿಯ ಕೊಠಡಿಗೆ ಕಳುಹಿಸಿಕೊಡುತ್ತಿದ್ದರು. ಅಲ್ಲದೆ ಈ ವಿಚಾರ ಹೊರಗೆ ಬಾಯಿ ಬಿಡದಂತೆ ವಿದ್ಯಾರ್ಥಿನಿಯರಿಗೆ ಹೆದರಿಸುತ್ತಿದ್ದರು ಎಂದು ತಿಳಿದುಬಂದಿದೆ.

ಅಲ್ಲದೇ ಕೆಲ ವರ್ಷದ ಹಿಂದೆ ಓರ್ವ ಬಾಲಕಿಯ ರೇಪ್ ಅಂಡ್ ಮರ್ಡರ್ ಸಹ ಆಗಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ಪಡೆದು, ಆಂಧ್ರ ಪ್ರದೇಶಕ್ಕೆ ತೆರಳಿದ್ದ ಪೊಲೀಸ್ ತಂಡ ಹಲವು ಮಾಹಿತಿಗಳನ್ನ ಕಲೆ ಹಾಕಿದೆ. ಮಠದ ಹಾಸ್ಟೆಲ್‌ನಲ್ಲಿದ್ದ ಮತ್ತಷ್ಟು ಮಕ್ಕಳ ವಿಚಾರಣೆ ನಡೆಸಲಾಗುತ್ತಿದ್ದು, ಮುರುಘಾ ಶರಣರ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನ್ಯ ಮಾಜಿ ಮುಖ್ಯಮಂತ್ರಿಗಳಿಗೆ ಈಗ ಅರಿವಾಗಿರಬೇಕು, ತಮ್ಮ ಸ್ವಜಾತಿ ಪ್ರೇಮ ಮತ್ತು ಸ್ವಜನಪಕ್ಷಪಾತ ,ಸಾರ್ವಜನಿಕ ಬದುಕಿನಲ್ಲಿರುವ ವ್ಯಕ್ತಿಗಳು ಯಾವುದೇ ಪ್ರಕರಣದ ಪೂರ್ಣ ಮಾಹಿತಿ ಇಲ್ಲದೆ ನೀಡುವ ಪೂರ್ವಬಾವಿ ಹೇಳಿಕೆಗಳು ಎಷ್ಟು ಮುಜುಗರ ಉಂಟು ಮಾಡುತ್ತವೆ ಎಂದು, ಕನಿಷ್ಟ ಈಗಲಾದರೂ ಸರಿಯಾದ ಹೇಳಿಕೆ ನೀಡಿದ್ದಿರ.

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....