Homeಮುಖಪುಟಬಿಹಾರದಲ್ಲಿ ಗರಿಗೆದರಿದ ಚುನಾವಣಾ ರಂಗು: ಐವರು ಆರ್‌ಜೆಡಿ ಎಂಎಲ್‌ಸಿಗಳ ಪಕ್ಷಾಂತರ!

ಬಿಹಾರದಲ್ಲಿ ಗರಿಗೆದರಿದ ಚುನಾವಣಾ ರಂಗು: ಐವರು ಆರ್‌ಜೆಡಿ ಎಂಎಲ್‌ಸಿಗಳ ಪಕ್ಷಾಂತರ!

- Advertisement -
- Advertisement -

ಎಲ್ಲಾ ರಾಜ್ಯಗಳು ಕೊರೊನಾ ತಡೆಗಟ್ಟುವ ಕುರಿತು ಯೋಚಿಸುತ್ತಿದ್ದಾರೆ ಬಿಹಾರ ಮಾತ್ರ ಚುನಾವಣೆ ಬಗ್ಗೆ ಮಾತಾಡುತ್ತಿದೆ ಎಂದು ಕಳೆದ ವಾರ ಚುನಾವನಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಆರೋಪಿಸಿದ್ದರು. ಅದನ್ನು ನಿಜಮಾಡಲು ಬಿಹಾರದ ಕೆಲ ರಾಜಕಾರಣಿಗಳು ಮುಂದಾಗಿದ್ದಾರೆ. ಕಳೆದ ವಾರವೆಲ್ಲಾ ಬಿಜೆಪಿ ಪಕ್ಷವು ವರ್ಚುವಲ್ ರ್‍ಯಾಲಿಗಳನ್ನು ನಡೆಸಿ ಸದ್ದು ಮಾಡಿದ್ದರೆ ನಂತರ ಬಿಹಾರಿ ರೆಜೆಮೆಂಟ್‌ ಸೈನಿಕರು ಲಡಾಖ್ ಗಡಿಯಲ್ಲಿ ಸಾವನಪ್ಪಿದರೆ ಅವರನ್ನು ಬಿಹಾರ ಸೈನಿಕರು ಎಂದು ಕರೆದು ಬಿಜೆಪಿಗರು ಟ್ರೋಲ್‌ಗೆ ಒಳಗಾಗಿದ್ದರು. ಈಗ ಆರ್‌ಜೆಡಿ ಪಕ್ಷದ ಐವರು ಎಂಎಲ್‌ಸಿಗಳು ಜೆಡಿ(ಯು)ಗೆ ಪಕ್ಷಾಂತರ ಮಾಡಿ ಸುದ್ದಿಯಾಗಿದ್ದಾರೆ.

ಆರ್‌ಜೆಡಿಯ ಸ್ಥಾಪಕ ಸದಸ್ಯರಲ್ಲೊಬ್ಬರಾದ ಮತ್ತು ಸದ್ಯಕ್ಕೆ ಜೈಲುವಾಸದಲ್ಲಿರುವ ಲಾಲು ಪ್ರಸಾದ್ ಅವರ ತೀವ್ರ ಬೆಂಬಲಿಗರಾದ ಮಾಜಿ ಕೇಂದ್ರ ಸಚಿವ ರಘುವನ್ಶ್ ಪ್ರಸಾದ್ ಸಿಂಗ್ ಅವರು ತಮ್ಮ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಂತರ ಈ ಬೆಳವಣಿಗೆ ಸಂಭವಿಸಿದೆ.

ಐದು ಎಂಎಲ್‌ಸಿಗಳಾದ ಎಸ್ಎಂ ಕಮರ್ ಆಲಂ, ಸಂಜಯ್ ಪ್ರಸಾದ್, ರಾಧಾ ಚರಣ್ ಸೇಠ್, ರಣವಿಜಯ್ ಕುಮಾರ್ ಸಿಂಗ್ ಮತ್ತು ದಿಲೀಪ್ ರಾಯ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ದ್ವಿಪಕ್ಷೀಯ ಶಾಸಕಾಂಗದ ಮೇಲ್ಮನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅವರನ್ನು ಪ್ರತ್ಯೇಕ ಗುಂಪು ಎಂದು ಪರಿಗಣಿಸಿ ಜೆಡಿಯು ಜೊತೆ ವಿಲೀನಗೊಳ್ಳಲು ಅವಕಾಶ ನೀಡುವಂತೆ ಅವರು ಸಿಂಗ್ ಅವರನ್ನು ವಿನಂತಿಸಿದರು. ಮೇಲ್ಮನೆಯ ಜೆಡಿಯು ನಾಯಕ ರೀನಾ ಯಾದವ್ ಅವರು ಪಕ್ಷದ ಒಪ್ಪಿಗೆಯ ಪತ್ರದೊಂದಿಗೆ ಆಗಮಿಸಿದರು ಮತ್ತು ಕಾರ್ಯಕಾರಿ ಅಧ್ಯಕ್ಷರು ತಮ್ಮ ತ್ವರಿತ ಅನುಮೋದನೆಯನ್ನು ನೀಡಿದರು ಎನ್ನಲಾಗಿದೆ. ಜೆಡಿಯು ರಾಜ್ಯ ಸರ್ಕಾರದಲ್ಲಿ ಬಿಜೆಪಿ ಮಿತ್ರ ಪಕ್ಷವಾಗಿದೆ.

ಈ ಬೆಳವಣಿಗೆಯಿಂದ 75 ಸದಸ್ಯರ ವಿಧಾನ ಪರಿಷತ್‌ನಲ್ಲಿ ಆರ್‌ಜೆಡಿ ಪಕ್ಷದ ಬಲವನ್ನು ಕೇವಲ ಮೂರಕ್ಕೆ ಇಳಿಸಿತು. ಇದರಿಂದಾಗಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಪತ್ನಿ ರಾಬ್ರಿ ದೇವಿ ಅವರು ಸದನದಲ್ಲಿ ಪ್ರತಿಪಕ್ಷದ ನಾಯಕರ ತಮ್ಮ ಸ್ಥಾನವನ್ನು ಕಳೆದುಕೊಳ್ಳಬಹುದು ಎಂದು ಎನ್‌ಡಿಎ ಮೂಲಗಳು ಹೇಳಿವೆ.

ನಿಯಮಗಳ ಪ್ರಕಾರ, ಮುಖ್ಯ ವಿರೋಧ ಪಕ್ಷವು ತನ್ನ ನಾಯಕನಿಗೆ ಕ್ಯಾಬಿನೆಟ್ ಮಂತ್ರಿ ಸ್ಥಾನದ ಪ್ರತಿಪಕ್ಷದ ನಾಯಕ ಹುದ್ದೆಗೆ ಅರ್ಹತೆ ಪಡೆಯಲು ಸದನದ ಒಟ್ಟು ಸ್ಥಾನಗಳಲ್ಲಿ ಕನಿಷ್ಠ 10% ಹೊಂದಿರಬೇಕು.


ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಹಸ್ತ: ಸರ್ಕಾರ ಉಳಿಸಿಕೊಳ್ಳಲು CBI ಅಸ್ತ್ರ ಬಳಸಿತೇ BJP? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...