Homeಮುಖಪುಟಬಿಹಾರದಲ್ಲಿ ಗರಿಗೆದರಿದ ಚುನಾವಣಾ ರಂಗು: ಐವರು ಆರ್‌ಜೆಡಿ ಎಂಎಲ್‌ಸಿಗಳ ಪಕ್ಷಾಂತರ!

ಬಿಹಾರದಲ್ಲಿ ಗರಿಗೆದರಿದ ಚುನಾವಣಾ ರಂಗು: ಐವರು ಆರ್‌ಜೆಡಿ ಎಂಎಲ್‌ಸಿಗಳ ಪಕ್ಷಾಂತರ!

- Advertisement -
- Advertisement -

ಎಲ್ಲಾ ರಾಜ್ಯಗಳು ಕೊರೊನಾ ತಡೆಗಟ್ಟುವ ಕುರಿತು ಯೋಚಿಸುತ್ತಿದ್ದಾರೆ ಬಿಹಾರ ಮಾತ್ರ ಚುನಾವಣೆ ಬಗ್ಗೆ ಮಾತಾಡುತ್ತಿದೆ ಎಂದು ಕಳೆದ ವಾರ ಚುನಾವನಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಆರೋಪಿಸಿದ್ದರು. ಅದನ್ನು ನಿಜಮಾಡಲು ಬಿಹಾರದ ಕೆಲ ರಾಜಕಾರಣಿಗಳು ಮುಂದಾಗಿದ್ದಾರೆ. ಕಳೆದ ವಾರವೆಲ್ಲಾ ಬಿಜೆಪಿ ಪಕ್ಷವು ವರ್ಚುವಲ್ ರ್‍ಯಾಲಿಗಳನ್ನು ನಡೆಸಿ ಸದ್ದು ಮಾಡಿದ್ದರೆ ನಂತರ ಬಿಹಾರಿ ರೆಜೆಮೆಂಟ್‌ ಸೈನಿಕರು ಲಡಾಖ್ ಗಡಿಯಲ್ಲಿ ಸಾವನಪ್ಪಿದರೆ ಅವರನ್ನು ಬಿಹಾರ ಸೈನಿಕರು ಎಂದು ಕರೆದು ಬಿಜೆಪಿಗರು ಟ್ರೋಲ್‌ಗೆ ಒಳಗಾಗಿದ್ದರು. ಈಗ ಆರ್‌ಜೆಡಿ ಪಕ್ಷದ ಐವರು ಎಂಎಲ್‌ಸಿಗಳು ಜೆಡಿ(ಯು)ಗೆ ಪಕ್ಷಾಂತರ ಮಾಡಿ ಸುದ್ದಿಯಾಗಿದ್ದಾರೆ.

ಆರ್‌ಜೆಡಿಯ ಸ್ಥಾಪಕ ಸದಸ್ಯರಲ್ಲೊಬ್ಬರಾದ ಮತ್ತು ಸದ್ಯಕ್ಕೆ ಜೈಲುವಾಸದಲ್ಲಿರುವ ಲಾಲು ಪ್ರಸಾದ್ ಅವರ ತೀವ್ರ ಬೆಂಬಲಿಗರಾದ ಮಾಜಿ ಕೇಂದ್ರ ಸಚಿವ ರಘುವನ್ಶ್ ಪ್ರಸಾದ್ ಸಿಂಗ್ ಅವರು ತಮ್ಮ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಂತರ ಈ ಬೆಳವಣಿಗೆ ಸಂಭವಿಸಿದೆ.

ಐದು ಎಂಎಲ್‌ಸಿಗಳಾದ ಎಸ್ಎಂ ಕಮರ್ ಆಲಂ, ಸಂಜಯ್ ಪ್ರಸಾದ್, ರಾಧಾ ಚರಣ್ ಸೇಠ್, ರಣವಿಜಯ್ ಕುಮಾರ್ ಸಿಂಗ್ ಮತ್ತು ದಿಲೀಪ್ ರಾಯ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ದ್ವಿಪಕ್ಷೀಯ ಶಾಸಕಾಂಗದ ಮೇಲ್ಮನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅವರನ್ನು ಪ್ರತ್ಯೇಕ ಗುಂಪು ಎಂದು ಪರಿಗಣಿಸಿ ಜೆಡಿಯು ಜೊತೆ ವಿಲೀನಗೊಳ್ಳಲು ಅವಕಾಶ ನೀಡುವಂತೆ ಅವರು ಸಿಂಗ್ ಅವರನ್ನು ವಿನಂತಿಸಿದರು. ಮೇಲ್ಮನೆಯ ಜೆಡಿಯು ನಾಯಕ ರೀನಾ ಯಾದವ್ ಅವರು ಪಕ್ಷದ ಒಪ್ಪಿಗೆಯ ಪತ್ರದೊಂದಿಗೆ ಆಗಮಿಸಿದರು ಮತ್ತು ಕಾರ್ಯಕಾರಿ ಅಧ್ಯಕ್ಷರು ತಮ್ಮ ತ್ವರಿತ ಅನುಮೋದನೆಯನ್ನು ನೀಡಿದರು ಎನ್ನಲಾಗಿದೆ. ಜೆಡಿಯು ರಾಜ್ಯ ಸರ್ಕಾರದಲ್ಲಿ ಬಿಜೆಪಿ ಮಿತ್ರ ಪಕ್ಷವಾಗಿದೆ.

ಈ ಬೆಳವಣಿಗೆಯಿಂದ 75 ಸದಸ್ಯರ ವಿಧಾನ ಪರಿಷತ್‌ನಲ್ಲಿ ಆರ್‌ಜೆಡಿ ಪಕ್ಷದ ಬಲವನ್ನು ಕೇವಲ ಮೂರಕ್ಕೆ ಇಳಿಸಿತು. ಇದರಿಂದಾಗಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಪತ್ನಿ ರಾಬ್ರಿ ದೇವಿ ಅವರು ಸದನದಲ್ಲಿ ಪ್ರತಿಪಕ್ಷದ ನಾಯಕರ ತಮ್ಮ ಸ್ಥಾನವನ್ನು ಕಳೆದುಕೊಳ್ಳಬಹುದು ಎಂದು ಎನ್‌ಡಿಎ ಮೂಲಗಳು ಹೇಳಿವೆ.

ನಿಯಮಗಳ ಪ್ರಕಾರ, ಮುಖ್ಯ ವಿರೋಧ ಪಕ್ಷವು ತನ್ನ ನಾಯಕನಿಗೆ ಕ್ಯಾಬಿನೆಟ್ ಮಂತ್ರಿ ಸ್ಥಾನದ ಪ್ರತಿಪಕ್ಷದ ನಾಯಕ ಹುದ್ದೆಗೆ ಅರ್ಹತೆ ಪಡೆಯಲು ಸದನದ ಒಟ್ಟು ಸ್ಥಾನಗಳಲ್ಲಿ ಕನಿಷ್ಠ 10% ಹೊಂದಿರಬೇಕು.


ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಹಸ್ತ: ಸರ್ಕಾರ ಉಳಿಸಿಕೊಳ್ಳಲು CBI ಅಸ್ತ್ರ ಬಳಸಿತೇ BJP? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...