Homeಮುಖಪುಟಚುನಾವಣೆಗೆ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಹೇಳಿದ್ದು ನಿಜವಾಗಿದೆ: ಅಕ್ಕಿ ಕಡಿತದ ಕುರಿತು...

ಚುನಾವಣೆಗೆ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಹೇಳಿದ್ದು ನಿಜವಾಗಿದೆ: ಅಕ್ಕಿ ಕಡಿತದ ಕುರಿತು ಡಿಕೆಶಿ ಪ್ರತಿಕ್ರಿಯೆ

- Advertisement -
- Advertisement -

ಕೇಂದ್ರ ಸರ್ಕಾರ ಎಫ್‌ಸಿಐ ಮೂಲಕ ಅಕ್ಕಿ ನೀಡಲು ಹಿಂದೇಟು ಹಾಕುತ್ತಿದೆ ಎಂದು ಸಿಎಂ ಸಿದ್ದರಾಮಯ್ಯನವರು ಆರೋಪಿಸಿದ ಬೆನ್ನಲ್ಲೇ, ಚುನಾವಣೆಗೆ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಹೇಳಿದ್ದು ನಿಜವಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

“ಚುನಾವಣೆಗೆ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದಾವರು ‘ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದಿಂದ ಬರುವ ಎಲ್ಲಾ ಯೋಜನೆಗಳನ್ನು ಕಡಿತಗೊಳಿಸಲಾಗುವುದು’ ಎಂದು ಹೇಳಿದ್ದರು. ಈಗ ಅದನ್ನೇ ಮಾಡುತ್ತಿದ್ದಾರೆ. ಇದನ್ನು ರಾಜಕೀಯ ಎಂದು ನಾನು ಈಗ ವ್ಯಾಖ್ಯಾನ ಮಾಡಲು ಹೋಗುವುದಿಲ್ಲ. ಬಿಜೆಪಿಯವರು ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಅವರು ಟೀಕೆ ಮಾಡಲಿ. ಅದಕ್ಕೂ ಮುನ್ನ ಬಿಜೆಪಿ ನಾಯಕರು ನಡ್ಡಾ ಅವರ ಹೇಳಿಕೆ ಬಗ್ಗೆ ಉತ್ತರ ನೀಡಲಿ” ಎಂದು ಡಿಕೆಶಿ ಹೇಳಿದ್ದಾರೆ.

ನಮ್ಮ ಸರ್ಕಾರದ ಅನ್ನಭಾಗ್ಯ ಯೋಜನೆಗಾಗಿ ಹೆಚ್ಚುವರಿ ತಲಾ 5 ಕೆ.ಜಿ ಅಕ್ಕಿ ವಿತರಣೆಗಾಗಿ ತಿಂಗಳಿಗೆ 2.28 ಲಕ್ಷ ಟನ್ ಅಕ್ಕಿ ನೀಡಲು ಒಪ್ಪಿದ್ದ ಭಾರತೀಯ ಆಹಾರ ನಿಗಮ ಈಗ ಹಿಂದೇಟು ಹಾಕಿದೆ. ನರೇಂದ್ರ ಮೋದಿ
ನೇತೃತ್ವದ ಭಾರತ ಸರ್ಕಾರವು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ರಾಜ್ಯಕ್ಕೆ ಅಕ್ಕಿ ಮಾರಾಟವನ್ನು ನಿಲ್ಲಿಸಲು ಎಫ್‌ಸಿಐಗೆ ಪತ್ರ ಬರೆದಿದೆ. ಇದಕ್ಕೆ ಬಿಜೆಪಿಯ ಬಡವರ ವಿರೋಧಿ ಧೋರಣೆಯೇ ಕಾರಣ. ಈ ಸಂಬಂಧ ಕೇಂದ್ರಕ್ಕೆ ಪ್ರತಿಭಟನಾ ಪತ್ರ ಬರೆಯಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಬಿಜೆಪಿಯನ್ನು ಅಧಿಕಾರಕ್ಕೆ ತರದಿದ್ದರೆ ಎಲ್ಲಾ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿ ನಾಯಕರು ಚುನಾವಣಾ ಸಮಯದಲ್ಲಿ ಕನ್ನಡಿಗರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದರು. ಎಫ್‌ಸಿಐಗೆ ಈ ಪತ್ರವು ಅದರ ಫಲಿತಾಂಶವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರವು ಜೂನ್ 9, 2023 ರಂದು ರಾಜ್ಯಕ್ಕೆ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದೆ ಎಂದು ಭಾರತೀಯ ಆಹಾರ ನಿಗಮದ ಉಪ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆದಿತ್ತು. ಭಾರತೀಯ ಆಹಾರ ನಿಗಮವು ರಾಜ್ಯದ ಮನವಿಯನ್ನು ಸ್ವೀಕರಿಸಿದೆ ಮತ್ತು ಜೂನ್ 12, 2023 ರ ದಿನಾಂಕದ ಪತ್ರದಲ್ಲಿ ರೂ. 3400/- ಪ್ರತಿ ಕ್ವಿಂಟಲ್ ದರದಲ್ಲಿ ಅಕ್ಕಿ ನೀಡಲು ಒಪ್ಪಿಗೆ ನೀಡಿತ್ತು. ಆದರೆ ಜೂನ್ 13 ರಂದು ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳಿಗೆ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಮಾರದಂತೆ ನಿರ್ಬಂಧ ಹೇರಿದೆ ಎಂದು ಕಿಡಿಕಾರಿದ್ದಾರೆ.

”ಭಾರತೀಯ ಆಹಾರ ನಿಗಮವು 7 ಲಕ್ಷ ಟನ್ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎನ್ನುತ್ತಿದೆ. ಅನ್ನಭಾಗ್ಯ ಯೋಜನೆಯಿಂದ ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ಬರುತ್ತದೆ. ಬಡವರ ಕಲ್ಯಾಣ ಆಗುತ್ತದೆ. ಅದನ್ನು ತಪ್ಪಿಸಬೇಕು ಎಂದೇ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ” ಎಂದು ಹೇಳಿದರು.

ನಿಗಮವು ನಮಗೆ ಅಕ್ಕಿ ಕೊಡುವುದಾಗಿ ತಿಳಿಸಿದ್ದರಿಂದಲೇ ನಾವು ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದೆವು. ಈಗ ಕೊಡುವುದಿಲ್ಲ ಎನ್ನುತ್ತಿದೆ. ಬೇರೆ ರಾಜ್ಯಗಳಿಂದ ಖರೀದಿಸಬೇಕಾಗಿದೆ. ತಮ್ಮ ಬಳಿ ಅಕ್ಕಿ ಇಲ್ಲ ಎಂದು ಪಂಜಾಬ್ ಹೇಳಿದೆ. ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ನೋಡೋಣ ಎಂದಿದ್ದಾರೆ. ಆ ರಾಜ್ಯಗಳ ಜತೆ ಮಾತುಕತೆಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಲ್ಲಿಗೆ ತೆರಳಲಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...