Homeಸಾಹಿತ್ಯ-ಸಂಸ್ಕೃತಿಕವನಅಂತಿಮ ವಲಸೆಯ ಮುನ್ನ..; ಖಲೀಲ್ ಮಾಮೂನ್ ಅವರ ಉರ್ದು ಕವಿತೆಯ ಅನುವಾದ

ಅಂತಿಮ ವಲಸೆಯ ಮುನ್ನ..; ಖಲೀಲ್ ಮಾಮೂನ್ ಅವರ ಉರ್ದು ಕವಿತೆಯ ಅನುವಾದ

- Advertisement -
- Advertisement -

ಉಳಿದಿರುವ ಹಾದಿ ಇದೊಂದು ಈಗ
ಈ ಹಾದಿಯಿಂದಲೆ ಸಾಗಬೇಕಾಗಿದೆ ನಾನು
ಸಾಗಬೇಕು, ಚಲಿಸಬೇಕು,
ಎದ್ದೆದ್ದು ಬಿದ್ದು ಪಾರಾಗಬೇಕು

ರಮಣಿಸುವ ಕಾಲುಹಾದಿಗಳು
ನನ್ನ ಅಕ್ಕ-ಪಕ್ಕ, ಸುತ್ತ-ಮುತ್ತ
ಅಲ್ಲಲ್ಲಿ ಕಗ್ಗಂಟಾಗಿರುವ ಮುಳ್ಳಿನ ಪೊದೆಗಳು
ಬರೀ ಪೊದೆಗಳು
ತೀವ್ರ ವಿಷಕರ ಮುಳ್ಳುಗಂಟೆಗಳು
ಅವತಿಕೊಂಡ ಹಾವು, ಚೇಳು
ಮೋಹಿನಿ-ಭೂತ ಪ್ರೇತಗಳು
ರಂಜಿಸುವ ಮೋಹ-ಮಾಯೆಗೆ ಸಿಲುಕದೆ
ಸಾಗುತ್ತಿರುವೆ ಇತ್ತ ನೇರ ನಾನು

ಎಲ್ಲಾದರೊಂದು ಸಿಕ್ಕೆ ಸಿಗುವುದು
ಲಕ್ಷ್ಯದ ಘಟಕಗಳು
ಇಲ್ಲಿಯೇ ನಿಂತು ಮರಳಿ ಬಾರದೆಂದು
ಇಲ್ಲಿಂದಲೆ ಅಜ್ಹಾಂ, ಇಲ್ಲಿಯೇ ಗಂಟೆಯ ನಾದಸ್ವರ
ಮೌನಧರಿಸಿದ ಮೀನಾರದಿಂದ ಕೊಳೆತ ಕುರುಹುಗಳ
ಅರ್ತನಾದ
ಇಲ್ಲಿಯೇ ಹಗಲಿರುಳು
ಕ್ಷಣ ಕ್ಷಣಕ್ಕೂ ಧಗಧಗಿಸುತ್ತಿರುವ
ಹವನದ ತಾಜಾ ತಾಜಾ
ನೀಲಿ ನೀಲಿ ಹೊಗೆ ಹೊರಸೂಸುತ್ತಿದೆ
ಇಲ್ಲಿಯೇ ಕಂಪಿಸುತ್ತಿರುವ ಗಗನದ ನಿರರ್ಥಕ ದೆಸೆಯಲ್ಲಿ
ನನ್ನ ನಿನ್ನ ಕಣ್ಣೀರಿನ ಎತ್ತೆರೆತ್ತರಕ್ಕೇರುವ ನಿರಂತರ ಬಳ್ಳಿ
ಹಬ್ಬಿರಲಿ ನಂದನವನದಲ್ಲಿ

ಉಳಿದಿರುವ ಇದೇ ತಾನೆ ಏಕೈಕ ಹಾದಿ
ಇದರಿಂದ ಪಾರಾಗಲೇಬೇಕಿದೆ ನಾನು
ಒಮ್ಮೆ ನಿನ್ನ ಸನಿಹದೊಂದಿಗೆ
ಇನ್ನೊಮ್ಮೆ ಒಬ್ಬಂಟಿಯಾಗಿ
ಒಮ್ಮೆ ಜನಜಂಗುಳಿಯೊಂದಿಗೆ
ನನ್ನ ಅಸ್ಮಿತೆಯ ಪಾಪ-ಪುಣ್ಯವ
ಸತ್ಯ-ಮಿಥ್ಯವ ಏನಾದರೊಂದು ನಾನೇ ಅವಲೋಕಿಸಿಕೊಳ್ಳುತ್ತಾ
ನುಡಿಯಲೇಬೇಕು, ಪಠಿಸಲೇಬೇಕು
ಈ ಚೂರು-ಪಾರನ್ನು ಬರಿದಾದ ಹವೆಯಲ್ಲಿ ಹಾರಿಸುತ್ತಾ
ಆರಾಧನೆಯ ಹೊದಿಕೆಯಿಂದ ಹೊದಿಸಿ
ನೈಜತೆಯೋ ಅಥವಾ ಭ್ರಾಂತಿಯೋ
ದಾನಶೂರನೋ-ತಿರುಕನೋ
ತುಂಬಿ ತುಳುಕುತ್ತಿರುವುದೋ
ಅಥವಾ ಬರಿದು ಬರಡಾಗಿರುವುದೋ
ಉಳಿದಿರುವುದು ಇದೇ ಒಂದು ದಾರಿ

ಇಲ್ಲಿಯೇ ಚಂದಿರನ ಮಿಂಚಿನ ಕಾಂತಿ
ಕಂಬನಿಯ ಮುಸುಕುಗಟ್ಟಿದ ಕಾರ್ಮೋಡಗಳು
ಸರ್ವಶಕ್ತತೆಯಿಂದ ಸುರಿಯುತ್ತಿರುವ
ಮನೋ-ಸಲ್ವಾವಿನ(1) ಮಳೆಯು
ನನ್ನ ನಿನ್ನ ಹಸ್ತದೊಂದಿಗೆ
ಅಥವಾ
ಪರಹಸ್ತದಲ್ಲಿ
ಅಥವಾ
ನನ್ನೊಡನೆಯೋ
ಇಲ್ಲಿಯೇ ತೆರೆದಿರುವುದು ನಮ್ಮ
ಅಂತರಂಗದ ಕಣ್ಣುಗಳು
ಇಲ್ಲಿಯೇ ನಮ್ಮ ಸಂಗಮ ಇಲ್ಲಿಯೇ ನಮ್ಮ ವಿದಾಯ

ಒಗ್ಗೂಡುವುದಿಲ್ಲ
ಮತ್ತೆ ನಾವೆಂದಿಗೂ
ಚಂಚಲ ರಾತ್ರಿ ಸಾಕಷ್ಟು ನವರಾತ್ರಿಗಳನ್ನು ಬಿಟ್ಟು
ಎಲ್ಲಿಗೆ ಸಾಗುವೆ, ಯಾರಿಗೆ ಕೂಗುವೆ
ಯಾವ ಅಲ್ವಂದ್(2) ಪರ್ವತದಿಂದಲೂ
ಮರಳಿ ಬರುವುದುಂಟೆ ಕೂಗು

ನನ್ನ ಗದ್ಗದಿತ ಯಾವ ಶ್ರವಣಕ್ಕೂ ಕೇಳಿಸದೆ
ಇದೇ ಹಾದಿಯಲ್ಲಿ ಸಾಗುತ್ತಾ ಜೀವಿಸುವೆ,
ಮರಣಿಸುವೆ, ಕಾದಾಡುವೆ
ಮತ್ತು ಇಲ್ಲಿಯೇ ಆಲಂಗಿಸಿಕೊಳ್ಳುವೆ
ಇದೇ ಹಾದಿ ತಾನೇ ನನ್ನ ಏಕೈಕೆ ಸರ್ವಸ್ವ
ಇದರ ಹೊರತು ಅನ್ಯಕ್ಕೆ ಕಣ್ಣಾಡಿಸುವುದೇಕೆ
ನಿದ್ದೆ ಮಂಪರಿಸಿದರೆ ನಿದ್ದೆಗೆ ಜಾರೋಣ
ಆಯಾಸಕ್ಕೆ ತುತ್ತಾಗಿದ್ದರೆ ಕುಳ್ಳಿರಿಸೋಣ

ಎಂದಾದರೊಮ್ಮೆ ಇದೇ ಹಾದಿಯಿಂದ
ನನ್ನೆಡೆಗೆ ಯಾರಾದರೂ ಬಂದು ಸಂತೈಸಬಹುದು
ಮರಳಿ ಎಚ್ಚರಿಸಿ ತನ್ನೊಡನೆಯೇ
ಅಂತಿಮ ಗುರಿಯೆಡೆಗೆ
ಕರೆದೊಯ್ಯಬಹುದು

ಎಂದಾದರೊಮ್ಮೆ ಯಾರಾದರೂ ಬರುವರು.

ಅಡಿ ಟಿಪ್ಪಣಿ

1) ’ಮನೋ-ಸಲ್ವಾ’ ಎಂಬುದು ಖುರಾನ್‌ನಲ್ಲಿ ಉಲ್ಲೇಖಗೊಂಡಿರುವ ಪದ. ಪ್ರವಾದಿ ಮೂಸಾ ಅವರ ಕಾಲದಲ್ಲಿ ಭೀಕರವಾದ ಬರಗಾಲ ಬಂದಿತ್ತು. ಮೂಸಾ ಅವರು ಅಲ್ಹಾಗೆ ಪ್ರಾರ್ಥಿಸಿದಾಗ ಸ್ವರ್ಗದಿಂದ ಜನರ ಹಸಿವನ್ನು ತಣಿಸುವ ಸಲುವಾಗಿ ಜೇನಿನಂತೆ ಸಿಹಿಯಾಗಿರುವ ಮತ್ತು ಹಾಲಿನಂತೆ ಬೆಳ್ಳಗಾಗಿರುವ ಪದಾರ್ಥವನ್ನು ಭೂಮಿಗೆ ಕಳುಹಿಸಲಾಯಿತು. ಇದರ ಜೊತೆಗೆ Quail (ಕ್ವೇಲ್) ಎಂಬ ಪಕ್ಷಿಯನ್ನು ಕಳುಹಿಸಲಾಗಿತ್ತು. ಸಾಂಕೇತಿಕವಾಗಿ ಇದೊಂದು ಅಲ್ಹಾನ ವರದಾನ ಎಂದೇ ಭಾವಿಸಲಾಗಿದೆ.

2) ಇರಾನ್‌ನಲ್ಲಿ ಅತಿ ಎತ್ತರವಾದ ಪರ್ವತವೇ ಅಲ್ವಂದ್.

ಮೂಲ ಉರ್ದು : ಖಲೀಲ್ ಮಾಮೂನ್
ಅನುವಾದ : ಡಾ. ತಸ್ನೀಮ್ ತಾಜ್


ಇದನ್ನೂ ಓದಿ: ನಾವೂ ನೋಡುತ್ತೇವೆ, ಸಾಕ್ಷಿಯಾಗುತ್ತೇವೆ: ಈ ದುರಿತ ಕಾಲದಲ್ಲಿ ಮತ್ತೆ ನೆನಪಾಗುವ ಫೈಜ್‌ ಕವನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...