Homeಸಾಹಿತ್ಯ-ಸಂಸ್ಕೃತಿಕವನಅಂತಿಮ ವಲಸೆಯ ಮುನ್ನ..; ಖಲೀಲ್ ಮಾಮೂನ್ ಅವರ ಉರ್ದು ಕವಿತೆಯ ಅನುವಾದ

ಅಂತಿಮ ವಲಸೆಯ ಮುನ್ನ..; ಖಲೀಲ್ ಮಾಮೂನ್ ಅವರ ಉರ್ದು ಕವಿತೆಯ ಅನುವಾದ

- Advertisement -
- Advertisement -

ಉಳಿದಿರುವ ಹಾದಿ ಇದೊಂದು ಈಗ
ಈ ಹಾದಿಯಿಂದಲೆ ಸಾಗಬೇಕಾಗಿದೆ ನಾನು
ಸಾಗಬೇಕು, ಚಲಿಸಬೇಕು,
ಎದ್ದೆದ್ದು ಬಿದ್ದು ಪಾರಾಗಬೇಕು

ರಮಣಿಸುವ ಕಾಲುಹಾದಿಗಳು
ನನ್ನ ಅಕ್ಕ-ಪಕ್ಕ, ಸುತ್ತ-ಮುತ್ತ
ಅಲ್ಲಲ್ಲಿ ಕಗ್ಗಂಟಾಗಿರುವ ಮುಳ್ಳಿನ ಪೊದೆಗಳು
ಬರೀ ಪೊದೆಗಳು
ತೀವ್ರ ವಿಷಕರ ಮುಳ್ಳುಗಂಟೆಗಳು
ಅವತಿಕೊಂಡ ಹಾವು, ಚೇಳು
ಮೋಹಿನಿ-ಭೂತ ಪ್ರೇತಗಳು
ರಂಜಿಸುವ ಮೋಹ-ಮಾಯೆಗೆ ಸಿಲುಕದೆ
ಸಾಗುತ್ತಿರುವೆ ಇತ್ತ ನೇರ ನಾನು

ಎಲ್ಲಾದರೊಂದು ಸಿಕ್ಕೆ ಸಿಗುವುದು
ಲಕ್ಷ್ಯದ ಘಟಕಗಳು
ಇಲ್ಲಿಯೇ ನಿಂತು ಮರಳಿ ಬಾರದೆಂದು
ಇಲ್ಲಿಂದಲೆ ಅಜ್ಹಾಂ, ಇಲ್ಲಿಯೇ ಗಂಟೆಯ ನಾದಸ್ವರ
ಮೌನಧರಿಸಿದ ಮೀನಾರದಿಂದ ಕೊಳೆತ ಕುರುಹುಗಳ
ಅರ್ತನಾದ
ಇಲ್ಲಿಯೇ ಹಗಲಿರುಳು
ಕ್ಷಣ ಕ್ಷಣಕ್ಕೂ ಧಗಧಗಿಸುತ್ತಿರುವ
ಹವನದ ತಾಜಾ ತಾಜಾ
ನೀಲಿ ನೀಲಿ ಹೊಗೆ ಹೊರಸೂಸುತ್ತಿದೆ
ಇಲ್ಲಿಯೇ ಕಂಪಿಸುತ್ತಿರುವ ಗಗನದ ನಿರರ್ಥಕ ದೆಸೆಯಲ್ಲಿ
ನನ್ನ ನಿನ್ನ ಕಣ್ಣೀರಿನ ಎತ್ತೆರೆತ್ತರಕ್ಕೇರುವ ನಿರಂತರ ಬಳ್ಳಿ
ಹಬ್ಬಿರಲಿ ನಂದನವನದಲ್ಲಿ

ಉಳಿದಿರುವ ಇದೇ ತಾನೆ ಏಕೈಕ ಹಾದಿ
ಇದರಿಂದ ಪಾರಾಗಲೇಬೇಕಿದೆ ನಾನು
ಒಮ್ಮೆ ನಿನ್ನ ಸನಿಹದೊಂದಿಗೆ
ಇನ್ನೊಮ್ಮೆ ಒಬ್ಬಂಟಿಯಾಗಿ
ಒಮ್ಮೆ ಜನಜಂಗುಳಿಯೊಂದಿಗೆ
ನನ್ನ ಅಸ್ಮಿತೆಯ ಪಾಪ-ಪುಣ್ಯವ
ಸತ್ಯ-ಮಿಥ್ಯವ ಏನಾದರೊಂದು ನಾನೇ ಅವಲೋಕಿಸಿಕೊಳ್ಳುತ್ತಾ
ನುಡಿಯಲೇಬೇಕು, ಪಠಿಸಲೇಬೇಕು
ಈ ಚೂರು-ಪಾರನ್ನು ಬರಿದಾದ ಹವೆಯಲ್ಲಿ ಹಾರಿಸುತ್ತಾ
ಆರಾಧನೆಯ ಹೊದಿಕೆಯಿಂದ ಹೊದಿಸಿ
ನೈಜತೆಯೋ ಅಥವಾ ಭ್ರಾಂತಿಯೋ
ದಾನಶೂರನೋ-ತಿರುಕನೋ
ತುಂಬಿ ತುಳುಕುತ್ತಿರುವುದೋ
ಅಥವಾ ಬರಿದು ಬರಡಾಗಿರುವುದೋ
ಉಳಿದಿರುವುದು ಇದೇ ಒಂದು ದಾರಿ

ಇಲ್ಲಿಯೇ ಚಂದಿರನ ಮಿಂಚಿನ ಕಾಂತಿ
ಕಂಬನಿಯ ಮುಸುಕುಗಟ್ಟಿದ ಕಾರ್ಮೋಡಗಳು
ಸರ್ವಶಕ್ತತೆಯಿಂದ ಸುರಿಯುತ್ತಿರುವ
ಮನೋ-ಸಲ್ವಾವಿನ(1) ಮಳೆಯು
ನನ್ನ ನಿನ್ನ ಹಸ್ತದೊಂದಿಗೆ
ಅಥವಾ
ಪರಹಸ್ತದಲ್ಲಿ
ಅಥವಾ
ನನ್ನೊಡನೆಯೋ
ಇಲ್ಲಿಯೇ ತೆರೆದಿರುವುದು ನಮ್ಮ
ಅಂತರಂಗದ ಕಣ್ಣುಗಳು
ಇಲ್ಲಿಯೇ ನಮ್ಮ ಸಂಗಮ ಇಲ್ಲಿಯೇ ನಮ್ಮ ವಿದಾಯ

ಒಗ್ಗೂಡುವುದಿಲ್ಲ
ಮತ್ತೆ ನಾವೆಂದಿಗೂ
ಚಂಚಲ ರಾತ್ರಿ ಸಾಕಷ್ಟು ನವರಾತ್ರಿಗಳನ್ನು ಬಿಟ್ಟು
ಎಲ್ಲಿಗೆ ಸಾಗುವೆ, ಯಾರಿಗೆ ಕೂಗುವೆ
ಯಾವ ಅಲ್ವಂದ್(2) ಪರ್ವತದಿಂದಲೂ
ಮರಳಿ ಬರುವುದುಂಟೆ ಕೂಗು

ನನ್ನ ಗದ್ಗದಿತ ಯಾವ ಶ್ರವಣಕ್ಕೂ ಕೇಳಿಸದೆ
ಇದೇ ಹಾದಿಯಲ್ಲಿ ಸಾಗುತ್ತಾ ಜೀವಿಸುವೆ,
ಮರಣಿಸುವೆ, ಕಾದಾಡುವೆ
ಮತ್ತು ಇಲ್ಲಿಯೇ ಆಲಂಗಿಸಿಕೊಳ್ಳುವೆ
ಇದೇ ಹಾದಿ ತಾನೇ ನನ್ನ ಏಕೈಕೆ ಸರ್ವಸ್ವ
ಇದರ ಹೊರತು ಅನ್ಯಕ್ಕೆ ಕಣ್ಣಾಡಿಸುವುದೇಕೆ
ನಿದ್ದೆ ಮಂಪರಿಸಿದರೆ ನಿದ್ದೆಗೆ ಜಾರೋಣ
ಆಯಾಸಕ್ಕೆ ತುತ್ತಾಗಿದ್ದರೆ ಕುಳ್ಳಿರಿಸೋಣ

ಎಂದಾದರೊಮ್ಮೆ ಇದೇ ಹಾದಿಯಿಂದ
ನನ್ನೆಡೆಗೆ ಯಾರಾದರೂ ಬಂದು ಸಂತೈಸಬಹುದು
ಮರಳಿ ಎಚ್ಚರಿಸಿ ತನ್ನೊಡನೆಯೇ
ಅಂತಿಮ ಗುರಿಯೆಡೆಗೆ
ಕರೆದೊಯ್ಯಬಹುದು

ಎಂದಾದರೊಮ್ಮೆ ಯಾರಾದರೂ ಬರುವರು.

ಅಡಿ ಟಿಪ್ಪಣಿ

1) ’ಮನೋ-ಸಲ್ವಾ’ ಎಂಬುದು ಖುರಾನ್‌ನಲ್ಲಿ ಉಲ್ಲೇಖಗೊಂಡಿರುವ ಪದ. ಪ್ರವಾದಿ ಮೂಸಾ ಅವರ ಕಾಲದಲ್ಲಿ ಭೀಕರವಾದ ಬರಗಾಲ ಬಂದಿತ್ತು. ಮೂಸಾ ಅವರು ಅಲ್ಹಾಗೆ ಪ್ರಾರ್ಥಿಸಿದಾಗ ಸ್ವರ್ಗದಿಂದ ಜನರ ಹಸಿವನ್ನು ತಣಿಸುವ ಸಲುವಾಗಿ ಜೇನಿನಂತೆ ಸಿಹಿಯಾಗಿರುವ ಮತ್ತು ಹಾಲಿನಂತೆ ಬೆಳ್ಳಗಾಗಿರುವ ಪದಾರ್ಥವನ್ನು ಭೂಮಿಗೆ ಕಳುಹಿಸಲಾಯಿತು. ಇದರ ಜೊತೆಗೆ Quail (ಕ್ವೇಲ್) ಎಂಬ ಪಕ್ಷಿಯನ್ನು ಕಳುಹಿಸಲಾಗಿತ್ತು. ಸಾಂಕೇತಿಕವಾಗಿ ಇದೊಂದು ಅಲ್ಹಾನ ವರದಾನ ಎಂದೇ ಭಾವಿಸಲಾಗಿದೆ.

2) ಇರಾನ್‌ನಲ್ಲಿ ಅತಿ ಎತ್ತರವಾದ ಪರ್ವತವೇ ಅಲ್ವಂದ್.

ಮೂಲ ಉರ್ದು : ಖಲೀಲ್ ಮಾಮೂನ್
ಅನುವಾದ : ಡಾ. ತಸ್ನೀಮ್ ತಾಜ್


ಇದನ್ನೂ ಓದಿ: ನಾವೂ ನೋಡುತ್ತೇವೆ, ಸಾಕ್ಷಿಯಾಗುತ್ತೇವೆ: ಈ ದುರಿತ ಕಾಲದಲ್ಲಿ ಮತ್ತೆ ನೆನಪಾಗುವ ಫೈಜ್‌ ಕವನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...