Homeಕವನಕವನ | ಅಂತಿಮ ವಲಸೆಯ ಮುನ್ನ

ಕವನ | ಅಂತಿಮ ವಲಸೆಯ ಮುನ್ನ

- Advertisement -
- Advertisement -

ಉಳಿದಿರುವ ಹಾದಿ ಇದೊಂದು ಈಗ

ಈ ಹಾದಿಯಿಂದಲೆ ಸಾಗಬೇಕಾಗಿದೆ ನಾನು

ಸಾಗಬೇಕು, ಚಲಿಸಬೇಕು,

ಎದ್ದೆದ್ದು ಬಿದ್ದು ಪಾರಾಗಬೇಕು

 

ರಮಣಿಸುವ ಕಾಲುಹಾದಿಗಳು

ನನ್ನ ಅಕ್ಕ-ಪಕ್ಕ, ಸುತ್ತ-ಮುತ್ತ

ಅಲ್ಲಲ್ಲಿ ಕಗ್ಗಂಟಾಗಿರುವ ಮುಳ್ಳಿನ ಪೊದೆಗಳು

ಬರೀ ಪೊದೆಗಳು

ತೀವ್ರ ವಿಷಕರ ಮುಳ್ಳುಗಂಟೆಗಳು

ಅವಿತುಕೊಂಡ ಹಾವು, ಚೇಳು

ಮೋಹಿನಿ-ಭೂತ ಪ್ರೇತಗಳು

ರಂಜಿಸುವ ಮೋಹ-ಮಾಯೆಗೆ ಸಿಲುಕದೆ

ಸಾಗುತ್ತಿರುವೆ ಇತ್ತ ನೇರ ನಾನು.

 

ಎಲ್ಲಾದರೊಂದು ಸಿಕ್ಕೆ ಸಿಗುವುದು

ಲಕ್ಷ್ಯದ ಘಟಕಗಳು

ಇಲ್ಲಿಯೇ ನಿಂತು ಮರಳಿಬಾರದೆಂದು

ಇಲ್ಲಿಂದಲೆ ಆಜಾ಼ನ್, ಇಲ್ಲಿಯೇ ಗಂಟೆಯ ನಾದಸ್ವರ

ಮೌನಧರಿಸಿದ ಮೀನಾರದಿಂದ ಕೊಳೆತ ಕುರುಹುಗಳ ಅರ್ತನಾದ

ಇಲ್ಲಿಯೇ ಹಗಲಿರುಳು

ಕ್ಷಣ ಕ್ಷಣಕ್ಕೂ ಧಗಧಗಿಸುತ್ತಿರುವ

ಹವನದ ತಾಜಾ ತಾಜಾ

ನೀಲಿ ನೀಲಿ ಹೊಗೆ ಹೊರಸೂಸುತ್ತಿದೆ

ಇಲ್ಲಿಯೇ ಕಂಪಿಸುತ್ತಿರುವ ಗಗನದ ನಿರರ್ಥಕ ದೆಸೆಯಲ್ಲಿ

ನನ್ನ ನಿನ್ನ ಕಣ್ಣೀರಿನ ಎತ್ತೆರೆತ್ತರಕ್ಕೆರುವ ನಿರಂತರ ಬಳ್ಳಿ

ಹಬ್ಬಿರಲಿ ನಂದನವನದಲ್ಲಿ

 

ಉಳಿದಿರುವ ಇದೇ ತಾನೆ ಏಕೈಕ ಹಾದಿ

ಇದರಿಂದ ಪಾರಾಗಲೇಬೇಕಿದೆ ನಾನು

ಒಮ್ಮೆ ನಿನ್ನ ಸನಿಹದೊಂದಿಗೆ

ಇನ್ನೊಮ್ಮೆ ಒಬ್ಬಂಟಿಯಾಗಿ

ಒಮ್ಮೆ ಜನಜಂಗುಳಿಯೊಂದಿಗೆ

ನನ್ನ ಅಸ್ಮಿತೆಯ ಪಾಪ-ಪುಣ್ಯವ

ಸತ್ಯ-ಮಿಥ್ಯವ ಏನಾದರೊಂದು ನಾನೇ ಅವಲೋಕಿಸಿಕೊಳ್ಳುತ್ತಾ

ನುಡಿಯಲೇಬೇಕು, ಪಠಿಸಲೇಬೇಕು

ಈ ಚೂರು-ಪಾರನ್ನು ಬರಿದಾದ ಹವೆಯಲ್ಲಿ ಹಾರಿಸುತ್ತಾ

ಆರಾಧನೆಯ ಹೊದಿಕೆಯಿಂದ ಹೊದಿಸಿ

ನೈಜತೆಯೋ ಅಥವಾ ಭ್ರಾಂತಿಯೋ

ದಾನಶೂರನೋ-ತಿರುಕನೋ

ತುಂಬಿ ತುಳುಕುತ್ತಿರುವುದೋ

ಅಥವಾ

ಬರಿದು ಬರಡಾಗಿರುವುದೋ

ಉಳಿದಿರುವುದು ಇದೇ ಒಂದು ದಾರಿ.

 

ಇಲ್ಲಿಯೇ ಚಂದಿರನ ಮಿಂಚಿನ ಕಾಂತಿ

ಕಂಬನಿಯ ಮುಸುಕುಗಟ್ಟಿದ ಕಾರ್ಮೋಡಗಳು

ಸರ್ವಶಕ್ತತೆಯಿಂದ ಸುರಿಯುತ್ತಿರುವ

ಮನೋ-ಸಲ್ವಾ*ದ ಮಳೆಯು

ನನ್ನ ನಿನ್ನ ಹಸ್ತದೊಂದಿಗೆ

ಅಥವಾ

ಪರಹಸ್ತದಲ್ಲಿ

ಅಥವಾ

ನನ್ನೊಡನೆಯೋ

ಇಲ್ಲಿಯೇ ತೆರೆದಿರುವುದು ನಮ್ಮ

ಅಂತರಂಗದ ಕಣ್ಣುಗಳು

ಇಲ್ಲಿಯೇ ನಮ್ಮ ಸಂಗಮ ಇಲ್ಲಿಯೇ ನಮ್ಮ ವಿದಾಯ

ಒಗ್ಗೂಡುವುದಿಲ್ಲ

ಮತ್ತೆ ನಾವೆಂದಿಗೂ.

ಚಂಚಲ ರಾತ್ರಿ ಸಾಕಷ್ಟು ನವರಾತ್ರಿಗಳನ್ನು ಬಿಟ್ಟು

ಎಲ್ಲಿಗೆ ಸಾಗುವೆ, ಯಾರಿಗೆ ಕೂಗುವೆ

ಯಾವ ಅಲ್ವಂದ್** ಪರ್ವತದಿಂದಲೂ

ಮರಳಿ ಬರುವುದುಂಟೆ ಕೂಗು.

 

ನನ್ನ ಗದ್ಗದಿತ ಯಾವ ಶ್ರವಣಕ್ಕೂ ಕೇಳಿಸದೆ

ಇದೇ ಹಾದಿಯಲ್ಲಿ ಸಾಗುತ್ತಾ ಜೀವಿಸುವೆ,

ಮರಣಿಸುವೆ, ಕಾದಾಡುವೆ

ಮತ್ತು ಇಲ್ಲಿಯೇ ಆಲಂಗಿಸಿಕೊಳ್ಳುವೆ

ಇದೇ ಹಾದಿ ತಾನೇ ನನ್ನ ಏಕೈಕೆ ಸರ್ವಸ್ವ

ಇದರ ಹೊರತು ಅನ್ಯಕ್ಕೆ ಕಣ್ಣಾಡಿಸುವುದೇಕೆ

ನಿದ್ದೆ ಮಂಪರಿಸಿದರೆ ನಿದ್ದೆಗೆ ಜಾರೋಣ

ಆಯಾಸಕ್ಕೆ ತುತ್ತಾಗಿದ್ದರೆ ಕುಳ್ಳಿರಿಸೋಣ

ಎಂದಾದರೊಮ್ಮೆ ಇದೇ ಹಾದಿಯಿಂದ

ನನ್ನೆಡೆಗೆ ಯಾರಾದರೂ ಬಂದು ಸಂತೈಸಬಹುದು

ಮರಳಿ ಎಚ್ಚರಿಸಿ ತನ್ನೊಡನೆಯೇ

ಅಂತಿಮ ಗುರಿಯೆಡೆಗೆ

ಕರೆದೊಯ್ಯಬಹುದು

ಎಂದಾದರೊಮ್ಮೆ ಯಾರಾದರೂ ಬರುವರು.

 

ಮೂಲ ಉರ್ದು: ಖಲೀಲ್ ಮಾಮೂನ್

ಅನುವಾದ: ಡಾ. ತಸ್ನೀಮ್ ತಾಜ್


ಅಡಿ ಟಿಪ್ಪಣಿ

*ಮನೋ-ಸಲ್ವಾʼ ಎಂಬುದು ಖುರಾನ್‌ನಲ್ಲಿ ಉಲ್ಲೇಖಗೊಂಡಿರುವ ಪದ. ಪ್ರವಾದಿ ಮೂಸಾ ಅವರ ಕಾಲದಲ್ಲಿ ಭೀಕರವಾದ ಬರಗಾಲ ಬಂದಿದ್ದು, ಮೂಸಾ ಅವರು ಅಲ್ಲಾಹ‌ನೊಂದಿಗೆ ಪ್ರಾರ್ಥಿಸಿದಾಗ ಸ್ವರ್ಗದಿಂದ ಜನರ ಹಸಿವನ್ನು ತಣಿಸುವ ಸಲುವಾಗಿ ಜೇನಿನಂತೆ ಸಿಹಿಯಾಗಿರುವ ಮತ್ತು ಹಾಲಿನಂತೆ ಬೆಳ್ಳಗಾಗಿರುವ ಪದಾರ್ಥವನ್ನು ಭೂಮಿಗೆ ಕಳುಹಿಸಲಾಯಿತು. ಇದರ ಜೊತೆಗೆ Quail (ಕ್ವೀಲ್) ಎಂಬ ಪಕ್ಷಿಯನ್ನು ಕಳುಹಿಸಲಾಗಿತ್ತು. ಸಾಂಕೇತಿಕವಾಗಿ ಇದೊಂದು ಅಲ್ಲಾಹನ ವರದಾನ ಎಂದು ಭಾವಿಸಲಾಗಿದೆ.

** ’ಅಲ್ವಂದ್’ ಇರಾನ್‌ನಲ್ಲಿರುವ ಅತಿ ಎತ್ತರವಾದ ಪರ್ವತ.


ಓದಿ: ಬುದ್ಧನಾಗುವ ಆಸೆ| ಕವನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...