Homeಕವನಕವನ | ಅಂತಿಮ ವಲಸೆಯ ಮುನ್ನ

ಕವನ | ಅಂತಿಮ ವಲಸೆಯ ಮುನ್ನ

- Advertisement -
- Advertisement -

ಉಳಿದಿರುವ ಹಾದಿ ಇದೊಂದು ಈಗ

ಈ ಹಾದಿಯಿಂದಲೆ ಸಾಗಬೇಕಾಗಿದೆ ನಾನು

ಸಾಗಬೇಕು, ಚಲಿಸಬೇಕು,

ಎದ್ದೆದ್ದು ಬಿದ್ದು ಪಾರಾಗಬೇಕು

 

ರಮಣಿಸುವ ಕಾಲುಹಾದಿಗಳು

ನನ್ನ ಅಕ್ಕ-ಪಕ್ಕ, ಸುತ್ತ-ಮುತ್ತ

ಅಲ್ಲಲ್ಲಿ ಕಗ್ಗಂಟಾಗಿರುವ ಮುಳ್ಳಿನ ಪೊದೆಗಳು

ಬರೀ ಪೊದೆಗಳು

ತೀವ್ರ ವಿಷಕರ ಮುಳ್ಳುಗಂಟೆಗಳು

ಅವಿತುಕೊಂಡ ಹಾವು, ಚೇಳು

ಮೋಹಿನಿ-ಭೂತ ಪ್ರೇತಗಳು

ರಂಜಿಸುವ ಮೋಹ-ಮಾಯೆಗೆ ಸಿಲುಕದೆ

ಸಾಗುತ್ತಿರುವೆ ಇತ್ತ ನೇರ ನಾನು.

 

ಎಲ್ಲಾದರೊಂದು ಸಿಕ್ಕೆ ಸಿಗುವುದು

ಲಕ್ಷ್ಯದ ಘಟಕಗಳು

ಇಲ್ಲಿಯೇ ನಿಂತು ಮರಳಿಬಾರದೆಂದು

ಇಲ್ಲಿಂದಲೆ ಆಜಾ಼ನ್, ಇಲ್ಲಿಯೇ ಗಂಟೆಯ ನಾದಸ್ವರ

ಮೌನಧರಿಸಿದ ಮೀನಾರದಿಂದ ಕೊಳೆತ ಕುರುಹುಗಳ ಅರ್ತನಾದ

ಇಲ್ಲಿಯೇ ಹಗಲಿರುಳು

ಕ್ಷಣ ಕ್ಷಣಕ್ಕೂ ಧಗಧಗಿಸುತ್ತಿರುವ

ಹವನದ ತಾಜಾ ತಾಜಾ

ನೀಲಿ ನೀಲಿ ಹೊಗೆ ಹೊರಸೂಸುತ್ತಿದೆ

ಇಲ್ಲಿಯೇ ಕಂಪಿಸುತ್ತಿರುವ ಗಗನದ ನಿರರ್ಥಕ ದೆಸೆಯಲ್ಲಿ

ನನ್ನ ನಿನ್ನ ಕಣ್ಣೀರಿನ ಎತ್ತೆರೆತ್ತರಕ್ಕೆರುವ ನಿರಂತರ ಬಳ್ಳಿ

ಹಬ್ಬಿರಲಿ ನಂದನವನದಲ್ಲಿ

 

ಉಳಿದಿರುವ ಇದೇ ತಾನೆ ಏಕೈಕ ಹಾದಿ

ಇದರಿಂದ ಪಾರಾಗಲೇಬೇಕಿದೆ ನಾನು

ಒಮ್ಮೆ ನಿನ್ನ ಸನಿಹದೊಂದಿಗೆ

ಇನ್ನೊಮ್ಮೆ ಒಬ್ಬಂಟಿಯಾಗಿ

ಒಮ್ಮೆ ಜನಜಂಗುಳಿಯೊಂದಿಗೆ

ನನ್ನ ಅಸ್ಮಿತೆಯ ಪಾಪ-ಪುಣ್ಯವ

ಸತ್ಯ-ಮಿಥ್ಯವ ಏನಾದರೊಂದು ನಾನೇ ಅವಲೋಕಿಸಿಕೊಳ್ಳುತ್ತಾ

ನುಡಿಯಲೇಬೇಕು, ಪಠಿಸಲೇಬೇಕು

ಈ ಚೂರು-ಪಾರನ್ನು ಬರಿದಾದ ಹವೆಯಲ್ಲಿ ಹಾರಿಸುತ್ತಾ

ಆರಾಧನೆಯ ಹೊದಿಕೆಯಿಂದ ಹೊದಿಸಿ

ನೈಜತೆಯೋ ಅಥವಾ ಭ್ರಾಂತಿಯೋ

ದಾನಶೂರನೋ-ತಿರುಕನೋ

ತುಂಬಿ ತುಳುಕುತ್ತಿರುವುದೋ

ಅಥವಾ

ಬರಿದು ಬರಡಾಗಿರುವುದೋ

ಉಳಿದಿರುವುದು ಇದೇ ಒಂದು ದಾರಿ.

 

ಇಲ್ಲಿಯೇ ಚಂದಿರನ ಮಿಂಚಿನ ಕಾಂತಿ

ಕಂಬನಿಯ ಮುಸುಕುಗಟ್ಟಿದ ಕಾರ್ಮೋಡಗಳು

ಸರ್ವಶಕ್ತತೆಯಿಂದ ಸುರಿಯುತ್ತಿರುವ

ಮನೋ-ಸಲ್ವಾ*ದ ಮಳೆಯು

ನನ್ನ ನಿನ್ನ ಹಸ್ತದೊಂದಿಗೆ

ಅಥವಾ

ಪರಹಸ್ತದಲ್ಲಿ

ಅಥವಾ

ನನ್ನೊಡನೆಯೋ

ಇಲ್ಲಿಯೇ ತೆರೆದಿರುವುದು ನಮ್ಮ

ಅಂತರಂಗದ ಕಣ್ಣುಗಳು

ಇಲ್ಲಿಯೇ ನಮ್ಮ ಸಂಗಮ ಇಲ್ಲಿಯೇ ನಮ್ಮ ವಿದಾಯ

ಒಗ್ಗೂಡುವುದಿಲ್ಲ

ಮತ್ತೆ ನಾವೆಂದಿಗೂ.

ಚಂಚಲ ರಾತ್ರಿ ಸಾಕಷ್ಟು ನವರಾತ್ರಿಗಳನ್ನು ಬಿಟ್ಟು

ಎಲ್ಲಿಗೆ ಸಾಗುವೆ, ಯಾರಿಗೆ ಕೂಗುವೆ

ಯಾವ ಅಲ್ವಂದ್** ಪರ್ವತದಿಂದಲೂ

ಮರಳಿ ಬರುವುದುಂಟೆ ಕೂಗು.

 

ನನ್ನ ಗದ್ಗದಿತ ಯಾವ ಶ್ರವಣಕ್ಕೂ ಕೇಳಿಸದೆ

ಇದೇ ಹಾದಿಯಲ್ಲಿ ಸಾಗುತ್ತಾ ಜೀವಿಸುವೆ,

ಮರಣಿಸುವೆ, ಕಾದಾಡುವೆ

ಮತ್ತು ಇಲ್ಲಿಯೇ ಆಲಂಗಿಸಿಕೊಳ್ಳುವೆ

ಇದೇ ಹಾದಿ ತಾನೇ ನನ್ನ ಏಕೈಕೆ ಸರ್ವಸ್ವ

ಇದರ ಹೊರತು ಅನ್ಯಕ್ಕೆ ಕಣ್ಣಾಡಿಸುವುದೇಕೆ

ನಿದ್ದೆ ಮಂಪರಿಸಿದರೆ ನಿದ್ದೆಗೆ ಜಾರೋಣ

ಆಯಾಸಕ್ಕೆ ತುತ್ತಾಗಿದ್ದರೆ ಕುಳ್ಳಿರಿಸೋಣ

ಎಂದಾದರೊಮ್ಮೆ ಇದೇ ಹಾದಿಯಿಂದ

ನನ್ನೆಡೆಗೆ ಯಾರಾದರೂ ಬಂದು ಸಂತೈಸಬಹುದು

ಮರಳಿ ಎಚ್ಚರಿಸಿ ತನ್ನೊಡನೆಯೇ

ಅಂತಿಮ ಗುರಿಯೆಡೆಗೆ

ಕರೆದೊಯ್ಯಬಹುದು

ಎಂದಾದರೊಮ್ಮೆ ಯಾರಾದರೂ ಬರುವರು.

 

ಮೂಲ ಉರ್ದು: ಖಲೀಲ್ ಮಾಮೂನ್

ಅನುವಾದ: ಡಾ. ತಸ್ನೀಮ್ ತಾಜ್


ಅಡಿ ಟಿಪ್ಪಣಿ

*ಮನೋ-ಸಲ್ವಾʼ ಎಂಬುದು ಖುರಾನ್‌ನಲ್ಲಿ ಉಲ್ಲೇಖಗೊಂಡಿರುವ ಪದ. ಪ್ರವಾದಿ ಮೂಸಾ ಅವರ ಕಾಲದಲ್ಲಿ ಭೀಕರವಾದ ಬರಗಾಲ ಬಂದಿದ್ದು, ಮೂಸಾ ಅವರು ಅಲ್ಲಾಹ‌ನೊಂದಿಗೆ ಪ್ರಾರ್ಥಿಸಿದಾಗ ಸ್ವರ್ಗದಿಂದ ಜನರ ಹಸಿವನ್ನು ತಣಿಸುವ ಸಲುವಾಗಿ ಜೇನಿನಂತೆ ಸಿಹಿಯಾಗಿರುವ ಮತ್ತು ಹಾಲಿನಂತೆ ಬೆಳ್ಳಗಾಗಿರುವ ಪದಾರ್ಥವನ್ನು ಭೂಮಿಗೆ ಕಳುಹಿಸಲಾಯಿತು. ಇದರ ಜೊತೆಗೆ Quail (ಕ್ವೀಲ್) ಎಂಬ ಪಕ್ಷಿಯನ್ನು ಕಳುಹಿಸಲಾಗಿತ್ತು. ಸಾಂಕೇತಿಕವಾಗಿ ಇದೊಂದು ಅಲ್ಲಾಹನ ವರದಾನ ಎಂದು ಭಾವಿಸಲಾಗಿದೆ.

** ’ಅಲ್ವಂದ್’ ಇರಾನ್‌ನಲ್ಲಿರುವ ಅತಿ ಎತ್ತರವಾದ ಪರ್ವತ.


ಓದಿ: ಬುದ್ಧನಾಗುವ ಆಸೆ| ಕವನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...