Homeಮುಖಪುಟದ್ವೇಷ, ಯುದ್ಧ, ಪ್ರೀತಿ ಮತ್ತು ಮಳೆ : ಬಿಫೋರ್ ದ ರೇನ್ ಎಂಬ ಕಲಾಕೃತಿ

ದ್ವೇಷ, ಯುದ್ಧ, ಪ್ರೀತಿ ಮತ್ತು ಮಳೆ : ಬಿಫೋರ್ ದ ರೇನ್ ಎಂಬ ಕಲಾಕೃತಿ

- Advertisement -
- Advertisement -

“Time never dies, circle is not round”
ಸಿನೆಮಾ ರಚಿಸುವಲ್ಲಿ ಜಕ್ಸ್ಟಾಪೊಜಿಷನ್ (juxtaposition) ಎನ್ನುವ ಪದಕ್ಕೆ ತುಂಬಾ ಮಹತ್ವವಿದೆ. ಒಂದು ದೃಶ್ಯದ ನಂತರ ಇನ್ನೊಂದು ದೃಶ್ಯ, ಒಂದು ಶಾಟ್ ನಂತರ ಇನ್ನೊಂದು ದೃಶ್ಯ; ಈ ದೃಶ್ಯಗಳ ಸರಣಿಗಳೇ ಒಂದು ಕಥೆಯನ್ನು ಹೇಳುತ್ತವೆ. ಮೊದಲು ಬರುವ ದೃಶ್ಯ/ಶಾಟ್ ಮುಂದೆ ಬರುವ ದೃಶ್ಯ/ಶಾಟ್‍ಗೆ ಯಾವ ರೀತಿಯ ಸಂಬಂಧ ಹೊಂದಿರಬೇಕು? ಮುಂದಿನ ಶಾಟ್ ಕಥೆಯನ್ನು ಮುಂದುವರೆಸಲೇಬೇಕೆ? ನೇರಾನೇರ ಸಂಬಂಧ ಹೊಂದಿರಲೇಬೇಕೆ? ಇಲ್ಲಿ ನಾನು ಐಸೆನ್‍ಸ್ಟೇನ್ ಅವರ ಮೊಂಟಾಜ್ ಥಿಯರಿಯ ಬಗ್ಗೆ ಹೇಳುತ್ತಿಲ್ಲ. (ಮೋಂಟಾಜ್ ಥಿಯರಿಯ ಬಗ್ಗೆ ಇನ್ನೊಂದು ಕಡೆ ಬರೆದಿದ್ದೇನೆ.) ಕಥೆಯೊಂದು ಹಿಂದಿನಿಂದ ಮುಂದಕ್ಕೆ ಹೋಗಲೇಬೇಕೆ?

ನಮ್ಮ ಜೀವನದ ಕಥೆಯನ್ನು ನೆನಪಿಸಿಕೊಳ್ಳುವ. ಮೊದಲು ಯಾವ ಚಿತ್ರಗಳು ಕಣ್ಣುಮುಂದೆ ಮೂಡುತ್ತವೆ? ತುಂಬಾ ಮಹತ್ವದ ಸಂಗತಿಗಳೇ? ಮಹತ್ವವಲ್ಲದ ಸಂಗತಿಗಳೇ? ನಮ್ಮ ಜೀವನದಲ್ಲಿ ಏನೂ ಪರಿಣಾಮ ಬೀರದ ಒಂದು ಯಾವುದೋ ಚಿತ್ರವು ಮೂಡಿಬರುವುದೇ? ಯಾವ ಶಬ್ದಗಳು ನೆನಪಿನಲ್ಲಿಳಿದಿವೆ? ಯಾವ ಪದಗಳು? ಯಾವೆಲ್ಲ ವಾಸನೆಗಳು? ಎಲ್ಲದಕ್ಕೂ ಒಂದಲ್ಲ ಒಂದು ರೀತಿಯಲ್ಲಿ ಸಂಬಂಧವಿದೆಯೇ? ಸಂಬಂಧ ಕಾಣಿಸಿಕೊಳ್ಳದಿದ್ದರೂ ಯಾವುದೋ ಒಂದು ಸಂಬಂಧ ಇರಲೇಬೇಕಲ್ಲವೇ? ಯಾವುದೀ ಸಂಬಂಧ? ಯಾವುದೀ ಕಥೆ?

ಇನ್ನು ನಮ್ಮ ಸಮಾಜದ ಕಥೆಯನ್ನು ಅದೇ ರೀತಿ ಪರಿಶೀಲಿಸುವ. ಹೇಗೆ ರೂಪುಗೊಂಡಿತು ಈ ಸಮಾಜ, ಈ ದೇಶ? ಯುದ್ಧದಿಂದಲೋ, ಶಾಂತಿಯಿಂದಲೋ? ಬಲಿದಾನದಿಂದಲೋ? ಸ್ವಾರ್ಥದಿಂದಲೋ? ಇಂದು ಆಗುವ ಘಟನೆಗೂ ಮೊನ್ನೆ ಆದ ಘಟನೆಗೂ ನೂರಾರು ವರ್ಷ ಹಿಂದೆ ಎಲ್ಲೋ ಆದ ಘಟನೆಗೂ ಯಾವುದೇ ಸಂಬಂಧವಿದೆಯೇ? ಆ ಘಟನೆ ಇಂದು ಆದ ಘಟನೆಗೆ ಕಾರಣವಾಗಿದೆಯೇ? ಏನೆಲ್ಲ ಮಾಡಿದರೂ ಇತಿಹಾಸ ಮರುಕಳಿಸುತ್ತೆ ಎನ್ನುತ್ತಾರೆ, ಅದು ನಿಜವೇ? ಸಮಾಜದ ಆಗುಹೋಗುಗಳಲ್ಲಿ ಒಬ್ಬ ವ್ಯಕ್ತಿ ಎಂತಹ ಪಾತ್ರ ವಹಿಸುತ್ತಾನೆ? ಅವಳು ಅಥವಾ ಅವಳು ಪರಿಣಾಮಕಾರಿಯಾದ ಪಾತ್ರ ವಹಿಸಬಲ್ಲಳೇ? ಒಂದು ಪಾತ್ರ ವಹಿಸಬಲ್ಲಳು ಎನ್ನುವ ನಂಬಿಕೆ ಹುಸಿಯಾದರೆ?

ಇನ್ನು ದ್ವೇಷ ಮತ್ತು ಅದರೊಂದಿಗೆ ಬರುವ ಕಲಹ, ಯುದ್ಧಗಳಿಗೆ ಅರ್ಥವಿದೆಯೇ? ಇತಿಹಾಸದಿಂದ ನಾವು ಏನನ್ನೂ ಕಲಿಯುವುದೇ ಇಲ್ಲವೇ?
1994 ರಲ್ಲಿ ಬಿಡುಗಡೆಯಾದ ಚಿತ್ರ ಬಿಫೋರ್ ದ ರೇನ್ ಎನ್ನುವ ಚಿತ್ರ ಈ ಎಲ್ಲ ಪ್ರಶ್ನೆಗಳನ್ನು ಹುಟ್ಟುಹಾಕುತ್ತೆ ಎಂದು ಹೇಳಲಾಗುವುದಿಲ್ಲ. ಆದರೆ ಇಂತಹ ಅನೇಕ ಪ್ರಶ್ನೆಗಳು ಮೂಡುವುದಂತೂ ನಿಜ.

ಈ ಚಿತ್ರವನ್ನು ಮೂರು ಭಾಗಗಳಲ್ಲಿ ವಿಂಗಡಿಸಲಾಗಿದೆ; ಪದಗಳು (words), ಚಿತ್ರಗಳು (pictures) ಮತ್ತು ಚಹರೆಗಳು (faces). ಕೆಲವು ಮಕ್ಕಳು ಆಟವಾಡುತ್ತ ಒಂದು ಆಮೆಯನ್ನು ಒಂದು ಕಡೆ ಇರಿಸಿ, ಅದರ ಸುತ್ತಲೂ ಕಟ್ಟಿಗೆಗಳನ್ನಿಟ್ಟು, ಆ ಕಟ್ಟಿಗೆಗಳಿಗೆ ಬೆಂಕಿ ಹಚ್ಚುತ್ತಾರೆ. ಆಗ ಒಬ್ಬ ಬಾಲಕ ತನ್ನಲ್ಲಿದ್ದು ಜೀವಂತ ಗುಂಡುಗಳನ್ನು ಆ ಬೆಂಕಿಯಲ್ಲಿ ಹಾಕುತ್ತಾನೆ. ಆಮೆ ಸುಟ್ಟುಕರಕಲಾಗುತ್ತದೆ. ಈ ಮಕ್ಕಳ ಆಟದೊಂದಿಗೆ ಎರಡು ವರ್ಷಗಳಿಂದ ಮೌನವ್ರತ ಪಾಲಿಸುತ್ತಿರುವ ಒಬ್ಬ ಯುವ ಪಾದ್ರಿಯ ಕಥೆ ತೋರಿಸಲಾಗುತ್ತದೆ. ಒಬ್ಬ ಹದಿವಯಸ್ಸಿನ ಬಾಲಕಿ ಈ ಪಾದ್ರಿಯ ಕೊಠಡಿಯನ್ನು ಸೇರಿಕೊಳ್ಳುತ್ತಾಳೆ. ಅವಳನ್ನು ಹುಡುಕುತ್ತ ಗನ್‍ಗಳನ್ನು ಹಿಡಿದುಕೊಂಡು ಕೆಲವರು ಬರುವರು. ಅವಳು ಯಾರು, ಅವಳನ್ನು ಇವರೇಕೆ ಹುಡುಕುತ್ತಿದ್ದಾರೆ ಎನ್ನುವುದು ನಂತರ ತಿಳಿಯುತ್ತೆ.

ಎರಡನೇ ಭಾಗದಲ್ಲಿ ಅಲೆಕ್ಸಾಂಡರ್ ಕಿರ್ಕೊವ್ ಎನ್ನುವ ಯುದ್ಧಗಳನ್ನು ಕವರ್ ಮಾಡುವ ಛಾಯಾಚಿತ್ರಗ್ರಾಹಕ ಮತ್ತು ಅವನ ಗೆಳತಿ ಆ್ಯನ್‍ನ ಕಥೆಗೆ ಬರುತ್ತೇವೆ. ಆ್ಯನ್ ತನ್ನ ಗಂಡನನ್ನು ಬಿಟ್ಟು ಅಲೆಕ್ಸಾಂಡರ್ ಜೊತೆಗೆ ಹೋಗಬೇಕೆನ್ನುವ ಬಯಕೆ, ಗೊಂದಲದಲ್ಲಿದ್ದಾಳೆ. ಅಲೆಕ್ಸಾಂಡರ್ ಯಾವುದೋ ದ್ವಂದ್ವದಲ್ಲಿದ್ದಾನೆ. ತನ್ನ ತವರು ದೇಶ, ಮತ್ತು ಇತರ ಕಡೆ ನಡೆಯುತ್ತಿರುವ ಯುದ್ಧ, ತನ್ನ ಕಾರಣದಿಂದಾದ ಸಾವಿನಿಂದ ತಪ್ಪಿತಸ್ಥ ಭಾವನೆಯಿಂದ ಬಳಲುತ್ತಿದ್ದಾನೆ. ಈ ಕಥೆಯೂ ಕೊನೆಗೊಳ್ಳುವುದು ಒಂದು ದುರಂತದಿಂದಲೇ.

ಮೂರನೇ ಭಾಗದಲ್ಲಿ ಅಲೆಕ್ಸಾಂಡರ್‍ನೊಂದಿಗೆ ಮತ್ತೇ ಮೆಸಿಡೋನಿಯಾ ದೇಶದ ಅಂತಃಕಲಹಕ್ಕೆ ಮರಳುತ್ತೇವೆ. ಅಲೆಕ್ಸಾಂಡರ್ ತನ್ನ ಹುಟ್ಟೂರಿಗೆ ಯಾವ ಕಾರಣಕ್ಕೆ ಬಂದನು ಎನ್ನುವುದು ತಿಳಿಯುವುದಿಲ್ಲ. ಅಲ್ಲಿ ತನ್ನ ಸಂಬಂಧಿಕರು, ತನ್ನ ಸಂಬಂಧಿಕರೊಂದಿಗೆ ದ್ವೇಷ ಸಾಧಿಸುತ್ತಿರುವ ಇನ್ನೊಂದು ಧರ್ಮದವರು ಇರುವ ಇನ್ನೊಂದೂರಿನಲ್ಲಿ ತನ್ನ ಗೆಳತಿ ಮತ್ತು ಅವರ ಕುಟುಂಬದವರನ್ನು ಭೇಟಿ ಆಗಬೇಕಿದೆ. ಅಂತರ್ ಯುದ್ಧದಿಂದ ಬಳಲುತ್ತಿರುವ ಈ ಪ್ರದೇಶದಲ್ಲಿ ಪ್ರೀತಿ, ಕರಳು ಸಂಬಂಧಕ್ಕಿಂತ ದ್ವೇಷವೇ ಮೇಲುಗೈ ಸಾಧಿಸಿದೆ. ಅಲ್ಲಿ ಇವನು ಸಾಧಿಸುವುದಾದರೂ ಏನು? ಸಾಧಿಸುವುದಕ್ಕಾಗಿ ಬಂದಿದ್ದಾನೆಯೇ? ಮರಳಿ ಮೌನವ್ರತ ಆಚರಿಸುತ್ತಿದ್ದ ಪಾದ್ರಿಗೆ ಆ ಬಾಲಕಿ ಭೇಟಿಯಾಗುವುದಕ್ಕೂ ಮುಂಚಿನ ಕಥೆಯನ್ನು ಹೇಳಲಾಗುತ್ತದೆ. ಆಗ ಸರ್ಕಲ್ ಈಸ್ ನಾಟ್ ರೌಂಡ್ ಎನ್ನುವ ವಾಕ್ಯಕ್ಕೆ ಅರ್ಥಬರುತ್ತೆ.

ದ್ವೇಷಕ್ಕಾಗಿ ತಮ್ಮ ಪ್ರೀತಪಾತ್ರರನ್ನೇ ಕೊಲ್ಲುವ ಪ್ರವೃತ್ತಿಗೆ ಕಾರಣಗಳನ್ನು ಈ ಚಿತ್ರ ಹುಡುಕುವುದಿಲ್ಲ. ಹದಗೆಟ್ಟಿರುವ ಪರಿಸ್ಥಿತಿಯ ಭಾಗಶಃ ಚಿತ್ರಣವನ್ನು ಮಾತ್ರ ನೀಡಲಾಗುತ್ತದೆ. ಇಂತಹ ಒಂದು ಪರಿಸ್ಥಿತಿಯಲ್ಲೂ ಪ್ರೀತಿ ಹುಟ್ಟಬಲ್ಲದೇ, ಇರುವ ಪ್ರೀತಿ ಮುಂದುವರೆಯುವುದೇ? ಆಳವಾದ ಪ್ರೀತಿ, ಉತ್ಕಟವಾದ ಬಯಕೆಯನ್ನು ಹತ್ತಿಕ್ಕಲು ಸಾಧ್ಯವಾಗದೇ ಇರಬಹುದು, ಆದರೆ ಪ್ರೀತಿಸುವವರನ್ನೇ ಹತ್ತಿಕ್ಕಿದರೆ ಪ್ರೀತಿಯನ್ನೂ ಕೊಂದಂತೆಯೇ?

ಎಷ್ಟಾದರೂ ಇದೊಂದು ಸಿನೆಮಾ, ಒಂದು ಚಿತ್ರಕ್ಕೆ ಇರಬೇಕಾದ ಸ್ಟ್ರಕ್ಚರ್‍ ಅನ್ನು ಪಾಲಿಸದೇ, ಸ್ವಾತಂತ್ರವನ್ನು ಬಳಸಿ ಯುದ್ಧ ಮತ್ತು ಪ್ರೀತಿಯ ಕಥೆಯನ್ನು ಹೆಣೆದಿರುವ ಈ ಚಿತ್ರ ಒಂದು ಅದ್ಭುತ ಕಲಾಕೃತಿ. ಈ ಚಿತ್ರದ ಹಿನ್ನೆಲೆ ಸಂಗೀತ (ಅತ್ಯಂತ ಮಿತವಾಗಿ ಬಳಸಿದ), ಕೇಳಿಬರುವ ನೈಜ ಶಬ್ದಗಳು ಚಿತ್ರದ ಆಳವನ್ನು ಇನ್ನಷ್ಟು ಹೆಚ್ಚಿಸುತ್ತವೆ. ಇದು ಮೆಸೆಡೋನಿಯಾದ ನಿರ್ದೇಶಕ ಮ್ಯೂಚೊ ಮಾಂಚೆಸ್ಕಿಯ (Milcho Manchevski) ಮೊದಲ ಚಿತ್ರ. ತನ್ನ ಮೊದಲ ಚಿತ್ರದಲ್ಲೇ ಕಥನಗಾರಿಕೆಯಲ್ಲಿ ಆಟವಾಡಿ ಯಶಸ್ವಿಯಾಗಿದ್ದಾರೆ. ಕಥೆಗಾರಿಕೆಯಲ್ಲಿ ಈ ಚಿತ್ರವನ್ನು ಅನೇಕರು ಅಮೆರಿಕ ಕ್ವೆಂಟಿನ್ ಟ್ಯಾರಂಟಿನೋ ಅವರ ಪಲ್ಪ್ ಫಿಕ್ಷನ್ ಜೊತೆಗೆ ಹೋಲಿಸಿದ್ದಾರೆ. ಆದರೆ ಈ ಇಬ್ಬರೂ ದಿಗ್ಗಜರೂ ಪರಸ್ಪರ ಪ್ರಭಾವಿತರಾಗಿಲ್ಲ ಎನ್ನುವುದು ಸ್ಪಷ್ಟ. ಹಾಲಿವುಡ್‍ನ ಟ್ಯಾರಂಟಿನೊ ಕಥೆಗಾರಿಕೆಯಲ್ಲಿ ಆಟವಾಡುವುದಕ್ಕಾಗಿಯೇ ಆಟವಾಡಿದ್ದಾರೆ ಎನ್ನುವುದಾದರೆ, ಬಿಫೋರ್ ದ ರೇನ್ ಚಿತ್ರದಲ್ಲಿ ಮ್ಯಾಂಚೆಸ್ಕಿ, ಕಥೆಯ ಆಳವನ್ನು, ಆಯಾ ಪಾತ್ರಗಳ ಪಯಣದ ಆಳವನ್ನೂ, ದೇಶಕಾಲದ ಪಯಣ, ಯುದ್ಧ ದ್ವೇಷದ ಪರಿಣಾಮಗಳನ್ನು ಗಟ್ಟಿಯಾಗಿ ಅನುಭವಿಸಲು ತಮ್ಮ ಕಥನಶೈಲಿಯನ್ನು ಅಳವಡಿಸಿಕೊಂಡಿದ್ದಾರೆ.

ಚಿತ್ರದ ಹೆಸರೇ ಹೇಳುವಂತೆ, ಏನೆಲ್ಲ ಆದರೂ ಎಲ್ಲರೂ ಇಂದೋ ನಾಳೆಯೋ ಬರಲಿರುವ ಮಳೆಯನ್ನೇ ಎದುರುನೋಡುತ್ತಿದ್ದಾರೆ. ಹಿಂಸೆ, ಪ್ರೀತಿ, ಹುಟ್ಟು, ಸಾವುಗಳೆಲ್ಲವೂ ಮಳೆಯಲ್ಲಿ ತೊಯ್ದುಹೋಗುವುದರ ಮೂಲಕ ಚಿತ್ರ ಕೊನೆಗೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...