Homeಕರ್ನಾಟಕAPMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

APMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.

- Advertisement -
- Advertisement -

ಇಂಧನ ಮತ್ತು ಅಡುಗೆ ಅನಿಲ ಬೆಲೆಗಳು ಏರಿಯಾಗಿದ್ದು ಜನಸಾಮಾನ್ಯರು ಈಗಾಗಲೇ ಕಷ್ಟಪಡುತ್ತಿದ್ದಾರೆ. ಇದೀಗ ಸಾಮಾನ್ಯ ಜನರ ಪ್ರೋಟೀನ್‌ಯುಕ್ತ ಆಹಾರವಾದ ತೊಗರಿ ಬೇಳೆ ಬೆಲೆಗಳೂ ನಿಧಾನವಾಗಿ ಏರಿಕೆಯಾಗುತ್ತಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದ ನಂತರ ಹಲವಾರು ಖಾಸಗಿ ವ್ಯಾಪಾರಿಗಳು ತೊಗರಿ ಬೇಳೆಯನ್ನು ನೇರವಾಗಿ ರೈತರಿಂದ ಖರೀದಿಸಿ ಅದನ್ನು ‘ಸಂಗ್ರಹಿಸಲು’ ಪ್ರಾರಂಭಿಸಿದ್ದಾರೆ ಎನ್ನಲಾಗಿದ್ದು, ಪರಿಣಾಮವಾಗಿ, ತೊಗರಿ ಬೇಳೆ ಬೆಲೆ ದುಬಾರಿಯಾಗತೊಡಗಿದೆ.

ಅಷ್ಟೇ ಅಲ್ಲದೆ 2020 ರಲ್ಲಿ ಭಾರಿ ಮತ್ತು ಅಕಾಲಿಕ ಮಳೆ ಹಾಗೂ ಎಪಿಎಂಸಿ ಕಾಯ್ದೆಯ ತಿದ್ದುಪಡಿಯು ಕರ್ನಾಟಕದಾದ್ಯಂತ ದ್ವಿದಳ ಧಾನ್ಯಗಳ ತೀವ್ರ ಕೊರತೆಯನ್ನು ಉಂಟುಮಾಡಿದೆ ಎನ್ನಲಾಗಿದೆ. ದ್ವಿದಳ ಧಾನ್ಯಗಳ ಅತಿದೊಡ್ಡ ಉತ್ಪಾದಕ ರಾಜ್ಯವಾದ ಕರ್ನಾಟಕವೊಂದರಲ್ಲೇ, ಕಳೆದ ವರ್ಷ ಸುರಿದ ಅಕಾಲಿಕ ಮಳೆಯಿಂದಾಗಿ 66% ತೊಗರಿ ಕೊಯ್ಲು ಹಾಳಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಅಸ್ಥಿರ ಅಡಿಕೆ ಮಾರುಕಟ್ಟೆಯೂ, ಕಂಗೆಟ್ಟ ತೋಟಿಗರೂ!

ಈ ಕೊರತೆಯಿಂದಾಗಿ ಈಗಾಗಲೇ ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕಿಲೋ ತೊಗರಿ ಬೇಳೆಯ ಬೆಲೆಯು 100 ರಿಂದ 110 ರೂ.ಗಳಿಗೆ ತಲುಪಿದೆ. ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು 140 ರಿಂದ 150 ರೂ.ಗೆ ತಲುಪುವ ನಿರೀಕ್ಷೆಯಿದೆ.

ಕಾಯ್ದೆಗೆ ತಿದ್ದುಪಡಿ ಮಾಡಿದಾಗಿನಿಂದ ಎಪಿಎಂಸಿಗೆ ಸರಬರಾಜಾಗುತ್ತಿದ್ದ ತೊಗರಿ ಬೇಳೆಯು 50% ಷ್ಟು ಕುಸಿತ ಕಂಡಿದೆ ಎಂದು ಕಲಬುರಗಿ ಎಪಿಎಂಸಿ ಕಾರ್ಯದರ್ಶಿ ಶೈಲಾಜಾ ಎಂ.ವಿ ತಿಳಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ. ಈ ಎಪಿಎಂಸಿ ಮಾರುಕಟ್ಟೆಯು ಪ್ರತಿವರ್ಷ ಸರಾಸರಿ 15 ಲಕ್ಷ ಕ್ವಿಂಟಾಲ್ ತೊಗರಿ ಬೇಳೆ ಖರೀದಿಸುತ್ತದೆ.

ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ (ಎಚ್‌ಕೆಸಿಸಿಐ) ಮಾಜಿ ಅಧ್ಯಕ್ಷ ಅಮರನಾಥ್ ಸಿ. ಪಾಟೀಲ್ ಅವರ ಪ್ರಕಾರ, “ಕೆಲವು ವ್ಯಾಪಾರಿಗಳು ಈಗಾಗಲೇ ಏಜೆಂಟರ ಮೂಲಕ ದ್ವಿದಳ ಧಾನ್ಯಗಳನ್ನು ರೈತರಿಂದ ನೇರವಾಗಿ ಖರೀದಿಸುತ್ತಿದ್ದಾರೆ. ಅದನ್ನು ಸಂಗ್ರಹಣೆ ಮಾಡುದಕ್ಕಾಗಿ ನೆರೆಯ ಮಹಾರಾಷ್ಟ್ರದ ಲಾತೂರ್‌ಗೆ ಸಾಗಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ಖಾಸಗಿ ಕಂಪನಿಗಳು ಈಗಾಗಲೇ ಕಮಲಾಪುರದ ಎನ್‌ಜಿಒ ಮೂಲಕ ರೈತರನ್ನು ಖರೀದಿಗಾಗಿ ಕಾಯ್ದಿರಿಸಿದ್ದವು ಎಂದು ಕರ್ನಾಟಕ ತೊಗರಿ ಬೆಳೆಗಾರರ ​​ಸಂಘದ ಅಧ್ಯಕ್ಷ ಬಸವರಾಜ್ ಇಂಗಿನ್ ಹೇಳಿದ್ದಾರೆ. “ಇನ್ನೂ ಕೆಲವರು ಲಾತೂರ್ ಮಾರುಕಟ್ಟೆಯಲ್ಲಿ ಉತ್ಪನ್ನಗಳನ್ನು ಉತ್ತಮ ಬೆಲೆಗೆ ನೇರವಾಗಿ ಮಾರಾಟ ಮಾಡುತ್ತಿದ್ದಾರೆ. ಸುಮಾರು 50 ಟ್ರಕ್ ಲೋಡ್ ತೊಗರಿ ಮಹಾರಾಷ್ಟ್ರಕ್ಕೆ ಹೋಗುತ್ತಿತ್ತು, ಈಗ ಅದು ಹೆಚ್ಚಾಗಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷಿ ಬೆಲೆ ನಿಗದಿ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಅವರು, “ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಈ ವರ್ಷ 16% ದಷ್ಟು ತೊಗರಿ ಬೇಳೆ ಇಳುವರಿ ಹೆಚ್ಚಾಗಿದೆ. ಉತ್ಪಾದನೆ ಜಾಸ್ತಿಯಾದರೆ ಬೆಲೆಗಳು ಕಡಿಯಾಗಬೇಕಿತ್ತು, ಆದರೆ ಇಲ್ಲಿ ಹಾಗಾಗುತ್ತಿಲ್ಲ. ಯಾಕೆಂದರೆ ಎಪಿಎಂಸಿಗೆ ಈ ಹಿಂದೆ ಬರುತ್ತಿದ್ದ ತೊಗರಿ ಬೇಳೆ ಕಾಲು ಭಾಗ ಕಡಿಮೆಯಾಗಿದೆ. ಇದೆಲ್ಲಾ ಕಾಯ್ದೆ ತಿದ್ದುಪಡಿಯ ಪರಿಣಾಮವಾಗಿದೆ. ತಿದ್ದುಪಡಿಯಾಗಿ ಇನ್ನೂ ವರ್ಷವಾಗಿಲ್ಲ ಆದರೆ ಈಗಲೇ ಕಾಲು ಭಾಗ ತೊಗರಿ ಕಡಿಮೆಯಾಗಿದೆ. ಇದು ಪ್ರಾರಂಭ ಮಾತ್ರ, ಈ ಪರಿಸ್ಥಿತಿ ಇನ್ನೂ ಜಾಸ್ತಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಹೀಗಾಗಿದೆ ಎಂಬುವುದು ಸರಿಯಾದ ಕಾರಣವಲ್ಲ. ಯಾಕೆಂದರೆ ಕಲಬುರಗಿ ಜಿಲ್ಲೆಯಲ್ಲಿ ಮಾತ್ರವೆ ಅಕಾಲಿಕ ಮಳೆ ಆಗಿದೆ. ಇದು ನೇರವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಎಪಿಎಂಸಿಯನ್ನು ದುರ್ಬಲ ಮಾಡಿರುವುದು ಮುಖ್ಯಕಾರಣ. ಅಲ್ಲದೆ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಯನ್ನು ಕಿತ್ತು ಹಾಕಿರುವುದರಿಂದ ಆಹಾರ ಬೆಳೆಗಳನ್ನು ಎಷ್ಟು ಬೇಕಾದರೂ ಕೂಡಿಟ್ಟುಕೊಳ್ಳಬುದುದು, ಕಾಳ ಸಂತೆ ಮಾಡಬುದಾಗಿದೆ. ಹೀಗಾಗಿ ಈಗಾಗಲೆ ದೊಡ್ಡ ದೊಡ್ಡ ಕಂಪೆನಿಗಳು ಹೊರಗಡೆಯಿಂದ ಖರೀದಿ ಮಾಡಿದ್ದಾರೆ, ಕೂಡಿಟ್ಟಿದ್ದಾರೆ ಇದರಿಂದಾಗಿ ಬೆಲೆ ಏರಿಕೆ ಪ್ರಾರಂಭವಾಗಿದೆ” ಕಮ್ಮರಡಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಏನಿವು ಮೂರು ಕೃಷಿ ಕಾಯಿದೆಗಳು – ಮರು ಓದು

ತೊಗರಿ ಮಿಲ್ಸ್ ಅಸೋಸಿಯೇಷನ್‌ನ ಶಿವಶರಣಪ್ಪ ಮಾತನಾಡಿ, “ಪೂರೈಕೆಯ ಕೊರತೆಯಿಂದಾಗಿ ಹಲವಾರು ಗಿರಣಿಗಳು ಕೆಲಸವನ್ನು ನಿಲ್ಲಿಸಿವೆ” ಎಂದು ಹೇಳಿದ್ದಾರೆ.

ಕಲಬುರಗಿ ಜಿಲ್ಲೆ ಒಂದೇ ಕರ್ನಾಟಕದ ತೊಗರಿ ಬೇಳೆ ಉತ್ಪಾದನೆಯಲ್ಲಿ ಸುಮಾರು 50% ದಿಂದ 60% ದಷ್ಟು ಕೊಡುಗೆ ನೀಡುತ್ತದೆ.

ಬೆಂಗಳೂರು ಸಗಟು ಆಹಾರ ಧಾನ್ಯಗಳು ಮತ್ತು ಬೇಳೆಕಾಳುಗಳ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಮೇಶ್ ಚಂದ್ರ ಲಾಹೋತಿ, “ಮುಂದಿನ ಋತುವಿನವರೆಗೆ ಕೊರತೆ ಉಳಿಯುವ ಸಾಧ್ಯತೆಯಿದೆ, ಇದರಿಂದಾಗಿ ಬೆಲೆಗಳು 150 ರೂ.ಗೆ ಏರಿಕೆಯಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...