Homeಕರ್ನಾಟಕAPMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

APMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.

- Advertisement -
- Advertisement -

ಇಂಧನ ಮತ್ತು ಅಡುಗೆ ಅನಿಲ ಬೆಲೆಗಳು ಏರಿಯಾಗಿದ್ದು ಜನಸಾಮಾನ್ಯರು ಈಗಾಗಲೇ ಕಷ್ಟಪಡುತ್ತಿದ್ದಾರೆ. ಇದೀಗ ಸಾಮಾನ್ಯ ಜನರ ಪ್ರೋಟೀನ್‌ಯುಕ್ತ ಆಹಾರವಾದ ತೊಗರಿ ಬೇಳೆ ಬೆಲೆಗಳೂ ನಿಧಾನವಾಗಿ ಏರಿಕೆಯಾಗುತ್ತಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದ ನಂತರ ಹಲವಾರು ಖಾಸಗಿ ವ್ಯಾಪಾರಿಗಳು ತೊಗರಿ ಬೇಳೆಯನ್ನು ನೇರವಾಗಿ ರೈತರಿಂದ ಖರೀದಿಸಿ ಅದನ್ನು ‘ಸಂಗ್ರಹಿಸಲು’ ಪ್ರಾರಂಭಿಸಿದ್ದಾರೆ ಎನ್ನಲಾಗಿದ್ದು, ಪರಿಣಾಮವಾಗಿ, ತೊಗರಿ ಬೇಳೆ ಬೆಲೆ ದುಬಾರಿಯಾಗತೊಡಗಿದೆ.

ಅಷ್ಟೇ ಅಲ್ಲದೆ 2020 ರಲ್ಲಿ ಭಾರಿ ಮತ್ತು ಅಕಾಲಿಕ ಮಳೆ ಹಾಗೂ ಎಪಿಎಂಸಿ ಕಾಯ್ದೆಯ ತಿದ್ದುಪಡಿಯು ಕರ್ನಾಟಕದಾದ್ಯಂತ ದ್ವಿದಳ ಧಾನ್ಯಗಳ ತೀವ್ರ ಕೊರತೆಯನ್ನು ಉಂಟುಮಾಡಿದೆ ಎನ್ನಲಾಗಿದೆ. ದ್ವಿದಳ ಧಾನ್ಯಗಳ ಅತಿದೊಡ್ಡ ಉತ್ಪಾದಕ ರಾಜ್ಯವಾದ ಕರ್ನಾಟಕವೊಂದರಲ್ಲೇ, ಕಳೆದ ವರ್ಷ ಸುರಿದ ಅಕಾಲಿಕ ಮಳೆಯಿಂದಾಗಿ 66% ತೊಗರಿ ಕೊಯ್ಲು ಹಾಳಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಅಸ್ಥಿರ ಅಡಿಕೆ ಮಾರುಕಟ್ಟೆಯೂ, ಕಂಗೆಟ್ಟ ತೋಟಿಗರೂ!

ಈ ಕೊರತೆಯಿಂದಾಗಿ ಈಗಾಗಲೇ ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕಿಲೋ ತೊಗರಿ ಬೇಳೆಯ ಬೆಲೆಯು 100 ರಿಂದ 110 ರೂ.ಗಳಿಗೆ ತಲುಪಿದೆ. ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು 140 ರಿಂದ 150 ರೂ.ಗೆ ತಲುಪುವ ನಿರೀಕ್ಷೆಯಿದೆ.

ಕಾಯ್ದೆಗೆ ತಿದ್ದುಪಡಿ ಮಾಡಿದಾಗಿನಿಂದ ಎಪಿಎಂಸಿಗೆ ಸರಬರಾಜಾಗುತ್ತಿದ್ದ ತೊಗರಿ ಬೇಳೆಯು 50% ಷ್ಟು ಕುಸಿತ ಕಂಡಿದೆ ಎಂದು ಕಲಬುರಗಿ ಎಪಿಎಂಸಿ ಕಾರ್ಯದರ್ಶಿ ಶೈಲಾಜಾ ಎಂ.ವಿ ತಿಳಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ. ಈ ಎಪಿಎಂಸಿ ಮಾರುಕಟ್ಟೆಯು ಪ್ರತಿವರ್ಷ ಸರಾಸರಿ 15 ಲಕ್ಷ ಕ್ವಿಂಟಾಲ್ ತೊಗರಿ ಬೇಳೆ ಖರೀದಿಸುತ್ತದೆ.

ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ (ಎಚ್‌ಕೆಸಿಸಿಐ) ಮಾಜಿ ಅಧ್ಯಕ್ಷ ಅಮರನಾಥ್ ಸಿ. ಪಾಟೀಲ್ ಅವರ ಪ್ರಕಾರ, “ಕೆಲವು ವ್ಯಾಪಾರಿಗಳು ಈಗಾಗಲೇ ಏಜೆಂಟರ ಮೂಲಕ ದ್ವಿದಳ ಧಾನ್ಯಗಳನ್ನು ರೈತರಿಂದ ನೇರವಾಗಿ ಖರೀದಿಸುತ್ತಿದ್ದಾರೆ. ಅದನ್ನು ಸಂಗ್ರಹಣೆ ಮಾಡುದಕ್ಕಾಗಿ ನೆರೆಯ ಮಹಾರಾಷ್ಟ್ರದ ಲಾತೂರ್‌ಗೆ ಸಾಗಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ಖಾಸಗಿ ಕಂಪನಿಗಳು ಈಗಾಗಲೇ ಕಮಲಾಪುರದ ಎನ್‌ಜಿಒ ಮೂಲಕ ರೈತರನ್ನು ಖರೀದಿಗಾಗಿ ಕಾಯ್ದಿರಿಸಿದ್ದವು ಎಂದು ಕರ್ನಾಟಕ ತೊಗರಿ ಬೆಳೆಗಾರರ ​​ಸಂಘದ ಅಧ್ಯಕ್ಷ ಬಸವರಾಜ್ ಇಂಗಿನ್ ಹೇಳಿದ್ದಾರೆ. “ಇನ್ನೂ ಕೆಲವರು ಲಾತೂರ್ ಮಾರುಕಟ್ಟೆಯಲ್ಲಿ ಉತ್ಪನ್ನಗಳನ್ನು ಉತ್ತಮ ಬೆಲೆಗೆ ನೇರವಾಗಿ ಮಾರಾಟ ಮಾಡುತ್ತಿದ್ದಾರೆ. ಸುಮಾರು 50 ಟ್ರಕ್ ಲೋಡ್ ತೊಗರಿ ಮಹಾರಾಷ್ಟ್ರಕ್ಕೆ ಹೋಗುತ್ತಿತ್ತು, ಈಗ ಅದು ಹೆಚ್ಚಾಗಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷಿ ಬೆಲೆ ನಿಗದಿ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಅವರು, “ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಈ ವರ್ಷ 16% ದಷ್ಟು ತೊಗರಿ ಬೇಳೆ ಇಳುವರಿ ಹೆಚ್ಚಾಗಿದೆ. ಉತ್ಪಾದನೆ ಜಾಸ್ತಿಯಾದರೆ ಬೆಲೆಗಳು ಕಡಿಯಾಗಬೇಕಿತ್ತು, ಆದರೆ ಇಲ್ಲಿ ಹಾಗಾಗುತ್ತಿಲ್ಲ. ಯಾಕೆಂದರೆ ಎಪಿಎಂಸಿಗೆ ಈ ಹಿಂದೆ ಬರುತ್ತಿದ್ದ ತೊಗರಿ ಬೇಳೆ ಕಾಲು ಭಾಗ ಕಡಿಮೆಯಾಗಿದೆ. ಇದೆಲ್ಲಾ ಕಾಯ್ದೆ ತಿದ್ದುಪಡಿಯ ಪರಿಣಾಮವಾಗಿದೆ. ತಿದ್ದುಪಡಿಯಾಗಿ ಇನ್ನೂ ವರ್ಷವಾಗಿಲ್ಲ ಆದರೆ ಈಗಲೇ ಕಾಲು ಭಾಗ ತೊಗರಿ ಕಡಿಮೆಯಾಗಿದೆ. ಇದು ಪ್ರಾರಂಭ ಮಾತ್ರ, ಈ ಪರಿಸ್ಥಿತಿ ಇನ್ನೂ ಜಾಸ್ತಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಹೀಗಾಗಿದೆ ಎಂಬುವುದು ಸರಿಯಾದ ಕಾರಣವಲ್ಲ. ಯಾಕೆಂದರೆ ಕಲಬುರಗಿ ಜಿಲ್ಲೆಯಲ್ಲಿ ಮಾತ್ರವೆ ಅಕಾಲಿಕ ಮಳೆ ಆಗಿದೆ. ಇದು ನೇರವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಎಪಿಎಂಸಿಯನ್ನು ದುರ್ಬಲ ಮಾಡಿರುವುದು ಮುಖ್ಯಕಾರಣ. ಅಲ್ಲದೆ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಯನ್ನು ಕಿತ್ತು ಹಾಕಿರುವುದರಿಂದ ಆಹಾರ ಬೆಳೆಗಳನ್ನು ಎಷ್ಟು ಬೇಕಾದರೂ ಕೂಡಿಟ್ಟುಕೊಳ್ಳಬುದುದು, ಕಾಳ ಸಂತೆ ಮಾಡಬುದಾಗಿದೆ. ಹೀಗಾಗಿ ಈಗಾಗಲೆ ದೊಡ್ಡ ದೊಡ್ಡ ಕಂಪೆನಿಗಳು ಹೊರಗಡೆಯಿಂದ ಖರೀದಿ ಮಾಡಿದ್ದಾರೆ, ಕೂಡಿಟ್ಟಿದ್ದಾರೆ ಇದರಿಂದಾಗಿ ಬೆಲೆ ಏರಿಕೆ ಪ್ರಾರಂಭವಾಗಿದೆ” ಕಮ್ಮರಡಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಏನಿವು ಮೂರು ಕೃಷಿ ಕಾಯಿದೆಗಳು – ಮರು ಓದು

ತೊಗರಿ ಮಿಲ್ಸ್ ಅಸೋಸಿಯೇಷನ್‌ನ ಶಿವಶರಣಪ್ಪ ಮಾತನಾಡಿ, “ಪೂರೈಕೆಯ ಕೊರತೆಯಿಂದಾಗಿ ಹಲವಾರು ಗಿರಣಿಗಳು ಕೆಲಸವನ್ನು ನಿಲ್ಲಿಸಿವೆ” ಎಂದು ಹೇಳಿದ್ದಾರೆ.

ಕಲಬುರಗಿ ಜಿಲ್ಲೆ ಒಂದೇ ಕರ್ನಾಟಕದ ತೊಗರಿ ಬೇಳೆ ಉತ್ಪಾದನೆಯಲ್ಲಿ ಸುಮಾರು 50% ದಿಂದ 60% ದಷ್ಟು ಕೊಡುಗೆ ನೀಡುತ್ತದೆ.

ಬೆಂಗಳೂರು ಸಗಟು ಆಹಾರ ಧಾನ್ಯಗಳು ಮತ್ತು ಬೇಳೆಕಾಳುಗಳ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಮೇಶ್ ಚಂದ್ರ ಲಾಹೋತಿ, “ಮುಂದಿನ ಋತುವಿನವರೆಗೆ ಕೊರತೆ ಉಳಿಯುವ ಸಾಧ್ಯತೆಯಿದೆ, ಇದರಿಂದಾಗಿ ಬೆಲೆಗಳು 150 ರೂ.ಗೆ ಏರಿಕೆಯಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...