Homeಕರ್ನಾಟಕAPMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

APMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.

- Advertisement -
- Advertisement -

ಇಂಧನ ಮತ್ತು ಅಡುಗೆ ಅನಿಲ ಬೆಲೆಗಳು ಏರಿಯಾಗಿದ್ದು ಜನಸಾಮಾನ್ಯರು ಈಗಾಗಲೇ ಕಷ್ಟಪಡುತ್ತಿದ್ದಾರೆ. ಇದೀಗ ಸಾಮಾನ್ಯ ಜನರ ಪ್ರೋಟೀನ್‌ಯುಕ್ತ ಆಹಾರವಾದ ತೊಗರಿ ಬೇಳೆ ಬೆಲೆಗಳೂ ನಿಧಾನವಾಗಿ ಏರಿಕೆಯಾಗುತ್ತಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದ ನಂತರ ಹಲವಾರು ಖಾಸಗಿ ವ್ಯಾಪಾರಿಗಳು ತೊಗರಿ ಬೇಳೆಯನ್ನು ನೇರವಾಗಿ ರೈತರಿಂದ ಖರೀದಿಸಿ ಅದನ್ನು ‘ಸಂಗ್ರಹಿಸಲು’ ಪ್ರಾರಂಭಿಸಿದ್ದಾರೆ ಎನ್ನಲಾಗಿದ್ದು, ಪರಿಣಾಮವಾಗಿ, ತೊಗರಿ ಬೇಳೆ ಬೆಲೆ ದುಬಾರಿಯಾಗತೊಡಗಿದೆ.

ಅಷ್ಟೇ ಅಲ್ಲದೆ 2020 ರಲ್ಲಿ ಭಾರಿ ಮತ್ತು ಅಕಾಲಿಕ ಮಳೆ ಹಾಗೂ ಎಪಿಎಂಸಿ ಕಾಯ್ದೆಯ ತಿದ್ದುಪಡಿಯು ಕರ್ನಾಟಕದಾದ್ಯಂತ ದ್ವಿದಳ ಧಾನ್ಯಗಳ ತೀವ್ರ ಕೊರತೆಯನ್ನು ಉಂಟುಮಾಡಿದೆ ಎನ್ನಲಾಗಿದೆ. ದ್ವಿದಳ ಧಾನ್ಯಗಳ ಅತಿದೊಡ್ಡ ಉತ್ಪಾದಕ ರಾಜ್ಯವಾದ ಕರ್ನಾಟಕವೊಂದರಲ್ಲೇ, ಕಳೆದ ವರ್ಷ ಸುರಿದ ಅಕಾಲಿಕ ಮಳೆಯಿಂದಾಗಿ 66% ತೊಗರಿ ಕೊಯ್ಲು ಹಾಳಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಅಸ್ಥಿರ ಅಡಿಕೆ ಮಾರುಕಟ್ಟೆಯೂ, ಕಂಗೆಟ್ಟ ತೋಟಿಗರೂ!

ಈ ಕೊರತೆಯಿಂದಾಗಿ ಈಗಾಗಲೇ ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕಿಲೋ ತೊಗರಿ ಬೇಳೆಯ ಬೆಲೆಯು 100 ರಿಂದ 110 ರೂ.ಗಳಿಗೆ ತಲುಪಿದೆ. ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು 140 ರಿಂದ 150 ರೂ.ಗೆ ತಲುಪುವ ನಿರೀಕ್ಷೆಯಿದೆ.

ಕಾಯ್ದೆಗೆ ತಿದ್ದುಪಡಿ ಮಾಡಿದಾಗಿನಿಂದ ಎಪಿಎಂಸಿಗೆ ಸರಬರಾಜಾಗುತ್ತಿದ್ದ ತೊಗರಿ ಬೇಳೆಯು 50% ಷ್ಟು ಕುಸಿತ ಕಂಡಿದೆ ಎಂದು ಕಲಬುರಗಿ ಎಪಿಎಂಸಿ ಕಾರ್ಯದರ್ಶಿ ಶೈಲಾಜಾ ಎಂ.ವಿ ತಿಳಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ. ಈ ಎಪಿಎಂಸಿ ಮಾರುಕಟ್ಟೆಯು ಪ್ರತಿವರ್ಷ ಸರಾಸರಿ 15 ಲಕ್ಷ ಕ್ವಿಂಟಾಲ್ ತೊಗರಿ ಬೇಳೆ ಖರೀದಿಸುತ್ತದೆ.

ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ (ಎಚ್‌ಕೆಸಿಸಿಐ) ಮಾಜಿ ಅಧ್ಯಕ್ಷ ಅಮರನಾಥ್ ಸಿ. ಪಾಟೀಲ್ ಅವರ ಪ್ರಕಾರ, “ಕೆಲವು ವ್ಯಾಪಾರಿಗಳು ಈಗಾಗಲೇ ಏಜೆಂಟರ ಮೂಲಕ ದ್ವಿದಳ ಧಾನ್ಯಗಳನ್ನು ರೈತರಿಂದ ನೇರವಾಗಿ ಖರೀದಿಸುತ್ತಿದ್ದಾರೆ. ಅದನ್ನು ಸಂಗ್ರಹಣೆ ಮಾಡುದಕ್ಕಾಗಿ ನೆರೆಯ ಮಹಾರಾಷ್ಟ್ರದ ಲಾತೂರ್‌ಗೆ ಸಾಗಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ಖಾಸಗಿ ಕಂಪನಿಗಳು ಈಗಾಗಲೇ ಕಮಲಾಪುರದ ಎನ್‌ಜಿಒ ಮೂಲಕ ರೈತರನ್ನು ಖರೀದಿಗಾಗಿ ಕಾಯ್ದಿರಿಸಿದ್ದವು ಎಂದು ಕರ್ನಾಟಕ ತೊಗರಿ ಬೆಳೆಗಾರರ ​​ಸಂಘದ ಅಧ್ಯಕ್ಷ ಬಸವರಾಜ್ ಇಂಗಿನ್ ಹೇಳಿದ್ದಾರೆ. “ಇನ್ನೂ ಕೆಲವರು ಲಾತೂರ್ ಮಾರುಕಟ್ಟೆಯಲ್ಲಿ ಉತ್ಪನ್ನಗಳನ್ನು ಉತ್ತಮ ಬೆಲೆಗೆ ನೇರವಾಗಿ ಮಾರಾಟ ಮಾಡುತ್ತಿದ್ದಾರೆ. ಸುಮಾರು 50 ಟ್ರಕ್ ಲೋಡ್ ತೊಗರಿ ಮಹಾರಾಷ್ಟ್ರಕ್ಕೆ ಹೋಗುತ್ತಿತ್ತು, ಈಗ ಅದು ಹೆಚ್ಚಾಗಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷಿ ಬೆಲೆ ನಿಗದಿ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಅವರು, “ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಈ ವರ್ಷ 16% ದಷ್ಟು ತೊಗರಿ ಬೇಳೆ ಇಳುವರಿ ಹೆಚ್ಚಾಗಿದೆ. ಉತ್ಪಾದನೆ ಜಾಸ್ತಿಯಾದರೆ ಬೆಲೆಗಳು ಕಡಿಯಾಗಬೇಕಿತ್ತು, ಆದರೆ ಇಲ್ಲಿ ಹಾಗಾಗುತ್ತಿಲ್ಲ. ಯಾಕೆಂದರೆ ಎಪಿಎಂಸಿಗೆ ಈ ಹಿಂದೆ ಬರುತ್ತಿದ್ದ ತೊಗರಿ ಬೇಳೆ ಕಾಲು ಭಾಗ ಕಡಿಮೆಯಾಗಿದೆ. ಇದೆಲ್ಲಾ ಕಾಯ್ದೆ ತಿದ್ದುಪಡಿಯ ಪರಿಣಾಮವಾಗಿದೆ. ತಿದ್ದುಪಡಿಯಾಗಿ ಇನ್ನೂ ವರ್ಷವಾಗಿಲ್ಲ ಆದರೆ ಈಗಲೇ ಕಾಲು ಭಾಗ ತೊಗರಿ ಕಡಿಮೆಯಾಗಿದೆ. ಇದು ಪ್ರಾರಂಭ ಮಾತ್ರ, ಈ ಪರಿಸ್ಥಿತಿ ಇನ್ನೂ ಜಾಸ್ತಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಹೀಗಾಗಿದೆ ಎಂಬುವುದು ಸರಿಯಾದ ಕಾರಣವಲ್ಲ. ಯಾಕೆಂದರೆ ಕಲಬುರಗಿ ಜಿಲ್ಲೆಯಲ್ಲಿ ಮಾತ್ರವೆ ಅಕಾಲಿಕ ಮಳೆ ಆಗಿದೆ. ಇದು ನೇರವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಎಪಿಎಂಸಿಯನ್ನು ದುರ್ಬಲ ಮಾಡಿರುವುದು ಮುಖ್ಯಕಾರಣ. ಅಲ್ಲದೆ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಯನ್ನು ಕಿತ್ತು ಹಾಕಿರುವುದರಿಂದ ಆಹಾರ ಬೆಳೆಗಳನ್ನು ಎಷ್ಟು ಬೇಕಾದರೂ ಕೂಡಿಟ್ಟುಕೊಳ್ಳಬುದುದು, ಕಾಳ ಸಂತೆ ಮಾಡಬುದಾಗಿದೆ. ಹೀಗಾಗಿ ಈಗಾಗಲೆ ದೊಡ್ಡ ದೊಡ್ಡ ಕಂಪೆನಿಗಳು ಹೊರಗಡೆಯಿಂದ ಖರೀದಿ ಮಾಡಿದ್ದಾರೆ, ಕೂಡಿಟ್ಟಿದ್ದಾರೆ ಇದರಿಂದಾಗಿ ಬೆಲೆ ಏರಿಕೆ ಪ್ರಾರಂಭವಾಗಿದೆ” ಕಮ್ಮರಡಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಏನಿವು ಮೂರು ಕೃಷಿ ಕಾಯಿದೆಗಳು – ಮರು ಓದು

ತೊಗರಿ ಮಿಲ್ಸ್ ಅಸೋಸಿಯೇಷನ್‌ನ ಶಿವಶರಣಪ್ಪ ಮಾತನಾಡಿ, “ಪೂರೈಕೆಯ ಕೊರತೆಯಿಂದಾಗಿ ಹಲವಾರು ಗಿರಣಿಗಳು ಕೆಲಸವನ್ನು ನಿಲ್ಲಿಸಿವೆ” ಎಂದು ಹೇಳಿದ್ದಾರೆ.

ಕಲಬುರಗಿ ಜಿಲ್ಲೆ ಒಂದೇ ಕರ್ನಾಟಕದ ತೊಗರಿ ಬೇಳೆ ಉತ್ಪಾದನೆಯಲ್ಲಿ ಸುಮಾರು 50% ದಿಂದ 60% ದಷ್ಟು ಕೊಡುಗೆ ನೀಡುತ್ತದೆ.

ಬೆಂಗಳೂರು ಸಗಟು ಆಹಾರ ಧಾನ್ಯಗಳು ಮತ್ತು ಬೇಳೆಕಾಳುಗಳ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಮೇಶ್ ಚಂದ್ರ ಲಾಹೋತಿ, “ಮುಂದಿನ ಋತುವಿನವರೆಗೆ ಕೊರತೆ ಉಳಿಯುವ ಸಾಧ್ಯತೆಯಿದೆ, ಇದರಿಂದಾಗಿ ಬೆಲೆಗಳು 150 ರೂ.ಗೆ ಏರಿಕೆಯಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...