Homeಕರ್ನಾಟಕAPMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

APMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.

- Advertisement -
- Advertisement -

ಇಂಧನ ಮತ್ತು ಅಡುಗೆ ಅನಿಲ ಬೆಲೆಗಳು ಏರಿಯಾಗಿದ್ದು ಜನಸಾಮಾನ್ಯರು ಈಗಾಗಲೇ ಕಷ್ಟಪಡುತ್ತಿದ್ದಾರೆ. ಇದೀಗ ಸಾಮಾನ್ಯ ಜನರ ಪ್ರೋಟೀನ್‌ಯುಕ್ತ ಆಹಾರವಾದ ತೊಗರಿ ಬೇಳೆ ಬೆಲೆಗಳೂ ನಿಧಾನವಾಗಿ ಏರಿಕೆಯಾಗುತ್ತಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದ ನಂತರ ಹಲವಾರು ಖಾಸಗಿ ವ್ಯಾಪಾರಿಗಳು ತೊಗರಿ ಬೇಳೆಯನ್ನು ನೇರವಾಗಿ ರೈತರಿಂದ ಖರೀದಿಸಿ ಅದನ್ನು ‘ಸಂಗ್ರಹಿಸಲು’ ಪ್ರಾರಂಭಿಸಿದ್ದಾರೆ ಎನ್ನಲಾಗಿದ್ದು, ಪರಿಣಾಮವಾಗಿ, ತೊಗರಿ ಬೇಳೆ ಬೆಲೆ ದುಬಾರಿಯಾಗತೊಡಗಿದೆ.

ಅಷ್ಟೇ ಅಲ್ಲದೆ 2020 ರಲ್ಲಿ ಭಾರಿ ಮತ್ತು ಅಕಾಲಿಕ ಮಳೆ ಹಾಗೂ ಎಪಿಎಂಸಿ ಕಾಯ್ದೆಯ ತಿದ್ದುಪಡಿಯು ಕರ್ನಾಟಕದಾದ್ಯಂತ ದ್ವಿದಳ ಧಾನ್ಯಗಳ ತೀವ್ರ ಕೊರತೆಯನ್ನು ಉಂಟುಮಾಡಿದೆ ಎನ್ನಲಾಗಿದೆ. ದ್ವಿದಳ ಧಾನ್ಯಗಳ ಅತಿದೊಡ್ಡ ಉತ್ಪಾದಕ ರಾಜ್ಯವಾದ ಕರ್ನಾಟಕವೊಂದರಲ್ಲೇ, ಕಳೆದ ವರ್ಷ ಸುರಿದ ಅಕಾಲಿಕ ಮಳೆಯಿಂದಾಗಿ 66% ತೊಗರಿ ಕೊಯ್ಲು ಹಾಳಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಅಸ್ಥಿರ ಅಡಿಕೆ ಮಾರುಕಟ್ಟೆಯೂ, ಕಂಗೆಟ್ಟ ತೋಟಿಗರೂ!

ಈ ಕೊರತೆಯಿಂದಾಗಿ ಈಗಾಗಲೇ ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕಿಲೋ ತೊಗರಿ ಬೇಳೆಯ ಬೆಲೆಯು 100 ರಿಂದ 110 ರೂ.ಗಳಿಗೆ ತಲುಪಿದೆ. ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು 140 ರಿಂದ 150 ರೂ.ಗೆ ತಲುಪುವ ನಿರೀಕ್ಷೆಯಿದೆ.

ಕಾಯ್ದೆಗೆ ತಿದ್ದುಪಡಿ ಮಾಡಿದಾಗಿನಿಂದ ಎಪಿಎಂಸಿಗೆ ಸರಬರಾಜಾಗುತ್ತಿದ್ದ ತೊಗರಿ ಬೇಳೆಯು 50% ಷ್ಟು ಕುಸಿತ ಕಂಡಿದೆ ಎಂದು ಕಲಬುರಗಿ ಎಪಿಎಂಸಿ ಕಾರ್ಯದರ್ಶಿ ಶೈಲಾಜಾ ಎಂ.ವಿ ತಿಳಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ. ಈ ಎಪಿಎಂಸಿ ಮಾರುಕಟ್ಟೆಯು ಪ್ರತಿವರ್ಷ ಸರಾಸರಿ 15 ಲಕ್ಷ ಕ್ವಿಂಟಾಲ್ ತೊಗರಿ ಬೇಳೆ ಖರೀದಿಸುತ್ತದೆ.

ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ (ಎಚ್‌ಕೆಸಿಸಿಐ) ಮಾಜಿ ಅಧ್ಯಕ್ಷ ಅಮರನಾಥ್ ಸಿ. ಪಾಟೀಲ್ ಅವರ ಪ್ರಕಾರ, “ಕೆಲವು ವ್ಯಾಪಾರಿಗಳು ಈಗಾಗಲೇ ಏಜೆಂಟರ ಮೂಲಕ ದ್ವಿದಳ ಧಾನ್ಯಗಳನ್ನು ರೈತರಿಂದ ನೇರವಾಗಿ ಖರೀದಿಸುತ್ತಿದ್ದಾರೆ. ಅದನ್ನು ಸಂಗ್ರಹಣೆ ಮಾಡುದಕ್ಕಾಗಿ ನೆರೆಯ ಮಹಾರಾಷ್ಟ್ರದ ಲಾತೂರ್‌ಗೆ ಸಾಗಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ಖಾಸಗಿ ಕಂಪನಿಗಳು ಈಗಾಗಲೇ ಕಮಲಾಪುರದ ಎನ್‌ಜಿಒ ಮೂಲಕ ರೈತರನ್ನು ಖರೀದಿಗಾಗಿ ಕಾಯ್ದಿರಿಸಿದ್ದವು ಎಂದು ಕರ್ನಾಟಕ ತೊಗರಿ ಬೆಳೆಗಾರರ ​​ಸಂಘದ ಅಧ್ಯಕ್ಷ ಬಸವರಾಜ್ ಇಂಗಿನ್ ಹೇಳಿದ್ದಾರೆ. “ಇನ್ನೂ ಕೆಲವರು ಲಾತೂರ್ ಮಾರುಕಟ್ಟೆಯಲ್ಲಿ ಉತ್ಪನ್ನಗಳನ್ನು ಉತ್ತಮ ಬೆಲೆಗೆ ನೇರವಾಗಿ ಮಾರಾಟ ಮಾಡುತ್ತಿದ್ದಾರೆ. ಸುಮಾರು 50 ಟ್ರಕ್ ಲೋಡ್ ತೊಗರಿ ಮಹಾರಾಷ್ಟ್ರಕ್ಕೆ ಹೋಗುತ್ತಿತ್ತು, ಈಗ ಅದು ಹೆಚ್ಚಾಗಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷಿ ಬೆಲೆ ನಿಗದಿ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಅವರು, “ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಈ ವರ್ಷ 16% ದಷ್ಟು ತೊಗರಿ ಬೇಳೆ ಇಳುವರಿ ಹೆಚ್ಚಾಗಿದೆ. ಉತ್ಪಾದನೆ ಜಾಸ್ತಿಯಾದರೆ ಬೆಲೆಗಳು ಕಡಿಯಾಗಬೇಕಿತ್ತು, ಆದರೆ ಇಲ್ಲಿ ಹಾಗಾಗುತ್ತಿಲ್ಲ. ಯಾಕೆಂದರೆ ಎಪಿಎಂಸಿಗೆ ಈ ಹಿಂದೆ ಬರುತ್ತಿದ್ದ ತೊಗರಿ ಬೇಳೆ ಕಾಲು ಭಾಗ ಕಡಿಮೆಯಾಗಿದೆ. ಇದೆಲ್ಲಾ ಕಾಯ್ದೆ ತಿದ್ದುಪಡಿಯ ಪರಿಣಾಮವಾಗಿದೆ. ತಿದ್ದುಪಡಿಯಾಗಿ ಇನ್ನೂ ವರ್ಷವಾಗಿಲ್ಲ ಆದರೆ ಈಗಲೇ ಕಾಲು ಭಾಗ ತೊಗರಿ ಕಡಿಮೆಯಾಗಿದೆ. ಇದು ಪ್ರಾರಂಭ ಮಾತ್ರ, ಈ ಪರಿಸ್ಥಿತಿ ಇನ್ನೂ ಜಾಸ್ತಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಹೀಗಾಗಿದೆ ಎಂಬುವುದು ಸರಿಯಾದ ಕಾರಣವಲ್ಲ. ಯಾಕೆಂದರೆ ಕಲಬುರಗಿ ಜಿಲ್ಲೆಯಲ್ಲಿ ಮಾತ್ರವೆ ಅಕಾಲಿಕ ಮಳೆ ಆಗಿದೆ. ಇದು ನೇರವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಎಪಿಎಂಸಿಯನ್ನು ದುರ್ಬಲ ಮಾಡಿರುವುದು ಮುಖ್ಯಕಾರಣ. ಅಲ್ಲದೆ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಯನ್ನು ಕಿತ್ತು ಹಾಕಿರುವುದರಿಂದ ಆಹಾರ ಬೆಳೆಗಳನ್ನು ಎಷ್ಟು ಬೇಕಾದರೂ ಕೂಡಿಟ್ಟುಕೊಳ್ಳಬುದುದು, ಕಾಳ ಸಂತೆ ಮಾಡಬುದಾಗಿದೆ. ಹೀಗಾಗಿ ಈಗಾಗಲೆ ದೊಡ್ಡ ದೊಡ್ಡ ಕಂಪೆನಿಗಳು ಹೊರಗಡೆಯಿಂದ ಖರೀದಿ ಮಾಡಿದ್ದಾರೆ, ಕೂಡಿಟ್ಟಿದ್ದಾರೆ ಇದರಿಂದಾಗಿ ಬೆಲೆ ಏರಿಕೆ ಪ್ರಾರಂಭವಾಗಿದೆ” ಕಮ್ಮರಡಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಏನಿವು ಮೂರು ಕೃಷಿ ಕಾಯಿದೆಗಳು – ಮರು ಓದು

ತೊಗರಿ ಮಿಲ್ಸ್ ಅಸೋಸಿಯೇಷನ್‌ನ ಶಿವಶರಣಪ್ಪ ಮಾತನಾಡಿ, “ಪೂರೈಕೆಯ ಕೊರತೆಯಿಂದಾಗಿ ಹಲವಾರು ಗಿರಣಿಗಳು ಕೆಲಸವನ್ನು ನಿಲ್ಲಿಸಿವೆ” ಎಂದು ಹೇಳಿದ್ದಾರೆ.

ಕಲಬುರಗಿ ಜಿಲ್ಲೆ ಒಂದೇ ಕರ್ನಾಟಕದ ತೊಗರಿ ಬೇಳೆ ಉತ್ಪಾದನೆಯಲ್ಲಿ ಸುಮಾರು 50% ದಿಂದ 60% ದಷ್ಟು ಕೊಡುಗೆ ನೀಡುತ್ತದೆ.

ಬೆಂಗಳೂರು ಸಗಟು ಆಹಾರ ಧಾನ್ಯಗಳು ಮತ್ತು ಬೇಳೆಕಾಳುಗಳ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಮೇಶ್ ಚಂದ್ರ ಲಾಹೋತಿ, “ಮುಂದಿನ ಋತುವಿನವರೆಗೆ ಕೊರತೆ ಉಳಿಯುವ ಸಾಧ್ಯತೆಯಿದೆ, ಇದರಿಂದಾಗಿ ಬೆಲೆಗಳು 150 ರೂ.ಗೆ ಏರಿಕೆಯಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...