Homeಕರ್ನಾಟಕAPMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

APMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.

- Advertisement -
- Advertisement -

ಇಂಧನ ಮತ್ತು ಅಡುಗೆ ಅನಿಲ ಬೆಲೆಗಳು ಏರಿಯಾಗಿದ್ದು ಜನಸಾಮಾನ್ಯರು ಈಗಾಗಲೇ ಕಷ್ಟಪಡುತ್ತಿದ್ದಾರೆ. ಇದೀಗ ಸಾಮಾನ್ಯ ಜನರ ಪ್ರೋಟೀನ್‌ಯುಕ್ತ ಆಹಾರವಾದ ತೊಗರಿ ಬೇಳೆ ಬೆಲೆಗಳೂ ನಿಧಾನವಾಗಿ ಏರಿಕೆಯಾಗುತ್ತಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದ ನಂತರ ಹಲವಾರು ಖಾಸಗಿ ವ್ಯಾಪಾರಿಗಳು ತೊಗರಿ ಬೇಳೆಯನ್ನು ನೇರವಾಗಿ ರೈತರಿಂದ ಖರೀದಿಸಿ ಅದನ್ನು ‘ಸಂಗ್ರಹಿಸಲು’ ಪ್ರಾರಂಭಿಸಿದ್ದಾರೆ ಎನ್ನಲಾಗಿದ್ದು, ಪರಿಣಾಮವಾಗಿ, ತೊಗರಿ ಬೇಳೆ ಬೆಲೆ ದುಬಾರಿಯಾಗತೊಡಗಿದೆ.

ಅಷ್ಟೇ ಅಲ್ಲದೆ 2020 ರಲ್ಲಿ ಭಾರಿ ಮತ್ತು ಅಕಾಲಿಕ ಮಳೆ ಹಾಗೂ ಎಪಿಎಂಸಿ ಕಾಯ್ದೆಯ ತಿದ್ದುಪಡಿಯು ಕರ್ನಾಟಕದಾದ್ಯಂತ ದ್ವಿದಳ ಧಾನ್ಯಗಳ ತೀವ್ರ ಕೊರತೆಯನ್ನು ಉಂಟುಮಾಡಿದೆ ಎನ್ನಲಾಗಿದೆ. ದ್ವಿದಳ ಧಾನ್ಯಗಳ ಅತಿದೊಡ್ಡ ಉತ್ಪಾದಕ ರಾಜ್ಯವಾದ ಕರ್ನಾಟಕವೊಂದರಲ್ಲೇ, ಕಳೆದ ವರ್ಷ ಸುರಿದ ಅಕಾಲಿಕ ಮಳೆಯಿಂದಾಗಿ 66% ತೊಗರಿ ಕೊಯ್ಲು ಹಾಳಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಅಸ್ಥಿರ ಅಡಿಕೆ ಮಾರುಕಟ್ಟೆಯೂ, ಕಂಗೆಟ್ಟ ತೋಟಿಗರೂ!

ಈ ಕೊರತೆಯಿಂದಾಗಿ ಈಗಾಗಲೇ ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕಿಲೋ ತೊಗರಿ ಬೇಳೆಯ ಬೆಲೆಯು 100 ರಿಂದ 110 ರೂ.ಗಳಿಗೆ ತಲುಪಿದೆ. ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು 140 ರಿಂದ 150 ರೂ.ಗೆ ತಲುಪುವ ನಿರೀಕ್ಷೆಯಿದೆ.

ಕಾಯ್ದೆಗೆ ತಿದ್ದುಪಡಿ ಮಾಡಿದಾಗಿನಿಂದ ಎಪಿಎಂಸಿಗೆ ಸರಬರಾಜಾಗುತ್ತಿದ್ದ ತೊಗರಿ ಬೇಳೆಯು 50% ಷ್ಟು ಕುಸಿತ ಕಂಡಿದೆ ಎಂದು ಕಲಬುರಗಿ ಎಪಿಎಂಸಿ ಕಾರ್ಯದರ್ಶಿ ಶೈಲಾಜಾ ಎಂ.ವಿ ತಿಳಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ. ಈ ಎಪಿಎಂಸಿ ಮಾರುಕಟ್ಟೆಯು ಪ್ರತಿವರ್ಷ ಸರಾಸರಿ 15 ಲಕ್ಷ ಕ್ವಿಂಟಾಲ್ ತೊಗರಿ ಬೇಳೆ ಖರೀದಿಸುತ್ತದೆ.

ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ (ಎಚ್‌ಕೆಸಿಸಿಐ) ಮಾಜಿ ಅಧ್ಯಕ್ಷ ಅಮರನಾಥ್ ಸಿ. ಪಾಟೀಲ್ ಅವರ ಪ್ರಕಾರ, “ಕೆಲವು ವ್ಯಾಪಾರಿಗಳು ಈಗಾಗಲೇ ಏಜೆಂಟರ ಮೂಲಕ ದ್ವಿದಳ ಧಾನ್ಯಗಳನ್ನು ರೈತರಿಂದ ನೇರವಾಗಿ ಖರೀದಿಸುತ್ತಿದ್ದಾರೆ. ಅದನ್ನು ಸಂಗ್ರಹಣೆ ಮಾಡುದಕ್ಕಾಗಿ ನೆರೆಯ ಮಹಾರಾಷ್ಟ್ರದ ಲಾತೂರ್‌ಗೆ ಸಾಗಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ಖಾಸಗಿ ಕಂಪನಿಗಳು ಈಗಾಗಲೇ ಕಮಲಾಪುರದ ಎನ್‌ಜಿಒ ಮೂಲಕ ರೈತರನ್ನು ಖರೀದಿಗಾಗಿ ಕಾಯ್ದಿರಿಸಿದ್ದವು ಎಂದು ಕರ್ನಾಟಕ ತೊಗರಿ ಬೆಳೆಗಾರರ ​​ಸಂಘದ ಅಧ್ಯಕ್ಷ ಬಸವರಾಜ್ ಇಂಗಿನ್ ಹೇಳಿದ್ದಾರೆ. “ಇನ್ನೂ ಕೆಲವರು ಲಾತೂರ್ ಮಾರುಕಟ್ಟೆಯಲ್ಲಿ ಉತ್ಪನ್ನಗಳನ್ನು ಉತ್ತಮ ಬೆಲೆಗೆ ನೇರವಾಗಿ ಮಾರಾಟ ಮಾಡುತ್ತಿದ್ದಾರೆ. ಸುಮಾರು 50 ಟ್ರಕ್ ಲೋಡ್ ತೊಗರಿ ಮಹಾರಾಷ್ಟ್ರಕ್ಕೆ ಹೋಗುತ್ತಿತ್ತು, ಈಗ ಅದು ಹೆಚ್ಚಾಗಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷಿ ಬೆಲೆ ನಿಗದಿ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಅವರು, “ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಈ ವರ್ಷ 16% ದಷ್ಟು ತೊಗರಿ ಬೇಳೆ ಇಳುವರಿ ಹೆಚ್ಚಾಗಿದೆ. ಉತ್ಪಾದನೆ ಜಾಸ್ತಿಯಾದರೆ ಬೆಲೆಗಳು ಕಡಿಯಾಗಬೇಕಿತ್ತು, ಆದರೆ ಇಲ್ಲಿ ಹಾಗಾಗುತ್ತಿಲ್ಲ. ಯಾಕೆಂದರೆ ಎಪಿಎಂಸಿಗೆ ಈ ಹಿಂದೆ ಬರುತ್ತಿದ್ದ ತೊಗರಿ ಬೇಳೆ ಕಾಲು ಭಾಗ ಕಡಿಮೆಯಾಗಿದೆ. ಇದೆಲ್ಲಾ ಕಾಯ್ದೆ ತಿದ್ದುಪಡಿಯ ಪರಿಣಾಮವಾಗಿದೆ. ತಿದ್ದುಪಡಿಯಾಗಿ ಇನ್ನೂ ವರ್ಷವಾಗಿಲ್ಲ ಆದರೆ ಈಗಲೇ ಕಾಲು ಭಾಗ ತೊಗರಿ ಕಡಿಮೆಯಾಗಿದೆ. ಇದು ಪ್ರಾರಂಭ ಮಾತ್ರ, ಈ ಪರಿಸ್ಥಿತಿ ಇನ್ನೂ ಜಾಸ್ತಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಹೀಗಾಗಿದೆ ಎಂಬುವುದು ಸರಿಯಾದ ಕಾರಣವಲ್ಲ. ಯಾಕೆಂದರೆ ಕಲಬುರಗಿ ಜಿಲ್ಲೆಯಲ್ಲಿ ಮಾತ್ರವೆ ಅಕಾಲಿಕ ಮಳೆ ಆಗಿದೆ. ಇದು ನೇರವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಎಪಿಎಂಸಿಯನ್ನು ದುರ್ಬಲ ಮಾಡಿರುವುದು ಮುಖ್ಯಕಾರಣ. ಅಲ್ಲದೆ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಯನ್ನು ಕಿತ್ತು ಹಾಕಿರುವುದರಿಂದ ಆಹಾರ ಬೆಳೆಗಳನ್ನು ಎಷ್ಟು ಬೇಕಾದರೂ ಕೂಡಿಟ್ಟುಕೊಳ್ಳಬುದುದು, ಕಾಳ ಸಂತೆ ಮಾಡಬುದಾಗಿದೆ. ಹೀಗಾಗಿ ಈಗಾಗಲೆ ದೊಡ್ಡ ದೊಡ್ಡ ಕಂಪೆನಿಗಳು ಹೊರಗಡೆಯಿಂದ ಖರೀದಿ ಮಾಡಿದ್ದಾರೆ, ಕೂಡಿಟ್ಟಿದ್ದಾರೆ ಇದರಿಂದಾಗಿ ಬೆಲೆ ಏರಿಕೆ ಪ್ರಾರಂಭವಾಗಿದೆ” ಕಮ್ಮರಡಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಏನಿವು ಮೂರು ಕೃಷಿ ಕಾಯಿದೆಗಳು – ಮರು ಓದು

ತೊಗರಿ ಮಿಲ್ಸ್ ಅಸೋಸಿಯೇಷನ್‌ನ ಶಿವಶರಣಪ್ಪ ಮಾತನಾಡಿ, “ಪೂರೈಕೆಯ ಕೊರತೆಯಿಂದಾಗಿ ಹಲವಾರು ಗಿರಣಿಗಳು ಕೆಲಸವನ್ನು ನಿಲ್ಲಿಸಿವೆ” ಎಂದು ಹೇಳಿದ್ದಾರೆ.

ಕಲಬುರಗಿ ಜಿಲ್ಲೆ ಒಂದೇ ಕರ್ನಾಟಕದ ತೊಗರಿ ಬೇಳೆ ಉತ್ಪಾದನೆಯಲ್ಲಿ ಸುಮಾರು 50% ದಿಂದ 60% ದಷ್ಟು ಕೊಡುಗೆ ನೀಡುತ್ತದೆ.

ಬೆಂಗಳೂರು ಸಗಟು ಆಹಾರ ಧಾನ್ಯಗಳು ಮತ್ತು ಬೇಳೆಕಾಳುಗಳ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಮೇಶ್ ಚಂದ್ರ ಲಾಹೋತಿ, “ಮುಂದಿನ ಋತುವಿನವರೆಗೆ ಕೊರತೆ ಉಳಿಯುವ ಸಾಧ್ಯತೆಯಿದೆ, ಇದರಿಂದಾಗಿ ಬೆಲೆಗಳು 150 ರೂ.ಗೆ ಏರಿಕೆಯಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...