Homeಕರ್ನಾಟಕAPMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

APMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.

- Advertisement -
- Advertisement -

ಇಂಧನ ಮತ್ತು ಅಡುಗೆ ಅನಿಲ ಬೆಲೆಗಳು ಏರಿಯಾಗಿದ್ದು ಜನಸಾಮಾನ್ಯರು ಈಗಾಗಲೇ ಕಷ್ಟಪಡುತ್ತಿದ್ದಾರೆ. ಇದೀಗ ಸಾಮಾನ್ಯ ಜನರ ಪ್ರೋಟೀನ್‌ಯುಕ್ತ ಆಹಾರವಾದ ತೊಗರಿ ಬೇಳೆ ಬೆಲೆಗಳೂ ನಿಧಾನವಾಗಿ ಏರಿಕೆಯಾಗುತ್ತಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದ ನಂತರ ಹಲವಾರು ಖಾಸಗಿ ವ್ಯಾಪಾರಿಗಳು ತೊಗರಿ ಬೇಳೆಯನ್ನು ನೇರವಾಗಿ ರೈತರಿಂದ ಖರೀದಿಸಿ ಅದನ್ನು ‘ಸಂಗ್ರಹಿಸಲು’ ಪ್ರಾರಂಭಿಸಿದ್ದಾರೆ ಎನ್ನಲಾಗಿದ್ದು, ಪರಿಣಾಮವಾಗಿ, ತೊಗರಿ ಬೇಳೆ ಬೆಲೆ ದುಬಾರಿಯಾಗತೊಡಗಿದೆ.

ಅಷ್ಟೇ ಅಲ್ಲದೆ 2020 ರಲ್ಲಿ ಭಾರಿ ಮತ್ತು ಅಕಾಲಿಕ ಮಳೆ ಹಾಗೂ ಎಪಿಎಂಸಿ ಕಾಯ್ದೆಯ ತಿದ್ದುಪಡಿಯು ಕರ್ನಾಟಕದಾದ್ಯಂತ ದ್ವಿದಳ ಧಾನ್ಯಗಳ ತೀವ್ರ ಕೊರತೆಯನ್ನು ಉಂಟುಮಾಡಿದೆ ಎನ್ನಲಾಗಿದೆ. ದ್ವಿದಳ ಧಾನ್ಯಗಳ ಅತಿದೊಡ್ಡ ಉತ್ಪಾದಕ ರಾಜ್ಯವಾದ ಕರ್ನಾಟಕವೊಂದರಲ್ಲೇ, ಕಳೆದ ವರ್ಷ ಸುರಿದ ಅಕಾಲಿಕ ಮಳೆಯಿಂದಾಗಿ 66% ತೊಗರಿ ಕೊಯ್ಲು ಹಾಳಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಅಸ್ಥಿರ ಅಡಿಕೆ ಮಾರುಕಟ್ಟೆಯೂ, ಕಂಗೆಟ್ಟ ತೋಟಿಗರೂ!

ಈ ಕೊರತೆಯಿಂದಾಗಿ ಈಗಾಗಲೇ ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕಿಲೋ ತೊಗರಿ ಬೇಳೆಯ ಬೆಲೆಯು 100 ರಿಂದ 110 ರೂ.ಗಳಿಗೆ ತಲುಪಿದೆ. ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು 140 ರಿಂದ 150 ರೂ.ಗೆ ತಲುಪುವ ನಿರೀಕ್ಷೆಯಿದೆ.

ಕಾಯ್ದೆಗೆ ತಿದ್ದುಪಡಿ ಮಾಡಿದಾಗಿನಿಂದ ಎಪಿಎಂಸಿಗೆ ಸರಬರಾಜಾಗುತ್ತಿದ್ದ ತೊಗರಿ ಬೇಳೆಯು 50% ಷ್ಟು ಕುಸಿತ ಕಂಡಿದೆ ಎಂದು ಕಲಬುರಗಿ ಎಪಿಎಂಸಿ ಕಾರ್ಯದರ್ಶಿ ಶೈಲಾಜಾ ಎಂ.ವಿ ತಿಳಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ. ಈ ಎಪಿಎಂಸಿ ಮಾರುಕಟ್ಟೆಯು ಪ್ರತಿವರ್ಷ ಸರಾಸರಿ 15 ಲಕ್ಷ ಕ್ವಿಂಟಾಲ್ ತೊಗರಿ ಬೇಳೆ ಖರೀದಿಸುತ್ತದೆ.

ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ (ಎಚ್‌ಕೆಸಿಸಿಐ) ಮಾಜಿ ಅಧ್ಯಕ್ಷ ಅಮರನಾಥ್ ಸಿ. ಪಾಟೀಲ್ ಅವರ ಪ್ರಕಾರ, “ಕೆಲವು ವ್ಯಾಪಾರಿಗಳು ಈಗಾಗಲೇ ಏಜೆಂಟರ ಮೂಲಕ ದ್ವಿದಳ ಧಾನ್ಯಗಳನ್ನು ರೈತರಿಂದ ನೇರವಾಗಿ ಖರೀದಿಸುತ್ತಿದ್ದಾರೆ. ಅದನ್ನು ಸಂಗ್ರಹಣೆ ಮಾಡುದಕ್ಕಾಗಿ ನೆರೆಯ ಮಹಾರಾಷ್ಟ್ರದ ಲಾತೂರ್‌ಗೆ ಸಾಗಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ಖಾಸಗಿ ಕಂಪನಿಗಳು ಈಗಾಗಲೇ ಕಮಲಾಪುರದ ಎನ್‌ಜಿಒ ಮೂಲಕ ರೈತರನ್ನು ಖರೀದಿಗಾಗಿ ಕಾಯ್ದಿರಿಸಿದ್ದವು ಎಂದು ಕರ್ನಾಟಕ ತೊಗರಿ ಬೆಳೆಗಾರರ ​​ಸಂಘದ ಅಧ್ಯಕ್ಷ ಬಸವರಾಜ್ ಇಂಗಿನ್ ಹೇಳಿದ್ದಾರೆ. “ಇನ್ನೂ ಕೆಲವರು ಲಾತೂರ್ ಮಾರುಕಟ್ಟೆಯಲ್ಲಿ ಉತ್ಪನ್ನಗಳನ್ನು ಉತ್ತಮ ಬೆಲೆಗೆ ನೇರವಾಗಿ ಮಾರಾಟ ಮಾಡುತ್ತಿದ್ದಾರೆ. ಸುಮಾರು 50 ಟ್ರಕ್ ಲೋಡ್ ತೊಗರಿ ಮಹಾರಾಷ್ಟ್ರಕ್ಕೆ ಹೋಗುತ್ತಿತ್ತು, ಈಗ ಅದು ಹೆಚ್ಚಾಗಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷಿ ಬೆಲೆ ನಿಗದಿ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಅವರು, “ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಈ ವರ್ಷ 16% ದಷ್ಟು ತೊಗರಿ ಬೇಳೆ ಇಳುವರಿ ಹೆಚ್ಚಾಗಿದೆ. ಉತ್ಪಾದನೆ ಜಾಸ್ತಿಯಾದರೆ ಬೆಲೆಗಳು ಕಡಿಯಾಗಬೇಕಿತ್ತು, ಆದರೆ ಇಲ್ಲಿ ಹಾಗಾಗುತ್ತಿಲ್ಲ. ಯಾಕೆಂದರೆ ಎಪಿಎಂಸಿಗೆ ಈ ಹಿಂದೆ ಬರುತ್ತಿದ್ದ ತೊಗರಿ ಬೇಳೆ ಕಾಲು ಭಾಗ ಕಡಿಮೆಯಾಗಿದೆ. ಇದೆಲ್ಲಾ ಕಾಯ್ದೆ ತಿದ್ದುಪಡಿಯ ಪರಿಣಾಮವಾಗಿದೆ. ತಿದ್ದುಪಡಿಯಾಗಿ ಇನ್ನೂ ವರ್ಷವಾಗಿಲ್ಲ ಆದರೆ ಈಗಲೇ ಕಾಲು ಭಾಗ ತೊಗರಿ ಕಡಿಮೆಯಾಗಿದೆ. ಇದು ಪ್ರಾರಂಭ ಮಾತ್ರ, ಈ ಪರಿಸ್ಥಿತಿ ಇನ್ನೂ ಜಾಸ್ತಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಹೀಗಾಗಿದೆ ಎಂಬುವುದು ಸರಿಯಾದ ಕಾರಣವಲ್ಲ. ಯಾಕೆಂದರೆ ಕಲಬುರಗಿ ಜಿಲ್ಲೆಯಲ್ಲಿ ಮಾತ್ರವೆ ಅಕಾಲಿಕ ಮಳೆ ಆಗಿದೆ. ಇದು ನೇರವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಎಪಿಎಂಸಿಯನ್ನು ದುರ್ಬಲ ಮಾಡಿರುವುದು ಮುಖ್ಯಕಾರಣ. ಅಲ್ಲದೆ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಯನ್ನು ಕಿತ್ತು ಹಾಕಿರುವುದರಿಂದ ಆಹಾರ ಬೆಳೆಗಳನ್ನು ಎಷ್ಟು ಬೇಕಾದರೂ ಕೂಡಿಟ್ಟುಕೊಳ್ಳಬುದುದು, ಕಾಳ ಸಂತೆ ಮಾಡಬುದಾಗಿದೆ. ಹೀಗಾಗಿ ಈಗಾಗಲೆ ದೊಡ್ಡ ದೊಡ್ಡ ಕಂಪೆನಿಗಳು ಹೊರಗಡೆಯಿಂದ ಖರೀದಿ ಮಾಡಿದ್ದಾರೆ, ಕೂಡಿಟ್ಟಿದ್ದಾರೆ ಇದರಿಂದಾಗಿ ಬೆಲೆ ಏರಿಕೆ ಪ್ರಾರಂಭವಾಗಿದೆ” ಕಮ್ಮರಡಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಏನಿವು ಮೂರು ಕೃಷಿ ಕಾಯಿದೆಗಳು – ಮರು ಓದು

ತೊಗರಿ ಮಿಲ್ಸ್ ಅಸೋಸಿಯೇಷನ್‌ನ ಶಿವಶರಣಪ್ಪ ಮಾತನಾಡಿ, “ಪೂರೈಕೆಯ ಕೊರತೆಯಿಂದಾಗಿ ಹಲವಾರು ಗಿರಣಿಗಳು ಕೆಲಸವನ್ನು ನಿಲ್ಲಿಸಿವೆ” ಎಂದು ಹೇಳಿದ್ದಾರೆ.

ಕಲಬುರಗಿ ಜಿಲ್ಲೆ ಒಂದೇ ಕರ್ನಾಟಕದ ತೊಗರಿ ಬೇಳೆ ಉತ್ಪಾದನೆಯಲ್ಲಿ ಸುಮಾರು 50% ದಿಂದ 60% ದಷ್ಟು ಕೊಡುಗೆ ನೀಡುತ್ತದೆ.

ಬೆಂಗಳೂರು ಸಗಟು ಆಹಾರ ಧಾನ್ಯಗಳು ಮತ್ತು ಬೇಳೆಕಾಳುಗಳ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಮೇಶ್ ಚಂದ್ರ ಲಾಹೋತಿ, “ಮುಂದಿನ ಋತುವಿನವರೆಗೆ ಕೊರತೆ ಉಳಿಯುವ ಸಾಧ್ಯತೆಯಿದೆ, ಇದರಿಂದಾಗಿ ಬೆಲೆಗಳು 150 ರೂ.ಗೆ ಏರಿಕೆಯಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...