Homeಕರ್ನಾಟಕAPMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

APMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.

- Advertisement -
- Advertisement -

ಇಂಧನ ಮತ್ತು ಅಡುಗೆ ಅನಿಲ ಬೆಲೆಗಳು ಏರಿಯಾಗಿದ್ದು ಜನಸಾಮಾನ್ಯರು ಈಗಾಗಲೇ ಕಷ್ಟಪಡುತ್ತಿದ್ದಾರೆ. ಇದೀಗ ಸಾಮಾನ್ಯ ಜನರ ಪ್ರೋಟೀನ್‌ಯುಕ್ತ ಆಹಾರವಾದ ತೊಗರಿ ಬೇಳೆ ಬೆಲೆಗಳೂ ನಿಧಾನವಾಗಿ ಏರಿಕೆಯಾಗುತ್ತಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದ ನಂತರ ಹಲವಾರು ಖಾಸಗಿ ವ್ಯಾಪಾರಿಗಳು ತೊಗರಿ ಬೇಳೆಯನ್ನು ನೇರವಾಗಿ ರೈತರಿಂದ ಖರೀದಿಸಿ ಅದನ್ನು ‘ಸಂಗ್ರಹಿಸಲು’ ಪ್ರಾರಂಭಿಸಿದ್ದಾರೆ ಎನ್ನಲಾಗಿದ್ದು, ಪರಿಣಾಮವಾಗಿ, ತೊಗರಿ ಬೇಳೆ ಬೆಲೆ ದುಬಾರಿಯಾಗತೊಡಗಿದೆ.

ಅಷ್ಟೇ ಅಲ್ಲದೆ 2020 ರಲ್ಲಿ ಭಾರಿ ಮತ್ತು ಅಕಾಲಿಕ ಮಳೆ ಹಾಗೂ ಎಪಿಎಂಸಿ ಕಾಯ್ದೆಯ ತಿದ್ದುಪಡಿಯು ಕರ್ನಾಟಕದಾದ್ಯಂತ ದ್ವಿದಳ ಧಾನ್ಯಗಳ ತೀವ್ರ ಕೊರತೆಯನ್ನು ಉಂಟುಮಾಡಿದೆ ಎನ್ನಲಾಗಿದೆ. ದ್ವಿದಳ ಧಾನ್ಯಗಳ ಅತಿದೊಡ್ಡ ಉತ್ಪಾದಕ ರಾಜ್ಯವಾದ ಕರ್ನಾಟಕವೊಂದರಲ್ಲೇ, ಕಳೆದ ವರ್ಷ ಸುರಿದ ಅಕಾಲಿಕ ಮಳೆಯಿಂದಾಗಿ 66% ತೊಗರಿ ಕೊಯ್ಲು ಹಾಳಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಅಸ್ಥಿರ ಅಡಿಕೆ ಮಾರುಕಟ್ಟೆಯೂ, ಕಂಗೆಟ್ಟ ತೋಟಿಗರೂ!

ಈ ಕೊರತೆಯಿಂದಾಗಿ ಈಗಾಗಲೇ ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕಿಲೋ ತೊಗರಿ ಬೇಳೆಯ ಬೆಲೆಯು 100 ರಿಂದ 110 ರೂ.ಗಳಿಗೆ ತಲುಪಿದೆ. ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು 140 ರಿಂದ 150 ರೂ.ಗೆ ತಲುಪುವ ನಿರೀಕ್ಷೆಯಿದೆ.

ಕಾಯ್ದೆಗೆ ತಿದ್ದುಪಡಿ ಮಾಡಿದಾಗಿನಿಂದ ಎಪಿಎಂಸಿಗೆ ಸರಬರಾಜಾಗುತ್ತಿದ್ದ ತೊಗರಿ ಬೇಳೆಯು 50% ಷ್ಟು ಕುಸಿತ ಕಂಡಿದೆ ಎಂದು ಕಲಬುರಗಿ ಎಪಿಎಂಸಿ ಕಾರ್ಯದರ್ಶಿ ಶೈಲಾಜಾ ಎಂ.ವಿ ತಿಳಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ. ಈ ಎಪಿಎಂಸಿ ಮಾರುಕಟ್ಟೆಯು ಪ್ರತಿವರ್ಷ ಸರಾಸರಿ 15 ಲಕ್ಷ ಕ್ವಿಂಟಾಲ್ ತೊಗರಿ ಬೇಳೆ ಖರೀದಿಸುತ್ತದೆ.

ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ (ಎಚ್‌ಕೆಸಿಸಿಐ) ಮಾಜಿ ಅಧ್ಯಕ್ಷ ಅಮರನಾಥ್ ಸಿ. ಪಾಟೀಲ್ ಅವರ ಪ್ರಕಾರ, “ಕೆಲವು ವ್ಯಾಪಾರಿಗಳು ಈಗಾಗಲೇ ಏಜೆಂಟರ ಮೂಲಕ ದ್ವಿದಳ ಧಾನ್ಯಗಳನ್ನು ರೈತರಿಂದ ನೇರವಾಗಿ ಖರೀದಿಸುತ್ತಿದ್ದಾರೆ. ಅದನ್ನು ಸಂಗ್ರಹಣೆ ಮಾಡುದಕ್ಕಾಗಿ ನೆರೆಯ ಮಹಾರಾಷ್ಟ್ರದ ಲಾತೂರ್‌ಗೆ ಸಾಗಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ಖಾಸಗಿ ಕಂಪನಿಗಳು ಈಗಾಗಲೇ ಕಮಲಾಪುರದ ಎನ್‌ಜಿಒ ಮೂಲಕ ರೈತರನ್ನು ಖರೀದಿಗಾಗಿ ಕಾಯ್ದಿರಿಸಿದ್ದವು ಎಂದು ಕರ್ನಾಟಕ ತೊಗರಿ ಬೆಳೆಗಾರರ ​​ಸಂಘದ ಅಧ್ಯಕ್ಷ ಬಸವರಾಜ್ ಇಂಗಿನ್ ಹೇಳಿದ್ದಾರೆ. “ಇನ್ನೂ ಕೆಲವರು ಲಾತೂರ್ ಮಾರುಕಟ್ಟೆಯಲ್ಲಿ ಉತ್ಪನ್ನಗಳನ್ನು ಉತ್ತಮ ಬೆಲೆಗೆ ನೇರವಾಗಿ ಮಾರಾಟ ಮಾಡುತ್ತಿದ್ದಾರೆ. ಸುಮಾರು 50 ಟ್ರಕ್ ಲೋಡ್ ತೊಗರಿ ಮಹಾರಾಷ್ಟ್ರಕ್ಕೆ ಹೋಗುತ್ತಿತ್ತು, ಈಗ ಅದು ಹೆಚ್ಚಾಗಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷಿ ಬೆಲೆ ನಿಗದಿ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಅವರು, “ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಈ ವರ್ಷ 16% ದಷ್ಟು ತೊಗರಿ ಬೇಳೆ ಇಳುವರಿ ಹೆಚ್ಚಾಗಿದೆ. ಉತ್ಪಾದನೆ ಜಾಸ್ತಿಯಾದರೆ ಬೆಲೆಗಳು ಕಡಿಯಾಗಬೇಕಿತ್ತು, ಆದರೆ ಇಲ್ಲಿ ಹಾಗಾಗುತ್ತಿಲ್ಲ. ಯಾಕೆಂದರೆ ಎಪಿಎಂಸಿಗೆ ಈ ಹಿಂದೆ ಬರುತ್ತಿದ್ದ ತೊಗರಿ ಬೇಳೆ ಕಾಲು ಭಾಗ ಕಡಿಮೆಯಾಗಿದೆ. ಇದೆಲ್ಲಾ ಕಾಯ್ದೆ ತಿದ್ದುಪಡಿಯ ಪರಿಣಾಮವಾಗಿದೆ. ತಿದ್ದುಪಡಿಯಾಗಿ ಇನ್ನೂ ವರ್ಷವಾಗಿಲ್ಲ ಆದರೆ ಈಗಲೇ ಕಾಲು ಭಾಗ ತೊಗರಿ ಕಡಿಮೆಯಾಗಿದೆ. ಇದು ಪ್ರಾರಂಭ ಮಾತ್ರ, ಈ ಪರಿಸ್ಥಿತಿ ಇನ್ನೂ ಜಾಸ್ತಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಹೀಗಾಗಿದೆ ಎಂಬುವುದು ಸರಿಯಾದ ಕಾರಣವಲ್ಲ. ಯಾಕೆಂದರೆ ಕಲಬುರಗಿ ಜಿಲ್ಲೆಯಲ್ಲಿ ಮಾತ್ರವೆ ಅಕಾಲಿಕ ಮಳೆ ಆಗಿದೆ. ಇದು ನೇರವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಎಪಿಎಂಸಿಯನ್ನು ದುರ್ಬಲ ಮಾಡಿರುವುದು ಮುಖ್ಯಕಾರಣ. ಅಲ್ಲದೆ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಯನ್ನು ಕಿತ್ತು ಹಾಕಿರುವುದರಿಂದ ಆಹಾರ ಬೆಳೆಗಳನ್ನು ಎಷ್ಟು ಬೇಕಾದರೂ ಕೂಡಿಟ್ಟುಕೊಳ್ಳಬುದುದು, ಕಾಳ ಸಂತೆ ಮಾಡಬುದಾಗಿದೆ. ಹೀಗಾಗಿ ಈಗಾಗಲೆ ದೊಡ್ಡ ದೊಡ್ಡ ಕಂಪೆನಿಗಳು ಹೊರಗಡೆಯಿಂದ ಖರೀದಿ ಮಾಡಿದ್ದಾರೆ, ಕೂಡಿಟ್ಟಿದ್ದಾರೆ ಇದರಿಂದಾಗಿ ಬೆಲೆ ಏರಿಕೆ ಪ್ರಾರಂಭವಾಗಿದೆ” ಕಮ್ಮರಡಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಏನಿವು ಮೂರು ಕೃಷಿ ಕಾಯಿದೆಗಳು – ಮರು ಓದು

ತೊಗರಿ ಮಿಲ್ಸ್ ಅಸೋಸಿಯೇಷನ್‌ನ ಶಿವಶರಣಪ್ಪ ಮಾತನಾಡಿ, “ಪೂರೈಕೆಯ ಕೊರತೆಯಿಂದಾಗಿ ಹಲವಾರು ಗಿರಣಿಗಳು ಕೆಲಸವನ್ನು ನಿಲ್ಲಿಸಿವೆ” ಎಂದು ಹೇಳಿದ್ದಾರೆ.

ಕಲಬುರಗಿ ಜಿಲ್ಲೆ ಒಂದೇ ಕರ್ನಾಟಕದ ತೊಗರಿ ಬೇಳೆ ಉತ್ಪಾದನೆಯಲ್ಲಿ ಸುಮಾರು 50% ದಿಂದ 60% ದಷ್ಟು ಕೊಡುಗೆ ನೀಡುತ್ತದೆ.

ಬೆಂಗಳೂರು ಸಗಟು ಆಹಾರ ಧಾನ್ಯಗಳು ಮತ್ತು ಬೇಳೆಕಾಳುಗಳ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಮೇಶ್ ಚಂದ್ರ ಲಾಹೋತಿ, “ಮುಂದಿನ ಋತುವಿನವರೆಗೆ ಕೊರತೆ ಉಳಿಯುವ ಸಾಧ್ಯತೆಯಿದೆ, ಇದರಿಂದಾಗಿ ಬೆಲೆಗಳು 150 ರೂ.ಗೆ ಏರಿಕೆಯಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...