Homeಚಳವಳಿಬೇಗುಸರಾಯ್‍ನಲ್ಲಿ ಸಿಪಿಐನ ಕನ್ನಯ್ಯ ಕುಮಾರ್‍ಗೆ ಅಡ್ವಾಂಟೇಜು. ಏಕೆಂದರೆ..

ಬೇಗುಸರಾಯ್‍ನಲ್ಲಿ ಸಿಪಿಐನ ಕನ್ನಯ್ಯ ಕುಮಾರ್‍ಗೆ ಅಡ್ವಾಂಟೇಜು. ಏಕೆಂದರೆ..

- Advertisement -
- Advertisement -

| ರಾಹುಲ್ ವತ್ಸ್ |
ಅನುವಾದ: ಮಲ್ಲನಗೌಡರ್ ಪಿ.ಕೆ
ಇವತ್ತು ಏಪ್ರಿಲ್ 29, ವಿಶಿಷ್ಟ ಕಾರಣಗಳಿಗಾಗಿ ದೇಶದ ಗಮನ ಸೆಳೆದ ಬಿಹಾರಿನ ಬೇಗುಸ್‍ರಾಯ್ ಕ್ಷೇತ್ರದಲ್ಲಿ ಇಂದು ಮತದಾನ ಮುಗಿದಿದೆ. ಕೇವಲ ಜಾತಿ ಮತ್ತು ಧರ್ಮದ ದೃಷ್ಟಿಯಲ್ಲಿ ಈ ಕ್ಷೇತ್ರದ ಚುನಾವಣೆಯನ್ನು ನೋಡಿದವರಿಗೆ ನಿಜ ವಾಸ್ತವ ಅರ್ಥವಾಗಲಿಕ್ಕಿಲ್ಲ. ಇಲ್ಲಿ ಮೊದಲಿಂದಲೂ ಸಿದ್ದಾಂತ-ಐಡಿಯಾಲಜಿ ಒಂದು ಪ್ರಮುಖ ಅಂಶವಾಗಿದ್ದು, ಅದರ ಫ್ಯಾಕ್ಟರ್ ಈಗಲೂ ಹಾಗೇ ಇದೆ….

ಬೇಗುಸರಾಯ್ ಎಂಪಿ ಕ್ಷೇತ್ರಕ್ಕೆ ಬಿಹಾರ್ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಒಂದು ವಿಶಿಷ್ಟ ಮತ್ತು ಮಹತ್ವದ ಸ್ಥಾನವಿದೆ. ಇಲ್ಲಿ ಬಹುಪಾಲು ಸಲ ಐಡೆಂಟಿಟಿ ಬದಲು ಸಿದ್ದಾಂತದ ಮೇಲೆಯೇ ಆರೋಗ್ಯಕರ ಚುನಾವಣೆಗಳು ನಡೆದಿವೆ. ಸ್ವಾತಂತ್ರ್ಯಾ ನಂತರ ಈ ಕ್ಷೇತ್ರದಲ್ಲಿ ಕಮ್ಯುನಿಸಂ ಮತ್ತು ರಾಷ್ಟ್ರೀಯತೆ-ಈ ಎರಡೂ ಸಿದ್ದಾಂತಗಳಿಗೂ ಎಲ್ಲ ಜಾತಿ, ಧರ್ಮ ಮತ್ತು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಪೋರ್ಟ್ ಬೇಸ್ ಇದೆ. ಕಮ್ಯುನಿಸಂ ಅನ್ನು ಆರಂಭದಲ್ಲಿ ಸಿಪಿಐ, ನಂತರ ಸಿಪಿಎಂ, ಮತ್ತೆ ಸಿಪಿಐ ಪ್ರತಿನಿಧಿಸುತ್ತಿದ್ದರೆ, ಕಾಂಗ್ರೆಸ್ ರಾಷ್ಟ್ರೀಯತೆಯನ್ನು ಪ್ರತಿನಿಧಿಸುತ್ತಿತ್ತು. 1999ರಲ್ಲಿ ಬಿಹಾರದಲ್ಲಿ ಕಾಂಗ್ರೆಸ್ ಮಹತ್ವ ಕಳೆದುಕೊಂಡ ಮೇಲೆ, ಆ ಜಾಗವನ್ನು ಬಿಜೆಪಿ ಆಕ್ರಮಿಸಿತು.

ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಬೆಂಬಲಿಸುತ್ತಿದ್ದ, ಸಿಪಿಐ ಅಥವಾ ಬಿಜೆಪಿ ಜೊತೆ ನಿಲ್ಲಲೂ ಒಲ್ಲದ ಮುಸ್ಲಿಮರು ಆರ್‍ಜೆಡಿ, ಜೆಡಿಯು, ಎಲ್‍ಜೆಪಿ ಪಕ್ಷಗಳು ಕ್ಷೇತ್ರದಲ್ಲಿ ನೆಲೆ ಕಂಡುಕೊಳ್ಳಲು ದಾರಿ ಮಾಡಿದರು. ನಂತರ ಈ ಕ್ಷೇತ್ರದಲ್ಲೂ ಜಾತಿ, ಧರ್ಮದ ರಾಜಕೀಯ ಬಂದರೂ, ಚುನಾವಣೆಯಲ್ಲಿ ಎಂದಿನಂತೆ ಕಮ್ಯುನಿಸಂ ಮತ್ತು ರಾಷ್ಟ್ರೀಯತೆಗಳೇ ಪ್ರಮುಖ ನಿರ್ಧಾರಕ ಅಂಶಗಳಾಗಿವೆ.

ಜಾತಿ ಸಂಖ್ಯೆಗೆ ಬಂದರೆ ಮೇಲ್ಜಾತಿಯ ಭೂಮಿಹಾರರು ಹೆಚ್ಚಿನ ಸಂಖ್ಯೆಯಲ್ಲಿದ್ದರೆ, ದೂರದ ಎರಡನೇ ಸ್ಥಾನದಲ್ಲಿ ಮುಸ್ಲಿಮರಿದ್ದಾರೆ. ನಂತರದಲ್ಲಿ ಯಾದವರು, ಕುರ್ಮಿಗಳು, ಕುಶ್ವಾಹಾ, ಮಲ್ಲಹಾಗಳು, ಬ್ರಾಹ್ಮಣರು, ಎಸ್‍ಸಿ ಜಾತಿಯವರಿದ್ದಾರೆ. ಭೂಮಿಹಾರರು ರಾಜಕೀಯವಾಗಿ ಪ್ರಬಲರಾಗಿದ್ದು, ಕೆಲವು ಅಪವಾದಗಳನ್ನು ಹೊರತುಪಡಿಸಿದರೆ ಇಲ್ಲಿಂದ ಎಂಪಿಯಾದವರೆಲ್ಲ ಭೂಮಿಹಾರರೇ.

ಬಲಿಯಾ ಕ್ಷೇತ್ರ, ಪುನರ್ವಿಂಗಡಣೆ…..
ಈ ಕ್ಷೇತ್ರದ ಬಗ್ಗೆ ಅರ್ಥ ಮಾಡಿಕೊಳ್ಳಲು ಮೊದಲಿಗೆ ಇದ್ದ ಬಲಿಯಾ ಕ್ಷೇತ್ರದ ಚುನಾವಣಾ ಫಲಿತಾಂಶಗಳನ್ನು ಅಧ್ಯಯನ ಮಾಡಬೇಕು. 2008ರಲ್ಲಿ ಪುನರ್ವಿಂಡಣೆ ನಂತರವಷ್ಟೇ ಬಲಿಯಾದ ಹಲವು ವಿಧಾನಸಭಾ ಕ್ಷೇತ್ರಗಳನ್ನು ಬೇಗುಸರಾಯ್ ಜಿಲ್ಲೆಗೆ ಸೇರಿಸಿ ಬೇಗುಸರಾಯ್ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಲಾಗಿತು. ಹಾಗಾಗಿ ಹಿಂದಿನ ಬಲಿಯಾ ಕ್ಷೇತ್ರದ ಚುನಾವಣಾ ಫಲಿತಾಂಶಗಳತ್ತ ಗಮನ ಹರಿಸೋಣ. 1977ರಲ್ಲಿ ಸೃಷ್ಟಿಯಾದ ಬಲಿಯಾ ಸಂಸತ್ ಕ್ಷೇತ್ರದಲ್ಲಿ 2008ರವೆರೆಗೆ ಒಟ್ಟು 9 ಚುನಾವಣೆ ನಡೆದಿದ್ದು ಅದರಲ್ಲಿ ಸಿಪಿಐ ನಾಲ್ಕು ಸಲ ಗೆದ್ದಿದೆ. ಉಳಿದ ಐದರಲ್ಲಿ ಪ್ರತಿ ಸಲ ಬೇರೆ ಪಕ್ಷ ಗೆದ್ದಿದ್ದು, ಹೆಚ್ಚೂ ಕಡಿಮೆ ಈ ಐದರಲ್ಲಿ ಸಿಪಿಐ ಎರಡನೇ ಸ್ಥಾನದಲ್ಲಿದೆ.

ಹಿಂದಿನ ಬೇಗುಸರಾಯ್ ಕ್ಷೇತ್ರ (2008ರ ಪುನರ್ವಿಗಡಣೆಗೂ ಮೊದಲು)ದಲ್ಲಿ 1998ರವರೆಗೂ ಕಾಂಗ್ರೆಸ್ ಪ್ರಾಬಲ್ಯ ಹೊಂದಿತ್ತು. ಅಲ್ಲಿವರೆಗಿನ 12 ಚುನಾವಣೆಗಳಲ್ಲಿ ಅದು 8 ಸಲ ಗೆದ್ದಿತ್ತು. ದೇಶದಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಇದ್ದಾಗ ಮಾತ್ರ ಅದು ಅಲ್ಲಿ ಸೋತಿತ್ತು. ಹಿಂದೆ ಕಾಂಗ್ರೆಸ್‍ಗೆ ಭರ್ಜರಿ ಲೀಡ್ ಕೊಡುತ್ತಿದ್ದ ಅಸೆಂಬ್ಲಿ ಕ್ಷೇತ್ರಗಳು ಈಗಿನ ( 2008ರ ನಂತರದ) ಬೇಗುಸರಾಯ್ ಕ್ಷೇತ್ರದಲ್ಲಿ ಇಲ್ಲ.
ಹೀಗಾಗಿ, ಈಗಿನ ಬೇಗುಸ್‍ರಾಯ್ ಸಂಸತ್ ಕ್ಷೇತ್ರದಲ್ಲಿ ಬಲಾಢ್ಯ ಕೇಡರ್ ಬೇಸ್ ಇರುವುದು ಸಿಪಿಐಗೆ. ಅದಕ್ಕಾಗೇ ಇದನ್ನು ಲೆನಿನ್‍ಗಾರ್ಡ್ ಎನ್ನಲಾಗುತ್ತದೆ.

2009, 2014 ರಲ್ಲಿ ಏನಾಯ್ತು?
ಪುನರ್ವಿಂಗಡಣೆ ನಂತರ ಬೇಗುಸರಾಯ್‍ನಲ್ಲಿ ಎರಡು ಸಂಸತ್ ಚುನಾವಣೆಗಳು ನಡೆದಿವೆ. 2009ರಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿದ್ದ ಜೆಡಿಯುನ ಮೊನಜೀರ್ ಹಸನ್ 45 ಸಾವಿರ ಮತಗಳ ಅಂತರದಿಂದ ಗೆದ್ದರು. ಮತದಾನ ಪ್ರಮಾಣವೂ ಕಡಿಮೆ (ಶೇ. 48)ಆಗಿತ್ತು. ಎರಡನೇ ಸ್ಥಾನದಲ್ಲಿ ಸಿಪಿಐ ಇತ್ತು. ವಿಜೇತ ಹಸನ್ ಬಿಟ್ಟು ಉಳಿದೆಲ್ಲ ಪಕ್ಷಗಳ ಅಭ್ಯರ್ಥಿಗಳು ಭೂಮಿಹಾರರೇ ಆಗಿದ್ದರು.
2014ರಲ್ಲಿ ಜೆಡಿಯು ಎನ್‍ಡಿಎ ಭಾಗವಾಗಿರಲಿಲ್ಲ. ಅದು ಸಿಪಿಐಗೆ ಬೆಂಬಲಿಸಿತ್ತು. ಯುಪಿಎ ವಿರುದ್ಧ ಆಡಳಿತ ವಿರೋಧಿ ಅಲೆಯಿತ್ತು. ಬಿಜೆಪಿ ಹಿಂದೂ ಮತಗಳನ್ನು ಒಟ್ಟಾಗಿಸುವಲ್ಲಿ ಒಂದಿಷ್ಟು ಯಶ ಕಂಡು ಗೆದ್ದಿತ್ತು. ಸಿಪಿಐ ಮೂರನೇ ಸ್ಥಾನಕ್ಕೆ, ಆರ್‍ಜೆಡಿಯ ತನ್ವೀರ್ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು.

2019- ಪ್ರಮುಖ ನಿರ್ಣಾಯಕ ಅಂಶಗಳೇನು?
ಈಗ ಇಲ್ಲಿ ದೇಶದ ಯೂಥ್ ಐಕಾನ್ ಕನ್ನಯ್ಯಕುಮಾರ್ ಸಿಪಿಐ ಅಭ್ಯರ್ಥಿಯಾಗಿದ್ದು ಅವರು ಕೇಡರ್‍ಗಳಲ್ಲಿ ಹೊಸ ಉತ್ಸಾಹ ತುಂಬಿ, ಕ್ಷೇತ್ರದಾದ್ಯಂತ ಪರಿಣಾಮಕಾರಿ ಪ್ರಚಾರ ನಡೆಸಿದ್ದಾರೆ. ಗುಜರಾತ್ ನ ಯುವ ಶಾಸಕ ಜಿಗ್ನೇಶ್ ಮೇವಾನಿ, ಯುವ ತಾರೆ ಶೆಹ್ಲಾ ರಶೀದ್, ಜನಪರ ಚಿತ್ರನಟ ಮತ್ತು ಬೆಂಗಳೂರು ಕೇಂದ್ರ ಸ್ವತಂತ್ರ ಅಭ್ಯರ್ಥಿ ಪ್ರಕಾಶ್ ರಾಜ್ ಮುತಾಂದವರು ಕನ್ನಯ್ಯ ಪರ ಸತತ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಬಿಜೆಪಿ ಮತ್ತು ಆರ್‍ಜೆಡಿಗಳು 2009, 2014ರ ತಂತ್ರಕ್ಕೇ ಮೊರೆ ಹೋದವು. ಗಿರಿರಾಜ್ ಸಿಂಗ್‍ರನ್ನು ಕಣಕ್ಕಿಳಿಸಿದ ಬಿಜೆಪಿ ಹಿಂದುತ್ವದ ಆಧಾರದ ಮೇಲೆ ಭೂಮಿಹಾರರು, ಕುರ್ಮಿಗಳು, ಆರ್ಥಿಕವಾಗಿ ಹಿಂದುಳಿದವರು ಮತ್ತು ಎಸ್‍ಸಿ ಸಮುದಾಯದವರನ್ನು ‘ರಾಷ್ಟ್ರೀಯತೆ’ಯ ಆಧಾರದಲ್ಲಿ ತನ್ನ ಕಡೆ ವಾಲಿಸಿಕೊಳ್ಳಲು ಯತ್ನಿಸಿತು. ಜೊತೆಗೆ ಮೋದಿ, ನಿತೀಶ್, ಪಾಸ್ವಾನರವರ ಹೆಸರಲ್ಲೂ ಮತ ಯಾಚಿಸಿತು.

ಕಳೆದ ಸಲದಂತೆ ಈ ಸಲವೂ ಆರ್‍ಜೆಡಿ ಮತ್ತೆ ತನ್ವೀರ್ ಹಸನ್ ಅವರನ್ನು ಅಭ್ಯರ್ಥಿ ಮಾಡಿ, ಯಾದವ-ಮುಸ್ಲಿಂ ಮತಗಳ ಜೊತೆಗೆ ಇತರ ಸಣ್ಣ ಸಮುದಾಯಗಳ ಓಟು ಪಡೆಯಲು ಯತ್ನಿಸಿತು. ಕನ್ನಯ್ಯ ಮತ್ತು ಗಿರಿರಾಜ್ ಸಿಂಗ್ ಇಬ್ಬರೂ ಭೂಮಿಹಾರ್ ಆಗಿರುವುದರಿಂದ ಭೂಮಿಹಾರ್ ಮತಗಳ ವಿಭಜನೆಯಾಗಿ ತನಗೆ ಲಾಭ ಆಗಲಿದೆ ಎಂಬುದು ಆರ್‍ಜೆಡಿ ಲೆಕ್ಕಾಚಾರ.

ಆದರೆ, ತಳಮಟ್ಟದಲ್ಲಿ 2009, 2014ರ ವಾತಾವರಣವಿಲ್ಲ. 2009ರಲ್ಲಿ ದೊಡ್ಡ ಪ್ರಮಾಣದಲ್ಲಿ ಭೂಮಿಹಾರ್ ಮತಗಳು ವಿಭಜನೆಯಾಗಿದ್ದವು. ಈ ಸಲ ಅಷ್ಟಾಗುವುದಿಲ್ಲ. ಬಿಜೆಪಿಗೆ ಮೇಲ್ಜಾತಿ ಸಮುದಾಯಗಳಲ್ಲಿ ಗಟ್ಟಿ ಬೇಸ್ ಇದ್ದು, ಅದು ಜಡಿಯು ಮತ್ತು ಎಲ್‍ಜೆಪಿ ನೆರವಿನಿಂದ ಭೂಮಿಹಾರರ ಗರಿಷ್ಠ ಮತಗಳನ್ನು ಪಡೆಯುವ ಉಮೇದಿನಲ್ಲಿದೆ.

2009, 2014ಕ್ಕೆ ಹೋಲಿಸಿದಾಗ ಭೂಮಿಹಾರ್ ಸಮುದಾಯದಲ್ಲಿ ಸಿಪಿಐ ತನ್ನ ಬೇಸ್ ಅನ್ನು ಗಟ್ಟಿಗೊಳಿಸಿದೆ. 2014ರಲ್ಲಂತೆ ಮುಸ್ಲಿಮರು ಆರ್‍ಜೆಡಿ ಪರ ಗಟ್ಟಿಯಾಗೇನೂ ನಿಂತಿಲ್ಲ. ಬಿಜೆಪಿ ಸೋಲಿಸಬಲ್ಲ ಕನ್ನಯ್ಯನ ಕಡೆ ಮುಸ್ಲಿಮ್ ಯುವಕರು ನಿಂತಿದ್ದಾರೆ. 2014ರಲ್ಲಿ ಕೋಮು ಆಧಾರದಲ್ಲಿ ಬಿಜೆಪಿ ಮತ್ತು ಆರ್‍ಜೆಡಿ ನಡುವೆ ಹಂಚಿದ್ದ ಮತಗಳನ್ನು ಕೇಂದ್ರಿಕರಿಸಿ ಅವನ್ನು ಸಿಪಿಐ ಕಡೆ ತಿರುಗಿಸುವಲ್ಲೂ ಕನ್ನಯ್ಯ ಯಶಸ್ವಿಯಾಗಿದ್ದಾರೆ.

ಕನ್ನಯ್ಯ ಸ್ಪರ್ಧೆಯಲ್ಲೇ ಇಲ್ಲ ಎಂದು ಬಹಿರಂಗವಾಗಿ ಹೇಳುತ್ತ ಬಂದ ಗಿರಿರಾಜ್ ಮತ್ತು ತನ್ವೀರ್ ತಮ್ಮ ತಮ್ಮ ಸಮುದಾಯಗಳ ಜೊತೆಗೆ ಮಾತಾಡುವಾಗ ಕನ್ನಯ್ಯನ ವಿರುದ್ಧವೇ ಸ್ಪರ್ಧೆ ಎಂಬಂತೆ ಕನ್ನಯ್ಯರನ್ನೇ ಹೆಚ್ಚು ಟೀಕಿಸಿದರು. ಕನ್ನಯ್ಯನಿಗೆ ಮತ ಹಾಕಿದರೆ ತನ್ವೀರ್‍ಗೆ ಲಾಭ ಎಂದು ಭೂಮಿಹಾರರಿಗೆ ಗಿರಿರಾಜ್ ಹೇಳಿದರೆ, ಕನ್ನಯ್ಯನಿಗೆ ಮತ ಹಾಕಿದರೆ ಬಿಜೆಪಿಗೆ ಲಾಭ ಎಂದು ಮುಸ್ಲಿಮರಿಗೆ ತನ್ವೀರ್ ಹೇಳುತ್ತಾ ಬಂದರು.

ತನ್ನ ಪ್ರಾಮಾಣಿಕತೆ ಮತ್ತು ಬಡತನದ ಹಿನ್ನೆಲೆಯ ಕಾರಣದಿಂದ ಕನ್ನಯ್ಯ ಜನರೊಂದಿಗೆ ಮುಕ್ತವಾಗಿ ಬೆರೆಯಲು ಸಾಧ್ಯವಾಯಿತು. ಎಲ್ಲರೂ ಹೇಳುವಂತೆ ಇಲ್ಲಿ ತ್ರಿಕೋನ ಸ್ಪರ್ಧೆಯಿದೆ, ಅಂದರೆ ಈ ಸ್ಪರ್ಧೆ ಜಾತಿ, ಧರ್ಮಗಳನ್ನು ಮೀರಿದ್ದಾಗಲಿದೆ.
ಕೇವಲ ಜಾತಿ, ಧರ್ಮಗಳ ಲೆಕ್ಕದಲ್ಲಿ ನೋಡಿ ಕನ್ನಯ್ಯನಿಗೆ ಕಷ್ಟ ಎನ್ನಲು ಬರುವುದಿಲ್ಲ. ಇಲ್ಲಿ ಜಾತಿ, ಧರ್ಮಗಳನ್ನು ಮೀರಿ, ಸಿದ್ದಾಂತವು ಒಂದು ದೊಡ್ಡ ಫ್ಯಾಕ್ಟರ್ ಆಗಿದೆ. ಈ ಅಂಶವೇ ಕನ್ನಯ್ಯನ ನೆರವಿಗೆ ಬರಬಹುದು. ಈ ದೃಷ್ಟಿಯಲ್ಲಿ ಯಾರೇ ಸೋಲಲಿ, ಗೆಲ್ಲಲಿ, ಅದು ಡೆಮಾಕ್ರಸಿಯ ಗೆಲುವಂತೂ ಆಗಿರಲಿದೆ…

(ಕೃಪೆ: ದಿ ವೈರ್, ಲೇಖಕರು ಬಿಹಾರದ ಐಟಿ ವೃತ್ತಿಪರ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...