Homeಚಳವಳಿಬೇಗುಸರಾಯ್‍ನಲ್ಲಿ ಸಿಪಿಐನ ಕನ್ನಯ್ಯ ಕುಮಾರ್‍ಗೆ ಅಡ್ವಾಂಟೇಜು. ಏಕೆಂದರೆ..

ಬೇಗುಸರಾಯ್‍ನಲ್ಲಿ ಸಿಪಿಐನ ಕನ್ನಯ್ಯ ಕುಮಾರ್‍ಗೆ ಅಡ್ವಾಂಟೇಜು. ಏಕೆಂದರೆ..

- Advertisement -
- Advertisement -

| ರಾಹುಲ್ ವತ್ಸ್ |
ಅನುವಾದ: ಮಲ್ಲನಗೌಡರ್ ಪಿ.ಕೆ
ಇವತ್ತು ಏಪ್ರಿಲ್ 29, ವಿಶಿಷ್ಟ ಕಾರಣಗಳಿಗಾಗಿ ದೇಶದ ಗಮನ ಸೆಳೆದ ಬಿಹಾರಿನ ಬೇಗುಸ್‍ರಾಯ್ ಕ್ಷೇತ್ರದಲ್ಲಿ ಇಂದು ಮತದಾನ ಮುಗಿದಿದೆ. ಕೇವಲ ಜಾತಿ ಮತ್ತು ಧರ್ಮದ ದೃಷ್ಟಿಯಲ್ಲಿ ಈ ಕ್ಷೇತ್ರದ ಚುನಾವಣೆಯನ್ನು ನೋಡಿದವರಿಗೆ ನಿಜ ವಾಸ್ತವ ಅರ್ಥವಾಗಲಿಕ್ಕಿಲ್ಲ. ಇಲ್ಲಿ ಮೊದಲಿಂದಲೂ ಸಿದ್ದಾಂತ-ಐಡಿಯಾಲಜಿ ಒಂದು ಪ್ರಮುಖ ಅಂಶವಾಗಿದ್ದು, ಅದರ ಫ್ಯಾಕ್ಟರ್ ಈಗಲೂ ಹಾಗೇ ಇದೆ….

ಬೇಗುಸರಾಯ್ ಎಂಪಿ ಕ್ಷೇತ್ರಕ್ಕೆ ಬಿಹಾರ್ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಒಂದು ವಿಶಿಷ್ಟ ಮತ್ತು ಮಹತ್ವದ ಸ್ಥಾನವಿದೆ. ಇಲ್ಲಿ ಬಹುಪಾಲು ಸಲ ಐಡೆಂಟಿಟಿ ಬದಲು ಸಿದ್ದಾಂತದ ಮೇಲೆಯೇ ಆರೋಗ್ಯಕರ ಚುನಾವಣೆಗಳು ನಡೆದಿವೆ. ಸ್ವಾತಂತ್ರ್ಯಾ ನಂತರ ಈ ಕ್ಷೇತ್ರದಲ್ಲಿ ಕಮ್ಯುನಿಸಂ ಮತ್ತು ರಾಷ್ಟ್ರೀಯತೆ-ಈ ಎರಡೂ ಸಿದ್ದಾಂತಗಳಿಗೂ ಎಲ್ಲ ಜಾತಿ, ಧರ್ಮ ಮತ್ತು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಪೋರ್ಟ್ ಬೇಸ್ ಇದೆ. ಕಮ್ಯುನಿಸಂ ಅನ್ನು ಆರಂಭದಲ್ಲಿ ಸಿಪಿಐ, ನಂತರ ಸಿಪಿಎಂ, ಮತ್ತೆ ಸಿಪಿಐ ಪ್ರತಿನಿಧಿಸುತ್ತಿದ್ದರೆ, ಕಾಂಗ್ರೆಸ್ ರಾಷ್ಟ್ರೀಯತೆಯನ್ನು ಪ್ರತಿನಿಧಿಸುತ್ತಿತ್ತು. 1999ರಲ್ಲಿ ಬಿಹಾರದಲ್ಲಿ ಕಾಂಗ್ರೆಸ್ ಮಹತ್ವ ಕಳೆದುಕೊಂಡ ಮೇಲೆ, ಆ ಜಾಗವನ್ನು ಬಿಜೆಪಿ ಆಕ್ರಮಿಸಿತು.

ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಬೆಂಬಲಿಸುತ್ತಿದ್ದ, ಸಿಪಿಐ ಅಥವಾ ಬಿಜೆಪಿ ಜೊತೆ ನಿಲ್ಲಲೂ ಒಲ್ಲದ ಮುಸ್ಲಿಮರು ಆರ್‍ಜೆಡಿ, ಜೆಡಿಯು, ಎಲ್‍ಜೆಪಿ ಪಕ್ಷಗಳು ಕ್ಷೇತ್ರದಲ್ಲಿ ನೆಲೆ ಕಂಡುಕೊಳ್ಳಲು ದಾರಿ ಮಾಡಿದರು. ನಂತರ ಈ ಕ್ಷೇತ್ರದಲ್ಲೂ ಜಾತಿ, ಧರ್ಮದ ರಾಜಕೀಯ ಬಂದರೂ, ಚುನಾವಣೆಯಲ್ಲಿ ಎಂದಿನಂತೆ ಕಮ್ಯುನಿಸಂ ಮತ್ತು ರಾಷ್ಟ್ರೀಯತೆಗಳೇ ಪ್ರಮುಖ ನಿರ್ಧಾರಕ ಅಂಶಗಳಾಗಿವೆ.

ಜಾತಿ ಸಂಖ್ಯೆಗೆ ಬಂದರೆ ಮೇಲ್ಜಾತಿಯ ಭೂಮಿಹಾರರು ಹೆಚ್ಚಿನ ಸಂಖ್ಯೆಯಲ್ಲಿದ್ದರೆ, ದೂರದ ಎರಡನೇ ಸ್ಥಾನದಲ್ಲಿ ಮುಸ್ಲಿಮರಿದ್ದಾರೆ. ನಂತರದಲ್ಲಿ ಯಾದವರು, ಕುರ್ಮಿಗಳು, ಕುಶ್ವಾಹಾ, ಮಲ್ಲಹಾಗಳು, ಬ್ರಾಹ್ಮಣರು, ಎಸ್‍ಸಿ ಜಾತಿಯವರಿದ್ದಾರೆ. ಭೂಮಿಹಾರರು ರಾಜಕೀಯವಾಗಿ ಪ್ರಬಲರಾಗಿದ್ದು, ಕೆಲವು ಅಪವಾದಗಳನ್ನು ಹೊರತುಪಡಿಸಿದರೆ ಇಲ್ಲಿಂದ ಎಂಪಿಯಾದವರೆಲ್ಲ ಭೂಮಿಹಾರರೇ.

ಬಲಿಯಾ ಕ್ಷೇತ್ರ, ಪುನರ್ವಿಂಗಡಣೆ…..
ಈ ಕ್ಷೇತ್ರದ ಬಗ್ಗೆ ಅರ್ಥ ಮಾಡಿಕೊಳ್ಳಲು ಮೊದಲಿಗೆ ಇದ್ದ ಬಲಿಯಾ ಕ್ಷೇತ್ರದ ಚುನಾವಣಾ ಫಲಿತಾಂಶಗಳನ್ನು ಅಧ್ಯಯನ ಮಾಡಬೇಕು. 2008ರಲ್ಲಿ ಪುನರ್ವಿಂಡಣೆ ನಂತರವಷ್ಟೇ ಬಲಿಯಾದ ಹಲವು ವಿಧಾನಸಭಾ ಕ್ಷೇತ್ರಗಳನ್ನು ಬೇಗುಸರಾಯ್ ಜಿಲ್ಲೆಗೆ ಸೇರಿಸಿ ಬೇಗುಸರಾಯ್ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಲಾಗಿತು. ಹಾಗಾಗಿ ಹಿಂದಿನ ಬಲಿಯಾ ಕ್ಷೇತ್ರದ ಚುನಾವಣಾ ಫಲಿತಾಂಶಗಳತ್ತ ಗಮನ ಹರಿಸೋಣ. 1977ರಲ್ಲಿ ಸೃಷ್ಟಿಯಾದ ಬಲಿಯಾ ಸಂಸತ್ ಕ್ಷೇತ್ರದಲ್ಲಿ 2008ರವೆರೆಗೆ ಒಟ್ಟು 9 ಚುನಾವಣೆ ನಡೆದಿದ್ದು ಅದರಲ್ಲಿ ಸಿಪಿಐ ನಾಲ್ಕು ಸಲ ಗೆದ್ದಿದೆ. ಉಳಿದ ಐದರಲ್ಲಿ ಪ್ರತಿ ಸಲ ಬೇರೆ ಪಕ್ಷ ಗೆದ್ದಿದ್ದು, ಹೆಚ್ಚೂ ಕಡಿಮೆ ಈ ಐದರಲ್ಲಿ ಸಿಪಿಐ ಎರಡನೇ ಸ್ಥಾನದಲ್ಲಿದೆ.

ಹಿಂದಿನ ಬೇಗುಸರಾಯ್ ಕ್ಷೇತ್ರ (2008ರ ಪುನರ್ವಿಗಡಣೆಗೂ ಮೊದಲು)ದಲ್ಲಿ 1998ರವರೆಗೂ ಕಾಂಗ್ರೆಸ್ ಪ್ರಾಬಲ್ಯ ಹೊಂದಿತ್ತು. ಅಲ್ಲಿವರೆಗಿನ 12 ಚುನಾವಣೆಗಳಲ್ಲಿ ಅದು 8 ಸಲ ಗೆದ್ದಿತ್ತು. ದೇಶದಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಇದ್ದಾಗ ಮಾತ್ರ ಅದು ಅಲ್ಲಿ ಸೋತಿತ್ತು. ಹಿಂದೆ ಕಾಂಗ್ರೆಸ್‍ಗೆ ಭರ್ಜರಿ ಲೀಡ್ ಕೊಡುತ್ತಿದ್ದ ಅಸೆಂಬ್ಲಿ ಕ್ಷೇತ್ರಗಳು ಈಗಿನ ( 2008ರ ನಂತರದ) ಬೇಗುಸರಾಯ್ ಕ್ಷೇತ್ರದಲ್ಲಿ ಇಲ್ಲ.
ಹೀಗಾಗಿ, ಈಗಿನ ಬೇಗುಸ್‍ರಾಯ್ ಸಂಸತ್ ಕ್ಷೇತ್ರದಲ್ಲಿ ಬಲಾಢ್ಯ ಕೇಡರ್ ಬೇಸ್ ಇರುವುದು ಸಿಪಿಐಗೆ. ಅದಕ್ಕಾಗೇ ಇದನ್ನು ಲೆನಿನ್‍ಗಾರ್ಡ್ ಎನ್ನಲಾಗುತ್ತದೆ.

2009, 2014 ರಲ್ಲಿ ಏನಾಯ್ತು?
ಪುನರ್ವಿಂಗಡಣೆ ನಂತರ ಬೇಗುಸರಾಯ್‍ನಲ್ಲಿ ಎರಡು ಸಂಸತ್ ಚುನಾವಣೆಗಳು ನಡೆದಿವೆ. 2009ರಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿದ್ದ ಜೆಡಿಯುನ ಮೊನಜೀರ್ ಹಸನ್ 45 ಸಾವಿರ ಮತಗಳ ಅಂತರದಿಂದ ಗೆದ್ದರು. ಮತದಾನ ಪ್ರಮಾಣವೂ ಕಡಿಮೆ (ಶೇ. 48)ಆಗಿತ್ತು. ಎರಡನೇ ಸ್ಥಾನದಲ್ಲಿ ಸಿಪಿಐ ಇತ್ತು. ವಿಜೇತ ಹಸನ್ ಬಿಟ್ಟು ಉಳಿದೆಲ್ಲ ಪಕ್ಷಗಳ ಅಭ್ಯರ್ಥಿಗಳು ಭೂಮಿಹಾರರೇ ಆಗಿದ್ದರು.
2014ರಲ್ಲಿ ಜೆಡಿಯು ಎನ್‍ಡಿಎ ಭಾಗವಾಗಿರಲಿಲ್ಲ. ಅದು ಸಿಪಿಐಗೆ ಬೆಂಬಲಿಸಿತ್ತು. ಯುಪಿಎ ವಿರುದ್ಧ ಆಡಳಿತ ವಿರೋಧಿ ಅಲೆಯಿತ್ತು. ಬಿಜೆಪಿ ಹಿಂದೂ ಮತಗಳನ್ನು ಒಟ್ಟಾಗಿಸುವಲ್ಲಿ ಒಂದಿಷ್ಟು ಯಶ ಕಂಡು ಗೆದ್ದಿತ್ತು. ಸಿಪಿಐ ಮೂರನೇ ಸ್ಥಾನಕ್ಕೆ, ಆರ್‍ಜೆಡಿಯ ತನ್ವೀರ್ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು.

2019- ಪ್ರಮುಖ ನಿರ್ಣಾಯಕ ಅಂಶಗಳೇನು?
ಈಗ ಇಲ್ಲಿ ದೇಶದ ಯೂಥ್ ಐಕಾನ್ ಕನ್ನಯ್ಯಕುಮಾರ್ ಸಿಪಿಐ ಅಭ್ಯರ್ಥಿಯಾಗಿದ್ದು ಅವರು ಕೇಡರ್‍ಗಳಲ್ಲಿ ಹೊಸ ಉತ್ಸಾಹ ತುಂಬಿ, ಕ್ಷೇತ್ರದಾದ್ಯಂತ ಪರಿಣಾಮಕಾರಿ ಪ್ರಚಾರ ನಡೆಸಿದ್ದಾರೆ. ಗುಜರಾತ್ ನ ಯುವ ಶಾಸಕ ಜಿಗ್ನೇಶ್ ಮೇವಾನಿ, ಯುವ ತಾರೆ ಶೆಹ್ಲಾ ರಶೀದ್, ಜನಪರ ಚಿತ್ರನಟ ಮತ್ತು ಬೆಂಗಳೂರು ಕೇಂದ್ರ ಸ್ವತಂತ್ರ ಅಭ್ಯರ್ಥಿ ಪ್ರಕಾಶ್ ರಾಜ್ ಮುತಾಂದವರು ಕನ್ನಯ್ಯ ಪರ ಸತತ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಬಿಜೆಪಿ ಮತ್ತು ಆರ್‍ಜೆಡಿಗಳು 2009, 2014ರ ತಂತ್ರಕ್ಕೇ ಮೊರೆ ಹೋದವು. ಗಿರಿರಾಜ್ ಸಿಂಗ್‍ರನ್ನು ಕಣಕ್ಕಿಳಿಸಿದ ಬಿಜೆಪಿ ಹಿಂದುತ್ವದ ಆಧಾರದ ಮೇಲೆ ಭೂಮಿಹಾರರು, ಕುರ್ಮಿಗಳು, ಆರ್ಥಿಕವಾಗಿ ಹಿಂದುಳಿದವರು ಮತ್ತು ಎಸ್‍ಸಿ ಸಮುದಾಯದವರನ್ನು ‘ರಾಷ್ಟ್ರೀಯತೆ’ಯ ಆಧಾರದಲ್ಲಿ ತನ್ನ ಕಡೆ ವಾಲಿಸಿಕೊಳ್ಳಲು ಯತ್ನಿಸಿತು. ಜೊತೆಗೆ ಮೋದಿ, ನಿತೀಶ್, ಪಾಸ್ವಾನರವರ ಹೆಸರಲ್ಲೂ ಮತ ಯಾಚಿಸಿತು.

ಕಳೆದ ಸಲದಂತೆ ಈ ಸಲವೂ ಆರ್‍ಜೆಡಿ ಮತ್ತೆ ತನ್ವೀರ್ ಹಸನ್ ಅವರನ್ನು ಅಭ್ಯರ್ಥಿ ಮಾಡಿ, ಯಾದವ-ಮುಸ್ಲಿಂ ಮತಗಳ ಜೊತೆಗೆ ಇತರ ಸಣ್ಣ ಸಮುದಾಯಗಳ ಓಟು ಪಡೆಯಲು ಯತ್ನಿಸಿತು. ಕನ್ನಯ್ಯ ಮತ್ತು ಗಿರಿರಾಜ್ ಸಿಂಗ್ ಇಬ್ಬರೂ ಭೂಮಿಹಾರ್ ಆಗಿರುವುದರಿಂದ ಭೂಮಿಹಾರ್ ಮತಗಳ ವಿಭಜನೆಯಾಗಿ ತನಗೆ ಲಾಭ ಆಗಲಿದೆ ಎಂಬುದು ಆರ್‍ಜೆಡಿ ಲೆಕ್ಕಾಚಾರ.

ಆದರೆ, ತಳಮಟ್ಟದಲ್ಲಿ 2009, 2014ರ ವಾತಾವರಣವಿಲ್ಲ. 2009ರಲ್ಲಿ ದೊಡ್ಡ ಪ್ರಮಾಣದಲ್ಲಿ ಭೂಮಿಹಾರ್ ಮತಗಳು ವಿಭಜನೆಯಾಗಿದ್ದವು. ಈ ಸಲ ಅಷ್ಟಾಗುವುದಿಲ್ಲ. ಬಿಜೆಪಿಗೆ ಮೇಲ್ಜಾತಿ ಸಮುದಾಯಗಳಲ್ಲಿ ಗಟ್ಟಿ ಬೇಸ್ ಇದ್ದು, ಅದು ಜಡಿಯು ಮತ್ತು ಎಲ್‍ಜೆಪಿ ನೆರವಿನಿಂದ ಭೂಮಿಹಾರರ ಗರಿಷ್ಠ ಮತಗಳನ್ನು ಪಡೆಯುವ ಉಮೇದಿನಲ್ಲಿದೆ.

2009, 2014ಕ್ಕೆ ಹೋಲಿಸಿದಾಗ ಭೂಮಿಹಾರ್ ಸಮುದಾಯದಲ್ಲಿ ಸಿಪಿಐ ತನ್ನ ಬೇಸ್ ಅನ್ನು ಗಟ್ಟಿಗೊಳಿಸಿದೆ. 2014ರಲ್ಲಂತೆ ಮುಸ್ಲಿಮರು ಆರ್‍ಜೆಡಿ ಪರ ಗಟ್ಟಿಯಾಗೇನೂ ನಿಂತಿಲ್ಲ. ಬಿಜೆಪಿ ಸೋಲಿಸಬಲ್ಲ ಕನ್ನಯ್ಯನ ಕಡೆ ಮುಸ್ಲಿಮ್ ಯುವಕರು ನಿಂತಿದ್ದಾರೆ. 2014ರಲ್ಲಿ ಕೋಮು ಆಧಾರದಲ್ಲಿ ಬಿಜೆಪಿ ಮತ್ತು ಆರ್‍ಜೆಡಿ ನಡುವೆ ಹಂಚಿದ್ದ ಮತಗಳನ್ನು ಕೇಂದ್ರಿಕರಿಸಿ ಅವನ್ನು ಸಿಪಿಐ ಕಡೆ ತಿರುಗಿಸುವಲ್ಲೂ ಕನ್ನಯ್ಯ ಯಶಸ್ವಿಯಾಗಿದ್ದಾರೆ.

ಕನ್ನಯ್ಯ ಸ್ಪರ್ಧೆಯಲ್ಲೇ ಇಲ್ಲ ಎಂದು ಬಹಿರಂಗವಾಗಿ ಹೇಳುತ್ತ ಬಂದ ಗಿರಿರಾಜ್ ಮತ್ತು ತನ್ವೀರ್ ತಮ್ಮ ತಮ್ಮ ಸಮುದಾಯಗಳ ಜೊತೆಗೆ ಮಾತಾಡುವಾಗ ಕನ್ನಯ್ಯನ ವಿರುದ್ಧವೇ ಸ್ಪರ್ಧೆ ಎಂಬಂತೆ ಕನ್ನಯ್ಯರನ್ನೇ ಹೆಚ್ಚು ಟೀಕಿಸಿದರು. ಕನ್ನಯ್ಯನಿಗೆ ಮತ ಹಾಕಿದರೆ ತನ್ವೀರ್‍ಗೆ ಲಾಭ ಎಂದು ಭೂಮಿಹಾರರಿಗೆ ಗಿರಿರಾಜ್ ಹೇಳಿದರೆ, ಕನ್ನಯ್ಯನಿಗೆ ಮತ ಹಾಕಿದರೆ ಬಿಜೆಪಿಗೆ ಲಾಭ ಎಂದು ಮುಸ್ಲಿಮರಿಗೆ ತನ್ವೀರ್ ಹೇಳುತ್ತಾ ಬಂದರು.

ತನ್ನ ಪ್ರಾಮಾಣಿಕತೆ ಮತ್ತು ಬಡತನದ ಹಿನ್ನೆಲೆಯ ಕಾರಣದಿಂದ ಕನ್ನಯ್ಯ ಜನರೊಂದಿಗೆ ಮುಕ್ತವಾಗಿ ಬೆರೆಯಲು ಸಾಧ್ಯವಾಯಿತು. ಎಲ್ಲರೂ ಹೇಳುವಂತೆ ಇಲ್ಲಿ ತ್ರಿಕೋನ ಸ್ಪರ್ಧೆಯಿದೆ, ಅಂದರೆ ಈ ಸ್ಪರ್ಧೆ ಜಾತಿ, ಧರ್ಮಗಳನ್ನು ಮೀರಿದ್ದಾಗಲಿದೆ.
ಕೇವಲ ಜಾತಿ, ಧರ್ಮಗಳ ಲೆಕ್ಕದಲ್ಲಿ ನೋಡಿ ಕನ್ನಯ್ಯನಿಗೆ ಕಷ್ಟ ಎನ್ನಲು ಬರುವುದಿಲ್ಲ. ಇಲ್ಲಿ ಜಾತಿ, ಧರ್ಮಗಳನ್ನು ಮೀರಿ, ಸಿದ್ದಾಂತವು ಒಂದು ದೊಡ್ಡ ಫ್ಯಾಕ್ಟರ್ ಆಗಿದೆ. ಈ ಅಂಶವೇ ಕನ್ನಯ್ಯನ ನೆರವಿಗೆ ಬರಬಹುದು. ಈ ದೃಷ್ಟಿಯಲ್ಲಿ ಯಾರೇ ಸೋಲಲಿ, ಗೆಲ್ಲಲಿ, ಅದು ಡೆಮಾಕ್ರಸಿಯ ಗೆಲುವಂತೂ ಆಗಿರಲಿದೆ…

(ಕೃಪೆ: ದಿ ವೈರ್, ಲೇಖಕರು ಬಿಹಾರದ ಐಟಿ ವೃತ್ತಿಪರ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...