Homeಮುಖಪುಟವಿರೋಧಿಗಳ ತಲೆ ತೆಗೆಯಿರಿ ಹೇಳಿಕೆ: ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ವಿರುದ್ಧ FIR

ವಿರೋಧಿಗಳ ತಲೆ ತೆಗೆಯಿರಿ ಹೇಳಿಕೆ: ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ವಿರುದ್ಧ FIR

- Advertisement -
- Advertisement -

ಮನೆಗಳಲ್ಲಿ ಚೂಪಾದ ಆಯುಧಗಳನ್ನಿಟ್ಟುಕೊಳ್ಳಿ, ವಿರೋಧಿಗಳ ತಲೆ ಕಡಿಯಿರಿ ಎಂದು ಕೋಮು ಪ್ರಚೋದನಾ ಭಾಷಣ ಮಾಡಿದ್ದ ಭಯೋತ್ಪಾದನಾ ಆರೋಪಿ, ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ವಿರುದ್ಧ ಶಿವಮೊಗ್ಗದಲ್ಲಿ FIR ದಾಖಲಾಗಿದೆ.

ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಸುಂದರೇಶ್‌ರವರು ನೀಡಿದ ದೂರಿನನ್ವಯ ಐಪಿಸಿ ಸೆಕ್ಷನ್ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) 153ಬಿ, 268ಎ, 298,54, 508ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭಾನುವಾರ ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರಾದೇಶಿಕ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಪ್ರಗ್ಯಾಸಿಂಗ್ “ಅವರು ಬಜರಂಗದಳ ಕಾರ್ಯಕರ್ತ ಹರ್ಷ ಮತ್ತು ಇತರ ಹಿಂದೂ ವೀರರು, ಬಿಜೆಪಿ ಕಾರ್ಯಕರ್ತರನ್ನು ಚಾಕುವಿನಿಂದ ಇರಿದಿದ್ದಾರೆ. ಹಾಗಾಗಿ ನಾವು (ಹಿಂದೂಗಳು) ನಮ್ಮ ಮನೆಯಲ್ಲಿ ಆಯುಧಗಳನ್ನು ಇಟ್ಟುಕೊಳ್ಳಬೇಕು ಎಂದು ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ತರಕಾರಿಗಳನ್ನು ಕತ್ತರಿಸಲು ಬಳಸುವ ಚಾಕುಗಳನ್ನು ಕನಿಷ್ಠ ಚೂಪು ಮಾಡಿಕೊಂಡು ಇಟ್ಟುಕೊಳ್ಳಿ. ಯಾವಾಗ ಉಪಯೋಗಕ್ಕೆ ಬರುತ್ತವೆ ಹೇಳಲಾಗುವುದಿಲ್ಲ. ಸಮಯ ಬಂದಾಗ ವೈರಿಗಳ ತಲೆ ತೆಗೆಯಿರಿ” ಎಂದು ಪ್ರಚೋದಿಸಿದ್ದರು.

ಲವ್ ಜಿಹಾದ್ ಮಾಡುವವರಿಗೆ ಲವ್ ಜಿಹಾದ್ ರೀತಿಯಲ್ಲಿಯೇ ಉತ್ತರ ಕೊಡಿ. ನಿಮ್ಮ ಹೆಣ್ಣು ಮಕ್ಕಳನ್ನು ಸುರಕ್ಷಿತವಾಗಿರಿಸಿಕೊಳ್ಳಿ. ಅವರಿಗೆ ಸಂಸ್ಕಾರ ಕಲಿಸಿ ಎಂದು ಪ್ರಗ್ಯಾ ಸಿಂಗ್ ಹೇಳಿದ್ದಾರೆ.

ಸೌತ್ ಫಸ್ಟ್ ಮಾಧ್ಯಮವು ಪ್ರಕರಣ ದಾಖಲಾಗಿದಯೇ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ಪ್ರಶ್ನಿಸಿದಾಗ “ನಮಗೆ ಯಾವುದೇ ದೂರು ಬಂದಿಲ್ಲದ ಕಾರಣ ನಾವು ಯಾವುದೇ ಪ್ರಕರಣವನ್ನು ದಾಖಲಿಸಿಲ್ಲ” ಎಂದು ಹೇಳಿದ್ದರು.

ಡಿಸೆಂಬರ್ 25 ರಂದು ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ಅವರು ಮಾಡಿದ ಕೋಮು ದ್ವೇಷದ ಭಾಷಣದ ಕುರಿತು ಕರ್ನಾಟಕ ಪೊಲೀಸ್ ಮತ್ತು ಶಿವಮೊಗ್ಗ ಎಸ್ಪಿ ಅವರಿಗೆ ಇಂದು ಬೆಳಿಗ್ಗೆ ದೂರು ದಾಖಲಿಸಲಾಗಿದೆ. ಕೂಡಲೇ ಎಫ್‌ಐಆರ್ ಮಾಡಬೇಕು ಎಂದು ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಟ್ವೀಟ್ ಮಾಡಿದ್ದಾರೆ.

2008ರ ಮಲೆಂಗಾವ್ ಸ್ಪೋಟ ಪ್ರಕರಣದ ಏಳು ಆರೋಪಿಗಳಲ್ಲಿ ಒಬ್ಬರಾದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಈ ಹಿಂದೆಯು ಹಲವು ಕೋಮು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಗಾಂಧಿ ಕೊಂದ ಗೋಡ್ಸೆ ದೇಶಭಕ್ತ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದರು.

2008ರ ಸೆಪ್ಟಂಬರ್ 29 ರಂದು ಸ್ಪೋಟಕಗಳನ್ನೊಳಗೊಂಡಿದ್ದ ಮೋಟಾರ್ ಸೈಕಲ್‌ ಒಂದನ್ನು ಮಲೆಂಗಾವ್‌ನ ಮಸೀದಿಯೊಂದಕ್ಕೆ ನುಗ್ಗಿಸಿ ಸ್ಪೋಟಿಸಲಾಗಿತ್ತು. ಈ ಘಟನೆಯಲ್ಲಿ 6 ಜನ ಮೃತಪಟ್ಟು, 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಘಟನೆ ನಡೆದ 10 ವರ್ಷಗಳ ನಂತರ 2018ರ ಅಕ್ಟೋಬರ್‌ನಲ್ಲಿ ಪ್ರಗ್ಯಾ ಸಿಂಗ್ ಠಾಕೂರ್, ಕರ್ನಲ್ ಪುರೋಹಿತ್ ಸೇರಿದಂತೆ ಇತರ ಐವರ ಮೇಲೆ ನ್ಯಾಯಾಲಯ ಭಯೋತ್ಪಾದನೆಯ ಪ್ರಕರಣ ದಾಖಲಿಸಿತ್ತು.

ಇದನ್ನೂ ಓದಿ: ರಕ್ಷಣಾ ಸಚಿವಾಲಯ ಸಂಸದೀಯ ಸಮಿತಿಗೆ ಸಾಧ್ವಿ ಪ್ರಗ್ಯಾ ಸಿಂಗ್‌ ನೇಮಕ: ಕೇಂದ್ರದ ನಿರ್ಧಾರಕ್ಕೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...