Homeಮುಖಪುಟವಿರೋಧಿಗಳ ತಲೆ ತೆಗೆಯಿರಿ ಹೇಳಿಕೆ: ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ವಿರುದ್ಧ FIR

ವಿರೋಧಿಗಳ ತಲೆ ತೆಗೆಯಿರಿ ಹೇಳಿಕೆ: ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ವಿರುದ್ಧ FIR

- Advertisement -
- Advertisement -

ಮನೆಗಳಲ್ಲಿ ಚೂಪಾದ ಆಯುಧಗಳನ್ನಿಟ್ಟುಕೊಳ್ಳಿ, ವಿರೋಧಿಗಳ ತಲೆ ಕಡಿಯಿರಿ ಎಂದು ಕೋಮು ಪ್ರಚೋದನಾ ಭಾಷಣ ಮಾಡಿದ್ದ ಭಯೋತ್ಪಾದನಾ ಆರೋಪಿ, ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ವಿರುದ್ಧ ಶಿವಮೊಗ್ಗದಲ್ಲಿ FIR ದಾಖಲಾಗಿದೆ.

ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಸುಂದರೇಶ್‌ರವರು ನೀಡಿದ ದೂರಿನನ್ವಯ ಐಪಿಸಿ ಸೆಕ್ಷನ್ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) 153ಬಿ, 268ಎ, 298,54, 508ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭಾನುವಾರ ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರಾದೇಶಿಕ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಪ್ರಗ್ಯಾಸಿಂಗ್ “ಅವರು ಬಜರಂಗದಳ ಕಾರ್ಯಕರ್ತ ಹರ್ಷ ಮತ್ತು ಇತರ ಹಿಂದೂ ವೀರರು, ಬಿಜೆಪಿ ಕಾರ್ಯಕರ್ತರನ್ನು ಚಾಕುವಿನಿಂದ ಇರಿದಿದ್ದಾರೆ. ಹಾಗಾಗಿ ನಾವು (ಹಿಂದೂಗಳು) ನಮ್ಮ ಮನೆಯಲ್ಲಿ ಆಯುಧಗಳನ್ನು ಇಟ್ಟುಕೊಳ್ಳಬೇಕು ಎಂದು ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ತರಕಾರಿಗಳನ್ನು ಕತ್ತರಿಸಲು ಬಳಸುವ ಚಾಕುಗಳನ್ನು ಕನಿಷ್ಠ ಚೂಪು ಮಾಡಿಕೊಂಡು ಇಟ್ಟುಕೊಳ್ಳಿ. ಯಾವಾಗ ಉಪಯೋಗಕ್ಕೆ ಬರುತ್ತವೆ ಹೇಳಲಾಗುವುದಿಲ್ಲ. ಸಮಯ ಬಂದಾಗ ವೈರಿಗಳ ತಲೆ ತೆಗೆಯಿರಿ” ಎಂದು ಪ್ರಚೋದಿಸಿದ್ದರು.

ಲವ್ ಜಿಹಾದ್ ಮಾಡುವವರಿಗೆ ಲವ್ ಜಿಹಾದ್ ರೀತಿಯಲ್ಲಿಯೇ ಉತ್ತರ ಕೊಡಿ. ನಿಮ್ಮ ಹೆಣ್ಣು ಮಕ್ಕಳನ್ನು ಸುರಕ್ಷಿತವಾಗಿರಿಸಿಕೊಳ್ಳಿ. ಅವರಿಗೆ ಸಂಸ್ಕಾರ ಕಲಿಸಿ ಎಂದು ಪ್ರಗ್ಯಾ ಸಿಂಗ್ ಹೇಳಿದ್ದಾರೆ.

ಸೌತ್ ಫಸ್ಟ್ ಮಾಧ್ಯಮವು ಪ್ರಕರಣ ದಾಖಲಾಗಿದಯೇ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ಪ್ರಶ್ನಿಸಿದಾಗ “ನಮಗೆ ಯಾವುದೇ ದೂರು ಬಂದಿಲ್ಲದ ಕಾರಣ ನಾವು ಯಾವುದೇ ಪ್ರಕರಣವನ್ನು ದಾಖಲಿಸಿಲ್ಲ” ಎಂದು ಹೇಳಿದ್ದರು.

ಡಿಸೆಂಬರ್ 25 ರಂದು ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ಅವರು ಮಾಡಿದ ಕೋಮು ದ್ವೇಷದ ಭಾಷಣದ ಕುರಿತು ಕರ್ನಾಟಕ ಪೊಲೀಸ್ ಮತ್ತು ಶಿವಮೊಗ್ಗ ಎಸ್ಪಿ ಅವರಿಗೆ ಇಂದು ಬೆಳಿಗ್ಗೆ ದೂರು ದಾಖಲಿಸಲಾಗಿದೆ. ಕೂಡಲೇ ಎಫ್‌ಐಆರ್ ಮಾಡಬೇಕು ಎಂದು ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಟ್ವೀಟ್ ಮಾಡಿದ್ದಾರೆ.

2008ರ ಮಲೆಂಗಾವ್ ಸ್ಪೋಟ ಪ್ರಕರಣದ ಏಳು ಆರೋಪಿಗಳಲ್ಲಿ ಒಬ್ಬರಾದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಈ ಹಿಂದೆಯು ಹಲವು ಕೋಮು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಗಾಂಧಿ ಕೊಂದ ಗೋಡ್ಸೆ ದೇಶಭಕ್ತ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದರು.

2008ರ ಸೆಪ್ಟಂಬರ್ 29 ರಂದು ಸ್ಪೋಟಕಗಳನ್ನೊಳಗೊಂಡಿದ್ದ ಮೋಟಾರ್ ಸೈಕಲ್‌ ಒಂದನ್ನು ಮಲೆಂಗಾವ್‌ನ ಮಸೀದಿಯೊಂದಕ್ಕೆ ನುಗ್ಗಿಸಿ ಸ್ಪೋಟಿಸಲಾಗಿತ್ತು. ಈ ಘಟನೆಯಲ್ಲಿ 6 ಜನ ಮೃತಪಟ್ಟು, 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಘಟನೆ ನಡೆದ 10 ವರ್ಷಗಳ ನಂತರ 2018ರ ಅಕ್ಟೋಬರ್‌ನಲ್ಲಿ ಪ್ರಗ್ಯಾ ಸಿಂಗ್ ಠಾಕೂರ್, ಕರ್ನಲ್ ಪುರೋಹಿತ್ ಸೇರಿದಂತೆ ಇತರ ಐವರ ಮೇಲೆ ನ್ಯಾಯಾಲಯ ಭಯೋತ್ಪಾದನೆಯ ಪ್ರಕರಣ ದಾಖಲಿಸಿತ್ತು.

ಇದನ್ನೂ ಓದಿ: ರಕ್ಷಣಾ ಸಚಿವಾಲಯ ಸಂಸದೀಯ ಸಮಿತಿಗೆ ಸಾಧ್ವಿ ಪ್ರಗ್ಯಾ ಸಿಂಗ್‌ ನೇಮಕ: ಕೇಂದ್ರದ ನಿರ್ಧಾರಕ್ಕೆ ವಿರೋಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...