Homeಕರ್ನಾಟಕಆಯ್ಕೆಯಾಗಿದ್ದರೂ ಆದೇಶ ಪತ್ರ ನೀಡದ ಕಾಲೇಜು ಶಿಕ್ಷಣ ಇಲಾಖೆ; ಧರಣಿ ಕೂತ ಪ್ರಾಧ್ಯಾಪಕರು

ಆಯ್ಕೆಯಾಗಿದ್ದರೂ ಆದೇಶ ಪತ್ರ ನೀಡದ ಕಾಲೇಜು ಶಿಕ್ಷಣ ಇಲಾಖೆ; ಧರಣಿ ಕೂತ ಪ್ರಾಧ್ಯಾಪಕರು

- Advertisement -
- Advertisement -

ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಿಗೆ ಆಯ್ಕೆಗೊಂಡಿರುವ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯನ್ನು, ಆರ್ಥಿಕ ಸಂಕಷ್ಟ ಕಾರಣ ನೀಡಿ ಸರ್ಕಾರ ತಡೆಹಿಡಿದಿದ್ದು, ಇದನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಆಯ್ಕೆಗೊಂಡಿರುವ ಪ್ರಾಧ್ಯಾಪಕರು ಬೆಂಗಳೂರಿನ ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯಕಚೇರಿಯ ಮುಂಬಾಗದಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ನೀಡಿದ್ದ ಆದೇಶದಂತೆ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ನೀಡಲಾಗಿತ್ತು. ಅದರಂತೆ ಸಹಾಯಕ ಪ್ರಾಧ್ಯಾಪಕರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ ಕೊರೊನಾ ಆರ್ಥಿಕ ಸಂಕಷ್ಟದ ಹೆಸರಲ್ಲಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿರುವ ಸುಮಾರು 300ಕ್ಕೂ ಹೆಚ್ಚು ಅಭ್ಯರ್ಥಿಗಳ ನೇಮಕಾತಿಯನ್ನು 2020-21 ನೇ ಸಾಲಿನಲ್ಲಿ ತಡೆಹಿಡಿಯಲಾಗಿದೆ.

ಇದನ್ನೂ ಓದಿ: ಸಂಬಳ ಕೊಡದೆ ’ಕೊರೊನಾ ವಾರಿಯರ್ಸ್‌’ಗಳನ್ನು ದುಡಿಸುತ್ತಿರುವ ರಾಜ್ಯ ಸರ್ಕಾರ!

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಪ್ರಾಧ್ಯಾಪಕರೊಬ್ಬರು, “ಕಳೆದ ಹಲವು ವರ್ಷಗಳಿಂದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದೆವು, ಈಗ ಅನುದಾನಿತ ಪದವಿ ಕಾಲೇಜುಗಳಲ್ಲಿ ಆಯ್ಕೆಗೊಂಡಿದ್ದೇವೆ. ಈಗಾಗಲೇ ನಮ್ಮ ವಯೋಮಿತಿಯು ಮೀರುತ್ತಿದ್ದು, ನೇಮಕಾತಿ ಆದೇಶ ಪತ್ರದ ನಿರೀಕ್ಷೆಯಲ್ಲಿರುವಾಗಲೇ ಆರ್ಥಿಕ ಇಲಾಖೆಯಿಂದ ಹೊರಬಂದ ಸುತ್ತೋಲೆಯಿಂದ ದಿಕ್ಕು ತೋಚದಂತಾಗಿದೆ. ಪಿಯುಸಿ ಉಪನ್ಯಾಸಕರನ್ನು ಸರ್ಕಾರ ಈಗಾಗಲೆ ನೇಮಿಸಿಕೊಂಡಿದೆ ಆದರೆ ನಮ್ಮ ನೇಮಕಾತಿಯನ್ನು ತಡೆಹಿಡಿದು ನಮಗೆ ಅನ್ಯಾಯ ಎಸಗುತ್ತಿದೆ. ನಮಗೆ ನ್ಯಾಯ ಸಿಗುವವರೆಗೂ ಇಲ್ಲಿಂದ ಕದಲುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ:ನರ್ಸಿಂಗ್ ಎಂದರೆ ಹೆಚ್ಚು ಕೌಶಲದ, ಕಡಿಮೆ ಸಂಬಳದ ಕೆಲಸ: ಪಾಂಚಾಲಿ ರೇ

“ಈ ಹಿಂದೆಯೆ ಪ್ರೀಡಂ ಪಾರ್ಕ್‌ನಲ್ಲಿ ಧರಣಿ ಮಾಡಲು ಅವಕಾಶ ನೀಡುವಂತೆ ಪೊಲೀಸರೊಂದಿಗೆ ಕೇಳಿಕೊಂಡಿದ್ದೆವು. ಆದರೆ ಅವರು ’ಸಂಘಟನೆ’ ಇಲ್ಲ ಎಂಬ ಕಾರಣ ನೀಡಿ ಅವಕಾಶ ಕೊಟ್ಟಿರಲಿಲ್ಲ. ಆದ್ದರಿಂದ ಯಾವುದೆ ದಾರಿ ಕಾಣದೆ ಇಂದು ಬೆಳಿಗ್ಗೆಯಿಂದ ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯಕಚೇರಿಯ ಮುಂಬಾಗ ಧರಣಿ ಮಾಡುತ್ತಿದ್ದೇವೆ. ಇಲಾಖೆಯ ಕಮೀಷನರ್ ಬಂದು ಇಲ್ಲಿ ಧರಣಿ ಮಾಡದಂತೆ ಹೇಳಿಹೋಗಿದ್ದಾರೆ ವಿನಃ ನಮ್ಮ ಸಂಕಷ್ಟಗಳಿಗೆ ಪರಿಹಾರದ ಬಗ್ಗೆ ಮಾತನಾಡಿಲ್ಲ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

“ಇದೀಗ ಪೊಲೀಸರು ಬಂದು ಪ್ರತಿಭಟನೆಗೆ ಅನುಮತಿ ಪಡೆದಿಲ್ಲ ಎಂದು ಹೇಳಿ ನಮ್ಮನ್ನು ಹೊರಕಳುಹಿಸಲು ನೋಡುತ್ತಿದ್ದಾರೆ. ಇಲ್ಲಿಂದ ಹೊರಗಡೆ ಹೊರ ಕಳುಹಿಸಿದರೂ ಸರಿ, ನಮ್ಮ ಪ್ರತಿಭಟನೆಯನ್ನು ಬೀದಿಯಲ್ಲಿ ಕೂತು ಮುಂದುವರೆಸುತ್ತೇವೆ. ಆರ್ಥಿಕ ಇಲಾಖೆಯ ಈ ಹಿಂದಿನ ಸುತ್ತೋಲೆಯನ್ನು ಹಿಂಪಡೆದು, ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...