Homeಕರ್ನಾಟಕಆಯ್ಕೆಯಾಗಿದ್ದರೂ ಆದೇಶ ಪತ್ರ ನೀಡದ ಕಾಲೇಜು ಶಿಕ್ಷಣ ಇಲಾಖೆ; ಧರಣಿ ಕೂತ ಪ್ರಾಧ್ಯಾಪಕರು

ಆಯ್ಕೆಯಾಗಿದ್ದರೂ ಆದೇಶ ಪತ್ರ ನೀಡದ ಕಾಲೇಜು ಶಿಕ್ಷಣ ಇಲಾಖೆ; ಧರಣಿ ಕೂತ ಪ್ರಾಧ್ಯಾಪಕರು

- Advertisement -
- Advertisement -

ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಿಗೆ ಆಯ್ಕೆಗೊಂಡಿರುವ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯನ್ನು, ಆರ್ಥಿಕ ಸಂಕಷ್ಟ ಕಾರಣ ನೀಡಿ ಸರ್ಕಾರ ತಡೆಹಿಡಿದಿದ್ದು, ಇದನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಆಯ್ಕೆಗೊಂಡಿರುವ ಪ್ರಾಧ್ಯಾಪಕರು ಬೆಂಗಳೂರಿನ ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯಕಚೇರಿಯ ಮುಂಬಾಗದಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ನೀಡಿದ್ದ ಆದೇಶದಂತೆ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ನೀಡಲಾಗಿತ್ತು. ಅದರಂತೆ ಸಹಾಯಕ ಪ್ರಾಧ್ಯಾಪಕರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ ಕೊರೊನಾ ಆರ್ಥಿಕ ಸಂಕಷ್ಟದ ಹೆಸರಲ್ಲಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿರುವ ಸುಮಾರು 300ಕ್ಕೂ ಹೆಚ್ಚು ಅಭ್ಯರ್ಥಿಗಳ ನೇಮಕಾತಿಯನ್ನು 2020-21 ನೇ ಸಾಲಿನಲ್ಲಿ ತಡೆಹಿಡಿಯಲಾಗಿದೆ.

ಇದನ್ನೂ ಓದಿ: ಸಂಬಳ ಕೊಡದೆ ’ಕೊರೊನಾ ವಾರಿಯರ್ಸ್‌’ಗಳನ್ನು ದುಡಿಸುತ್ತಿರುವ ರಾಜ್ಯ ಸರ್ಕಾರ!

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಪ್ರಾಧ್ಯಾಪಕರೊಬ್ಬರು, “ಕಳೆದ ಹಲವು ವರ್ಷಗಳಿಂದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದೆವು, ಈಗ ಅನುದಾನಿತ ಪದವಿ ಕಾಲೇಜುಗಳಲ್ಲಿ ಆಯ್ಕೆಗೊಂಡಿದ್ದೇವೆ. ಈಗಾಗಲೇ ನಮ್ಮ ವಯೋಮಿತಿಯು ಮೀರುತ್ತಿದ್ದು, ನೇಮಕಾತಿ ಆದೇಶ ಪತ್ರದ ನಿರೀಕ್ಷೆಯಲ್ಲಿರುವಾಗಲೇ ಆರ್ಥಿಕ ಇಲಾಖೆಯಿಂದ ಹೊರಬಂದ ಸುತ್ತೋಲೆಯಿಂದ ದಿಕ್ಕು ತೋಚದಂತಾಗಿದೆ. ಪಿಯುಸಿ ಉಪನ್ಯಾಸಕರನ್ನು ಸರ್ಕಾರ ಈಗಾಗಲೆ ನೇಮಿಸಿಕೊಂಡಿದೆ ಆದರೆ ನಮ್ಮ ನೇಮಕಾತಿಯನ್ನು ತಡೆಹಿಡಿದು ನಮಗೆ ಅನ್ಯಾಯ ಎಸಗುತ್ತಿದೆ. ನಮಗೆ ನ್ಯಾಯ ಸಿಗುವವರೆಗೂ ಇಲ್ಲಿಂದ ಕದಲುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ:ನರ್ಸಿಂಗ್ ಎಂದರೆ ಹೆಚ್ಚು ಕೌಶಲದ, ಕಡಿಮೆ ಸಂಬಳದ ಕೆಲಸ: ಪಾಂಚಾಲಿ ರೇ

“ಈ ಹಿಂದೆಯೆ ಪ್ರೀಡಂ ಪಾರ್ಕ್‌ನಲ್ಲಿ ಧರಣಿ ಮಾಡಲು ಅವಕಾಶ ನೀಡುವಂತೆ ಪೊಲೀಸರೊಂದಿಗೆ ಕೇಳಿಕೊಂಡಿದ್ದೆವು. ಆದರೆ ಅವರು ’ಸಂಘಟನೆ’ ಇಲ್ಲ ಎಂಬ ಕಾರಣ ನೀಡಿ ಅವಕಾಶ ಕೊಟ್ಟಿರಲಿಲ್ಲ. ಆದ್ದರಿಂದ ಯಾವುದೆ ದಾರಿ ಕಾಣದೆ ಇಂದು ಬೆಳಿಗ್ಗೆಯಿಂದ ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯಕಚೇರಿಯ ಮುಂಬಾಗ ಧರಣಿ ಮಾಡುತ್ತಿದ್ದೇವೆ. ಇಲಾಖೆಯ ಕಮೀಷನರ್ ಬಂದು ಇಲ್ಲಿ ಧರಣಿ ಮಾಡದಂತೆ ಹೇಳಿಹೋಗಿದ್ದಾರೆ ವಿನಃ ನಮ್ಮ ಸಂಕಷ್ಟಗಳಿಗೆ ಪರಿಹಾರದ ಬಗ್ಗೆ ಮಾತನಾಡಿಲ್ಲ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

“ಇದೀಗ ಪೊಲೀಸರು ಬಂದು ಪ್ರತಿಭಟನೆಗೆ ಅನುಮತಿ ಪಡೆದಿಲ್ಲ ಎಂದು ಹೇಳಿ ನಮ್ಮನ್ನು ಹೊರಕಳುಹಿಸಲು ನೋಡುತ್ತಿದ್ದಾರೆ. ಇಲ್ಲಿಂದ ಹೊರಗಡೆ ಹೊರ ಕಳುಹಿಸಿದರೂ ಸರಿ, ನಮ್ಮ ಪ್ರತಿಭಟನೆಯನ್ನು ಬೀದಿಯಲ್ಲಿ ಕೂತು ಮುಂದುವರೆಸುತ್ತೇವೆ. ಆರ್ಥಿಕ ಇಲಾಖೆಯ ಈ ಹಿಂದಿನ ಸುತ್ತೋಲೆಯನ್ನು ಹಿಂಪಡೆದು, ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...