Homeಕರ್ನಾಟಕಸಂತೋಷ್‌ ಸಾವಿನ ಹಿಂದೆ ‘ಸಿಡಿ ಪ್ರಕರಣ’ದ ತಂಡದ ಕೈವಾಡವಿದೆ: ರಮೇಶ್‌ ಜಾರಕಿಹೊಳಿ

ಸಂತೋಷ್‌ ಸಾವಿನ ಹಿಂದೆ ‘ಸಿಡಿ ಪ್ರಕರಣ’ದ ತಂಡದ ಕೈವಾಡವಿದೆ: ರಮೇಶ್‌ ಜಾರಕಿಹೊಳಿ

- Advertisement -
- Advertisement -

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿಂದೆ, ಆಪಾದಿತ ‘ಸಿಡಿ ಪ್ರಕರಣ’ದಲ್ಲಿದ್ದ ಮಹಾನಾಯಕನ ತಂಡದ ಕೈವಾಡವಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬಾರದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. “ಸಿಡಿ ಪ್ರಕರಣ ಮತ್ತು ಸಂತೋಷ್‌ ಸಾವಿನ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ತಾನು ಏಪ್ರಿಲ್ 18 ರ ಸೋಮವಾರ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ವಾಸ್ತವ ಸಂಗತಿಗಳನ್ನು ಬಹಿರಂಗಪಡಿಸುವುದಾಗಿ ಅವರು ಘೋಷಿಸಿದ್ದಾರೆ. ಗುರುವಾರ ಬೆಳಗಾವಿ ತಾಲೂಕಿನ ಬಡಾಸ ಗ್ರಾಮದಲ್ಲಿ ಸಂತೋಷ್ ಪಾಟೀಲ್ ಅವರ ಸಮಾಧಿ ಸ್ಥಳಕ್ಕೆ ತೆರಳಿದ ಜಾರಕಿಹೊಳಿ, ಅವರಿಗೆ ಗೌರವ ಸಲ್ಲಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಂತೋಷ್ ಅವರು ಕಾಂಗ್ರೆಸ್‌ನಲ್ಲಿದ್ದಾಗ ಅವರೊಂದಿಗೆ ತಾನು ಒಳ್ಳೆಯ ಸಂಬಂಧ ಹೊಂದಿದ್ದೆ. ನನ್ನೊಂದಿಗೆ ಅವರು ಬಿಜೆಪಿ ಸೇರಿದ್ದಾರೆ. ಅವರ ಪತ್ನಿ ಜಯಶ್ರೀ ಮತ್ತು ಅವರ ಮಗನಿಗೆ ನಾವು ಅಗತ್ಯವಿರುವ ಎಲ್ಲ ಸಹಾಯವನ್ನು ನೀಡುತ್ತೇವೆ. ಜೊತೆಗೆ ಸರ್ಕಾರದಿಂದ ಸಹಾಯ ಪಡೆಯಲು ಪ್ರಯತ್ನಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್‌ನಿಂದ ಒತ್ತಡವಿಲ್ಲ: ಸಿಎಂ ಬೊಮ್ಮಾಯಿ

“ಈಶ್ವರಪ್ಪ ಮತ್ತು ನಾನು ಒಂದೇ ತಂಡದ ಷಡ್ಯಂತ್ರಕ್ಕೆ ಬಲಿಯಾಗಿದ್ದೇವೆ. ಇದನ್ನು ಬಿಜೆಪಿ ಹೈಕಮಾಂಡ್‌ನ ಅನುಮತಿ ಪಡೆದ ನಂತರ ಸೋಮವಾರ ತಿಳಿಸುತ್ತೇನೆ. ಈಶ್ವರಪ್ಪ ರಾಜೀನಾಮೆ ನೀಡುವ ಅಗತ್ಯವಿಲ್ಲ. ಅವರ ತಪ್ಪು ಸಾಬೀತಾದರೆ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಲಿ. ನಾನು ರಾಜೀನಾಮೆ ನೀಡಿ ನೋವನ್ನು ಅನುಭವಿಸಿದ್ದೇನೆ, ಈಶ್ವರಪ್ಪನವರಿಗೆ ಅದೇ ಆಗಬಾರದು” ಎಂದಿದ್ದಾರೆ.

“ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಿನಿಂದಲೂ ನನಗೆ ಹಲವು ಸಂಗತಿಗಳು ತಿಳಿದಿವೆ. ಸಂತೋಷ್ ತನ್ನ ಜೀವನವನ್ನು ಕೊನೆಗೊಳಿಸಬಾರದಿತ್ತು. ಅವರ ಸಾವನ್ನು ರಾಜಕೀಯಕ್ಕೆ ಬಳಸಿಕೊಂಡವರಿಗೆ ಎಷ್ಟೋ ಸತ್ಯಗಳು ಗೊತ್ತಿಲ್ಲ. ಹಿಂಡಲಗಾ ಗ್ರಾ.ಪಂ.ಅಧ್ಯಕ್ಷ ನಾಗೇಶ ಮನ್ನೋಳಕರ, ನಾನೇ ಶೀಘ್ರದಲ್ಲೇ ಸಚಿವನಾಗುತ್ತೇನೆ, ಅವರ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಸಂತೋಷ್‌ಗೆ ಹೇಳಿದ್ದರು” ಎಂದು ಜಾರಕಿಹೊಳಿ ಹೇಳಿದ್ದಾರೆ.

ನನ್ನ ಮೇಲೆ ಆರೋಪ ಮಾಡಿದ್ದ ಸಿಡಿ ಪ್ರಕರಣ ಮತ್ತು ಸಂತೋಷ್ ಸಾವಿನ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಾರಕಿಹೊಳಿ ಅವರು ಬೆಳಗಾವಿ ತಾಲೂಕಿನ ಬಡಾಸ್ ಗ್ರಾಮದಲ್ಲಿರುವ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಅವರು, “ಗುತ್ತಿಗೆದಾರರು ವರ್ಕ್ ಆರ್ಡರ್ ಇಲ್ಲದೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವುದು ಮತ್ತು ನಂತರ ಅನುಮೋದನೆಗಳನ್ನು ನೀಡುವುದು ಸಾಮಾನ್ಯ ಅಭ್ಯಾಸವಾಗಿತ್ತು. ಅವರ ಸಾವಿನ ಹಿಂದೆ ಯಾರ ಕೈವಾಡವಿದೆ ಎಂಬುದು ತಿಳಿಯಬೇಕಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ: ಸಿದ್ದರಾಮಯ್ಯ, ಡಿ.ಕೆ.ಶಿ, ಸುರ್ಜೇವಾಲರನ್ನು ವಶಕ್ಕೆ ಪಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...