Homeಕರ್ನಾಟಕಸಂತೋಷ್‌ ಸಾವಿನ ಹಿಂದೆ ‘ಸಿಡಿ ಪ್ರಕರಣ’ದ ತಂಡದ ಕೈವಾಡವಿದೆ: ರಮೇಶ್‌ ಜಾರಕಿಹೊಳಿ

ಸಂತೋಷ್‌ ಸಾವಿನ ಹಿಂದೆ ‘ಸಿಡಿ ಪ್ರಕರಣ’ದ ತಂಡದ ಕೈವಾಡವಿದೆ: ರಮೇಶ್‌ ಜಾರಕಿಹೊಳಿ

- Advertisement -
- Advertisement -

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿಂದೆ, ಆಪಾದಿತ ‘ಸಿಡಿ ಪ್ರಕರಣ’ದಲ್ಲಿದ್ದ ಮಹಾನಾಯಕನ ತಂಡದ ಕೈವಾಡವಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬಾರದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. “ಸಿಡಿ ಪ್ರಕರಣ ಮತ್ತು ಸಂತೋಷ್‌ ಸಾವಿನ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ತಾನು ಏಪ್ರಿಲ್ 18 ರ ಸೋಮವಾರ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ವಾಸ್ತವ ಸಂಗತಿಗಳನ್ನು ಬಹಿರಂಗಪಡಿಸುವುದಾಗಿ ಅವರು ಘೋಷಿಸಿದ್ದಾರೆ. ಗುರುವಾರ ಬೆಳಗಾವಿ ತಾಲೂಕಿನ ಬಡಾಸ ಗ್ರಾಮದಲ್ಲಿ ಸಂತೋಷ್ ಪಾಟೀಲ್ ಅವರ ಸಮಾಧಿ ಸ್ಥಳಕ್ಕೆ ತೆರಳಿದ ಜಾರಕಿಹೊಳಿ, ಅವರಿಗೆ ಗೌರವ ಸಲ್ಲಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಂತೋಷ್ ಅವರು ಕಾಂಗ್ರೆಸ್‌ನಲ್ಲಿದ್ದಾಗ ಅವರೊಂದಿಗೆ ತಾನು ಒಳ್ಳೆಯ ಸಂಬಂಧ ಹೊಂದಿದ್ದೆ. ನನ್ನೊಂದಿಗೆ ಅವರು ಬಿಜೆಪಿ ಸೇರಿದ್ದಾರೆ. ಅವರ ಪತ್ನಿ ಜಯಶ್ರೀ ಮತ್ತು ಅವರ ಮಗನಿಗೆ ನಾವು ಅಗತ್ಯವಿರುವ ಎಲ್ಲ ಸಹಾಯವನ್ನು ನೀಡುತ್ತೇವೆ. ಜೊತೆಗೆ ಸರ್ಕಾರದಿಂದ ಸಹಾಯ ಪಡೆಯಲು ಪ್ರಯತ್ನಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್‌ನಿಂದ ಒತ್ತಡವಿಲ್ಲ: ಸಿಎಂ ಬೊಮ್ಮಾಯಿ

“ಈಶ್ವರಪ್ಪ ಮತ್ತು ನಾನು ಒಂದೇ ತಂಡದ ಷಡ್ಯಂತ್ರಕ್ಕೆ ಬಲಿಯಾಗಿದ್ದೇವೆ. ಇದನ್ನು ಬಿಜೆಪಿ ಹೈಕಮಾಂಡ್‌ನ ಅನುಮತಿ ಪಡೆದ ನಂತರ ಸೋಮವಾರ ತಿಳಿಸುತ್ತೇನೆ. ಈಶ್ವರಪ್ಪ ರಾಜೀನಾಮೆ ನೀಡುವ ಅಗತ್ಯವಿಲ್ಲ. ಅವರ ತಪ್ಪು ಸಾಬೀತಾದರೆ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಲಿ. ನಾನು ರಾಜೀನಾಮೆ ನೀಡಿ ನೋವನ್ನು ಅನುಭವಿಸಿದ್ದೇನೆ, ಈಶ್ವರಪ್ಪನವರಿಗೆ ಅದೇ ಆಗಬಾರದು” ಎಂದಿದ್ದಾರೆ.

“ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಿನಿಂದಲೂ ನನಗೆ ಹಲವು ಸಂಗತಿಗಳು ತಿಳಿದಿವೆ. ಸಂತೋಷ್ ತನ್ನ ಜೀವನವನ್ನು ಕೊನೆಗೊಳಿಸಬಾರದಿತ್ತು. ಅವರ ಸಾವನ್ನು ರಾಜಕೀಯಕ್ಕೆ ಬಳಸಿಕೊಂಡವರಿಗೆ ಎಷ್ಟೋ ಸತ್ಯಗಳು ಗೊತ್ತಿಲ್ಲ. ಹಿಂಡಲಗಾ ಗ್ರಾ.ಪಂ.ಅಧ್ಯಕ್ಷ ನಾಗೇಶ ಮನ್ನೋಳಕರ, ನಾನೇ ಶೀಘ್ರದಲ್ಲೇ ಸಚಿವನಾಗುತ್ತೇನೆ, ಅವರ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಸಂತೋಷ್‌ಗೆ ಹೇಳಿದ್ದರು” ಎಂದು ಜಾರಕಿಹೊಳಿ ಹೇಳಿದ್ದಾರೆ.

ನನ್ನ ಮೇಲೆ ಆರೋಪ ಮಾಡಿದ್ದ ಸಿಡಿ ಪ್ರಕರಣ ಮತ್ತು ಸಂತೋಷ್ ಸಾವಿನ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಾರಕಿಹೊಳಿ ಅವರು ಬೆಳಗಾವಿ ತಾಲೂಕಿನ ಬಡಾಸ್ ಗ್ರಾಮದಲ್ಲಿರುವ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಅವರು, “ಗುತ್ತಿಗೆದಾರರು ವರ್ಕ್ ಆರ್ಡರ್ ಇಲ್ಲದೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವುದು ಮತ್ತು ನಂತರ ಅನುಮೋದನೆಗಳನ್ನು ನೀಡುವುದು ಸಾಮಾನ್ಯ ಅಭ್ಯಾಸವಾಗಿತ್ತು. ಅವರ ಸಾವಿನ ಹಿಂದೆ ಯಾರ ಕೈವಾಡವಿದೆ ಎಂಬುದು ತಿಳಿಯಬೇಕಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ: ಸಿದ್ದರಾಮಯ್ಯ, ಡಿ.ಕೆ.ಶಿ, ಸುರ್ಜೇವಾಲರನ್ನು ವಶಕ್ಕೆ ಪಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....