Homeಕರ್ನಾಟಕಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ?

- Advertisement -
- Advertisement -

ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

“ನಾವು ಕರೆದರೂ ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಅವರು ನನ್ನನ್ನು ಕರೆದೂ ಇಲ್ಲ, ನಾನು ಬರುತ್ತೇನೆ ಅಥವಾ ಬರುವುದಿಲ್ಲ ಎಂದು ಅವರಿಗೆ ಹೇಳಿಲ್ಲ. ಈಶ್ವರಪ್ಪ ಈ ವಿಚಾರದಲ್ಲಿ ಸುಳ್ಳು ಹೇಳಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಮೋದಿಯವರು ಪ್ರಧಾನಿಯಾಗಿ ಆರೂವರೆ ವರ್ಷಗಳಾದವು. ಗೊಂಡ, ರಾಜಗೊಂಡ ಸಮುದಾಯದವರು ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಆ ಬಗ್ಗೆ ಈಶ್ವರಪ್ಪ ಅವರು ಏಕೆ ಆದೇಶ ಮಾಡಿಸಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅನ್ನದಾತರ ಹೋರಾಟದ ಪರವಾಗಿ ನಾವಿದ್ದೇವೆ: ಸಿದ್ದರಾಮಯ್ಯ

“ಆರ್‌ಎಸ್ಎಸ್ ನವರು ಎಂದೂ ಮೀಸಲಾತಿ ಪರ ಇಲ್ಲ. ಹಾವನೂರು ಆಯೋಗ, ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಮತ್ತು ಮಂಡಲ್ ವರದಿಯನ್ನು ಅವರು ಸ್ವಾಗತ ಮಾಡಿದರೇ? ಎಲ್ಲಾ ಸಂದರ್ಭದಲ್ಲಿಯೂ ವಿರೋಧ ಮಾಡಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿವೆ. ಆರ್‌ಎಸ್‌ಎಸ್ ಸ್ಥಾಪಕರಾದ ಹೆಡಗೆವಾರ್ ಆಗಲಿ, ಎಂ.ಎಸ್ ಗೋಲವಾಲ್ಕಾರ್ ಇಲ್ಲವೇ ಇತರ ಆರ್‌ಎಸ್‌ಎಸ್ ನಾಯಕರು ಎಂದಾದರೂ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಹೋರಾಟ ಮಾಡಿದ್ದಾರೆಯೇ?” ಎಂದು ಪ್ರಶ್ನಿಸಿದ್ದಾರೆ.

“ಕುರುಬರ ನಾಯಕ ನಾನೇ ಎಂದು ಈಶ್ವರಪ್ಪ ಹೇಳಿಕೊಳ್ಳಲಿ. ಅದಕ್ಕೆ ನನ್ನ ತಕರಾರು ಇಲ್ಲ. ನಾಯಕ ಯಾರೆಂದು ಜನ ತೀರ್ಮಾನ ಮಾಡುತ್ತಾರೆ, ನಾವೇ ಘೋಷಿಸಿಕೊಳ್ಳುವುದಲ್ಲ. ಕುರುಬರನ್ನು ಎಸ್ಟಿಗೆ ಸೇರಿಸುವ ಮೊದಲು ಎಸ್ಟಿ ಮೀಸಲಾತಿಯನ್ನು ಶೇ. 3ರಿಂದ ಕನಿಷ್ಠ ಶೇ. 20ಕ್ಕೆ ಹೆಚ್ಚಿಸಬೇಕು. ಅದಕ್ಕೂ ಹೋರಾಟ ಮಾಡಬೇಕಿದೆ. ವಾಲ್ಮೀಕಿ ಸಮುದಾಯದವರು ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ಹೋರಾಟ ಮಾಡುತ್ತಿದ್ದಾರೆ. ಮೀಸಲು ಪ್ರಮಾಣ ಶೇ. 3ರಷ್ಟೇ ಇದ್ದರೆ ಕುರುಬ ಸಮುದಾಯವನ್ನು ಎಸ್‌ಟಿ ಗೆ ಸೇರಿಸಿದರೆ ಏನು ಲಾಭ?” ಎಂದು ಅವರು ಕೇಳಿದ್ದಾರೆ.

“ಕುರುಬ ಸಮುದಾಯದ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿ ಆಧಾರಿತ ವರದಿಯನ್ನು ರಾಜ್ಯ ಬಿಜೆಪಿ ಸರ್ಕಾರ ಒಪ್ಪಿಕೊಳ್ಳಲಿ. ಕುರುಬರ ಬಗ್ಗೆ ಈಶ್ವರಪ್ಪ ಅವರಿಗೆ ಇದ್ದಕ್ಕಿದ್ದಂತೆ ಕಾಳಜಿ ಬಂದಿದೆ. ಕಾಗಿನೆಲೆ ಮಠ ಸ್ಥಾಪನೆ ಸಂದರ್ಭದಲ್ಲಿ ಈಶ್ವರಪ್ಪ ಅವರು ಎಲ್ಲಿದ್ದರು. ಆಗ ಅವರು ಪತ್ತೆಯೇ ಇರಲಿಲ್ಲ. ಈಗ ಸ್ವಾಮೀಜಿಗಳನ್ನು ಕರೆದುಕೊಂಡು ಹೋರಾಟ ನಡೆಸುತ್ತಿದ್ದಾರೆ. ಮಠದ ಉದ್ಘಾಟನಾ ಸಭೆಗೂ ಅವರು ಆಗ ಬಂದಿರಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರ ದಿವಾಳಿಯಾಗಿದೆ, ವೃದ್ಧಾಪ್ಯ ವೇತನ ನೀಡಲು ಕೂಡಾ ಹಣವಿಲ್ಲ: ಸಿದ್ದರಾಮಯ್ಯ

“ಉಡುಪಿಯ ಕನಕ ಗೋಪುರ ಕೆಡವಿದಾಗ ಈಶ್ವರಪ್ಪ ಎಲ್ಲಿ ಹೋಗಿದ್ದರು? ಯಾವ ಮೀಸಲಾತಿ ಪರ ಅವರು ಹೋರಾಟ ಮಾಡಿದ್ದಾರೆ? ರಾಜ್ಯ ಸಭಾ ಸದಸ್ಯರಾಗಿದ್ದ ರಾಮಾ ಜೋಯಿಸರು ಹಿಂದುಳಿದ ವರ್ಗದವರ ಮೀಸಲು ವಿರೋಧಿಸಿದಾಗ ಎಲ್ಲಿದ್ದರು. ಬಿಜೆಪಿಯಲ್ಲಿ ಆಗ ಈಶ್ವರಪ್ಪ ಇದ್ದರಲ್ಲವೇ? ಏಕೆ ವಿರೋಧ ಮಾಡಲಿಲ್ಲ ಈಗ ಇದ್ದಕ್ಕಿಂದ್ದರೆ ಈಶ್ವರಪ್ಪ ಅವರಿಗೆ ಕುರುಬರ ಮೇಲೆ ಪ್ರೀತಿ ಬಂದಿದೆ. ಅವರು ಹೋರಾಟ ಮಾಡಲಿ. ಬೇಡ ಎನ್ನುವುದಿಲ್ಲ. ಮೊದಲು ಬೀದರ್, ಕಲಬರಗಿ, ಯಾದಗಿರಿಯ ಗೊಂಡ, ರಾಜಗೊಂಡ ಸಮುದಾಯವನ್ನು ಎಸ್ಟಿಗೆ ಸೇರಿಸುವ ಕುರಿತು ಆದೇಶ ಜಾರಿ ಮಾಡಿಸಲಿ” ಎಂದು ಆಗ್ರಹಿಸಿದ್ದಾರೆ.

“ಈಶ್ವರಪ್ಪ ಅವರು ಎಂದೂ ಮೀಸಲಾತಿ ಪರ ಹೋರಾಟ ಮಾಡಿದವರಲ್ಲ. ಸದನದಲ್ಲಿಯೂ ಧ್ವನಿ ಎತ್ತಿದವರಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಈಶ್ವರಪ್ಪ ಅವರು ಎಲ್ಲಿ ಬಿಟ್ಟರು? ಹೀಗೆ ಸ್ವಾರ್ಥಕ್ಕಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಕುರುಬ ಸಮುದಾಯವನ್ನು ಒಡೆಯಲು ಆರ್‌ಎಸ್ಎಸ್ ನವರು ಈಶ್ವರಪ್ಪ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಆರ್‌ಎಸ್‌ಎಸ್ ಕೈವಾಡದ ಬಗ್ಗೆ ನನಗೆ ಗೊತ್ತಿರಲಿಲ್ಲ. ಈಶ್ವರಪ್ಪ ಅವರೇ ಹೇಳಿದ ಮೇಲೆ ನನಗೂ ತಿಳಿದದ್ದು. ಈಶ್ವರಪ್ಪ ಅವರು ಸ್ವಂತ ಬುದ್ಧಿಯಿಂದ ಹೋರಾಟ ಶುರು ಮಾಡಿದ್ದಲ್ಲ, ಆರ್‌ಎಸ್‌ಎಸ್, ಬಿಜೆಪಿಯವರ ಹುನ್ನಾರವಿದೆ” ಎಂದು ಎಂದ ಅವರು ತಿಳಿಸಿದ್ದಾರೆ.

ಗೋಹತ್ಯೆ ನಿಷೇಧ ಬಿಜೆಪಿ ಆಡಳಿತದ ಗೋವಾದಲ್ಲಿ ಯಾಕಿಲ್ಲ?

“ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ? ಕಾಯ್ದೆ ಜಾರಿಯಾದರೆ ತಾವು ಕಷ್ಟ ನಷ್ಟಕ್ಕೆ ಈಡಾಗುತ್ತೇವೆ ಎಂಬ ಭಯದಿಂದ ಮುಸ್ಲಿಂ ಸಮುದಾಯದ ಮುಖಂಡರು ನನ್ನ ಬಳಿಗೆ ಬಂದಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಲ್ಲಿ ನಾವು ವಿರೋಧಿಸಲಿದ್ದೇವೆ. ಉತ್ತರ ಪ್ರದೇಶದಲ್ಲಿ ಜಾರಿಯಿರುವ ಲವ್ ಜಿಹಾದ್ ತಡೆ ಕಾನೂನು ಅಸಂವಿಧಾನಿಕ. ನಿಗದಿತ ವಯೋಮಾನಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾಗುವ ವ್ಯಕ್ತಿಯನ್ನು ಮಧುವೆಯಾಗುವ ಸ್ವಾತಂತ್ರ್ಯ ಇದೆ. ಯಾವುದೇ ಒಂದು ಜಾತಿ ಇಂತಹುದೇ ಜಾತಿ – ಧರ್ಮದ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕೆಂಬ ಕಾನೂನು ನಮ್ಮ ಸಂವಿಧಾನದಲ್ಲಿ ಇಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ನ ಒಳ ಒಪ್ಪಂದದಿಂದ ಉಪಚುನಾವಣೆಯನ್ನು ಗೆಲ್ಲಲಾಗಿದೆ: ಸಿದ್ದರಾಮಯ್ಯ

“ಲವ್ ಜಿಹಾದ್ ನಿಷೇಧದಂತಹ ಕಾನೂನು ಜಾರಿಗೊಳಿಸಲು ಸಂವಿಧಾನ ಅವಕಾಶ ನೀಡಲ್ಲ, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಕಾಯ್ದೆ ವಜಾಗೊಳ್ಳಲಿದೆ. ಇಂತಹಾ ಕಾಯ್ದೆಗಳಿಗೆ ಅವಕಾಶವಿಲ್ಲ ಎಂದು ಅಲಹಾಬಾದ್ ಹಾಗೂ ಕರ್ನಾಟಕದ ಉಚ್ಚ ನ್ಯಾಯಾಲಯಗಳು ಹೇಳಿವೆ. ಹಾಗಾಗಿ ಕಾಯ್ದೆ ಜಾರಿ ಅಸಾಧ್ಯ” ಎಂದು ಅವರು ತಿಳಿಸಿದ್ದಾರೆ.

“ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯೂ ಸೇರಿದಂತೆ ಬಿಜೆಪಿ ಹಾಗೂ ಆರ್.ಎಸ್.ಎಸ್ ನಾಯಕರು ನಮ್ಮಲ್ಲಿರುವ ಮಾನವೀಯತೆಯನ್ನು ನೋಡಿ ಕಲಿಯಬೇಕು. ಡಿ.ಕೆ ಶಿವಕುಮಾರ್ ಅವರಿಗೆ ನೀವು ಕಿವಿಮಾತು ಹೇಳುವುದೇನೋ ಸರಿ, ಆದರೆ ಅವರು ಯಾವಾಗ ಮಾನವೀಯತೆ, ಮನುಷ್ಯತ್ವವನ್ನು ಕಲಿಯುವುದು? ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಬಿಜೆಪಿಯ ಯಾವ ನಾಯಕರು ಈ ಕೆಲಸ ಮಾಡಿದ್ದಾರೆ? ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ? ಹಸು- ಎತ್ತುಗಳಿಗೆ ವಯಸ್ಸಾದ ಮೇಲೆ ಅವನ್ನು ರೈತರು ಏನು ಮಾಡಬೇಕು? ಬಿಜೆಪಿಯವರ ಮನೆ ಬಾಗಿಲಿಗೆ ಕೊಂಡುಹೋಗಿ ಬಿಟ್ಟು ಬರಬೇಕೇ?” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿದ್ದಾರೆ.

ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...